Homeಮುಖಪುಟಜೆ.ಪಿ. ನಡ್ಡಾ ಯಾರು, ಅವರಿಗೆ ನಾನ್ಯಾಕೆ ಉತ್ತರಿಸಲಿ: ರಾಹುಲ್ ಗಾಂಧಿ

ಜೆ.ಪಿ. ನಡ್ಡಾ ಯಾರು, ಅವರಿಗೆ ನಾನ್ಯಾಕೆ ಉತ್ತರಿಸಲಿ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಜೆ.ಪಿ ನಡ್ಡಾ ಯಾರು? ಅವರಿಗೆ ನಾನು ಯಾಕೆ ಉತ್ತರಿಸಬೇಕು?” ಎಂದು ಪ್ರಶ್ನಿಸಿದ್ದಾರೆ. ಚೀನಾ ಸರ್ಕಾರವು ಅರುಣಾಚಲ ಪ್ರದೇಶದಲ್ಲಿ ಹಳ್ಳಿಯನ್ನು ನಿರ್ಮಿಸುತ್ತಿದೆ ಎಂಬ ವರದಿಯ ಬಗ್ಗೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮೇಲೆ ನಡೆಸಿದ ವಾಗ್ದಾಳಿಯ ಹಿನ್ನಲೆಯಲ್ಲಿ, ನಡ್ಡಾ ಅವರು ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ಟೀಕಿಸಿದ್ದರು.

ನಡ್ಡಾ ಅವರು, “ಈಗ ರಾಹುಲ್ ಗಾಂಧಿ ತಮ್ಮ ಮಾಸಿಕ ರಜೆಯಿಂದ ಹಿಂದಿರುಗಿದ್ದಾರೆ. ನಾನು ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ಅವರ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಅವರು ಉತ್ತರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಪ್ರಶ್ನೆಗಳನ್ನು ಕೇಳಿದ್ದರು.

ಇದರ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಅವರ್ಯಾರು? ಅವರ ಪ್ರಶ್ನೆಗಳಿಗೆ ನಾನ್ಯಾಕೆ ಉತ್ತರಿಸಬೇಕು? ಅವರು ನನ್ನ ಪ್ರಾಧ್ಯಾಪಕನೇ? ನಾನು ದೇಶಕ್ಕೆ ಉತ್ತರಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇವು ರೈತರನ್ನು ಮುಗಿಸಿಬಿಡುವ ಕಾಯ್ದೆಗಳಾಗಿವೆ: ರಾಹುಲ್ ಗಾಂಧಿ

“ರೈತರಿಗೆ ವಾಸ್ತವ ತಿಳಿದಿದೆ. ರಾಹುಲ್ ಗಾಂಧಿ ಏನು ಮಾಡುತ್ತಾರೆಂದು ಎಲ್ಲಾ ರೈತರಿಗೆ ತಿಳಿದಿದೆ. ನಡ್ಡಾ ಜಿ ಭಟ್ಟ ಪಾರ್ಸೌಲ್‌ನಲ್ಲಿ ಇರಲಿಲ್ಲ. ನಾನು ನರೇಂದ್ರ ಮೋದಿ ಅಥವಾ ಯಾರಿಗೂ ಹೆದರುವುದಿಲ್ಲ. ಅವರಿಗೆ ನನ್ನನ್ನು ಮುಟ್ಟಲು ಸಾಧ್ಯವಿಲ್ಲ ಆದರೆ ಅವರು ನನ್ನನ್ನು ಶೂಟ್ ಮಾಡಬಹುದು. ನಾನು ದೇಶಭಕ್ತ ಮತ್ತು ನನ್ನ ದೇಶವನ್ನು ರಕ್ಷಿಸುತ್ತೇನೆ. ಇದು ನನ್ನ ಧರ್ಮ. ನಾನು ಅವರಿಗಿಂತ ಹೆಚ್ಚು ಧರ್ಮಿಷ್ಠ” ಎಂದು ರಾಹುಲ್ ಗಾಂಧಿ ಹೇಳಿದರು. ಭಟ್ಟ ಪಾರ್ಸೌಲ್ ಉತ್ತರ ಪ್ರದೇಶದ ಸ್ಥಳವಾಗಿದ್ದು, 2011 ರಲ್ಲಿ ಅಲ್ಲಿ ರಾಹುಲ್ ಗಾಂಧಿ ಅವರು ಭೂಸ್ವಾಧೀನ ವಿರುದ್ಧದ ಆಂದೋಲನದಲ್ಲಿ ರೈತರನ್ನು ಬೆಂಬಲಿಸಿ ಹೋರಾಟಕ್ಕೆ ಸೇರಿಕೊಂಡಿದ್ದರು.

ಚೀನಾ, ಕೊರೊನಾ ವೈರಸ್ ಬಿಕ್ಕಟ್ಟು ಮತ್ತು ರೈತ ಪ್ರತಿಭಟನೆಗಳು ಸೇರಿದಂತೆ ಹಲವಾರು ವಿಷಯಗಳನ್ನು ಉಲ್ಲೇಖಿಸಿ ಬಗ್ಗೆ ನಡ್ಡಾ ಅವರು ರಾಹುಲ್ ಗಾಂಧಿಗೆ ವಿರುದ್ದ ವಾಗ್ದಾಳಿ ಮಾಡಿದ್ದರು.

“ರಾಹುಲ್ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಚೀನಾ ಪರವಾಗಿರುವುದನ್ನು ಯಾವಾಗ ನಿಲ್ಲಿಸುತ್ತದೆ? ಅವರು ಉಲ್ಲೇಖಿಸುತ್ತಿರುವ ಅರುಣಾಚಲ ಪ್ರದೇಶ ಸೇರಿದಂತೆ ಸಾವಿರಾರು ಕಿ.ಮೀ.ಗಳನ್ನು ಚೀನಿಯರಿಗೆ ಉಡುಗೊರೆಯಾಗಿ ಪಂಡಿತ್ ನೆಹರೂ ನೀಡಿದ್ದಾರೆಯೆ ಹೊರತು ಬೇರೆ ಯಾರೂ ಅಲ್ಲ. ಇದನ್ನು ಅವರು ನಿರಾಕರಿಸುತ್ತಾರೆಯೆ? ಪ್ರತಿ ಸಮಯ ಕಾಂಗ್ರೆಸ್ ಯಾಕೆ ಚೀನಾಕ್ಕೆ ಶರಣಾಗುತ್ತದೆ?” ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ರೈತರನ್ನು ಪ್ರಚೋದಿಸುವ ಮತ್ತು ದಾರಿತಪ್ಪಿಸುವ ಆರೋಪಗಳು ಡಬಲ್ ಸ್ಟ್ಯಾಂಡರ್ಡ್ ಎಂದು ಅವರು ಆರೋಪಿಸಿದ ಅವರು, “ಕಾಂಗ್ರೆಸ್ ಸರ್ಕಾರಗಳ ಅಡಿಯಲ್ಲಿ ದಶಕಗಳಿಂದ ರೈತರು ಯಾಕೆ ಬಡವರಾಗಿದ್ದರು? ಪ್ರತಿಪಕ್ಷಗಳಲ್ಲಿ ಇದ್ದಾಗ ಮಾತ್ರ ಅವರು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದಾರೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಅಹಂಕಾರಿ ಮೋದಿ ಸರ್ಕಾರದ ವಿರುದ್ಧ ರೈತರು ನಡೆಸುವ ಸತ್ಯಾಗ್ರಹದಲ್ಲಿ ಭಾಗಿಯಾಗಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...