Homeಮುಖಪುಟಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿರುವುದು ಸಂವಿಧಾನವನ್ನು ಅನುಸರಿಸುವ ದೇಶದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ದಲಿತ ಸಮುದಾಯವರಾದ ಸಿಜೆಐ ಮೇಲೆಯೇ ದಾಳಿ ಮಾಡಲು ಹೇಸದ ಜನರು, ದೇಶದ ಸಾಮಾನ್ಯ ದಲಿತ, ಅಲ್ಪಸಂಖ್ಯಾತ ಸೇರಿದಂತೆ ತಳ ಸಮುದಾಯಗಳ ಜನರ ಮೇಲೆ ಯಾವ ಪರಿಯ ಅಸಮಾನತೆ, ಅಸಹನೆ ಹೊಂದಿರಬಹುದು ಎಂದು ಅನೇಕರು ಪ್ರಶ್ನಿಸಿದ್ದಾರೆ.

ಸಿಜೆಐ ಮೇಲಿನ ದಾಳಿ ಸಂವಿಧಾನದ ಮೇಲೆ ಮನುವಾದಿಗಳು ಮಾಡಿರುವ ದಾಳಿ ಎಂದು ಕೆಲ ರಾಜಕೀಯ ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ. ಇದು ಸಂವಿಧಾನದ ಮೇಲೆ ಧರ್ಮದ ಅಂಧತ್ವ ಮಾಡಿರುವ ಸವಾರಿ ಎಂದಿದ್ದಾರೆ.

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವ ವಿಚಾರ ದೇಶದಲ್ಲೆಡೆ ಚರ್ಚೆಯಾಗುತ್ತಿರುವ ನಡುವೆ, ಶೂ ಎಸೆದ ವಕೀಲ ಯಾರು..ಆತನ ಹಿನ್ನೆಲೆ ಏನು? ಎಂದು ಅನೇಕರು ಹುಡುಕಾಡುತ್ತಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ಮಾಡಿರುವ ವರದಿಯ ಪ್ರಕಾರ, ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ನೋಂದಾಯಿತ ಸದಸ್ಯರಾಗಿದ್ದಾರೆ ಮತ್ತು ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು 2009ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿಕೊಂಡಿದ್ದರು.

ಹಿರಿಯ ವಕೀಲರಾಗಿರುವ ಅವರು, ಅನೇಕ ಬಾರ್ ಅಸೋಸಿಯೇಷನ್‌ಗಳಲ್ಲಿ ದೀರ್ಘಕಾಲದ ಸದಸ್ಯತ್ವ ಹೊಂದಿದ್ದು, ಕಾನೂನು ವಲಯದಲ್ಲಿ ಚಿರಪರಿಚಿತರು.

ರಾಕೇಶ್ ಕಿಶೋರ್ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ಶಹದಾರಾ ಬಾರ್ ಅಸೋಸಿಯೇಷನ್ ​​ಮತ್ತು ದೆಹಲಿ ಬಾರ್ ಕೌನ್ಸಿಲ್‌ನ ಸದಸ್ಯತ್ವ ಕಾರ್ಡ್‌ಗಳನ್ನು ಹೊಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ ಕಾಂಪ್ಲೆಕ್ಸ್‌ನ ನ್ಯಾಯಾಲಯ ಸಂಖ್ಯೆ 1ರಲ್ಲಿ ಸಿಜೆಐ ಮೇಲೆ ದಾಳಿ ಪ್ರಯತ್ನ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ ರಾಕೇಶ್ ಕಿಶೋರ್ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರ ತಂದರು. ನಂತರ ಅವರನ್ನು ವಿಚಾರಣೆಗೊಳಪಡಿಸಿ, ಸ್ವಲ್ಪ ಸಮಯದವರೆಗೆ ಬಂಧಿಸಿ ನ್ಯಾಯಾಲಯದ ಸಂಕೀರ್ಣದೊಳಗೆ ಬಿಡುಗಡೆ ಮಾಡಲಾಯಿತು ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಿಜೆಐ ಮೇಲೆ ದಾಳಿ ಪ್ರಯತ್ನ ಬೆನ್ನಲ್ಲೇ ಬಾರ್ ಕೌನ್ಸಿಲ್ ಆಫ್ ಇಂಡಿಯಾ ರಾಕೇಶ್ ಕಿಶೋರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

“ವಕೀಲ ರಾಕೇಶ್ ಕಿಶೋರ್ ಅವರ ವರ್ತನೆ ಮೇಲ್ನೋಟಕ್ಕೆ ನ್ಯಾಯಾಂಗದ ಘನತೆಗೆ ವಿರುದ್ದವಾಗಿದೆ. ವಕೀಲರ ಕಾಯ್ದೆ, 1961 ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ವಕೀಲರ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ಇದು ನ್ಯಾಯಾಲಯದ ಗೌರವವನ್ನು ಹಾಳು ಮಾಡುತ್ತದೆ ಎಂದು ಬಾರ್ ಕೌನ್ಸಿಲ್ ಒತ್ತಿ ಹೇಳಿದೆ. ಕೌನ್ಸಿಲ್ ತೆಗೆದುಕೊಂಡ ಕ್ರಮವು ತಾತ್ಕಾಲಿಕವಾಗಿದ್ದು, ಹೆಚ್ಚಿನ ವಿಚಾರಣೆ ಬಾಕಿ ಇದೆ ಎಂದು ವರದಿಗಳು ತಿಳಿಸಿವೆ.

ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...