Homeಮುಖಪುಟರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

ರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

- Advertisement -
- Advertisement -

ಬುಧವಾರ ರಾತ್ರಿ ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಳಬಾಗಿಲು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಡಾ. ಬಿ.ಸಿ ಮುದ್ದುಗಂಗಾಧರ್ ಎಂಬುವವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ 10 ಗಂಟೆಗಳಲ್ಲಿ ಅವರನ್ನು ಬದಲಿಸಿ ಆದಿನಾರಾಯಣ ಎಂಬುವವರಿಗೆ ಕಾಂಗ್ರೆಸ್ ಬಿ ಫಾರಂ ನೀಡಿದೆ. ಇದಕ್ಕೆ ಕಾರಣರಾದ ವ್ಯಕ್ತಿ ಕೊತ್ತೂರು ಮಂಜುನಾಥ್! ಯಾರಿವರು? ಅಭ್ಯರ್ಥಿ ಬದಲಾಗಲು ಕಾರಣವೇನು?

ಮುಳಬಾಗಿಲು ವಿಧಾನಸಭಾ ಕ್ಷೇತ್ರ 2008ರಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಯಿತು. ಆ ಚುನಾವಣೆಯಲ್ಲಿ ಆಗ ಕಾಂಗ್ರೆಸ್ ಅಭ್ಯರ್ಥಿ ಅಮರೇಶ್‌ರವರು ಜೆಡಿಎಸ್‌ನ ಎನ್ ಮುನಿನಂಜಪ್ಪನವರನ್ನು 1,854 ಮತಗಳಿಂದ ಮಣಿಸಿ ಶಾಸಕರಾದರು. ಆದರೆ 2013ರ ವೇಳೆಗೆ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟವರು ಕೊತ್ತೂರು ಮಂಜುನಾಥ್. ಕಾಂಗ್ರೆಸ್ ಟಿಕೆಟ್ ನೀಡದಿದ್ದುದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು 73,146 ಮತಗಳನ್ನು ಪಡೆದು ಜೆಡಿಎಸ್ ಅಭ್ಯರ್ಥಿ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

ಮುಳಬಾಗಿಲು ತಾಲ್ಲೂಕಿನ ಮರಹೇರು ಕೊತ್ತೂರು ಗ್ರಾಮದ ಇವರು ಜನಪ್ರಿಯ ಶಾಸಕರೂ ಆಗಿದ್ದರು. 2018ರ ಚುನಾವಣೆ ವೇಳೆಗೆ ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು. ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್‌ರವರು ಪ್ರಬಲ ಪೈಪೋಟಿ ಕೊಟ್ಟರೂ ಸಹ 6,715 ಮತಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಕಾಂಗ್ರೆಸ್ ಟಿಕೆಟ್ ಸಿಗದುದ್ದಕ್ಕೆ ಬೇಸರಗೊಂಡು ಬಿಜೆಪಿ ಸೇರಿದ್ದ ಮಾಜಿ ಶಾಸಕ ಅಮರೇಶ್ ಕೇವಲ 8,411 ಮತಗಳಿಗೆ ಸೀಮಿತಗೊಂಡರು.

ಹೈಕೋರ್ಟ್‌ನಲ್ಲಿಯೂ ಕೂಡ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ತಿರಸ್ಕೃತಗೊಂಡಿದ್ದರಿಂದ ಅವರು ಮುಳಬಾಗಿಲು ಪ.ಜಾ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದರೂ ಅವರಿಗೆ ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅವರು ಮುಳಬಾಗಿಲು ಕ್ಷೇತ್ರಕ್ಕೆ ತನ್ನ ಅನುಯಾಯಿ ಆದಿನಾರಾಯಣರವರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಕಾಂಗ್ರೆಸ್ ಡಾ. ಬಿ.ಸಿ ಮುದ್ದುಗಂಗಾಧರ್ ಹೆಸರು ಪ್ರಕಟಿಸಿದಾಗ ಕೋಪಗೊಂಡ ಮಂಜುನಾಥ್, ಈಗ ಘೋಷಿಸಿರುವ ಅಭ್ಯರ್ಥಿಯ ಹೆಸರೇ ಕೇಳಿಲ್ಲ. ಹಾಗಾಗಿ ಬದಲಿಸಬೇಕು, ಇಲ್ಲವಾದಲ್ಲಿ ತಾನು ಕೋಲಾರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಹಠ ಹಿಡಿದು ಕೂತರು. ಕೊನೆಗೂ ಕೊತ್ತೂರು ಮಂಜು ಒತ್ತಡಕ್ಕೆ ಮಣಿದು ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನೇ ಪಕ್ಷ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದ ಡಾ. ಬಿ ಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣಗೆ ಪಕ್ಷ ಟಿಕೆಟ್ ನೀಡಿದೆ. ಏಕೆಂದರೆ ಕೊತ್ತೂರು ಮಂಜುನಾಥ್ ಬೆಂಬಲವಿಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಗೆಲುವು ಕಷ್ಟ ಎಂಬುದು ಕಳೆದ ಎರಡು ಚುನಾವಣೆಗಳಲ್ಲಿ ನಿರೂಪಿತವಾಗಿದೆ.

ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್‌

ಜೆಡಿಎಸ್ ಪಕ್ಷವು ಸಮೃದ್ಧಿ ಮಂಜುನಾಥ್‌ ನವರಿಗೆ ಟಿಕೆಟ್ ನೀಡಿದೆ. ಅವರು ಕಳೆದ ಬಾರಿ ಪೈಪೋಟಿ ನೀಡಿ ಸೋಲನಪ್ಪಿದ್ದರು. ಈ ಬಾರಿ ಗೆದ್ದು ತೀರುವ ಹಠ ತೊಟ್ಟಿದ್ದಾರೆ.

ಬಿಜೆಪಿಗೆ ಮುಳಬಾಗಿಲಿನಲ್ಲಿ ಯಾವುದೇ ನೆಲೆ ಇಲ್ಲ. ಅದು ಶಿಗೇಹಳ್ಳಿ ಸುಂದರ್‌ ಎಂಬುವವರಿಗೆ ಟಿಕೆಟ್ ನೀಡಿದೆ. ಇನ್ನು ಕಳೆದ ಸಲ ಗೆದ್ದು ಶಾಸಕರಾಗಿದ್ದ ಎಚ್.ನಾಗೇಶ್‌ರವರು ಕಾಂಗ್ರೆಸ್ ಪಕ್ಷ ಸೇರಿದ್ದು, ಮಹದೇವಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಳಬಾಗಿಲಿನಲ್ಲಿ ಸದ್ಯಕ್ಕೆ ಕಾಂಗ್ರೆಸ್‌ನ ಆದಿನಾರಾಯಣ ಮತ್ತು ಜೆಡಿಎಸ್‌ನ ಸಮೃದ್ಧಿ ಮಂಜುನಾಥ್‌ ನಡುವೆ ಹಣಾಹಣಿ ನಡೆಯುತ್ತಿದೆ.

ಅಂದಾಜು ಜಾತಿವಾರು ಮತಗಳು

ಕೋಲಾರ ಜಿಲ್ಲೆಯ ಎಲ್ಲಾ ಕ್ಷೇತ್ರಗಳಂತೆ ಮುಳಬಾಗಿಲಿನಲ್ಲಿಯೂ ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಸ್‌ಸಿ, ಎಸ್‌ಟಿ ಮತಗಳು ಸುಮಾರು 60,000ದಷ್ಟಿದ್ದು ಒಕ್ಕಲಿಗ ಮತಗಳು 50,000ದಷ್ಟಿವೆ. ಮುಸ್ಲಿಮರು 35,000ಕ್ಕೂ ಹೆಚ್ಚಿನ ಮತಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು ಇತರ ಹಿಂದುಳಿದ ವರ್ಗಗಳ 50,000 ಮತ್ತು ಉಳಿದ ಸಮುದಾಯಗಳ 10,000 ಮತಗಳಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮುಳಬಾಗಿಲು: ಪಕ್ಷೇತರ ಅಭ್ಯರ್ಥಿಗಳ ಪಾರುಪತ್ಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...