Homeಕರ್ನಾಟಕಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ಆಕೆ ಯಾವಾಗಲೂ ಹಾಗೆಯೇ ಅಂತೆ ಎಂದು ಹೇಳಿದ ಸಚಿವ ಮಾಧುಸ್ವಾಮಿಯವರು ಉಲ್ಲೇಖಿಸುತ್ತಿರುವ ನಳಿನಿ ಯಾರು? ಅವರ ಹಿನ್ನೆಲೆಯೇನು? ಯಾವಾಗಲೂ ಅವರು ಹೇಗೆ ಮಾಡುತ್ತಾರೆ, ನಳಿನಿಯವರನ್ನು ಸ್ವತಃ ಬಲ್ಲ ಡಾ.ವಾಸು ಎಚ್‌.ವಿ ಅವರ ಬರಹ

- Advertisement -
- Advertisement -

ನಳಿನಿ
ಕೋಲಾರ ಜಿಲ್ಲೆಯ ಅಗ್ರಹಾರ ಕೆರೆಯ ವೀಕ್ಷಣೆಗೆ ಹೋಗಿದ್ದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಯರನ್ನು ಪ್ರಶ್ನಿಸಿದ ನಳಿನಿ ಇಂದು ಆಕೆಯನ್ನು ಟಿವಿಯಲ್ಲಿ ನೋಡುತ್ತಿರುವ ಹೆಚ್ಚಿನವರಿಗೆ ಪರಿಚಯವಿರಲಿಕ್ಕಿಲ್ಲ. ಆದರೆ ಕೋಲಾರದಲ್ಲಿ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ರೈತಸಂಘದ ಕಾರ್ಯಕರ್ತರಿಗೆ ನಳಿನಿ ಚೆನ್ನಾಗಿ ಗೊತ್ತು. ಏಕೆಂದರೆ ಕಳೆದ ಸುಮಾರು ಏಳೆಂಟು ವರ್ಷಗಳಿಂದ ರೈತಸಂಘ ಮತ್ತು ಇತರ ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕ್ರಮಗಳು/ಹೋರಾಟಗಳಲ್ಲಿ ಅವರಿದ್ದಾರೆ.

‘ಆಯಮ್ಮ ಹಾಗೇ ಅಂತ, ಯಾರು ಬಂದರೂ ಹೋಗಿ ಪ್ರಶ್ನಿಸುವುದು. ಬೇಕಾದರೆ ಆ ವಿಡಿಯೋ ನೋಡಿ, ಅದರಲ್ಲಿ ಇನ್ಸ್‍ಪೆಕ್ಟರ್‍ರನ್ನು ‘ಏನ್ಸಾರ್ ಯಾವಾಗಲೂ ನೀವು ಹೀಗೇ ಮಾಡ್ತೀರಾ?, ನಮಗೆ ಅವಕಾಶವನ್ನೇ ಕೊಡಲಿಲ್ಲ’ ಎಂದಿದ್ದಾರೆ ಎಂಬ ಅರ್ಥದಲ್ಲಿ ಸಚಿವ ಮಾಧುಸ್ವಾಮಿಯವರು ತಮ್ಮ ‘ಕ್ಷಮಾಪಣಾ ಹೇಳಿಕೆ’ಯಲ್ಲೂ ಆರೋಪ ಮಾಡಿದ್ದಾರೆ. ನಳಿನಿಯವರು ಹೇಳುವ ಪ್ರಕಾರ, ಅವರನ್ನು ಅಲ್ಲಿಂದ ತಳ್ಳಿಕೊಂಡು ಹೋದ ಇನ್ಸ್‍ಪೆಕ್ಟರ್ ಸಹಾ ‘ನೀನು ಯಾವಾಗಲೂ ಹೀಗೆಯೇ ಮಾಡುತ್ತೀಯಾ’ ಎಂದು ಹೇಳಿ, ‘ಈಕೆ ಮೇಲೆ ಒಂದೆರಡು ಕೇಸು ಫಿಟ್ ಮಾಡ್ರಿ’ ಎಂದು ಅಲ್ಲಿದ್ದ ಪೊಲೀಸರಿಗೆ ಹೇಳಿ ಹೋದರಂತೆ.

ಹೌದಾ? ನಳಿನಿ ಹಾಗೆ ಮಾಡುತ್ತಾರಾ? ಮಾಧುಸ್ವಾಮಿಯವರು ಹೇಳಿದಂತೆ ಆಕೆ ಅತಿರೇಕ ಮಾಡುತ್ತಾರಾ? ಸ್ವತಃ ಆ ವಿಡಿಯೋ ನೋಡಿದ ಯಾರೊಬ್ಬರೂ ಅದನ್ನು ನಂಬಲಾರರು. ಆದರೆ ನಳಿನಿಯವರನ್ನು ಸಾಕಷ್ಟು ಕಾಲದಿಂದ ನೋಡಿರುವ ನಮ್ಮಂಥವರ ಅಭಿಪ್ರಾಯವೇನು?

ನಳಿನಿಯವರ ಹಿನ್ನೆಲೆಯೇನು?
ಸ್ವತಃ ರೈತರೂ, ರೈತ ಸಂಘಟನೆಯ ಮುಖಂಡರೂ ಇರುವ ಒಟ್ಟು ಕುಟುಂಬದ ಮಗಳು ನಳಿನಿ. ಕೋಲಾರದಲ್ಲೇ ಬಿಕಾಂ ಮುಗಿಸಿರುವ ಅವರು ವಿದ್ಯಾಭ್ಯಾಸ ಮಾಡುವಾಗಿನಿಂದ ರೈತ ಚಳವಳಿಯಲ್ಲಿ ಸಕ್ರಿಯರಾಗಿದ್ದಾರೆ. ನಳಿನಿ ಮತ್ತು ಅವರ ತಂಗಿ ಉಮಾ ಇಬ್ಬರೂ ರೈತಚಳವಳಿಯ ಕಾರ್ಯಕರ್ತೆಯರು. ಬಹಳಷ್ಟು ರೈತ ನಾಯಕರುಗಳು ತಮ್ಮ ಗಂಡುಮಕ್ಕಳನ್ನೂ ಚಳವಳಿಯಲ್ಲಿ ಸಕ್ರಿಯಗೊಳಿಸಲು ಆಗಿಲ್ಲ. ಹೀಗಿರುವಾಗ ಶ್ರೀನಿವಾಸಗೌಡರ ಕುಟುಂಬ ಈ ಇಬ್ಬರು ಹೆಣ್ಣುಮಕ್ಕಳಿಗೆ ನೀಡಿರುವ ಪ್ರೋತ್ಸಾಹ ಅಭಿನಂದನೀಯ. ಸ್ವತಃ ರೈತ ಸಂಘಟನೆಯ ಒಂದು ಗುಂಪಿನ ಜೊತೆಗೆ ಇದ್ದರೂ, ಆಕೆ ಕೇವಲ ಒಂದು ಬಣಕ್ಕೆ ತನ್ನನ್ನು ಸೀಮಿತಗೊಳಿಸಿಕೊಂಡಿಲ್ಲ. ದೊಡ್ಡ ನಾಯಕರ ಬಗ್ಗೆಯೂ ತನ್ನ ಅನಿಸಿಕೆಗಳನ್ನು ನೇರವಾಗಿ ಹೇಳುತ್ತಾರೆ. ಹಾಗೆ ಹೇಳುವಾಗ, ಸಾಮಾಜಿಕ ಜಾಲತಾಣಗಳಲ್ಲೂ ತನ್ನ ಕಟು ವಿಮರ್ಶೆಯನ್ನು ಮುಂದಿಡುವಾಗಲೂ ಅದನ್ನು ಸಭ್ಯತೆಯನ್ನು ದಾಟಿ ಹೇಳುವುದಿಲ್ಲ.
ಹಲವಾರು ಶಿಬಿರಗಳಲ್ಲಿ, ಹೋರಾಟಗಳಲ್ಲಿ ನಳಿನಿಯವರ ಜೊತೆಗೆ ಭಾಗವಹಿಸಿ ಖುದ್ದಾಗಿ ನೋಡಿರುವ ನಾನು ಅಂತಹ ಹೋರಾಟಗಳಲ್ಲಿ ಸಕ್ರಿಯವಾಗಿರುವ, ಹೆದರಿ ಎಂದೂ ಹಿಂದಕ್ಕೆ ಹೋಗದ, ಮುಂಚೂಣಿ ವ್ಯಕ್ತಿಯಾಗಿ ಮಾತಾಡುವಾಗಲೂ ಬಾಯಿಗೆ ಬಂದ ಹಾಗೆ ಮಾತಾಡದ ವ್ಯಕ್ತಿ ನಳಿನಿ. ಹಾಗೆಂದು ಮಾತನಾಡದೇ ಸುಮ್ಮನಿರುವುದಿಲ್ಲ. ರೈತಸಂಘದ ಕಾರ್ಯಕರ್ತೆಯಾಗಿ ತಾನು ಇರಬೇಕಾದ್ದೇ ಹೀಗೆ ಎಂದು ಆಕೆಯ ಖಚಿತ ನಂಬಿಕೆಯಿದ್ದಂತಿದೆ. ರಾಜಿ ಮಾಡಿಕೊಳ್ಳದಿರುವುದು ಮತ್ತು ಅನ್ಯಾಯವನ್ನು ಪ್ರಶ್ನಿಸಬೇಕಾದ್ದು ಹೋರಾಟಗಾರ್ತಿಯ ಧರ್ಮ ಎಂಬುದರಲ್ಲಿ ನಳಿನಿಗೆ ಸಂದೇಹವೇ ಇಲ್ಲ. ಹಾಗಾಗಿ ಆಕೆಗೆ ಹೆದರಿಕೆ ಇಲ್ಲ.

ನಳಿನಿ

 

ಸಂಘಟನೆಯೊಳಗೂ ಪ್ರಬುದ್ಧತೆ ತೋರುವ ವ್ಯಕ್ತಿ
ಇಷ್ಟಾದ ಮೇಲೂ ಒಂದು ಪ್ರಶ್ನೆಯಿದೆ. ಪ್ರಚಾರಕ್ಕೆ, ತೋರಿಕೆಗೆ ಇದನ್ನು ಮಾಡುತ್ತಾರಾ ಎಂದು. ಏಕೆಂದರೆ ಹಲವು ಹೊಸತಲೆಮಾರಿನ ‘ಹೋರಾಟಗಾರರು’ ಅದನ್ನು ಮಾಡುವುದು ವಾಸ್ತವ. ಹೆಣ್ಣುಮಕ್ಕಳಲ್ಲೂ ಕೆಲವರು ಹಾಗೆ ಮಾಡಿದ್ದು ನೋಡಿದ್ದೇನೆ. ಕೆಲವೊಮ್ಮೆ ಅಪ್ರಬುದ್ಧತೆಯ ಕಾರಣಕ್ಕೂ ಹಾಗೆ ಮಾಡುತ್ತಾರೆ. ಆದರೆ, ಯಾವುದಾದರೂ ಹೋರಾಟದ ಸಂದರ್ಭದಲ್ಲಿ ಅನಗತ್ಯವಾಗಿ ಮುಂದಕ್ಕೆ ಬಂದು ನಿಂತಿದ್ದು ಅಥವಾ ಪ್ರಚಾರದ ಗೀಳಿನಿಂದ ಅನಗತ್ಯ ಮಾತುಗಳನ್ನಾಡಿದ್ದನ್ನು ನಾನಂತೂ ನೋಡಿಲ್ಲ. ವಿಚಾರಗಳನ್ನು ಅನಗತ್ಯವಾಗಿ ಕಾಂಪ್ಲಿಕೇಟೆಡ್ ಮಾಡಿಕೊಳ್ಳದೇ ಮುಂದಕ್ಕೆ ಹೋಗುತ್ತಿರುತ್ತಾರೆ. ಸಂಘಟನೆಯ ಒಳಗೇ ತನಗಾದ ಸಮಸ್ಯೆಗಳನ್ನು ವಿಪರೀತಗೊಳಿಸಿ ಸಂದರ್ಭವಲ್ಲದ ಸಂದರ್ಭದಲ್ಲಿ ವೇದಿಕೆಯಿಂದ ಬೇರೆಯವರು ಮಾತಾಡಿದಾಗ ಅವರ ಜೊತೆಗೆ ಸಾಲಿಡಾರಿಟಿ ತೋರಿಸಿ ನಿಂತಿದ್ದನ್ನು ನೋಡಿದ್ದೇನೆಯೇ ಹೊರತು, ಸ್ವತಃ ತಾನೇ ಅತಿರೇಕ ಮಾಡಿದ್ದನ್ನು ನೋಡಿಲ್ಲ.

ಇದನ್ನೂ ಓದಿ: ಲಾಕ್‌ಡೌನ್‌ ನಂತರದ ಪ್ರಥಮ ಆದ್ಯತೆ ಕೃಷಿ ಮತ್ತು ಆರ್ಥಿಕತೆ- ಡಾ.ಕಮ್ಮರಡಿ

ಹಳ್ಳಿ ಹೆಣ್ಣುಮಗಳಾದ ನಳಿನಿ ನಿಜವಾದ ಅರ್ಥದಲ್ಲಿ ನೇರ, ದಿಟ್ಟ, ನಿರಂತರ, ಆದರೆ ಸರಳ ವ್ಯಕ್ತಿ. ಬಹುಶಃ ಇದನ್ನು ಕೋಲಾರ ಗ್ರಾಮಾಂತರದ ಇನ್ಸ್‍ಪೆಕ್ಟರ್ ಅರ್ಥ ಮಾಡಿಕೊಳ್ಳುವುದು ಕಷ್ಟವೇನೋ. ಹೆಣ್ಣುಮಕ್ಕಳು ಮನೆಯಲ್ಲಿರಬೇಕು, ದೈನ್ಯತೆಯಿಂದ ಕೇಳಿಕೊಳ್ಳಬೇಕು, ಹೋರಾಟಗಳಲ್ಲಿ ಗಂಡಸರನ್ನು ಮುಂದೆ ಬಿಟ್ಟು ಹಿಂದೆ ಗುಂಪಿನಲ್ಲಿ ಸಂಖ್ಯೆಯಾಗಿ ಮಾತ್ರ ಇರಬೇಕು ಎಂಬುದು ‘ಸಹಜ ಫ್ಯೂಡಲ್ ಭಾವನೆ’. ‘ರಿಕ್ವೆಸ್ಟ್ ಮಾಡಿಕೊಳ್ಳಬೇಕಮ್ಮಾ’ ಎಂದು ಹೇಳಿದ ಎಂಎಲ್‍ಸಿ ಮತ್ತು ಬಾಯಿಗೆ ಬಂದ ಹಾಗೆ ವದರಿದ ಮಂತ್ರಿಗಳಿಗೆ ಅಂತಹ ಭಾವನೆ ಇರುವುದು ಎದ್ದು ಕಂಡ ಮೇಲೆ, ಇನ್ನು ಆ ಇನ್ಸ್‍ಪೆಕ್ಟರ್‍ರಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾದೀತೇ?


ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ಆರೋಪ ಮುಂದುವರೆಸಿದ ಮಾಧುಸ್ವಾಮಿ

ಸಚಿವ ಮಾಧುಸ್ವಾಮಿ ಕ್ಷಮೆಯಾಚನೆ ಮಾಡದಿದ್ದರೂ ಆಗುತ್ತಿತ್ತು. ಆದರೆ ನಳಿನಿಯ ಕುರಿತಾಗಿ ‘ಆಕೆ ಯಾವಾಗಲೂ ಹಾಗೆ ಅಂತೆ’ ಇತ್ಯಾದಿ ಮಾತುಗಳನ್ನು ಹೇಳಿದಾಗ ನಾವು ಮಾತಾಡದಿದ್ದರೆ ತಪ್ಪಾಗುತ್ತದೆ ಎಂಬ ಕಾರಣಕ್ಕೆ ಇಷ್ಟನ್ನು ಬರೆಯಬೇಕಾಯಿತು. ನಳಿನಿ ‘ಯಾವಾಗಲೂ ಹಾಗೆಯೇ ಇರಲಿ’ ಎಂದು ಆಶಿಸುತ್ತೇನೆ. ಇನ್ನಷ್ಟು ಹೊಸ ತಿಳುವಳಿಕೆಯ ಜೊತೆಗೆ ಆಕೆ ರೈತಚಳವಳಿಗೆ ಅಗತ್ಯವಿರುವ ಹೊಸನಾಯಕಿಯಾಗಿ ರೂಪುಗೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...