Homeಕರ್ನಾಟಕಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

ಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

- Advertisement -
- Advertisement -

ಸಂಸದ ಪ್ರತಾಪ್ ಸಿಂಹ ಅವರು ಬಿಜೆಪಿ ಪಕ್ಷದ ಹೆಸರನ್ನು ಬಳಸಿಕೊಂಡು ಮಹಿಷ ದಸರಾಗೆ ಅಡ್ಡಿ ಪಡಿಸುತ್ತಿದ್ದಾರೆ. ಈ ವಿಚಾರ ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆಯೇ ಆಗಿಲ್ಲ. ಹಾಗಾಗಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಹಿಷ ದಸರಾಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ ಗಿರಿಧರ್ ಹೇಳಿದ್ದಾರೆ.

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಸಂವಿಧಾನದಲ್ಲಿ ಅವರವರ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಮಹಿಷ ದಸರಾ ನಿಲ್ಲಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಲು ಯಾರು? ಈ ಇದು ಪ್ರತಾಪ್ ಸಿಂಹರ ವೈಯಕ್ತಿ ಹೇಳಿಕೆಯಷ್ಟೆ. ಈ ವಿಚಾರವಾಗಿ ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನವೇ ಆಗಿಲ್ಲ, ಶಾಸಕ ಶ್ರೀವತ್ಸ ಅವರಿಗೂ ಮಹಿಷ ದಸರಾ ವಿರೋಧ ಇಷ್ಟವಿಲ್ಲ, ತಲಹರಟೆ ಪ್ರತಾಪ್ ಸಿಂಹ ಅವರ ಬಲವಂತಕ್ಕೆ ಒಲ್ಲದ ಮನಸ್ಸಿನಿಂದ ಅವರು ವಿರೋಧ ಮಾಡುತ್ತಿದ್ದಾರೆ” ಎಂದರು.

”ಪ್ರತಾಪ್ ಸಿಂಹನಿಗೂ ಮೈಸೂರಿಗೂ ಏನು ಸಂಬಂಧ ನಮ್ಮ ಪಕ್ಷ 2014 ರಲ್ಲಿ ಅವರಿಗೆ ಟಿಕೆಟ್ ನೀಡಿತ್ತು ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಲಿ ಎಂದು ಪ್ರತಾಪ್ ಸಿಂಹ್‌ನನ್ನು ಗೆಲ್ಲಿಸಿದರು. ಗೆದ್ದ ನಂತರ ಈತ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಾಮುಂಡಿ ಬೆಟ್ಟವನ್ನು ಈತ ಗುತ್ತಿಗೆ ಪಡೆದಿಲ್ಲ, ಇಲ್ಲಿಗೆ ಎಲ್ಲಾಧರ್ಮದವರು ಹೋಗುತ್ತಾರೆ” ಎಂದು ಹರಿಹಾಯ್ದರು.

ನಮಗೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಬೇಕು. ಹಾಗಾಗಿ ಇಂತಹ ತಲೆಹರಟೆ ಸಂಸದನನ್ನು ಪಕ್ಷದಿಂದ ದೂರ ಇಡಬೇಕು ಎಂದು ಅವರು ಆಗ್ರಹಿಸಿದರು.

”ಮಹಿಷ ಕೆಟ್ಟ ವ್ಯಕ್ತಿಯಾಗಿದ್ದರೆ ಮೈಸೂರಿನ ಮಹರಾಜರು ಏಕೆ ಮಹಿಷನ ಅಷ್ಟು ದೊಡ್ಡ ಪ್ರತಿಮೆಯನ್ನು ನಿರ್ಮಾಣ ಮಾಡುತ್ತಿದ್ದರು? ಅಂತಹ ಪ್ರತಿಮೆಯನ್ನೇ ಅಪದ್ಧ, ಅಸಹ್ಯ ಎಂದು ಹೇಳುವ ಮೂಲಕ ಮೈಸೂರು ಮಹರಾಜರಿಗೆ ಅವಮಾನ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

”ನಾವುಗಳು ಸಣ್ಣವರಿದ್ದಾಗ ನಮ್ಮ ತಂದೆ ತಾಯಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಮಹಿಷನ ಮುಂದೆ ನಿಲ್ಲಿಸಿ ಪೂಜೆ ಮಾಡಿ ಮಹಿಷನ ಕಾಲಿನ ಕೆಳಗಡೆ ನುಗ್ಗಿಸುತ್ತಿದ್ದರು. ಯಾಕೆಂದರೆ ನನ್ನ ಮಗ ಮಹಿಷನ ರೀತಿ ಇರಲಿ ಎಂದು. ಇದೇ ಮಹಿಷನ ಪ್ರತಿಮೆ ಮುಂಭಾಗ ದಲಿತ ಹೋರಾಟಗಾರ ಮಂಟೇಲಿಂಗಯ್ಯ ಅಮವಾಸ್ಯೆ ದಿನವೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೊತೆಗೆ ಮಹಿಷ ದಸರಾ ಆಚರಣೆ ಮಾಡಿಕೊಂಡು ಬಂದಿದ್ದಾರೆ. ಇಂತಹದರಲ್ಲಿ ಮಹಿಷ ಹೇಗೆ ಕೆಟ್ಟವನಾಗುತ್ತಾನೆ?” ಎಂದು ಪ್ರಶ್ನಿಸಿದರು.

”ಮಹಿಷ ದಸರಾಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಪ್ರತಾಪ್ ಸಿಂಹ ಐದು ಸಾವಿರ ಜನ ಸೇರುತ್ತಾರೆ ಎಂದಾಕ್ಷಣ ಬಿಜೆಪಿ ಪಕ್ಷದ ಕಾರ್ಯಕರ್ತರು ಯಾರೂ ಬರುವುದಿಲ್ಲ. ಕೂಡಲೇ ಜಿಲ್ಲಾಡಳಿತ ಮಹಿಷ ದಸರಾಗೆ ಅನುಮತಿ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...