Homeಕರ್ನಾಟಕಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

ಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

- Advertisement -
- Advertisement -

ಸಂಸದ ಪ್ರತಾಪ್ ಸಿಂಹ ಅವರು ಬಿಜೆಪಿ ಪಕ್ಷದ ಹೆಸರನ್ನು ಬಳಸಿಕೊಂಡು ಮಹಿಷ ದಸರಾಗೆ ಅಡ್ಡಿ ಪಡಿಸುತ್ತಿದ್ದಾರೆ. ಈ ವಿಚಾರ ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆಯೇ ಆಗಿಲ್ಲ. ಹಾಗಾಗಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಹಿಷ ದಸರಾಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ ಗಿರಿಧರ್ ಹೇಳಿದ್ದಾರೆ.

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಸಂವಿಧಾನದಲ್ಲಿ ಅವರವರ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಮಹಿಷ ದಸರಾ ನಿಲ್ಲಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಲು ಯಾರು? ಈ ಇದು ಪ್ರತಾಪ್ ಸಿಂಹರ ವೈಯಕ್ತಿ ಹೇಳಿಕೆಯಷ್ಟೆ. ಈ ವಿಚಾರವಾಗಿ ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನವೇ ಆಗಿಲ್ಲ, ಶಾಸಕ ಶ್ರೀವತ್ಸ ಅವರಿಗೂ ಮಹಿಷ ದಸರಾ ವಿರೋಧ ಇಷ್ಟವಿಲ್ಲ, ತಲಹರಟೆ ಪ್ರತಾಪ್ ಸಿಂಹ ಅವರ ಬಲವಂತಕ್ಕೆ ಒಲ್ಲದ ಮನಸ್ಸಿನಿಂದ ಅವರು ವಿರೋಧ ಮಾಡುತ್ತಿದ್ದಾರೆ” ಎಂದರು.

”ಪ್ರತಾಪ್ ಸಿಂಹನಿಗೂ ಮೈಸೂರಿಗೂ ಏನು ಸಂಬಂಧ ನಮ್ಮ ಪಕ್ಷ 2014 ರಲ್ಲಿ ಅವರಿಗೆ ಟಿಕೆಟ್ ನೀಡಿತ್ತು ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಲಿ ಎಂದು ಪ್ರತಾಪ್ ಸಿಂಹ್‌ನನ್ನು ಗೆಲ್ಲಿಸಿದರು. ಗೆದ್ದ ನಂತರ ಈತ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಾಮುಂಡಿ ಬೆಟ್ಟವನ್ನು ಈತ ಗುತ್ತಿಗೆ ಪಡೆದಿಲ್ಲ, ಇಲ್ಲಿಗೆ ಎಲ್ಲಾಧರ್ಮದವರು ಹೋಗುತ್ತಾರೆ” ಎಂದು ಹರಿಹಾಯ್ದರು.

ನಮಗೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಬೇಕು. ಹಾಗಾಗಿ ಇಂತಹ ತಲೆಹರಟೆ ಸಂಸದನನ್ನು ಪಕ್ಷದಿಂದ ದೂರ ಇಡಬೇಕು ಎಂದು ಅವರು ಆಗ್ರಹಿಸಿದರು.

”ಮಹಿಷ ಕೆಟ್ಟ ವ್ಯಕ್ತಿಯಾಗಿದ್ದರೆ ಮೈಸೂರಿನ ಮಹರಾಜರು ಏಕೆ ಮಹಿಷನ ಅಷ್ಟು ದೊಡ್ಡ ಪ್ರತಿಮೆಯನ್ನು ನಿರ್ಮಾಣ ಮಾಡುತ್ತಿದ್ದರು? ಅಂತಹ ಪ್ರತಿಮೆಯನ್ನೇ ಅಪದ್ಧ, ಅಸಹ್ಯ ಎಂದು ಹೇಳುವ ಮೂಲಕ ಮೈಸೂರು ಮಹರಾಜರಿಗೆ ಅವಮಾನ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

”ನಾವುಗಳು ಸಣ್ಣವರಿದ್ದಾಗ ನಮ್ಮ ತಂದೆ ತಾಯಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಮಹಿಷನ ಮುಂದೆ ನಿಲ್ಲಿಸಿ ಪೂಜೆ ಮಾಡಿ ಮಹಿಷನ ಕಾಲಿನ ಕೆಳಗಡೆ ನುಗ್ಗಿಸುತ್ತಿದ್ದರು. ಯಾಕೆಂದರೆ ನನ್ನ ಮಗ ಮಹಿಷನ ರೀತಿ ಇರಲಿ ಎಂದು. ಇದೇ ಮಹಿಷನ ಪ್ರತಿಮೆ ಮುಂಭಾಗ ದಲಿತ ಹೋರಾಟಗಾರ ಮಂಟೇಲಿಂಗಯ್ಯ ಅಮವಾಸ್ಯೆ ದಿನವೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೊತೆಗೆ ಮಹಿಷ ದಸರಾ ಆಚರಣೆ ಮಾಡಿಕೊಂಡು ಬಂದಿದ್ದಾರೆ. ಇಂತಹದರಲ್ಲಿ ಮಹಿಷ ಹೇಗೆ ಕೆಟ್ಟವನಾಗುತ್ತಾನೆ?” ಎಂದು ಪ್ರಶ್ನಿಸಿದರು.

”ಮಹಿಷ ದಸರಾಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಪ್ರತಾಪ್ ಸಿಂಹ ಐದು ಸಾವಿರ ಜನ ಸೇರುತ್ತಾರೆ ಎಂದಾಕ್ಷಣ ಬಿಜೆಪಿ ಪಕ್ಷದ ಕಾರ್ಯಕರ್ತರು ಯಾರೂ ಬರುವುದಿಲ್ಲ. ಕೂಡಲೇ ಜಿಲ್ಲಾಡಳಿತ ಮಹಿಷ ದಸರಾಗೆ ಅನುಮತಿ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...