Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಹಿರಿಯ ರಾಜಕಾರಣಿ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ, ಸಂಸದೆ ಖಾಲಿದಾ ಜರಾರ್ ಮತ್ತು ಅವರ ಕೆಲ ಬೆಂಬಲಿಗರನ್ನು ಇಸ್ರೇಲ್‌ ಸೇನೆ ಬಂಧಿಸಿದೆ. ಈ ಮೊದಲು ಇಸ್ರೇಲ್‌ನಿಂದ ಹಲವು ಬಾರಿ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ಜರಾರ್ ಅವರನ್ನು ಇದೀಗ ಮತ್ತೆ ಇಸ್ರೇಲ್‌ ಸೇನೆ ಬಂಧಿಸಿದೆ.

ಖಾಲಿದಾ ಜರಾರ್ ಪಾಪ್ಯುಲರ್ ಫ್ರಂಟ್ ಫಾರ್‌ ದಿ ಲಿಬರೇಶನ್‌ ಆಫ್‌ ಪ್ಯಾಲೆಸ್ತೀನ್‌ (PFLP)ಪಕ್ಷದ ಪ್ರಮುಖ ನಾಯಕಿಯಾಗಿದ್ದು, ಈ ಪಕ್ಷವನ್ನು ಇಸ್ರೇಲ್, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ “ಭಯೋತ್ಪಾದಕ” ಗುಂಪು ಎಂದು ಘೋಷಿಸಿಕೊಂಡಿದೆ.

ಖಲೀದಾ ಜರಾರ್ ಸೇರಿ ಇತರ PFLP ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್‌ ಪಡೆಗಳು ಮುಂಜಾನೆ ರಾಮಲ್ಲಾದ ಬಳಿಯ ಅಲ್-ಬಿರೆಹ್ ನಗರಕ್ಕೆ ನುಗ್ಗಿ ಜರಾರ್ ಅವರ ಮನೆಯಲ್ಲಿ ಶೋಧ ನಡೆಸಿದೆ ಎಂದು ತಿಳಿಸಿದೆ.

ಖಲೀದಾ ಜರಾರ್ ಪತಿ ಘಾಸನ್ ಜರಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲ್‌ ಮಿಲಿಟರಿ ಪಡೆ ರಾಮಲ್ಲಾಹ್ ನಗರದಲ್ಲಿನ ನಮ್ಮ ಮನೆಗೆ ಮುಂಬಾಗಿಲನ್ನು ಒಡೆದು ಹಾಕಿ ಪ್ರವೇಶಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

2006ರಿಂದ ಫೆಲೆಸ್ತೀನಿಯನ್ ಸಂಸತ್ತಿನ ಸದಸ್ಯೆಯಾಗಿರುವ ಜರಾರ್ ಪ್ಯಾಲೆಸ್ತೀನ್‌ನ ಹೆಸರಾಂತ ಮಹಿಳಾ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಇದಲ್ಲದೆ PFLP ಪಕ್ಷದ ಪ್ರಭಾವಿ ನಾಯಕಿಯು ಆಗಿದ್ದದ್ದಾರೆ. ಇಸ್ರೇಲ್‌ ಜೈಲಿನಲ್ಲಿರುವ ಸಾವಿರಾರು ಪ್ಯಾಲೆಸ್ತೀನ್ ಕೈದಿಗಳ ಬಿಡುಗಡೆಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.

ಜರಾರ್ ಅವರನ್ನು ಇದಕ್ಕೂ ಮೊದಲು ಇಸ್ರೇಲ್‌ ಸೇನೆ ಹಲವು ಬಾರಿ ಬಂಧಿಸಿತ್ತು.  2021ರಲ್ಲಿ ಅವರು ಎರಡು ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದರು. ಅವರನ್ನು ವಿಚಾರಣೆಯಿಲ್ಲದೆ ಇಸ್ರೇಲ್‌ ಬಂಧನದಲ್ಲಿಟ್ಟಿತ್ತು.

PFLP ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್‌ ಸೇನೆಯು ವೆಸ್ಟ್ ಬ್ಯಾಂಕ್‌ನಲ್ಲಿ  ತಮ್ಮ ನಾಯಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಆರೋಪಿಸಿದೆ ಮತ್ತು ಈ ಬಂಧನಗಳು ನಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ ಎಂದು ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ಬಾಂಬ್‌ ದಾಳಿಗಳಿಂದ ಈವರೆಗೆ 20,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ಇತ್ತೀಚಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಖಲೀದಾ ಜರಾರ್ ಯಾರು?

ಖಾಲಿದಾ ಜರಾರ್ ಫೆಬ್ರವರಿ 9 1963ರಂದು ವೆಸ್ಟ್‌ ಬ್ಯಾಂಕ್‌ನ ನಬ್ಲುಸ್ ನಗರದಲ್ಲಿ ಜನಿಸಿದ್ದರು. ಅವರು ವಾಣಿಜ್ಯ ವಿಚಾರದಲ್ಲಿ ಪದವಿ ಮತ್ತು ಬಿರ್ಜೀಟ್ ವಿಶ್ವವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ವಿಚಾರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು 1994 ರಿಂದ 2006ರವರೆಗೆ ಅಡ್ಡಮೀರ್ ಕೈದಿಗಳ ಬೆಂಬಲ ಮತ್ತು ಮಾನವ ಹಕ್ಕುಗಳ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 2006ರಲ್ಲಿ ಪ್ಯಾಲೆಸ್ತೀನ್‌ನ ಸಂಸತ್ತಿಗೆ ಅವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಇದರ ಜೊತೆಗೆ ಅವರು ಕೈದಿಗಳ ಆಯೋಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

ಇಸ್ರೇಲ್‌ ಯುದ್ಧ ಅಪರಾಧಗಳನ್ನು ಅಂತರಾಷ್ಟ್ರೀಯ  ಮಟ್ಟದಲ್ಲಿ ಖಾಲಿದಾ ಜರಾರ್ ಬಹಿರಂಗಪಡಿಸುತ್ತಿದ್ದರು. ಇದರಿಂದ ಇಸ್ರೇಲ್‌ ಆಕೆಯನ್ನು ಹಲವು ಬಾರಿ ಬಂಧಿಸಿದೆ. 1989ರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮೊದಲ ಬಾರಿಗೆ ಅವರನ್ನು ಬಂಧಿಸಲಾಗಿತ್ತು.

2015ರಲ್ಲಿ ಇಸ್ರೇಲ್‌ ಸೈನಿಕರು ಖಾಲಿದಾ ಜರಾರ್‌ ಅವರನ್ನು ಬಂಧಿಸಿದ್ದರು. ಆಕೆಯನ್ನು ವಿಚಾರಣೆಯಿಲ್ಲದೆ ಬಂಧನದಲ್ಲಿರಿಸಲಾಗಿತ್ತು. ಈ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಇಸ್ರೇಲ್ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿದೆ. ರಾಜಕೀಯ ಚಟುವಟಿಕೆಗಳ ಆಧಾರದ ಮೇಲೆ 12 ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿತ್ತು. ಅವುಗಳಲ್ಲಿ ಭಾಷಣ, ಪ್ಯಾಲೆಸ್ತೀನ್‌ ಕೈದಿಗಳಿಗೆ ಬೆಂಬಲ ಸೇರಿ ಹಲವು ಕ್ಷುಲ್ಲಕ ವಿಚಾರ ಸೇರಿಸಲಾಗಿತ್ತು. ಅವರಿಗೆ 15 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿತ್ತು.

ಖಾಲಿದಾ ಜರಾರ್ ಅವರನ್ನು ಜೂ.2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಜು.2017ರಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ಈ ವೇಳೆ ಇಸ್ರೇಲ್‌ ಸೇನೆ ವಶಪಡಿಸಿಕೊಂಡಿತ್ತು. ಕಾರಣ ನೀಡದೆ ಹಶರೋನ್ ಜೈಲಿನಲ್ಲಿ 20 ತಿಂಗಳ ಕಾಲ ಬಂಧನದಲ್ಲಿಟ್ಟಿತ್ತು.

ಇದನ್ನು ಓದಿ: ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...