Homeಮುಖಪುಟಜೆ.ಪಿ. ನಡ್ಡಾ ಯಾರು, ಅವರಿಗೆ ನಾನ್ಯಾಕೆ ಉತ್ತರಿಸಲಿ: ರಾಹುಲ್ ಗಾಂಧಿ

ಜೆ.ಪಿ. ನಡ್ಡಾ ಯಾರು, ಅವರಿಗೆ ನಾನ್ಯಾಕೆ ಉತ್ತರಿಸಲಿ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಜೆ.ಪಿ ನಡ್ಡಾ ಯಾರು? ಅವರಿಗೆ ನಾನು ಯಾಕೆ ಉತ್ತರಿಸಬೇಕು?” ಎಂದು ಪ್ರಶ್ನಿಸಿದ್ದಾರೆ. ಚೀನಾ ಸರ್ಕಾರವು ಅರುಣಾಚಲ ಪ್ರದೇಶದಲ್ಲಿ ಹಳ್ಳಿಯನ್ನು ನಿರ್ಮಿಸುತ್ತಿದೆ ಎಂಬ ವರದಿಯ ಬಗ್ಗೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮೇಲೆ ನಡೆಸಿದ ವಾಗ್ದಾಳಿಯ ಹಿನ್ನಲೆಯಲ್ಲಿ, ನಡ್ಡಾ ಅವರು ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ಟೀಕಿಸಿದ್ದರು.

ನಡ್ಡಾ ಅವರು, “ಈಗ ರಾಹುಲ್ ಗಾಂಧಿ ತಮ್ಮ ಮಾಸಿಕ ರಜೆಯಿಂದ ಹಿಂದಿರುಗಿದ್ದಾರೆ. ನಾನು ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ಅವರ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಅವರು ಉತ್ತರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಪ್ರಶ್ನೆಗಳನ್ನು ಕೇಳಿದ್ದರು.

ಇದರ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಅವರ್ಯಾರು? ಅವರ ಪ್ರಶ್ನೆಗಳಿಗೆ ನಾನ್ಯಾಕೆ ಉತ್ತರಿಸಬೇಕು? ಅವರು ನನ್ನ ಪ್ರಾಧ್ಯಾಪಕನೇ? ನಾನು ದೇಶಕ್ಕೆ ಉತ್ತರಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇವು ರೈತರನ್ನು ಮುಗಿಸಿಬಿಡುವ ಕಾಯ್ದೆಗಳಾಗಿವೆ: ರಾಹುಲ್ ಗಾಂಧಿ

“ರೈತರಿಗೆ ವಾಸ್ತವ ತಿಳಿದಿದೆ. ರಾಹುಲ್ ಗಾಂಧಿ ಏನು ಮಾಡುತ್ತಾರೆಂದು ಎಲ್ಲಾ ರೈತರಿಗೆ ತಿಳಿದಿದೆ. ನಡ್ಡಾ ಜಿ ಭಟ್ಟ ಪಾರ್ಸೌಲ್‌ನಲ್ಲಿ ಇರಲಿಲ್ಲ. ನಾನು ನರೇಂದ್ರ ಮೋದಿ ಅಥವಾ ಯಾರಿಗೂ ಹೆದರುವುದಿಲ್ಲ. ಅವರಿಗೆ ನನ್ನನ್ನು ಮುಟ್ಟಲು ಸಾಧ್ಯವಿಲ್ಲ ಆದರೆ ಅವರು ನನ್ನನ್ನು ಶೂಟ್ ಮಾಡಬಹುದು. ನಾನು ದೇಶಭಕ್ತ ಮತ್ತು ನನ್ನ ದೇಶವನ್ನು ರಕ್ಷಿಸುತ್ತೇನೆ. ಇದು ನನ್ನ ಧರ್ಮ. ನಾನು ಅವರಿಗಿಂತ ಹೆಚ್ಚು ಧರ್ಮಿಷ್ಠ” ಎಂದು ರಾಹುಲ್ ಗಾಂಧಿ ಹೇಳಿದರು. ಭಟ್ಟ ಪಾರ್ಸೌಲ್ ಉತ್ತರ ಪ್ರದೇಶದ ಸ್ಥಳವಾಗಿದ್ದು, 2011 ರಲ್ಲಿ ಅಲ್ಲಿ ರಾಹುಲ್ ಗಾಂಧಿ ಅವರು ಭೂಸ್ವಾಧೀನ ವಿರುದ್ಧದ ಆಂದೋಲನದಲ್ಲಿ ರೈತರನ್ನು ಬೆಂಬಲಿಸಿ ಹೋರಾಟಕ್ಕೆ ಸೇರಿಕೊಂಡಿದ್ದರು.

ಚೀನಾ, ಕೊರೊನಾ ವೈರಸ್ ಬಿಕ್ಕಟ್ಟು ಮತ್ತು ರೈತ ಪ್ರತಿಭಟನೆಗಳು ಸೇರಿದಂತೆ ಹಲವಾರು ವಿಷಯಗಳನ್ನು ಉಲ್ಲೇಖಿಸಿ ಬಗ್ಗೆ ನಡ್ಡಾ ಅವರು ರಾಹುಲ್ ಗಾಂಧಿಗೆ ವಿರುದ್ದ ವಾಗ್ದಾಳಿ ಮಾಡಿದ್ದರು.

“ರಾಹುಲ್ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಚೀನಾ ಪರವಾಗಿರುವುದನ್ನು ಯಾವಾಗ ನಿಲ್ಲಿಸುತ್ತದೆ? ಅವರು ಉಲ್ಲೇಖಿಸುತ್ತಿರುವ ಅರುಣಾಚಲ ಪ್ರದೇಶ ಸೇರಿದಂತೆ ಸಾವಿರಾರು ಕಿ.ಮೀ.ಗಳನ್ನು ಚೀನಿಯರಿಗೆ ಉಡುಗೊರೆಯಾಗಿ ಪಂಡಿತ್ ನೆಹರೂ ನೀಡಿದ್ದಾರೆಯೆ ಹೊರತು ಬೇರೆ ಯಾರೂ ಅಲ್ಲ. ಇದನ್ನು ಅವರು ನಿರಾಕರಿಸುತ್ತಾರೆಯೆ? ಪ್ರತಿ ಸಮಯ ಕಾಂಗ್ರೆಸ್ ಯಾಕೆ ಚೀನಾಕ್ಕೆ ಶರಣಾಗುತ್ತದೆ?” ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ರೈತರನ್ನು ಪ್ರಚೋದಿಸುವ ಮತ್ತು ದಾರಿತಪ್ಪಿಸುವ ಆರೋಪಗಳು ಡಬಲ್ ಸ್ಟ್ಯಾಂಡರ್ಡ್ ಎಂದು ಅವರು ಆರೋಪಿಸಿದ ಅವರು, “ಕಾಂಗ್ರೆಸ್ ಸರ್ಕಾರಗಳ ಅಡಿಯಲ್ಲಿ ದಶಕಗಳಿಂದ ರೈತರು ಯಾಕೆ ಬಡವರಾಗಿದ್ದರು? ಪ್ರತಿಪಕ್ಷಗಳಲ್ಲಿ ಇದ್ದಾಗ ಮಾತ್ರ ಅವರು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದಾರೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಅಹಂಕಾರಿ ಮೋದಿ ಸರ್ಕಾರದ ವಿರುದ್ಧ ರೈತರು ನಡೆಸುವ ಸತ್ಯಾಗ್ರಹದಲ್ಲಿ ಭಾಗಿಯಾಗಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...