Homeಕರ್ನಾಟಕಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.

- Advertisement -
- Advertisement -

ಸಹ್ಯಾದ್ರಿ ತಪ್ಪಲಲ್ಲಿರುವ ಉತ್ತರ ಕನ್ನಡದ ಪ್ರಾಕೃತಿಕ ಸೊಬಗಿಗೆ ಮೆರಗು ನೀಡಿರುವ ಆದಿವಾಸಿ ಹಾಲಕ್ಕಿ ಒಕ್ಕಲಿಗ ಸಮುದಾಯ ಮುಖ್ಯವಾಹಿನಿಗೆ ಬರಲಾಗದೆ ತೊಂದರೆಪಡುಡುತ್ತಿದೆ. ಆಧುನಿಕ ಸ್ಪರ್ಧೆಯಲ್ಲಿ ಬಲಾಢ್ಯರೊಂದಿಗೆ ಪೈಪೋಟಿ ನಡೆಸಲಾಗದೆ ತೀರಾ ಹಿಂದುಳಿದಿರುವ ಈ ಬುಡಕಟ್ಟು ಜನಾಂಗದವರು ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಮುಂದುವರಿಕೆಗೆ ಅನುಕೂಲ ಕಲ್ಪಿಸುವಂತೆ ಬೇಡಿಕೆಯಿಟ್ಟು ಎರಡು ದಶಕಗಳೇ ಆಗಿಹೋಗಿದೆ. ಆದರೆ ಉತ್ತರ ಕನ್ನಡದ ಎಂಪಿ, ಎಂ.ಎಲ್‌.ಎ., ಮಂತ್ರಿಗಳ ಉದಾಸೀನ, ಇಚ್ಛಾ ಶಕ್ತಿಯ ಕೊರತೆಯಿಂದ ಹಾಲಕ್ಕಿ ಒಕ್ಕಲಿಗ ಸಮುದಾಯ ಅವಜ್ಞೆಗೀಡಾಗಿದೆ.

ಕಾರವಾರದ ಕಾಳಿ ನದಿಯಿಂದ ಹೊನ್ನಾವರದ ಶರಾವತಿ ನದಿ ತನಕದ ಕರಾವಳಿಯ ನಾಲ್ಕು ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ ಮತ್ತು ಹೊನ್ನಾವರದ ಕಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ಹಾಲಕ್ಕಿ ಒಕ್ಕಲಿಗರು ಸರಿಸುಮಾರು ಒಂದೂವರೆ ಲಕ್ಷದಷ್ಟಿದ್ದಾರೆ. 7 ಸೀಮೆಗಳಲ್ಲಿ ಅಂದರೆ ಸುಮಾರು 169 ಹಳ್ಳಿಗಳಲ್ಲಿರುವ ಹಾಲಕ್ಕಿಗಳ ವಿಶಿಷ್ಟ ಉಡುಗೆ-ತೊಡುಗೆ, ಸಂಸ್ಕೃತಿ- ಸಂಪ್ರದಾಯ, ಕಲೆ-ಕಸಬು ಕಂಡರೆ ಎಂಥವರಿಗೂ ಇದೊಂದು ಬುಡಕಟ್ಟು ಸಮುದಾಯವೆಂಬುದು ನಿಸ್ಸಂಶಯವಾಗಿ ಖಾತ್ರಿಯಾಗುತ್ತದೆ. ಆದರೆ ಕುಲಶಾಸ್ತ್ರೀಯ ಅಧ್ಯಯದಿಂದಲೇ ಹಾಲಕ್ಕಿಗಳು ಬುಡಕಟ್ಟು ಮಂದಿಯೆಂಬುದು ಸಾಬೀತಾಗಿದ್ದರೂ ಆಳುವವರಿಗೆ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿಲ್ಲ!

PC : The Economic Times (ಮಾರ್ಗರೆಟ್ ಆಳ್ವ)

ಹಲವು ಮುಖ್ಯ ಮಂತ್ರಿಗಳು, ಮಂತ್ರಿಗಳು, ಸಂಸದರು, ಶಾಸಕರುಗಳ ಬಳಿ ಎಡತಾಕಿ ಮನವಿಗಳನ್ನು ಕೊಟ್ಟು ಸುಸ್ತಾಗಿರುವ ಹಾಲಕ್ಕಿಗಳೀಗ ಬೀದಿಗಿಳಿದು ಹೋರಾಡಬೇಕಾಗಿ ಬಂದಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದಿರುವ ಹಾಲಕ್ಕಿ ಸುಮುದಾಯದ ಹಲವು ಕುಟುಂಬಗಳಿಗೆ ಸೂರು ಕಟ್ಟಿಕೊಳ್ಳಲು ಕೂಡ ಒಂದು ಗುಂಟೆ ಜಾಗವಿಲ್ಲ. ಉತ್ತರ ಕನ್ನಡದ ಸಾಕ್ಷರತೆ ಶೆ.76ರಷ್ಟಿದೆ. ಆದರೆ ಹಾಲಕ್ಕಿಗಳ ಸಾಕ್ಷರತೆ ಪ್ರಮಾಣ ಶೇ.10 ಮಾತ್ರ! ಮೀಸಲಾತಿ ವ್ಯವಸ್ಥೆಯಲ್ಲಿ ಪ್ರ ವರ್ಗ-1ರಲ್ಲಿ ಸೇರಿಸಲ್ಪಟ್ಟಿರುವ ಹಾಲಕ್ಕಿಗಳಿಗೆ ಘನ ಘೋರ ಅನ್ಯಾಯ ಮಾಡಲಾಗಿದೆ ಎಂಬುದು ಸರ್ವವಿಧಿತ. ಪ್ರವರ್ಗ-1ರಲ್ಲಿರುವ ಪ್ರಬಲ ಜಾತಿಯ ಜನರೊಂದಿಗೆ ಅವಕಾಶಗಳಿಗಾಗಿ ಬಡಿದಾಡುವ ತ್ರಾಣ ಈ ಮುಗ್ದ ಸಮುದಾಯಕ್ಕಿಲ್ಲ. ಕೃಷಿ ಮತ್ತು ಕೃಷಿ ಕೂಲಿಗಳಾದ ಹಾಲಕ್ಕಿಗಳಿಗೆ ನಿರಂತರವಾಗಿ ಆಳುವವರು ಅನ್ಯಾಯ ಮಾಡುತ್ತಲೇ ಬಂದಿದ್ದಾರೆ. 25 ವರ್ಷದಿಂದ ತಮಗೆ ಮೀಸಲಾತಿಯಲ್ಲಾಗಿರುವ ವಂಚನೆ ಸರಿಪಡಿಸುವಂತೆ ಪರಿಪರಿಯಾಗಿ ಬೇಡುತ್ತಿದ್ದರು ಬದ್ಧತೆಯಿಂದ ಸ್ಪಂದಿಸುತ್ತಿಲ್ಲ.

ಇದನ್ನೂ ಓದಿರಿ: ಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸುತ್ತಿರುವ ಪದ್ಮಶ್ರೀ ಸುಕ್ರಿ ಗೌಡರು. ಹಾಲಕ್ಕಿ ನಿಯೋಗ

ಹಾಲಕ್ಕಿ ಒಕ್ಕಲಿಗ ಮುಖಂಡರು ಜಿಲ್ಲೆಯನ್ನು ಬಹುಕಾಲ ಮಂತ್ರಿಯಾಗಿ ಆಳಿದ ಆರ್.ವಿ.ದೇಶಪಾಂಡೆಯವರನ್ನು ಪದೇ ಪದೇ ಭೇಟಿಯಾಗಿ ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಯತ್ನಿಸುವಂತೆ ಒತ್ತಡ ಹಾಕಹತ್ತಿದ್ದರು. ಹಾಗಾಗಿ 2002ರಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ದೇಶಪಾಂಡೆಯವರು ಹಾಲಕ್ಕಿಗಳ ಬೇಡಿಕೆಯತ್ತ ಗಮನ ಹರಿಸಬೇಕಾಗಿ ಬಂತು. ಒಂಚೂರು ಆಸಕ್ತಿಯಿಂದ ಹಾಲಕ್ಕಿಗಳತ್ತ ಪ್ರಮಾಣಿಕವಾಗಿ ಗಮನಹರಿಸಿದಿದ್ದೆಂದರೆ ಸ್ಥಳೀಯ ಸಂಸದೆಯಾಗಿದ್ದ ಮಾರ್ಗರೆಟ್ ಆಳ್ವ ಒಬ್ಬರೇ. ಆನಂತರ ರಾಜ್ಯ ಸರ್ಕಾರ ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿವಂತೆ ಶಿಫಾರಸು ಮಾಡಿತ್ತು. ಆದರೆ ಸಂಸದ ಅನಂತಕುಮಾರ್ ಹೆಗಡೆಯವರ ನಿರಾಸಕ್ತಿಯಿಂದ ದಿಲ್ಲಿಯಲ್ಲಿ ಕಡತ ಮುಂದಕ್ಕೆ ಹೋಗದೆ ಧೂಳುತ್ತಿನ್ನುತ ಕೂತಿದೆ ಎಂಬ ಅಳಲು ಹಾಲಕ್ಕಿ ಸಮುದಾಯಲ್ಲಿದೆ.

ಈಗ ಹಾಲಕ್ಕಿ ಮುಂದಾಳುಗಳು ಸಂಸದ ಹೆಗಡೆಯವರ ಬೆನ್ನುಬಿದ್ದಿದ್ದಾರೆ. ಹೆಗಡೆ ಒಂದೊಂದೇ ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆಂದು ಹೆಸರು ಹೇಳಲಿಚ್ಚಿಸದ ಹಾಲಕ್ಕಿ ಹಿರಿಯರೊಬ್ಬರು ‘ನಾನು ಗೌರಿ.ಕಾಂ’ ನೊಂದಿಗೆ ಮಾತನಾಡುತ್ತ ಬೇಸರಿಸಿದರು. ಕಳೆದ ವರ್ಷ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಮಂತ್ರಿಯನ್ನು ಬೇಟಿ ಮಾಡಿಸುವೆನೆಂದು ಸಂಸದ ಹೆಗಡೆಯವರು ಹಾಲಕ್ಕಿ ಮುಖಂಡರಿಗೆ ಹೇಳಿದ್ದರಂತೆ. ಹಾಲಕ್ಕಿಗಳ ನಿಯೋಗ ವಿಮಾನ ಟಿಕೆಟ್ ತೆಗೆದು ಪ್ರಯಾಣಕ್ಕೆ ಸಿದ್ದವಾಗಿತ್ತು. ಆದರೆ ಅದೇ ಸಮಯದಲ್ಲಿ ಚೀನಾದಲ್ಲಿ ಕೊರೊನಾ ಶುರುವಾಗಿತ್ತು. ಇದೆ ನೆಪ ಮಾಡಿ ಹಾಲಕ್ಕಿ ನಿಯೋಗಕ್ಕೆ ದಿಲ್ಲಿಗೆ ಬರುವುದು ಬೇಡವೆಂದು ಸಂಸದರು ಹೇಳಿದರಂತೆ! ಹಾಲಕ್ಕಿ ಹೋರಾಟಗರರು ಸಂಸದರಿಗೆ ಪೋನಾಯಿಸುತ್ತಲೇ ಇದ್ದಾರೆ. ಸದ್ಯ ಕೊರೊನಾ ಹಾವಳಿಯಿರುವುದರಿಂದ ದಿಲ್ಲಿಗೆಲ್ಲ ಬರುವುದು ಬೇಡ; ಕರ್ನಾಟಕದವರೆ ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗೆ ಸಹಾಯಕ ಮಂತ್ರಿ[ನಾರಾಯಣಸ್ವಾಮಿ] ಆಗಿದ್ದಾರೆ. ಅವರನ್ನು ಬೆಂಗಳೂರಲ್ಲೇ ಭೇಟಿ ಮಾಡಿಸುತ್ತೇನೆ ಎಂದು ಈಗ ಸಂಸದರು ಹೇಳುತ್ತಿದ್ದಾರಂತೆ.

PC : Prajavani (ಅನಂತಕುಮಾರ್ ಹೆಗಡೆ)

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವನೆ ಪ್ರಕ್ರಿಯೆ ಪಾರ್ಲಿಮೆಂಟಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಹಂತಕ್ಕೆ ಬಂದಿದೆ. ಸಂಸದ ಹೆಗಡೆ ಸ್ವಲ್ಪ ಮುತುರ್ವಜಿ ವಹಿಸಿದರೆ ತಮ್ಮ ಬಹುದಿನದ ಕನಸು ನನಸಾಗುತ್ತದೆಯೆಂದು ಹಾಲಕ್ಕಿ ಹೋರಾಟದ ಮುಂಚೂಣಿಯಲ್ಲಿರುವವರು ಹೇಳುತ್ತಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟ ಮಾಡುತ್ತೇವೆಂದು ಹಾಲಕ್ಕಿ ನೇತಾರರು ಎಚ್ಚರಿಕೆ ಕೊಟ್ಟಿದ್ದಾರೆ. ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡ ತಮ್ಮ ಶೋಷಿತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತನಗೆ ಬಂದಿರುವ ಪದ್ಮಶ್ರೀ ಪ್ರಶಸ್ತಿ ಮರುಳಿಸಿ ಈ ಇಳಿವಯಸ್ಸಿನಲ್ಲಿ ಹೋರಾಟಕ್ಕೆ ಧುಮುಕಲು ಸಿದ್ದರೆಂದು ಹೇಳುತ್ತಿದ್ದಾರೆ! ಹಾಲಕ್ಕಿಗಳ ಮೀಸಲಾತಿ ಹೋರಾಟ ಜೋರಾಗುವ ಎಲ್ಲ ಲಕ್ಷಣಗಳೀಗ ಗೋಚರಿಸುತ್ತದೆ.

ಸಾಮಾಜಿಕ ನ್ಯಾಯ ತತ್ವದಂತೆ ಪರಿಶಿಷ್ಟ ಪಂಗಡಕ್ಕೆ ಸೇರುವ ಸಕಲ ಅರ್ಹತೆಯಿರುವ ಹಾಲಕ್ಕಿ ಒಕ್ಕಲಿಗರನ್ನು ವಂಚಿಸುತ್ತಿರುವುದರ ಹಿಂದೆ ಮೇಲು ವರ್ಗದ ಪಟ್ಟಭದ್ರ ರಾಜಕೀಯ ಹಿತಾಸಕ್ತಿ ಅಡಗಿದೆಯೆಂಬ ಭಾವನೆ ಉತ್ತರ ಕನ್ನಡದಲ್ಲಿದೆ. ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...