Homeಮುಖಪುಟರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

ರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

- Advertisement -
- Advertisement -

ಬುಧವಾರ ರಾತ್ರಿ ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಳಬಾಗಿಲು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಡಾ. ಬಿ.ಸಿ ಮುದ್ದುಗಂಗಾಧರ್ ಎಂಬುವವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ 10 ಗಂಟೆಗಳಲ್ಲಿ ಅವರನ್ನು ಬದಲಿಸಿ ಆದಿನಾರಾಯಣ ಎಂಬುವವರಿಗೆ ಕಾಂಗ್ರೆಸ್ ಬಿ ಫಾರಂ ನೀಡಿದೆ. ಇದಕ್ಕೆ ಕಾರಣರಾದ ವ್ಯಕ್ತಿ ಕೊತ್ತೂರು ಮಂಜುನಾಥ್! ಯಾರಿವರು? ಅಭ್ಯರ್ಥಿ ಬದಲಾಗಲು ಕಾರಣವೇನು?

ಮುಳಬಾಗಿಲು ವಿಧಾನಸಭಾ ಕ್ಷೇತ್ರ 2008ರಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಯಿತು. ಆ ಚುನಾವಣೆಯಲ್ಲಿ ಆಗ ಕಾಂಗ್ರೆಸ್ ಅಭ್ಯರ್ಥಿ ಅಮರೇಶ್‌ರವರು ಜೆಡಿಎಸ್‌ನ ಎನ್ ಮುನಿನಂಜಪ್ಪನವರನ್ನು 1,854 ಮತಗಳಿಂದ ಮಣಿಸಿ ಶಾಸಕರಾದರು. ಆದರೆ 2013ರ ವೇಳೆಗೆ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟವರು ಕೊತ್ತೂರು ಮಂಜುನಾಥ್. ಕಾಂಗ್ರೆಸ್ ಟಿಕೆಟ್ ನೀಡದಿದ್ದುದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು 73,146 ಮತಗಳನ್ನು ಪಡೆದು ಜೆಡಿಎಸ್ ಅಭ್ಯರ್ಥಿ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

ಮುಳಬಾಗಿಲು ತಾಲ್ಲೂಕಿನ ಮರಹೇರು ಕೊತ್ತೂರು ಗ್ರಾಮದ ಇವರು ಜನಪ್ರಿಯ ಶಾಸಕರೂ ಆಗಿದ್ದರು. 2018ರ ಚುನಾವಣೆ ವೇಳೆಗೆ ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು. ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್‌ರವರು ಪ್ರಬಲ ಪೈಪೋಟಿ ಕೊಟ್ಟರೂ ಸಹ 6,715 ಮತಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಕಾಂಗ್ರೆಸ್ ಟಿಕೆಟ್ ಸಿಗದುದ್ದಕ್ಕೆ ಬೇಸರಗೊಂಡು ಬಿಜೆಪಿ ಸೇರಿದ್ದ ಮಾಜಿ ಶಾಸಕ ಅಮರೇಶ್ ಕೇವಲ 8,411 ಮತಗಳಿಗೆ ಸೀಮಿತಗೊಂಡರು.

ಹೈಕೋರ್ಟ್‌ನಲ್ಲಿಯೂ ಕೂಡ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ತಿರಸ್ಕೃತಗೊಂಡಿದ್ದರಿಂದ ಅವರು ಮುಳಬಾಗಿಲು ಪ.ಜಾ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದರೂ ಅವರಿಗೆ ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅವರು ಮುಳಬಾಗಿಲು ಕ್ಷೇತ್ರಕ್ಕೆ ತನ್ನ ಅನುಯಾಯಿ ಆದಿನಾರಾಯಣರವರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಕಾಂಗ್ರೆಸ್ ಡಾ. ಬಿ.ಸಿ ಮುದ್ದುಗಂಗಾಧರ್ ಹೆಸರು ಪ್ರಕಟಿಸಿದಾಗ ಕೋಪಗೊಂಡ ಮಂಜುನಾಥ್, ಈಗ ಘೋಷಿಸಿರುವ ಅಭ್ಯರ್ಥಿಯ ಹೆಸರೇ ಕೇಳಿಲ್ಲ. ಹಾಗಾಗಿ ಬದಲಿಸಬೇಕು, ಇಲ್ಲವಾದಲ್ಲಿ ತಾನು ಕೋಲಾರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಹಠ ಹಿಡಿದು ಕೂತರು. ಕೊನೆಗೂ ಕೊತ್ತೂರು ಮಂಜು ಒತ್ತಡಕ್ಕೆ ಮಣಿದು ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನೇ ಪಕ್ಷ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದ ಡಾ. ಬಿ ಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣಗೆ ಪಕ್ಷ ಟಿಕೆಟ್ ನೀಡಿದೆ. ಏಕೆಂದರೆ ಕೊತ್ತೂರು ಮಂಜುನಾಥ್ ಬೆಂಬಲವಿಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಗೆಲುವು ಕಷ್ಟ ಎಂಬುದು ಕಳೆದ ಎರಡು ಚುನಾವಣೆಗಳಲ್ಲಿ ನಿರೂಪಿತವಾಗಿದೆ.

ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್‌

ಜೆಡಿಎಸ್ ಪಕ್ಷವು ಸಮೃದ್ಧಿ ಮಂಜುನಾಥ್‌ ನವರಿಗೆ ಟಿಕೆಟ್ ನೀಡಿದೆ. ಅವರು ಕಳೆದ ಬಾರಿ ಪೈಪೋಟಿ ನೀಡಿ ಸೋಲನಪ್ಪಿದ್ದರು. ಈ ಬಾರಿ ಗೆದ್ದು ತೀರುವ ಹಠ ತೊಟ್ಟಿದ್ದಾರೆ.

ಬಿಜೆಪಿಗೆ ಮುಳಬಾಗಿಲಿನಲ್ಲಿ ಯಾವುದೇ ನೆಲೆ ಇಲ್ಲ. ಅದು ಶಿಗೇಹಳ್ಳಿ ಸುಂದರ್‌ ಎಂಬುವವರಿಗೆ ಟಿಕೆಟ್ ನೀಡಿದೆ. ಇನ್ನು ಕಳೆದ ಸಲ ಗೆದ್ದು ಶಾಸಕರಾಗಿದ್ದ ಎಚ್.ನಾಗೇಶ್‌ರವರು ಕಾಂಗ್ರೆಸ್ ಪಕ್ಷ ಸೇರಿದ್ದು, ಮಹದೇವಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಳಬಾಗಿಲಿನಲ್ಲಿ ಸದ್ಯಕ್ಕೆ ಕಾಂಗ್ರೆಸ್‌ನ ಆದಿನಾರಾಯಣ ಮತ್ತು ಜೆಡಿಎಸ್‌ನ ಸಮೃದ್ಧಿ ಮಂಜುನಾಥ್‌ ನಡುವೆ ಹಣಾಹಣಿ ನಡೆಯುತ್ತಿದೆ.

ಅಂದಾಜು ಜಾತಿವಾರು ಮತಗಳು

ಕೋಲಾರ ಜಿಲ್ಲೆಯ ಎಲ್ಲಾ ಕ್ಷೇತ್ರಗಳಂತೆ ಮುಳಬಾಗಿಲಿನಲ್ಲಿಯೂ ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಸ್‌ಸಿ, ಎಸ್‌ಟಿ ಮತಗಳು ಸುಮಾರು 60,000ದಷ್ಟಿದ್ದು ಒಕ್ಕಲಿಗ ಮತಗಳು 50,000ದಷ್ಟಿವೆ. ಮುಸ್ಲಿಮರು 35,000ಕ್ಕೂ ಹೆಚ್ಚಿನ ಮತಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು ಇತರ ಹಿಂದುಳಿದ ವರ್ಗಗಳ 50,000 ಮತ್ತು ಉಳಿದ ಸಮುದಾಯಗಳ 10,000 ಮತಗಳಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮುಳಬಾಗಿಲು: ಪಕ್ಷೇತರ ಅಭ್ಯರ್ಥಿಗಳ ಪಾರುಪತ್ಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...