Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಹಿರಿಯ ರಾಜಕಾರಣಿ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ, ಸಂಸದೆ ಖಾಲಿದಾ ಜರಾರ್ ಮತ್ತು ಅವರ ಕೆಲ ಬೆಂಬಲಿಗರನ್ನು ಇಸ್ರೇಲ್‌ ಸೇನೆ ಬಂಧಿಸಿದೆ. ಈ ಮೊದಲು ಇಸ್ರೇಲ್‌ನಿಂದ ಹಲವು ಬಾರಿ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ಜರಾರ್ ಅವರನ್ನು ಇದೀಗ ಮತ್ತೆ ಇಸ್ರೇಲ್‌ ಸೇನೆ ಬಂಧಿಸಿದೆ.

ಖಾಲಿದಾ ಜರಾರ್ ಪಾಪ್ಯುಲರ್ ಫ್ರಂಟ್ ಫಾರ್‌ ದಿ ಲಿಬರೇಶನ್‌ ಆಫ್‌ ಪ್ಯಾಲೆಸ್ತೀನ್‌ (PFLP)ಪಕ್ಷದ ಪ್ರಮುಖ ನಾಯಕಿಯಾಗಿದ್ದು, ಈ ಪಕ್ಷವನ್ನು ಇಸ್ರೇಲ್, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ “ಭಯೋತ್ಪಾದಕ” ಗುಂಪು ಎಂದು ಘೋಷಿಸಿಕೊಂಡಿದೆ.

ಖಲೀದಾ ಜರಾರ್ ಸೇರಿ ಇತರ PFLP ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್‌ ಪಡೆಗಳು ಮುಂಜಾನೆ ರಾಮಲ್ಲಾದ ಬಳಿಯ ಅಲ್-ಬಿರೆಹ್ ನಗರಕ್ಕೆ ನುಗ್ಗಿ ಜರಾರ್ ಅವರ ಮನೆಯಲ್ಲಿ ಶೋಧ ನಡೆಸಿದೆ ಎಂದು ತಿಳಿಸಿದೆ.

ಖಲೀದಾ ಜರಾರ್ ಪತಿ ಘಾಸನ್ ಜರಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲ್‌ ಮಿಲಿಟರಿ ಪಡೆ ರಾಮಲ್ಲಾಹ್ ನಗರದಲ್ಲಿನ ನಮ್ಮ ಮನೆಗೆ ಮುಂಬಾಗಿಲನ್ನು ಒಡೆದು ಹಾಕಿ ಪ್ರವೇಶಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

2006ರಿಂದ ಫೆಲೆಸ್ತೀನಿಯನ್ ಸಂಸತ್ತಿನ ಸದಸ್ಯೆಯಾಗಿರುವ ಜರಾರ್ ಪ್ಯಾಲೆಸ್ತೀನ್‌ನ ಹೆಸರಾಂತ ಮಹಿಳಾ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಇದಲ್ಲದೆ PFLP ಪಕ್ಷದ ಪ್ರಭಾವಿ ನಾಯಕಿಯು ಆಗಿದ್ದದ್ದಾರೆ. ಇಸ್ರೇಲ್‌ ಜೈಲಿನಲ್ಲಿರುವ ಸಾವಿರಾರು ಪ್ಯಾಲೆಸ್ತೀನ್ ಕೈದಿಗಳ ಬಿಡುಗಡೆಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.

ಜರಾರ್ ಅವರನ್ನು ಇದಕ್ಕೂ ಮೊದಲು ಇಸ್ರೇಲ್‌ ಸೇನೆ ಹಲವು ಬಾರಿ ಬಂಧಿಸಿತ್ತು.  2021ರಲ್ಲಿ ಅವರು ಎರಡು ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದರು. ಅವರನ್ನು ವಿಚಾರಣೆಯಿಲ್ಲದೆ ಇಸ್ರೇಲ್‌ ಬಂಧನದಲ್ಲಿಟ್ಟಿತ್ತು.

PFLP ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್‌ ಸೇನೆಯು ವೆಸ್ಟ್ ಬ್ಯಾಂಕ್‌ನಲ್ಲಿ  ತಮ್ಮ ನಾಯಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಆರೋಪಿಸಿದೆ ಮತ್ತು ಈ ಬಂಧನಗಳು ನಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ ಎಂದು ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ಬಾಂಬ್‌ ದಾಳಿಗಳಿಂದ ಈವರೆಗೆ 20,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ಇತ್ತೀಚಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಖಲೀದಾ ಜರಾರ್ ಯಾರು?

ಖಾಲಿದಾ ಜರಾರ್ ಫೆಬ್ರವರಿ 9 1963ರಂದು ವೆಸ್ಟ್‌ ಬ್ಯಾಂಕ್‌ನ ನಬ್ಲುಸ್ ನಗರದಲ್ಲಿ ಜನಿಸಿದ್ದರು. ಅವರು ವಾಣಿಜ್ಯ ವಿಚಾರದಲ್ಲಿ ಪದವಿ ಮತ್ತು ಬಿರ್ಜೀಟ್ ವಿಶ್ವವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ವಿಚಾರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು 1994 ರಿಂದ 2006ರವರೆಗೆ ಅಡ್ಡಮೀರ್ ಕೈದಿಗಳ ಬೆಂಬಲ ಮತ್ತು ಮಾನವ ಹಕ್ಕುಗಳ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 2006ರಲ್ಲಿ ಪ್ಯಾಲೆಸ್ತೀನ್‌ನ ಸಂಸತ್ತಿಗೆ ಅವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಇದರ ಜೊತೆಗೆ ಅವರು ಕೈದಿಗಳ ಆಯೋಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

ಇಸ್ರೇಲ್‌ ಯುದ್ಧ ಅಪರಾಧಗಳನ್ನು ಅಂತರಾಷ್ಟ್ರೀಯ  ಮಟ್ಟದಲ್ಲಿ ಖಾಲಿದಾ ಜರಾರ್ ಬಹಿರಂಗಪಡಿಸುತ್ತಿದ್ದರು. ಇದರಿಂದ ಇಸ್ರೇಲ್‌ ಆಕೆಯನ್ನು ಹಲವು ಬಾರಿ ಬಂಧಿಸಿದೆ. 1989ರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮೊದಲ ಬಾರಿಗೆ ಅವರನ್ನು ಬಂಧಿಸಲಾಗಿತ್ತು.

2015ರಲ್ಲಿ ಇಸ್ರೇಲ್‌ ಸೈನಿಕರು ಖಾಲಿದಾ ಜರಾರ್‌ ಅವರನ್ನು ಬಂಧಿಸಿದ್ದರು. ಆಕೆಯನ್ನು ವಿಚಾರಣೆಯಿಲ್ಲದೆ ಬಂಧನದಲ್ಲಿರಿಸಲಾಗಿತ್ತು. ಈ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಇಸ್ರೇಲ್ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿದೆ. ರಾಜಕೀಯ ಚಟುವಟಿಕೆಗಳ ಆಧಾರದ ಮೇಲೆ 12 ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿತ್ತು. ಅವುಗಳಲ್ಲಿ ಭಾಷಣ, ಪ್ಯಾಲೆಸ್ತೀನ್‌ ಕೈದಿಗಳಿಗೆ ಬೆಂಬಲ ಸೇರಿ ಹಲವು ಕ್ಷುಲ್ಲಕ ವಿಚಾರ ಸೇರಿಸಲಾಗಿತ್ತು. ಅವರಿಗೆ 15 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿತ್ತು.

ಖಾಲಿದಾ ಜರಾರ್ ಅವರನ್ನು ಜೂ.2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಜು.2017ರಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ಈ ವೇಳೆ ಇಸ್ರೇಲ್‌ ಸೇನೆ ವಶಪಡಿಸಿಕೊಂಡಿತ್ತು. ಕಾರಣ ನೀಡದೆ ಹಶರೋನ್ ಜೈಲಿನಲ್ಲಿ 20 ತಿಂಗಳ ಕಾಲ ಬಂಧನದಲ್ಲಿಟ್ಟಿತ್ತು.

ಇದನ್ನು ಓದಿ: ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...