Homeಕರ್ನಾಟಕಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.

- Advertisement -
- Advertisement -

ಸಹ್ಯಾದ್ರಿ ತಪ್ಪಲಲ್ಲಿರುವ ಉತ್ತರ ಕನ್ನಡದ ಪ್ರಾಕೃತಿಕ ಸೊಬಗಿಗೆ ಮೆರಗು ನೀಡಿರುವ ಆದಿವಾಸಿ ಹಾಲಕ್ಕಿ ಒಕ್ಕಲಿಗ ಸಮುದಾಯ ಮುಖ್ಯವಾಹಿನಿಗೆ ಬರಲಾಗದೆ ತೊಂದರೆಪಡುಡುತ್ತಿದೆ. ಆಧುನಿಕ ಸ್ಪರ್ಧೆಯಲ್ಲಿ ಬಲಾಢ್ಯರೊಂದಿಗೆ ಪೈಪೋಟಿ ನಡೆಸಲಾಗದೆ ತೀರಾ ಹಿಂದುಳಿದಿರುವ ಈ ಬುಡಕಟ್ಟು ಜನಾಂಗದವರು ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಮುಂದುವರಿಕೆಗೆ ಅನುಕೂಲ ಕಲ್ಪಿಸುವಂತೆ ಬೇಡಿಕೆಯಿಟ್ಟು ಎರಡು ದಶಕಗಳೇ ಆಗಿಹೋಗಿದೆ. ಆದರೆ ಉತ್ತರ ಕನ್ನಡದ ಎಂಪಿ, ಎಂ.ಎಲ್‌.ಎ., ಮಂತ್ರಿಗಳ ಉದಾಸೀನ, ಇಚ್ಛಾ ಶಕ್ತಿಯ ಕೊರತೆಯಿಂದ ಹಾಲಕ್ಕಿ ಒಕ್ಕಲಿಗ ಸಮುದಾಯ ಅವಜ್ಞೆಗೀಡಾಗಿದೆ.

ಕಾರವಾರದ ಕಾಳಿ ನದಿಯಿಂದ ಹೊನ್ನಾವರದ ಶರಾವತಿ ನದಿ ತನಕದ ಕರಾವಳಿಯ ನಾಲ್ಕು ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ ಮತ್ತು ಹೊನ್ನಾವರದ ಕಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ಹಾಲಕ್ಕಿ ಒಕ್ಕಲಿಗರು ಸರಿಸುಮಾರು ಒಂದೂವರೆ ಲಕ್ಷದಷ್ಟಿದ್ದಾರೆ. 7 ಸೀಮೆಗಳಲ್ಲಿ ಅಂದರೆ ಸುಮಾರು 169 ಹಳ್ಳಿಗಳಲ್ಲಿರುವ ಹಾಲಕ್ಕಿಗಳ ವಿಶಿಷ್ಟ ಉಡುಗೆ-ತೊಡುಗೆ, ಸಂಸ್ಕೃತಿ- ಸಂಪ್ರದಾಯ, ಕಲೆ-ಕಸಬು ಕಂಡರೆ ಎಂಥವರಿಗೂ ಇದೊಂದು ಬುಡಕಟ್ಟು ಸಮುದಾಯವೆಂಬುದು ನಿಸ್ಸಂಶಯವಾಗಿ ಖಾತ್ರಿಯಾಗುತ್ತದೆ. ಆದರೆ ಕುಲಶಾಸ್ತ್ರೀಯ ಅಧ್ಯಯದಿಂದಲೇ ಹಾಲಕ್ಕಿಗಳು ಬುಡಕಟ್ಟು ಮಂದಿಯೆಂಬುದು ಸಾಬೀತಾಗಿದ್ದರೂ ಆಳುವವರಿಗೆ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿಲ್ಲ!

PC : The Economic Times (ಮಾರ್ಗರೆಟ್ ಆಳ್ವ)

ಹಲವು ಮುಖ್ಯ ಮಂತ್ರಿಗಳು, ಮಂತ್ರಿಗಳು, ಸಂಸದರು, ಶಾಸಕರುಗಳ ಬಳಿ ಎಡತಾಕಿ ಮನವಿಗಳನ್ನು ಕೊಟ್ಟು ಸುಸ್ತಾಗಿರುವ ಹಾಲಕ್ಕಿಗಳೀಗ ಬೀದಿಗಿಳಿದು ಹೋರಾಡಬೇಕಾಗಿ ಬಂದಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದಿರುವ ಹಾಲಕ್ಕಿ ಸುಮುದಾಯದ ಹಲವು ಕುಟುಂಬಗಳಿಗೆ ಸೂರು ಕಟ್ಟಿಕೊಳ್ಳಲು ಕೂಡ ಒಂದು ಗುಂಟೆ ಜಾಗವಿಲ್ಲ. ಉತ್ತರ ಕನ್ನಡದ ಸಾಕ್ಷರತೆ ಶೆ.76ರಷ್ಟಿದೆ. ಆದರೆ ಹಾಲಕ್ಕಿಗಳ ಸಾಕ್ಷರತೆ ಪ್ರಮಾಣ ಶೇ.10 ಮಾತ್ರ! ಮೀಸಲಾತಿ ವ್ಯವಸ್ಥೆಯಲ್ಲಿ ಪ್ರ ವರ್ಗ-1ರಲ್ಲಿ ಸೇರಿಸಲ್ಪಟ್ಟಿರುವ ಹಾಲಕ್ಕಿಗಳಿಗೆ ಘನ ಘೋರ ಅನ್ಯಾಯ ಮಾಡಲಾಗಿದೆ ಎಂಬುದು ಸರ್ವವಿಧಿತ. ಪ್ರವರ್ಗ-1ರಲ್ಲಿರುವ ಪ್ರಬಲ ಜಾತಿಯ ಜನರೊಂದಿಗೆ ಅವಕಾಶಗಳಿಗಾಗಿ ಬಡಿದಾಡುವ ತ್ರಾಣ ಈ ಮುಗ್ದ ಸಮುದಾಯಕ್ಕಿಲ್ಲ. ಕೃಷಿ ಮತ್ತು ಕೃಷಿ ಕೂಲಿಗಳಾದ ಹಾಲಕ್ಕಿಗಳಿಗೆ ನಿರಂತರವಾಗಿ ಆಳುವವರು ಅನ್ಯಾಯ ಮಾಡುತ್ತಲೇ ಬಂದಿದ್ದಾರೆ. 25 ವರ್ಷದಿಂದ ತಮಗೆ ಮೀಸಲಾತಿಯಲ್ಲಾಗಿರುವ ವಂಚನೆ ಸರಿಪಡಿಸುವಂತೆ ಪರಿಪರಿಯಾಗಿ ಬೇಡುತ್ತಿದ್ದರು ಬದ್ಧತೆಯಿಂದ ಸ್ಪಂದಿಸುತ್ತಿಲ್ಲ.

ಇದನ್ನೂ ಓದಿರಿ: ಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸುತ್ತಿರುವ ಪದ್ಮಶ್ರೀ ಸುಕ್ರಿ ಗೌಡರು. ಹಾಲಕ್ಕಿ ನಿಯೋಗ

ಹಾಲಕ್ಕಿ ಒಕ್ಕಲಿಗ ಮುಖಂಡರು ಜಿಲ್ಲೆಯನ್ನು ಬಹುಕಾಲ ಮಂತ್ರಿಯಾಗಿ ಆಳಿದ ಆರ್.ವಿ.ದೇಶಪಾಂಡೆಯವರನ್ನು ಪದೇ ಪದೇ ಭೇಟಿಯಾಗಿ ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಯತ್ನಿಸುವಂತೆ ಒತ್ತಡ ಹಾಕಹತ್ತಿದ್ದರು. ಹಾಗಾಗಿ 2002ರಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ದೇಶಪಾಂಡೆಯವರು ಹಾಲಕ್ಕಿಗಳ ಬೇಡಿಕೆಯತ್ತ ಗಮನ ಹರಿಸಬೇಕಾಗಿ ಬಂತು. ಒಂಚೂರು ಆಸಕ್ತಿಯಿಂದ ಹಾಲಕ್ಕಿಗಳತ್ತ ಪ್ರಮಾಣಿಕವಾಗಿ ಗಮನಹರಿಸಿದಿದ್ದೆಂದರೆ ಸ್ಥಳೀಯ ಸಂಸದೆಯಾಗಿದ್ದ ಮಾರ್ಗರೆಟ್ ಆಳ್ವ ಒಬ್ಬರೇ. ಆನಂತರ ರಾಜ್ಯ ಸರ್ಕಾರ ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿವಂತೆ ಶಿಫಾರಸು ಮಾಡಿತ್ತು. ಆದರೆ ಸಂಸದ ಅನಂತಕುಮಾರ್ ಹೆಗಡೆಯವರ ನಿರಾಸಕ್ತಿಯಿಂದ ದಿಲ್ಲಿಯಲ್ಲಿ ಕಡತ ಮುಂದಕ್ಕೆ ಹೋಗದೆ ಧೂಳುತ್ತಿನ್ನುತ ಕೂತಿದೆ ಎಂಬ ಅಳಲು ಹಾಲಕ್ಕಿ ಸಮುದಾಯಲ್ಲಿದೆ.

ಈಗ ಹಾಲಕ್ಕಿ ಮುಂದಾಳುಗಳು ಸಂಸದ ಹೆಗಡೆಯವರ ಬೆನ್ನುಬಿದ್ದಿದ್ದಾರೆ. ಹೆಗಡೆ ಒಂದೊಂದೇ ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆಂದು ಹೆಸರು ಹೇಳಲಿಚ್ಚಿಸದ ಹಾಲಕ್ಕಿ ಹಿರಿಯರೊಬ್ಬರು ‘ನಾನು ಗೌರಿ.ಕಾಂ’ ನೊಂದಿಗೆ ಮಾತನಾಡುತ್ತ ಬೇಸರಿಸಿದರು. ಕಳೆದ ವರ್ಷ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಮಂತ್ರಿಯನ್ನು ಬೇಟಿ ಮಾಡಿಸುವೆನೆಂದು ಸಂಸದ ಹೆಗಡೆಯವರು ಹಾಲಕ್ಕಿ ಮುಖಂಡರಿಗೆ ಹೇಳಿದ್ದರಂತೆ. ಹಾಲಕ್ಕಿಗಳ ನಿಯೋಗ ವಿಮಾನ ಟಿಕೆಟ್ ತೆಗೆದು ಪ್ರಯಾಣಕ್ಕೆ ಸಿದ್ದವಾಗಿತ್ತು. ಆದರೆ ಅದೇ ಸಮಯದಲ್ಲಿ ಚೀನಾದಲ್ಲಿ ಕೊರೊನಾ ಶುರುವಾಗಿತ್ತು. ಇದೆ ನೆಪ ಮಾಡಿ ಹಾಲಕ್ಕಿ ನಿಯೋಗಕ್ಕೆ ದಿಲ್ಲಿಗೆ ಬರುವುದು ಬೇಡವೆಂದು ಸಂಸದರು ಹೇಳಿದರಂತೆ! ಹಾಲಕ್ಕಿ ಹೋರಾಟಗರರು ಸಂಸದರಿಗೆ ಪೋನಾಯಿಸುತ್ತಲೇ ಇದ್ದಾರೆ. ಸದ್ಯ ಕೊರೊನಾ ಹಾವಳಿಯಿರುವುದರಿಂದ ದಿಲ್ಲಿಗೆಲ್ಲ ಬರುವುದು ಬೇಡ; ಕರ್ನಾಟಕದವರೆ ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗೆ ಸಹಾಯಕ ಮಂತ್ರಿ[ನಾರಾಯಣಸ್ವಾಮಿ] ಆಗಿದ್ದಾರೆ. ಅವರನ್ನು ಬೆಂಗಳೂರಲ್ಲೇ ಭೇಟಿ ಮಾಡಿಸುತ್ತೇನೆ ಎಂದು ಈಗ ಸಂಸದರು ಹೇಳುತ್ತಿದ್ದಾರಂತೆ.

PC : Prajavani (ಅನಂತಕುಮಾರ್ ಹೆಗಡೆ)

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವನೆ ಪ್ರಕ್ರಿಯೆ ಪಾರ್ಲಿಮೆಂಟಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಹಂತಕ್ಕೆ ಬಂದಿದೆ. ಸಂಸದ ಹೆಗಡೆ ಸ್ವಲ್ಪ ಮುತುರ್ವಜಿ ವಹಿಸಿದರೆ ತಮ್ಮ ಬಹುದಿನದ ಕನಸು ನನಸಾಗುತ್ತದೆಯೆಂದು ಹಾಲಕ್ಕಿ ಹೋರಾಟದ ಮುಂಚೂಣಿಯಲ್ಲಿರುವವರು ಹೇಳುತ್ತಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟ ಮಾಡುತ್ತೇವೆಂದು ಹಾಲಕ್ಕಿ ನೇತಾರರು ಎಚ್ಚರಿಕೆ ಕೊಟ್ಟಿದ್ದಾರೆ. ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡ ತಮ್ಮ ಶೋಷಿತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತನಗೆ ಬಂದಿರುವ ಪದ್ಮಶ್ರೀ ಪ್ರಶಸ್ತಿ ಮರುಳಿಸಿ ಈ ಇಳಿವಯಸ್ಸಿನಲ್ಲಿ ಹೋರಾಟಕ್ಕೆ ಧುಮುಕಲು ಸಿದ್ದರೆಂದು ಹೇಳುತ್ತಿದ್ದಾರೆ! ಹಾಲಕ್ಕಿಗಳ ಮೀಸಲಾತಿ ಹೋರಾಟ ಜೋರಾಗುವ ಎಲ್ಲ ಲಕ್ಷಣಗಳೀಗ ಗೋಚರಿಸುತ್ತದೆ.

ಸಾಮಾಜಿಕ ನ್ಯಾಯ ತತ್ವದಂತೆ ಪರಿಶಿಷ್ಟ ಪಂಗಡಕ್ಕೆ ಸೇರುವ ಸಕಲ ಅರ್ಹತೆಯಿರುವ ಹಾಲಕ್ಕಿ ಒಕ್ಕಲಿಗರನ್ನು ವಂಚಿಸುತ್ತಿರುವುದರ ಹಿಂದೆ ಮೇಲು ವರ್ಗದ ಪಟ್ಟಭದ್ರ ರಾಜಕೀಯ ಹಿತಾಸಕ್ತಿ ಅಡಗಿದೆಯೆಂಬ ಭಾವನೆ ಉತ್ತರ ಕನ್ನಡದಲ್ಲಿದೆ. ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...