Homeಕರ್ನಾಟಕಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.

- Advertisement -
- Advertisement -

ಸಹ್ಯಾದ್ರಿ ತಪ್ಪಲಲ್ಲಿರುವ ಉತ್ತರ ಕನ್ನಡದ ಪ್ರಾಕೃತಿಕ ಸೊಬಗಿಗೆ ಮೆರಗು ನೀಡಿರುವ ಆದಿವಾಸಿ ಹಾಲಕ್ಕಿ ಒಕ್ಕಲಿಗ ಸಮುದಾಯ ಮುಖ್ಯವಾಹಿನಿಗೆ ಬರಲಾಗದೆ ತೊಂದರೆಪಡುಡುತ್ತಿದೆ. ಆಧುನಿಕ ಸ್ಪರ್ಧೆಯಲ್ಲಿ ಬಲಾಢ್ಯರೊಂದಿಗೆ ಪೈಪೋಟಿ ನಡೆಸಲಾಗದೆ ತೀರಾ ಹಿಂದುಳಿದಿರುವ ಈ ಬುಡಕಟ್ಟು ಜನಾಂಗದವರು ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಮುಂದುವರಿಕೆಗೆ ಅನುಕೂಲ ಕಲ್ಪಿಸುವಂತೆ ಬೇಡಿಕೆಯಿಟ್ಟು ಎರಡು ದಶಕಗಳೇ ಆಗಿಹೋಗಿದೆ. ಆದರೆ ಉತ್ತರ ಕನ್ನಡದ ಎಂಪಿ, ಎಂ.ಎಲ್‌.ಎ., ಮಂತ್ರಿಗಳ ಉದಾಸೀನ, ಇಚ್ಛಾ ಶಕ್ತಿಯ ಕೊರತೆಯಿಂದ ಹಾಲಕ್ಕಿ ಒಕ್ಕಲಿಗ ಸಮುದಾಯ ಅವಜ್ಞೆಗೀಡಾಗಿದೆ.

ಕಾರವಾರದ ಕಾಳಿ ನದಿಯಿಂದ ಹೊನ್ನಾವರದ ಶರಾವತಿ ನದಿ ತನಕದ ಕರಾವಳಿಯ ನಾಲ್ಕು ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ ಮತ್ತು ಹೊನ್ನಾವರದ ಕಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ಹಾಲಕ್ಕಿ ಒಕ್ಕಲಿಗರು ಸರಿಸುಮಾರು ಒಂದೂವರೆ ಲಕ್ಷದಷ್ಟಿದ್ದಾರೆ. 7 ಸೀಮೆಗಳಲ್ಲಿ ಅಂದರೆ ಸುಮಾರು 169 ಹಳ್ಳಿಗಳಲ್ಲಿರುವ ಹಾಲಕ್ಕಿಗಳ ವಿಶಿಷ್ಟ ಉಡುಗೆ-ತೊಡುಗೆ, ಸಂಸ್ಕೃತಿ- ಸಂಪ್ರದಾಯ, ಕಲೆ-ಕಸಬು ಕಂಡರೆ ಎಂಥವರಿಗೂ ಇದೊಂದು ಬುಡಕಟ್ಟು ಸಮುದಾಯವೆಂಬುದು ನಿಸ್ಸಂಶಯವಾಗಿ ಖಾತ್ರಿಯಾಗುತ್ತದೆ. ಆದರೆ ಕುಲಶಾಸ್ತ್ರೀಯ ಅಧ್ಯಯದಿಂದಲೇ ಹಾಲಕ್ಕಿಗಳು ಬುಡಕಟ್ಟು ಮಂದಿಯೆಂಬುದು ಸಾಬೀತಾಗಿದ್ದರೂ ಆಳುವವರಿಗೆ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿಲ್ಲ!

PC : The Economic Times (ಮಾರ್ಗರೆಟ್ ಆಳ್ವ)

ಹಲವು ಮುಖ್ಯ ಮಂತ್ರಿಗಳು, ಮಂತ್ರಿಗಳು, ಸಂಸದರು, ಶಾಸಕರುಗಳ ಬಳಿ ಎಡತಾಕಿ ಮನವಿಗಳನ್ನು ಕೊಟ್ಟು ಸುಸ್ತಾಗಿರುವ ಹಾಲಕ್ಕಿಗಳೀಗ ಬೀದಿಗಿಳಿದು ಹೋರಾಡಬೇಕಾಗಿ ಬಂದಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದಿರುವ ಹಾಲಕ್ಕಿ ಸುಮುದಾಯದ ಹಲವು ಕುಟುಂಬಗಳಿಗೆ ಸೂರು ಕಟ್ಟಿಕೊಳ್ಳಲು ಕೂಡ ಒಂದು ಗುಂಟೆ ಜಾಗವಿಲ್ಲ. ಉತ್ತರ ಕನ್ನಡದ ಸಾಕ್ಷರತೆ ಶೆ.76ರಷ್ಟಿದೆ. ಆದರೆ ಹಾಲಕ್ಕಿಗಳ ಸಾಕ್ಷರತೆ ಪ್ರಮಾಣ ಶೇ.10 ಮಾತ್ರ! ಮೀಸಲಾತಿ ವ್ಯವಸ್ಥೆಯಲ್ಲಿ ಪ್ರ ವರ್ಗ-1ರಲ್ಲಿ ಸೇರಿಸಲ್ಪಟ್ಟಿರುವ ಹಾಲಕ್ಕಿಗಳಿಗೆ ಘನ ಘೋರ ಅನ್ಯಾಯ ಮಾಡಲಾಗಿದೆ ಎಂಬುದು ಸರ್ವವಿಧಿತ. ಪ್ರವರ್ಗ-1ರಲ್ಲಿರುವ ಪ್ರಬಲ ಜಾತಿಯ ಜನರೊಂದಿಗೆ ಅವಕಾಶಗಳಿಗಾಗಿ ಬಡಿದಾಡುವ ತ್ರಾಣ ಈ ಮುಗ್ದ ಸಮುದಾಯಕ್ಕಿಲ್ಲ. ಕೃಷಿ ಮತ್ತು ಕೃಷಿ ಕೂಲಿಗಳಾದ ಹಾಲಕ್ಕಿಗಳಿಗೆ ನಿರಂತರವಾಗಿ ಆಳುವವರು ಅನ್ಯಾಯ ಮಾಡುತ್ತಲೇ ಬಂದಿದ್ದಾರೆ. 25 ವರ್ಷದಿಂದ ತಮಗೆ ಮೀಸಲಾತಿಯಲ್ಲಾಗಿರುವ ವಂಚನೆ ಸರಿಪಡಿಸುವಂತೆ ಪರಿಪರಿಯಾಗಿ ಬೇಡುತ್ತಿದ್ದರು ಬದ್ಧತೆಯಿಂದ ಸ್ಪಂದಿಸುತ್ತಿಲ್ಲ.

ಇದನ್ನೂ ಓದಿರಿ: ಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸುತ್ತಿರುವ ಪದ್ಮಶ್ರೀ ಸುಕ್ರಿ ಗೌಡರು. ಹಾಲಕ್ಕಿ ನಿಯೋಗ

ಹಾಲಕ್ಕಿ ಒಕ್ಕಲಿಗ ಮುಖಂಡರು ಜಿಲ್ಲೆಯನ್ನು ಬಹುಕಾಲ ಮಂತ್ರಿಯಾಗಿ ಆಳಿದ ಆರ್.ವಿ.ದೇಶಪಾಂಡೆಯವರನ್ನು ಪದೇ ಪದೇ ಭೇಟಿಯಾಗಿ ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಯತ್ನಿಸುವಂತೆ ಒತ್ತಡ ಹಾಕಹತ್ತಿದ್ದರು. ಹಾಗಾಗಿ 2002ರಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ದೇಶಪಾಂಡೆಯವರು ಹಾಲಕ್ಕಿಗಳ ಬೇಡಿಕೆಯತ್ತ ಗಮನ ಹರಿಸಬೇಕಾಗಿ ಬಂತು. ಒಂಚೂರು ಆಸಕ್ತಿಯಿಂದ ಹಾಲಕ್ಕಿಗಳತ್ತ ಪ್ರಮಾಣಿಕವಾಗಿ ಗಮನಹರಿಸಿದಿದ್ದೆಂದರೆ ಸ್ಥಳೀಯ ಸಂಸದೆಯಾಗಿದ್ದ ಮಾರ್ಗರೆಟ್ ಆಳ್ವ ಒಬ್ಬರೇ. ಆನಂತರ ರಾಜ್ಯ ಸರ್ಕಾರ ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿವಂತೆ ಶಿಫಾರಸು ಮಾಡಿತ್ತು. ಆದರೆ ಸಂಸದ ಅನಂತಕುಮಾರ್ ಹೆಗಡೆಯವರ ನಿರಾಸಕ್ತಿಯಿಂದ ದಿಲ್ಲಿಯಲ್ಲಿ ಕಡತ ಮುಂದಕ್ಕೆ ಹೋಗದೆ ಧೂಳುತ್ತಿನ್ನುತ ಕೂತಿದೆ ಎಂಬ ಅಳಲು ಹಾಲಕ್ಕಿ ಸಮುದಾಯಲ್ಲಿದೆ.

ಈಗ ಹಾಲಕ್ಕಿ ಮುಂದಾಳುಗಳು ಸಂಸದ ಹೆಗಡೆಯವರ ಬೆನ್ನುಬಿದ್ದಿದ್ದಾರೆ. ಹೆಗಡೆ ಒಂದೊಂದೇ ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆಂದು ಹೆಸರು ಹೇಳಲಿಚ್ಚಿಸದ ಹಾಲಕ್ಕಿ ಹಿರಿಯರೊಬ್ಬರು ‘ನಾನು ಗೌರಿ.ಕಾಂ’ ನೊಂದಿಗೆ ಮಾತನಾಡುತ್ತ ಬೇಸರಿಸಿದರು. ಕಳೆದ ವರ್ಷ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಮಂತ್ರಿಯನ್ನು ಬೇಟಿ ಮಾಡಿಸುವೆನೆಂದು ಸಂಸದ ಹೆಗಡೆಯವರು ಹಾಲಕ್ಕಿ ಮುಖಂಡರಿಗೆ ಹೇಳಿದ್ದರಂತೆ. ಹಾಲಕ್ಕಿಗಳ ನಿಯೋಗ ವಿಮಾನ ಟಿಕೆಟ್ ತೆಗೆದು ಪ್ರಯಾಣಕ್ಕೆ ಸಿದ್ದವಾಗಿತ್ತು. ಆದರೆ ಅದೇ ಸಮಯದಲ್ಲಿ ಚೀನಾದಲ್ಲಿ ಕೊರೊನಾ ಶುರುವಾಗಿತ್ತು. ಇದೆ ನೆಪ ಮಾಡಿ ಹಾಲಕ್ಕಿ ನಿಯೋಗಕ್ಕೆ ದಿಲ್ಲಿಗೆ ಬರುವುದು ಬೇಡವೆಂದು ಸಂಸದರು ಹೇಳಿದರಂತೆ! ಹಾಲಕ್ಕಿ ಹೋರಾಟಗರರು ಸಂಸದರಿಗೆ ಪೋನಾಯಿಸುತ್ತಲೇ ಇದ್ದಾರೆ. ಸದ್ಯ ಕೊರೊನಾ ಹಾವಳಿಯಿರುವುದರಿಂದ ದಿಲ್ಲಿಗೆಲ್ಲ ಬರುವುದು ಬೇಡ; ಕರ್ನಾಟಕದವರೆ ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗೆ ಸಹಾಯಕ ಮಂತ್ರಿ[ನಾರಾಯಣಸ್ವಾಮಿ] ಆಗಿದ್ದಾರೆ. ಅವರನ್ನು ಬೆಂಗಳೂರಲ್ಲೇ ಭೇಟಿ ಮಾಡಿಸುತ್ತೇನೆ ಎಂದು ಈಗ ಸಂಸದರು ಹೇಳುತ್ತಿದ್ದಾರಂತೆ.

PC : Prajavani (ಅನಂತಕುಮಾರ್ ಹೆಗಡೆ)

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವನೆ ಪ್ರಕ್ರಿಯೆ ಪಾರ್ಲಿಮೆಂಟಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಹಂತಕ್ಕೆ ಬಂದಿದೆ. ಸಂಸದ ಹೆಗಡೆ ಸ್ವಲ್ಪ ಮುತುರ್ವಜಿ ವಹಿಸಿದರೆ ತಮ್ಮ ಬಹುದಿನದ ಕನಸು ನನಸಾಗುತ್ತದೆಯೆಂದು ಹಾಲಕ್ಕಿ ಹೋರಾಟದ ಮುಂಚೂಣಿಯಲ್ಲಿರುವವರು ಹೇಳುತ್ತಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟ ಮಾಡುತ್ತೇವೆಂದು ಹಾಲಕ್ಕಿ ನೇತಾರರು ಎಚ್ಚರಿಕೆ ಕೊಟ್ಟಿದ್ದಾರೆ. ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡ ತಮ್ಮ ಶೋಷಿತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತನಗೆ ಬಂದಿರುವ ಪದ್ಮಶ್ರೀ ಪ್ರಶಸ್ತಿ ಮರುಳಿಸಿ ಈ ಇಳಿವಯಸ್ಸಿನಲ್ಲಿ ಹೋರಾಟಕ್ಕೆ ಧುಮುಕಲು ಸಿದ್ದರೆಂದು ಹೇಳುತ್ತಿದ್ದಾರೆ! ಹಾಲಕ್ಕಿಗಳ ಮೀಸಲಾತಿ ಹೋರಾಟ ಜೋರಾಗುವ ಎಲ್ಲ ಲಕ್ಷಣಗಳೀಗ ಗೋಚರಿಸುತ್ತದೆ.

ಸಾಮಾಜಿಕ ನ್ಯಾಯ ತತ್ವದಂತೆ ಪರಿಶಿಷ್ಟ ಪಂಗಡಕ್ಕೆ ಸೇರುವ ಸಕಲ ಅರ್ಹತೆಯಿರುವ ಹಾಲಕ್ಕಿ ಒಕ್ಕಲಿಗರನ್ನು ವಂಚಿಸುತ್ತಿರುವುದರ ಹಿಂದೆ ಮೇಲು ವರ್ಗದ ಪಟ್ಟಭದ್ರ ರಾಜಕೀಯ ಹಿತಾಸಕ್ತಿ ಅಡಗಿದೆಯೆಂಬ ಭಾವನೆ ಉತ್ತರ ಕನ್ನಡದಲ್ಲಿದೆ. ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...