Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಹಿರಿಯ ರಾಜಕಾರಣಿ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ, ಸಂಸದೆ ಖಾಲಿದಾ ಜರಾರ್ ಮತ್ತು ಅವರ ಕೆಲ ಬೆಂಬಲಿಗರನ್ನು ಇಸ್ರೇಲ್‌ ಸೇನೆ ಬಂಧಿಸಿದೆ. ಈ ಮೊದಲು ಇಸ್ರೇಲ್‌ನಿಂದ ಹಲವು ಬಾರಿ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ಜರಾರ್ ಅವರನ್ನು ಇದೀಗ ಮತ್ತೆ ಇಸ್ರೇಲ್‌ ಸೇನೆ ಬಂಧಿಸಿದೆ.

ಖಾಲಿದಾ ಜರಾರ್ ಪಾಪ್ಯುಲರ್ ಫ್ರಂಟ್ ಫಾರ್‌ ದಿ ಲಿಬರೇಶನ್‌ ಆಫ್‌ ಪ್ಯಾಲೆಸ್ತೀನ್‌ (PFLP)ಪಕ್ಷದ ಪ್ರಮುಖ ನಾಯಕಿಯಾಗಿದ್ದು, ಈ ಪಕ್ಷವನ್ನು ಇಸ್ರೇಲ್, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ “ಭಯೋತ್ಪಾದಕ” ಗುಂಪು ಎಂದು ಘೋಷಿಸಿಕೊಂಡಿದೆ.

ಖಲೀದಾ ಜರಾರ್ ಸೇರಿ ಇತರ PFLP ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್‌ ಪಡೆಗಳು ಮುಂಜಾನೆ ರಾಮಲ್ಲಾದ ಬಳಿಯ ಅಲ್-ಬಿರೆಹ್ ನಗರಕ್ಕೆ ನುಗ್ಗಿ ಜರಾರ್ ಅವರ ಮನೆಯಲ್ಲಿ ಶೋಧ ನಡೆಸಿದೆ ಎಂದು ತಿಳಿಸಿದೆ.

ಖಲೀದಾ ಜರಾರ್ ಪತಿ ಘಾಸನ್ ಜರಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲ್‌ ಮಿಲಿಟರಿ ಪಡೆ ರಾಮಲ್ಲಾಹ್ ನಗರದಲ್ಲಿನ ನಮ್ಮ ಮನೆಗೆ ಮುಂಬಾಗಿಲನ್ನು ಒಡೆದು ಹಾಕಿ ಪ್ರವೇಶಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

2006ರಿಂದ ಫೆಲೆಸ್ತೀನಿಯನ್ ಸಂಸತ್ತಿನ ಸದಸ್ಯೆಯಾಗಿರುವ ಜರಾರ್ ಪ್ಯಾಲೆಸ್ತೀನ್‌ನ ಹೆಸರಾಂತ ಮಹಿಳಾ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಇದಲ್ಲದೆ PFLP ಪಕ್ಷದ ಪ್ರಭಾವಿ ನಾಯಕಿಯು ಆಗಿದ್ದದ್ದಾರೆ. ಇಸ್ರೇಲ್‌ ಜೈಲಿನಲ್ಲಿರುವ ಸಾವಿರಾರು ಪ್ಯಾಲೆಸ್ತೀನ್ ಕೈದಿಗಳ ಬಿಡುಗಡೆಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.

ಜರಾರ್ ಅವರನ್ನು ಇದಕ್ಕೂ ಮೊದಲು ಇಸ್ರೇಲ್‌ ಸೇನೆ ಹಲವು ಬಾರಿ ಬಂಧಿಸಿತ್ತು.  2021ರಲ್ಲಿ ಅವರು ಎರಡು ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದರು. ಅವರನ್ನು ವಿಚಾರಣೆಯಿಲ್ಲದೆ ಇಸ್ರೇಲ್‌ ಬಂಧನದಲ್ಲಿಟ್ಟಿತ್ತು.

PFLP ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್‌ ಸೇನೆಯು ವೆಸ್ಟ್ ಬ್ಯಾಂಕ್‌ನಲ್ಲಿ  ತಮ್ಮ ನಾಯಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಆರೋಪಿಸಿದೆ ಮತ್ತು ಈ ಬಂಧನಗಳು ನಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ ಎಂದು ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ಬಾಂಬ್‌ ದಾಳಿಗಳಿಂದ ಈವರೆಗೆ 20,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ಇತ್ತೀಚಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಖಲೀದಾ ಜರಾರ್ ಯಾರು?

ಖಾಲಿದಾ ಜರಾರ್ ಫೆಬ್ರವರಿ 9 1963ರಂದು ವೆಸ್ಟ್‌ ಬ್ಯಾಂಕ್‌ನ ನಬ್ಲುಸ್ ನಗರದಲ್ಲಿ ಜನಿಸಿದ್ದರು. ಅವರು ವಾಣಿಜ್ಯ ವಿಚಾರದಲ್ಲಿ ಪದವಿ ಮತ್ತು ಬಿರ್ಜೀಟ್ ವಿಶ್ವವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ವಿಚಾರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು 1994 ರಿಂದ 2006ರವರೆಗೆ ಅಡ್ಡಮೀರ್ ಕೈದಿಗಳ ಬೆಂಬಲ ಮತ್ತು ಮಾನವ ಹಕ್ಕುಗಳ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 2006ರಲ್ಲಿ ಪ್ಯಾಲೆಸ್ತೀನ್‌ನ ಸಂಸತ್ತಿಗೆ ಅವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಇದರ ಜೊತೆಗೆ ಅವರು ಕೈದಿಗಳ ಆಯೋಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

ಇಸ್ರೇಲ್‌ ಯುದ್ಧ ಅಪರಾಧಗಳನ್ನು ಅಂತರಾಷ್ಟ್ರೀಯ  ಮಟ್ಟದಲ್ಲಿ ಖಾಲಿದಾ ಜರಾರ್ ಬಹಿರಂಗಪಡಿಸುತ್ತಿದ್ದರು. ಇದರಿಂದ ಇಸ್ರೇಲ್‌ ಆಕೆಯನ್ನು ಹಲವು ಬಾರಿ ಬಂಧಿಸಿದೆ. 1989ರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮೊದಲ ಬಾರಿಗೆ ಅವರನ್ನು ಬಂಧಿಸಲಾಗಿತ್ತು.

2015ರಲ್ಲಿ ಇಸ್ರೇಲ್‌ ಸೈನಿಕರು ಖಾಲಿದಾ ಜರಾರ್‌ ಅವರನ್ನು ಬಂಧಿಸಿದ್ದರು. ಆಕೆಯನ್ನು ವಿಚಾರಣೆಯಿಲ್ಲದೆ ಬಂಧನದಲ್ಲಿರಿಸಲಾಗಿತ್ತು. ಈ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಇಸ್ರೇಲ್ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿದೆ. ರಾಜಕೀಯ ಚಟುವಟಿಕೆಗಳ ಆಧಾರದ ಮೇಲೆ 12 ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿತ್ತು. ಅವುಗಳಲ್ಲಿ ಭಾಷಣ, ಪ್ಯಾಲೆಸ್ತೀನ್‌ ಕೈದಿಗಳಿಗೆ ಬೆಂಬಲ ಸೇರಿ ಹಲವು ಕ್ಷುಲ್ಲಕ ವಿಚಾರ ಸೇರಿಸಲಾಗಿತ್ತು. ಅವರಿಗೆ 15 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿತ್ತು.

ಖಾಲಿದಾ ಜರಾರ್ ಅವರನ್ನು ಜೂ.2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಜು.2017ರಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ಈ ವೇಳೆ ಇಸ್ರೇಲ್‌ ಸೇನೆ ವಶಪಡಿಸಿಕೊಂಡಿತ್ತು. ಕಾರಣ ನೀಡದೆ ಹಶರೋನ್ ಜೈಲಿನಲ್ಲಿ 20 ತಿಂಗಳ ಕಾಲ ಬಂಧನದಲ್ಲಿಟ್ಟಿತ್ತು.

ಇದನ್ನು ಓದಿ: ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...