Homeಮುಖಪುಟರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

ರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

- Advertisement -
- Advertisement -

ಬುಧವಾರ ರಾತ್ರಿ ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಳಬಾಗಿಲು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಡಾ. ಬಿ.ಸಿ ಮುದ್ದುಗಂಗಾಧರ್ ಎಂಬುವವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ 10 ಗಂಟೆಗಳಲ್ಲಿ ಅವರನ್ನು ಬದಲಿಸಿ ಆದಿನಾರಾಯಣ ಎಂಬುವವರಿಗೆ ಕಾಂಗ್ರೆಸ್ ಬಿ ಫಾರಂ ನೀಡಿದೆ. ಇದಕ್ಕೆ ಕಾರಣರಾದ ವ್ಯಕ್ತಿ ಕೊತ್ತೂರು ಮಂಜುನಾಥ್! ಯಾರಿವರು? ಅಭ್ಯರ್ಥಿ ಬದಲಾಗಲು ಕಾರಣವೇನು?

ಮುಳಬಾಗಿಲು ವಿಧಾನಸಭಾ ಕ್ಷೇತ್ರ 2008ರಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಯಿತು. ಆ ಚುನಾವಣೆಯಲ್ಲಿ ಆಗ ಕಾಂಗ್ರೆಸ್ ಅಭ್ಯರ್ಥಿ ಅಮರೇಶ್‌ರವರು ಜೆಡಿಎಸ್‌ನ ಎನ್ ಮುನಿನಂಜಪ್ಪನವರನ್ನು 1,854 ಮತಗಳಿಂದ ಮಣಿಸಿ ಶಾಸಕರಾದರು. ಆದರೆ 2013ರ ವೇಳೆಗೆ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟವರು ಕೊತ್ತೂರು ಮಂಜುನಾಥ್. ಕಾಂಗ್ರೆಸ್ ಟಿಕೆಟ್ ನೀಡದಿದ್ದುದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು 73,146 ಮತಗಳನ್ನು ಪಡೆದು ಜೆಡಿಎಸ್ ಅಭ್ಯರ್ಥಿ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

ಮುಳಬಾಗಿಲು ತಾಲ್ಲೂಕಿನ ಮರಹೇರು ಕೊತ್ತೂರು ಗ್ರಾಮದ ಇವರು ಜನಪ್ರಿಯ ಶಾಸಕರೂ ಆಗಿದ್ದರು. 2018ರ ಚುನಾವಣೆ ವೇಳೆಗೆ ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು. ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್‌ರವರು ಪ್ರಬಲ ಪೈಪೋಟಿ ಕೊಟ್ಟರೂ ಸಹ 6,715 ಮತಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಕಾಂಗ್ರೆಸ್ ಟಿಕೆಟ್ ಸಿಗದುದ್ದಕ್ಕೆ ಬೇಸರಗೊಂಡು ಬಿಜೆಪಿ ಸೇರಿದ್ದ ಮಾಜಿ ಶಾಸಕ ಅಮರೇಶ್ ಕೇವಲ 8,411 ಮತಗಳಿಗೆ ಸೀಮಿತಗೊಂಡರು.

ಹೈಕೋರ್ಟ್‌ನಲ್ಲಿಯೂ ಕೂಡ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ತಿರಸ್ಕೃತಗೊಂಡಿದ್ದರಿಂದ ಅವರು ಮುಳಬಾಗಿಲು ಪ.ಜಾ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದರೂ ಅವರಿಗೆ ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅವರು ಮುಳಬಾಗಿಲು ಕ್ಷೇತ್ರಕ್ಕೆ ತನ್ನ ಅನುಯಾಯಿ ಆದಿನಾರಾಯಣರವರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಕಾಂಗ್ರೆಸ್ ಡಾ. ಬಿ.ಸಿ ಮುದ್ದುಗಂಗಾಧರ್ ಹೆಸರು ಪ್ರಕಟಿಸಿದಾಗ ಕೋಪಗೊಂಡ ಮಂಜುನಾಥ್, ಈಗ ಘೋಷಿಸಿರುವ ಅಭ್ಯರ್ಥಿಯ ಹೆಸರೇ ಕೇಳಿಲ್ಲ. ಹಾಗಾಗಿ ಬದಲಿಸಬೇಕು, ಇಲ್ಲವಾದಲ್ಲಿ ತಾನು ಕೋಲಾರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಹಠ ಹಿಡಿದು ಕೂತರು. ಕೊನೆಗೂ ಕೊತ್ತೂರು ಮಂಜು ಒತ್ತಡಕ್ಕೆ ಮಣಿದು ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನೇ ಪಕ್ಷ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದ ಡಾ. ಬಿ ಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣಗೆ ಪಕ್ಷ ಟಿಕೆಟ್ ನೀಡಿದೆ. ಏಕೆಂದರೆ ಕೊತ್ತೂರು ಮಂಜುನಾಥ್ ಬೆಂಬಲವಿಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಗೆಲುವು ಕಷ್ಟ ಎಂಬುದು ಕಳೆದ ಎರಡು ಚುನಾವಣೆಗಳಲ್ಲಿ ನಿರೂಪಿತವಾಗಿದೆ.

ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್‌

ಜೆಡಿಎಸ್ ಪಕ್ಷವು ಸಮೃದ್ಧಿ ಮಂಜುನಾಥ್‌ ನವರಿಗೆ ಟಿಕೆಟ್ ನೀಡಿದೆ. ಅವರು ಕಳೆದ ಬಾರಿ ಪೈಪೋಟಿ ನೀಡಿ ಸೋಲನಪ್ಪಿದ್ದರು. ಈ ಬಾರಿ ಗೆದ್ದು ತೀರುವ ಹಠ ತೊಟ್ಟಿದ್ದಾರೆ.

ಬಿಜೆಪಿಗೆ ಮುಳಬಾಗಿಲಿನಲ್ಲಿ ಯಾವುದೇ ನೆಲೆ ಇಲ್ಲ. ಅದು ಶಿಗೇಹಳ್ಳಿ ಸುಂದರ್‌ ಎಂಬುವವರಿಗೆ ಟಿಕೆಟ್ ನೀಡಿದೆ. ಇನ್ನು ಕಳೆದ ಸಲ ಗೆದ್ದು ಶಾಸಕರಾಗಿದ್ದ ಎಚ್.ನಾಗೇಶ್‌ರವರು ಕಾಂಗ್ರೆಸ್ ಪಕ್ಷ ಸೇರಿದ್ದು, ಮಹದೇವಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಳಬಾಗಿಲಿನಲ್ಲಿ ಸದ್ಯಕ್ಕೆ ಕಾಂಗ್ರೆಸ್‌ನ ಆದಿನಾರಾಯಣ ಮತ್ತು ಜೆಡಿಎಸ್‌ನ ಸಮೃದ್ಧಿ ಮಂಜುನಾಥ್‌ ನಡುವೆ ಹಣಾಹಣಿ ನಡೆಯುತ್ತಿದೆ.

ಅಂದಾಜು ಜಾತಿವಾರು ಮತಗಳು

ಕೋಲಾರ ಜಿಲ್ಲೆಯ ಎಲ್ಲಾ ಕ್ಷೇತ್ರಗಳಂತೆ ಮುಳಬಾಗಿಲಿನಲ್ಲಿಯೂ ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಸ್‌ಸಿ, ಎಸ್‌ಟಿ ಮತಗಳು ಸುಮಾರು 60,000ದಷ್ಟಿದ್ದು ಒಕ್ಕಲಿಗ ಮತಗಳು 50,000ದಷ್ಟಿವೆ. ಮುಸ್ಲಿಮರು 35,000ಕ್ಕೂ ಹೆಚ್ಚಿನ ಮತಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು ಇತರ ಹಿಂದುಳಿದ ವರ್ಗಗಳ 50,000 ಮತ್ತು ಉಳಿದ ಸಮುದಾಯಗಳ 10,000 ಮತಗಳಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮುಳಬಾಗಿಲು: ಪಕ್ಷೇತರ ಅಭ್ಯರ್ಥಿಗಳ ಪಾರುಪತ್ಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...