Homeಮುಖಪುಟಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿರುವುದು ಸಂವಿಧಾನವನ್ನು ಅನುಸರಿಸುವ ದೇಶದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ದಲಿತ ಸಮುದಾಯವರಾದ ಸಿಜೆಐ ಮೇಲೆಯೇ ದಾಳಿ ಮಾಡಲು ಹೇಸದ ಜನರು, ದೇಶದ ಸಾಮಾನ್ಯ ದಲಿತ, ಅಲ್ಪಸಂಖ್ಯಾತ ಸೇರಿದಂತೆ ತಳ ಸಮುದಾಯಗಳ ಜನರ ಮೇಲೆ ಯಾವ ಪರಿಯ ಅಸಮಾನತೆ, ಅಸಹನೆ ಹೊಂದಿರಬಹುದು ಎಂದು ಅನೇಕರು ಪ್ರಶ್ನಿಸಿದ್ದಾರೆ.

ಸಿಜೆಐ ಮೇಲಿನ ದಾಳಿ ಸಂವಿಧಾನದ ಮೇಲೆ ಮನುವಾದಿಗಳು ಮಾಡಿರುವ ದಾಳಿ ಎಂದು ಕೆಲ ರಾಜಕೀಯ ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ. ಇದು ಸಂವಿಧಾನದ ಮೇಲೆ ಧರ್ಮದ ಅಂಧತ್ವ ಮಾಡಿರುವ ಸವಾರಿ ಎಂದಿದ್ದಾರೆ.

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವ ವಿಚಾರ ದೇಶದಲ್ಲೆಡೆ ಚರ್ಚೆಯಾಗುತ್ತಿರುವ ನಡುವೆ, ಶೂ ಎಸೆದ ವಕೀಲ ಯಾರು..ಆತನ ಹಿನ್ನೆಲೆ ಏನು? ಎಂದು ಅನೇಕರು ಹುಡುಕಾಡುತ್ತಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ಮಾಡಿರುವ ವರದಿಯ ಪ್ರಕಾರ, ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ನೋಂದಾಯಿತ ಸದಸ್ಯರಾಗಿದ್ದಾರೆ ಮತ್ತು ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು 2009ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿಕೊಂಡಿದ್ದರು.

ಹಿರಿಯ ವಕೀಲರಾಗಿರುವ ಅವರು, ಅನೇಕ ಬಾರ್ ಅಸೋಸಿಯೇಷನ್‌ಗಳಲ್ಲಿ ದೀರ್ಘಕಾಲದ ಸದಸ್ಯತ್ವ ಹೊಂದಿದ್ದು, ಕಾನೂನು ವಲಯದಲ್ಲಿ ಚಿರಪರಿಚಿತರು.

ರಾಕೇಶ್ ಕಿಶೋರ್ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ಶಹದಾರಾ ಬಾರ್ ಅಸೋಸಿಯೇಷನ್ ​​ಮತ್ತು ದೆಹಲಿ ಬಾರ್ ಕೌನ್ಸಿಲ್‌ನ ಸದಸ್ಯತ್ವ ಕಾರ್ಡ್‌ಗಳನ್ನು ಹೊಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ ಕಾಂಪ್ಲೆಕ್ಸ್‌ನ ನ್ಯಾಯಾಲಯ ಸಂಖ್ಯೆ 1ರಲ್ಲಿ ಸಿಜೆಐ ಮೇಲೆ ದಾಳಿ ಪ್ರಯತ್ನ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ ರಾಕೇಶ್ ಕಿಶೋರ್ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರ ತಂದರು. ನಂತರ ಅವರನ್ನು ವಿಚಾರಣೆಗೊಳಪಡಿಸಿ, ಸ್ವಲ್ಪ ಸಮಯದವರೆಗೆ ಬಂಧಿಸಿ ನ್ಯಾಯಾಲಯದ ಸಂಕೀರ್ಣದೊಳಗೆ ಬಿಡುಗಡೆ ಮಾಡಲಾಯಿತು ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಿಜೆಐ ಮೇಲೆ ದಾಳಿ ಪ್ರಯತ್ನ ಬೆನ್ನಲ್ಲೇ ಬಾರ್ ಕೌನ್ಸಿಲ್ ಆಫ್ ಇಂಡಿಯಾ ರಾಕೇಶ್ ಕಿಶೋರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

“ವಕೀಲ ರಾಕೇಶ್ ಕಿಶೋರ್ ಅವರ ವರ್ತನೆ ಮೇಲ್ನೋಟಕ್ಕೆ ನ್ಯಾಯಾಂಗದ ಘನತೆಗೆ ವಿರುದ್ದವಾಗಿದೆ. ವಕೀಲರ ಕಾಯ್ದೆ, 1961 ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ವಕೀಲರ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ಇದು ನ್ಯಾಯಾಲಯದ ಗೌರವವನ್ನು ಹಾಳು ಮಾಡುತ್ತದೆ ಎಂದು ಬಾರ್ ಕೌನ್ಸಿಲ್ ಒತ್ತಿ ಹೇಳಿದೆ. ಕೌನ್ಸಿಲ್ ತೆಗೆದುಕೊಂಡ ಕ್ರಮವು ತಾತ್ಕಾಲಿಕವಾಗಿದ್ದು, ಹೆಚ್ಚಿನ ವಿಚಾರಣೆ ಬಾಕಿ ಇದೆ ಎಂದು ವರದಿಗಳು ತಿಳಿಸಿವೆ.

ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...