Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಹಿರಿಯ ರಾಜಕಾರಣಿ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ, ಸಂಸದೆ ಖಾಲಿದಾ ಜರಾರ್ ಮತ್ತು ಅವರ ಕೆಲ ಬೆಂಬಲಿಗರನ್ನು ಇಸ್ರೇಲ್‌ ಸೇನೆ ಬಂಧಿಸಿದೆ. ಈ ಮೊದಲು ಇಸ್ರೇಲ್‌ನಿಂದ ಹಲವು ಬಾರಿ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ಜರಾರ್ ಅವರನ್ನು ಇದೀಗ ಮತ್ತೆ ಇಸ್ರೇಲ್‌ ಸೇನೆ ಬಂಧಿಸಿದೆ.

ಖಾಲಿದಾ ಜರಾರ್ ಪಾಪ್ಯುಲರ್ ಫ್ರಂಟ್ ಫಾರ್‌ ದಿ ಲಿಬರೇಶನ್‌ ಆಫ್‌ ಪ್ಯಾಲೆಸ್ತೀನ್‌ (PFLP)ಪಕ್ಷದ ಪ್ರಮುಖ ನಾಯಕಿಯಾಗಿದ್ದು, ಈ ಪಕ್ಷವನ್ನು ಇಸ್ರೇಲ್, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ “ಭಯೋತ್ಪಾದಕ” ಗುಂಪು ಎಂದು ಘೋಷಿಸಿಕೊಂಡಿದೆ.

ಖಲೀದಾ ಜರಾರ್ ಸೇರಿ ಇತರ PFLP ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್‌ ಪಡೆಗಳು ಮುಂಜಾನೆ ರಾಮಲ್ಲಾದ ಬಳಿಯ ಅಲ್-ಬಿರೆಹ್ ನಗರಕ್ಕೆ ನುಗ್ಗಿ ಜರಾರ್ ಅವರ ಮನೆಯಲ್ಲಿ ಶೋಧ ನಡೆಸಿದೆ ಎಂದು ತಿಳಿಸಿದೆ.

ಖಲೀದಾ ಜರಾರ್ ಪತಿ ಘಾಸನ್ ಜರಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲ್‌ ಮಿಲಿಟರಿ ಪಡೆ ರಾಮಲ್ಲಾಹ್ ನಗರದಲ್ಲಿನ ನಮ್ಮ ಮನೆಗೆ ಮುಂಬಾಗಿಲನ್ನು ಒಡೆದು ಹಾಕಿ ಪ್ರವೇಶಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

2006ರಿಂದ ಫೆಲೆಸ್ತೀನಿಯನ್ ಸಂಸತ್ತಿನ ಸದಸ್ಯೆಯಾಗಿರುವ ಜರಾರ್ ಪ್ಯಾಲೆಸ್ತೀನ್‌ನ ಹೆಸರಾಂತ ಮಹಿಳಾ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಇದಲ್ಲದೆ PFLP ಪಕ್ಷದ ಪ್ರಭಾವಿ ನಾಯಕಿಯು ಆಗಿದ್ದದ್ದಾರೆ. ಇಸ್ರೇಲ್‌ ಜೈಲಿನಲ್ಲಿರುವ ಸಾವಿರಾರು ಪ್ಯಾಲೆಸ್ತೀನ್ ಕೈದಿಗಳ ಬಿಡುಗಡೆಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.

ಜರಾರ್ ಅವರನ್ನು ಇದಕ್ಕೂ ಮೊದಲು ಇಸ್ರೇಲ್‌ ಸೇನೆ ಹಲವು ಬಾರಿ ಬಂಧಿಸಿತ್ತು.  2021ರಲ್ಲಿ ಅವರು ಎರಡು ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದರು. ಅವರನ್ನು ವಿಚಾರಣೆಯಿಲ್ಲದೆ ಇಸ್ರೇಲ್‌ ಬಂಧನದಲ್ಲಿಟ್ಟಿತ್ತು.

PFLP ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್‌ ಸೇನೆಯು ವೆಸ್ಟ್ ಬ್ಯಾಂಕ್‌ನಲ್ಲಿ  ತಮ್ಮ ನಾಯಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಆರೋಪಿಸಿದೆ ಮತ್ತು ಈ ಬಂಧನಗಳು ನಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ ಎಂದು ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ಬಾಂಬ್‌ ದಾಳಿಗಳಿಂದ ಈವರೆಗೆ 20,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ಇತ್ತೀಚಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಖಲೀದಾ ಜರಾರ್ ಯಾರು?

ಖಾಲಿದಾ ಜರಾರ್ ಫೆಬ್ರವರಿ 9 1963ರಂದು ವೆಸ್ಟ್‌ ಬ್ಯಾಂಕ್‌ನ ನಬ್ಲುಸ್ ನಗರದಲ್ಲಿ ಜನಿಸಿದ್ದರು. ಅವರು ವಾಣಿಜ್ಯ ವಿಚಾರದಲ್ಲಿ ಪದವಿ ಮತ್ತು ಬಿರ್ಜೀಟ್ ವಿಶ್ವವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ವಿಚಾರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು 1994 ರಿಂದ 2006ರವರೆಗೆ ಅಡ್ಡಮೀರ್ ಕೈದಿಗಳ ಬೆಂಬಲ ಮತ್ತು ಮಾನವ ಹಕ್ಕುಗಳ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 2006ರಲ್ಲಿ ಪ್ಯಾಲೆಸ್ತೀನ್‌ನ ಸಂಸತ್ತಿಗೆ ಅವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಇದರ ಜೊತೆಗೆ ಅವರು ಕೈದಿಗಳ ಆಯೋಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

ಇಸ್ರೇಲ್‌ ಯುದ್ಧ ಅಪರಾಧಗಳನ್ನು ಅಂತರಾಷ್ಟ್ರೀಯ  ಮಟ್ಟದಲ್ಲಿ ಖಾಲಿದಾ ಜರಾರ್ ಬಹಿರಂಗಪಡಿಸುತ್ತಿದ್ದರು. ಇದರಿಂದ ಇಸ್ರೇಲ್‌ ಆಕೆಯನ್ನು ಹಲವು ಬಾರಿ ಬಂಧಿಸಿದೆ. 1989ರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮೊದಲ ಬಾರಿಗೆ ಅವರನ್ನು ಬಂಧಿಸಲಾಗಿತ್ತು.

2015ರಲ್ಲಿ ಇಸ್ರೇಲ್‌ ಸೈನಿಕರು ಖಾಲಿದಾ ಜರಾರ್‌ ಅವರನ್ನು ಬಂಧಿಸಿದ್ದರು. ಆಕೆಯನ್ನು ವಿಚಾರಣೆಯಿಲ್ಲದೆ ಬಂಧನದಲ್ಲಿರಿಸಲಾಗಿತ್ತು. ಈ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಇಸ್ರೇಲ್ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿದೆ. ರಾಜಕೀಯ ಚಟುವಟಿಕೆಗಳ ಆಧಾರದ ಮೇಲೆ 12 ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿತ್ತು. ಅವುಗಳಲ್ಲಿ ಭಾಷಣ, ಪ್ಯಾಲೆಸ್ತೀನ್‌ ಕೈದಿಗಳಿಗೆ ಬೆಂಬಲ ಸೇರಿ ಹಲವು ಕ್ಷುಲ್ಲಕ ವಿಚಾರ ಸೇರಿಸಲಾಗಿತ್ತು. ಅವರಿಗೆ 15 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿತ್ತು.

ಖಾಲಿದಾ ಜರಾರ್ ಅವರನ್ನು ಜೂ.2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಜು.2017ರಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ಈ ವೇಳೆ ಇಸ್ರೇಲ್‌ ಸೇನೆ ವಶಪಡಿಸಿಕೊಂಡಿತ್ತು. ಕಾರಣ ನೀಡದೆ ಹಶರೋನ್ ಜೈಲಿನಲ್ಲಿ 20 ತಿಂಗಳ ಕಾಲ ಬಂಧನದಲ್ಲಿಟ್ಟಿತ್ತು.

ಇದನ್ನು ಓದಿ: ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...