Homeಅಂತರಾಷ್ಟ್ರೀಯಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ಮೊಹಮ್ಮದ್ ಮೊಖ್ಬರ್ ಯಾರು?

ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ಮೊಹಮ್ಮದ್ ಮೊಖ್ಬರ್ ಯಾರು?

- Advertisement -
- Advertisement -

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟ ಬೆನ್ನಲ್ಲಿ ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ 68 ವರ್ಷದ ಮೊಹಮ್ಮದ್ ಮೊಖ್ಬರ್ ಅವರನ್ನು ನೇಮಿಸಲಾಗಿದೆ. ಮೊಖ್ಬರ್, ಇರಾನ್‌ನ ಮೊದಲ ಉಪಾಧ್ಯಕ್ಷರಾಗಿದ್ದಾರೆ. ಇವರು ಈಗ 50 ದಿನಗಳಲ್ಲಿ ಹೊಸ ಅಧ್ಯಕ್ಷೀಯ ಚುನಾವಣೆಯನ್ನು ಆಯೋಜಿಸುವ ಜವಾಬ್ದಾರಿಯನ್ನು ಹೊಂದಿರುವ ಮೂವರ ಮಂಡಳಿಯನ್ನು ಮುನ್ನಡೆಸುತ್ತಿದ್ದಾರೆ.

ಇರಾನ್‌ನ ಹಂಗಾಮಿ ಅಧ್ಯಕ್ಷ ಮೊಹಮ್ಮದ್ ಮೊಖ್ಬರ್, ಸಂಸತ್ತಿನ ಸ್ಪೀಕರ್ ಮತ್ತು ನ್ಯಾಯಾಂಗದ ಮುಖ್ಯಸ್ಥರು ಮೂವರು ವ್ಯಕ್ತಿಗಳ ಸದಸ್ಯತ್ವದ ಮಂಡಳಿಯ ಭಾಗವಾಗಿದ್ದಾರೆ. ಸಮಿತಿಯು ಅಧ್ಯಕ್ಷರ ಮರಣದ 50 ದಿನಗಳಲ್ಲಿ ಹೊಸ ಅಧ್ಯಕ್ಷೀಯ ಚುನಾವಣೆಯನ್ನು ಆಯೋಜಿಸಲಿದೆ.

1955ರ ಸೆ.1ರಂದು ಜನಿಸಿದ ಮೋಖ್ಬರ್, ರೈಸಿಯಂತೆಯೇ ಇರಾನ್‌ನ ಸುಪ್ರೀಂ ಲೀಡರ್ ಅಲಿ ಖಮೇನಿ ಅವರ ನಿಕಟವರ್ತಿಯಾಗಿದ್ದಾರೆ. 2021ರಲ್ಲಿ ರೈಸಿ ಇರಾನ್‌ನ ಅಧ್ಯಕ್ಷರಾಗಿ ಆಯ್ಕೆಯಾದಾಗ ಮೊಖ್ಬರ್ ಮೊದಲ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಮೊಖ್ಬರ್ ಅಕ್ಟೋಬರ್‌ನಲ್ಲಿ ಮಾಸ್ಕೋಗೆ ಭೇಟಿ ನೀಡಿದ ಇರಾನ್ ಅಧಿಕಾರಿಗಳ ತಂಡದ ಭಾಗವಾಗಿದ್ದರು ಮತ್ತು ರಷ್ಯಾದ ಮಿಲಿಟರಿಗೆ ಕ್ಷಿಪಣಿಗಳು ಮತ್ತು ಹೆಚ್ಚಿನ ಡ್ರೋನ್‌ಗಳನ್ನು ಪೂರೈಸಲು ಒಪ್ಪಿಕೊಂಡ ಸಮಿತಿಯ ಭಾಗವಾಗಿದ್ದರು. ತಂಡದಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್‌ನ ಇಬ್ಬರು ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿಯ ಅಧಿಕಾರಿಯೂ ಇದ್ದರು.

ಮೊಖ್ಬರ್ ಈ ಹಿಂದೆ ಸರ್ವೋಚ್ಚ ನಾಯಕನಿಗೆ ಸಂಬಂಧಿಸಿರುವ ಹೂಡಿಕೆ ನಿಧಿಯಾದ ಸೆಟಾಡ್‌ನ ಮುಖ್ಯಸ್ಥರಾಗಿದ್ದರು. 2010ರಲ್ಲಿ ಯುರೋಪಿಯನ್ ಒಕ್ಕೂಟವು “ಪರಮಾಣು ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿದ್ದಕ್ಕಾಗಿ ಮೊಖ್ಬರ್‌ನ್ನು ತನ್ನ ಪಟ್ಟಿಯಲ್ಲಿ ಸೇರಿಸಿತ್ತು. ಇದಾದ ಎರಡು ವರ್ಷಗಳ ನಂತರ ಅವರನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ನಿನ್ನೆ ಪತನವಾಗಿತ್ತು. ಆದರೆ ಹೆಲಿಕಾಪ್ಟರ್‌ನಲ್ಲಿದ್ದವರ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ದುರಂತದಲ್ಲಿ ಮೃತಪಟ್ಟಿರುವ ಆಘಾತಕಾರಿ ಸುದ್ದಿಯನ್ನು ಇರಾನ್‌ನ ಅಧಿಕಾರಿಗಳು ಇಂದು ಬಹಿರಂಗಗೊಳಿಸಿದ್ದಾರೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ತಿಳಿಸಿದ್ದಾರೆ.

ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಸಾವನ್ನು ದೃಢಪಡಿಸಿದೆ. ಇರಾನ್ ಅಧ್ಯಕ್ಷ ಮತ್ತು ವಿದೇಶಾಂಗ ಸಚಿವರನ್ನು ಹೊತ್ತ ಹೆಲಿಕಾಪ್ಟರ್‌ನ ಎಲ್ಲಾ ಪ್ರಯಾಣಿಕರು ಹುತಾತ್ಮರಾಗಿದ್ದಾರೆ ಎಂದು ವರದಿ ಮಾಡಿದೆ.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ಇದನ್ನು ಓದಿ: ದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...