Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಹಿರಿಯ ರಾಜಕಾರಣಿ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ, ಸಂಸದೆ ಖಾಲಿದಾ ಜರಾರ್ ಮತ್ತು ಅವರ ಕೆಲ ಬೆಂಬಲಿಗರನ್ನು ಇಸ್ರೇಲ್‌ ಸೇನೆ ಬಂಧಿಸಿದೆ. ಈ ಮೊದಲು ಇಸ್ರೇಲ್‌ನಿಂದ ಹಲವು ಬಾರಿ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ಜರಾರ್ ಅವರನ್ನು ಇದೀಗ ಮತ್ತೆ ಇಸ್ರೇಲ್‌ ಸೇನೆ ಬಂಧಿಸಿದೆ.

ಖಾಲಿದಾ ಜರಾರ್ ಪಾಪ್ಯುಲರ್ ಫ್ರಂಟ್ ಫಾರ್‌ ದಿ ಲಿಬರೇಶನ್‌ ಆಫ್‌ ಪ್ಯಾಲೆಸ್ತೀನ್‌ (PFLP)ಪಕ್ಷದ ಪ್ರಮುಖ ನಾಯಕಿಯಾಗಿದ್ದು, ಈ ಪಕ್ಷವನ್ನು ಇಸ್ರೇಲ್, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ “ಭಯೋತ್ಪಾದಕ” ಗುಂಪು ಎಂದು ಘೋಷಿಸಿಕೊಂಡಿದೆ.

ಖಲೀದಾ ಜರಾರ್ ಸೇರಿ ಇತರ PFLP ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್‌ ಪಡೆಗಳು ಮುಂಜಾನೆ ರಾಮಲ್ಲಾದ ಬಳಿಯ ಅಲ್-ಬಿರೆಹ್ ನಗರಕ್ಕೆ ನುಗ್ಗಿ ಜರಾರ್ ಅವರ ಮನೆಯಲ್ಲಿ ಶೋಧ ನಡೆಸಿದೆ ಎಂದು ತಿಳಿಸಿದೆ.

ಖಲೀದಾ ಜರಾರ್ ಪತಿ ಘಾಸನ್ ಜರಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲ್‌ ಮಿಲಿಟರಿ ಪಡೆ ರಾಮಲ್ಲಾಹ್ ನಗರದಲ್ಲಿನ ನಮ್ಮ ಮನೆಗೆ ಮುಂಬಾಗಿಲನ್ನು ಒಡೆದು ಹಾಕಿ ಪ್ರವೇಶಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

2006ರಿಂದ ಫೆಲೆಸ್ತೀನಿಯನ್ ಸಂಸತ್ತಿನ ಸದಸ್ಯೆಯಾಗಿರುವ ಜರಾರ್ ಪ್ಯಾಲೆಸ್ತೀನ್‌ನ ಹೆಸರಾಂತ ಮಹಿಳಾ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಇದಲ್ಲದೆ PFLP ಪಕ್ಷದ ಪ್ರಭಾವಿ ನಾಯಕಿಯು ಆಗಿದ್ದದ್ದಾರೆ. ಇಸ್ರೇಲ್‌ ಜೈಲಿನಲ್ಲಿರುವ ಸಾವಿರಾರು ಪ್ಯಾಲೆಸ್ತೀನ್ ಕೈದಿಗಳ ಬಿಡುಗಡೆಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.

ಜರಾರ್ ಅವರನ್ನು ಇದಕ್ಕೂ ಮೊದಲು ಇಸ್ರೇಲ್‌ ಸೇನೆ ಹಲವು ಬಾರಿ ಬಂಧಿಸಿತ್ತು.  2021ರಲ್ಲಿ ಅವರು ಎರಡು ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದರು. ಅವರನ್ನು ವಿಚಾರಣೆಯಿಲ್ಲದೆ ಇಸ್ರೇಲ್‌ ಬಂಧನದಲ್ಲಿಟ್ಟಿತ್ತು.

PFLP ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್‌ ಸೇನೆಯು ವೆಸ್ಟ್ ಬ್ಯಾಂಕ್‌ನಲ್ಲಿ  ತಮ್ಮ ನಾಯಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಆರೋಪಿಸಿದೆ ಮತ್ತು ಈ ಬಂಧನಗಳು ನಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ ಎಂದು ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ಬಾಂಬ್‌ ದಾಳಿಗಳಿಂದ ಈವರೆಗೆ 20,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ಇತ್ತೀಚಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಖಲೀದಾ ಜರಾರ್ ಯಾರು?

ಖಾಲಿದಾ ಜರಾರ್ ಫೆಬ್ರವರಿ 9 1963ರಂದು ವೆಸ್ಟ್‌ ಬ್ಯಾಂಕ್‌ನ ನಬ್ಲುಸ್ ನಗರದಲ್ಲಿ ಜನಿಸಿದ್ದರು. ಅವರು ವಾಣಿಜ್ಯ ವಿಚಾರದಲ್ಲಿ ಪದವಿ ಮತ್ತು ಬಿರ್ಜೀಟ್ ವಿಶ್ವವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ವಿಚಾರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು 1994 ರಿಂದ 2006ರವರೆಗೆ ಅಡ್ಡಮೀರ್ ಕೈದಿಗಳ ಬೆಂಬಲ ಮತ್ತು ಮಾನವ ಹಕ್ಕುಗಳ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 2006ರಲ್ಲಿ ಪ್ಯಾಲೆಸ್ತೀನ್‌ನ ಸಂಸತ್ತಿಗೆ ಅವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಇದರ ಜೊತೆಗೆ ಅವರು ಕೈದಿಗಳ ಆಯೋಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

ಇಸ್ರೇಲ್‌ ಯುದ್ಧ ಅಪರಾಧಗಳನ್ನು ಅಂತರಾಷ್ಟ್ರೀಯ  ಮಟ್ಟದಲ್ಲಿ ಖಾಲಿದಾ ಜರಾರ್ ಬಹಿರಂಗಪಡಿಸುತ್ತಿದ್ದರು. ಇದರಿಂದ ಇಸ್ರೇಲ್‌ ಆಕೆಯನ್ನು ಹಲವು ಬಾರಿ ಬಂಧಿಸಿದೆ. 1989ರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮೊದಲ ಬಾರಿಗೆ ಅವರನ್ನು ಬಂಧಿಸಲಾಗಿತ್ತು.

2015ರಲ್ಲಿ ಇಸ್ರೇಲ್‌ ಸೈನಿಕರು ಖಾಲಿದಾ ಜರಾರ್‌ ಅವರನ್ನು ಬಂಧಿಸಿದ್ದರು. ಆಕೆಯನ್ನು ವಿಚಾರಣೆಯಿಲ್ಲದೆ ಬಂಧನದಲ್ಲಿರಿಸಲಾಗಿತ್ತು. ಈ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಇಸ್ರೇಲ್ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿದೆ. ರಾಜಕೀಯ ಚಟುವಟಿಕೆಗಳ ಆಧಾರದ ಮೇಲೆ 12 ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿತ್ತು. ಅವುಗಳಲ್ಲಿ ಭಾಷಣ, ಪ್ಯಾಲೆಸ್ತೀನ್‌ ಕೈದಿಗಳಿಗೆ ಬೆಂಬಲ ಸೇರಿ ಹಲವು ಕ್ಷುಲ್ಲಕ ವಿಚಾರ ಸೇರಿಸಲಾಗಿತ್ತು. ಅವರಿಗೆ 15 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿತ್ತು.

ಖಾಲಿದಾ ಜರಾರ್ ಅವರನ್ನು ಜೂ.2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಜು.2017ರಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ಈ ವೇಳೆ ಇಸ್ರೇಲ್‌ ಸೇನೆ ವಶಪಡಿಸಿಕೊಂಡಿತ್ತು. ಕಾರಣ ನೀಡದೆ ಹಶರೋನ್ ಜೈಲಿನಲ್ಲಿ 20 ತಿಂಗಳ ಕಾಲ ಬಂಧನದಲ್ಲಿಟ್ಟಿತ್ತು.

ಇದನ್ನು ಓದಿ: ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...