Homeಮುಖಪುಟಶಿವಸೇನೆ ಪಕ್ಷ ಯಾರಿಗೆ ಸೇರಬೇಕು? - ಸುಪ್ರೀಂ ವಿಚಾರಣೆಯಲ್ಲಿ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆ

ಶಿವಸೇನೆ ಪಕ್ಷ ಯಾರಿಗೆ ಸೇರಬೇಕು? – ಸುಪ್ರೀಂ ವಿಚಾರಣೆಯಲ್ಲಿ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆ

- Advertisement -
- Advertisement -

ಮೂಲ ಶಿವಸೇನೆ ಪಕ್ಷ ನಮಗೆ ಸೇರಬೇಕು ಎಂದು ಸಿಎಂ ಏಕನಾಥ್ ಶಿಂಧೆಯವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಎನ್.ವಿ ರಮಣರವರು ಅದನ್ನು ಚುನಾವಣಾ ಆಯೋಗ ಈಗಲೇ ತೀರ್ಮಾನ ಮಾಡಬಾರದು ಎಂದು ಹೇಳಿದ್ದಾರೆ. ಇದು ಶಿಂಧೆ ಬಣಕ್ಕೆ ಹಿನ್ನಡೆಯಾದರೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣಕ್ಕೆ ಸಮಾಧಾನ ತರಿಸಿದೆ.

ಈ ಕುರಿತು ದೊಡ್ಡ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಲಾಗುವುದು ಮತ್ತು ಆಗಸ್ಟ್ 8 ರಂದು ಈ ಕುರಿತು ವಿಚಾರಣೆ ನಡೆಸಲಾಗುವುದು ಎಂದು ರಮಣ ಹೇಳಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆಯು ನಮಗೆ ಅನ್ವಯಿಸುವುದಿಲ್ಲ. ಏಕೆಂದರೆ ಶಿವಸೇನೆ ಪಕ್ಷದ ಒಟ್ಟು ಶಾಸಕರಲ್ಲಿ ಮೂರನೇ ಎರಡಕ್ಕಿಂತ ಹೆಚ್ಚು ಶಾಸಕರು ನಮ್ಮ ಜೊತೆಗಿದ್ದಾರೆ. ಹಾಗಾಗಿ ಅಧಿಕೃತವಾಗಿ ಶಿವಸೇನೆ ಪಕ್ಷ ನಮ್ಮದಾಗಿದೆ. ಪಕ್ಷದ ಆಂತರಿಕ ವ್ಯವಹಾರಗಳಲ್ಲಿ ಕೋರ್ಟ್ ಮಧ್ಯಪ್ರವೇಶಿಸಬಾರದು ಮತ್ತು ಚುನಾವಣಾ ಆಯೋಗ ನಮಗೆ ಮೂಲ ಶಿವಸೇನೆ ಪಕ್ಷದ ಮಾನ್ಯತೆ ಕೊಡಬೇಕು ಎಂದು ವಾದಿಸಿ ಏಕನಾಥ್ ಶಿಂಧೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಅದನ್ನು ತಳ್ಳಿ ಹಾಕಿದೆ.

ಅರ್ಜಿದಾರರ ಪರ ವಾದ ಮಾಡಿದ ವಕೀಲ ಹರೀಶ್ ಸಾಳ್ವೆಯವರು,”40 ಶಾಸಕರು ಶಿವಸೇನೆ ಪಕ್ಷ ತೊರೆದಿದ್ದಾರೆ ಎಂದು ಹೇಳಲು ಯಾವುದೇ ಸಾಕ್ಷಿ ಇಲ್ಲ. ಹಾಗಾಗಿ ಮೂಲ ಪಕ್ಷ ಅವರದೇ ಆಗಿರುತ್ತದೆ” ಎಂದಿದ್ದಾರೆ.

ಉದ್ಧವ್ ಠಾಕ್ರೆ ಬಣದ ಪರ ವಹಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಿ “50 ರಲ್ಲಿ 40 ಶಾಸಕರ ಬೆಂಬಲವಿದೆ ಎಂದು ಅವರು ಹೇಳುತ್ತಿದ್ದಾರೆ. ಅಕ್ರಮವಾಗಿ ಹಣಕಾಸಿನ ಆಮಿಷಿ ತೋರಿಸಿ ಕೃತಕ ಬಹುಮತವನ್ನು ಸೃಷ್ಟಿಸಲಾಗಿದೆ. ಹಾಗಾಗಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಅರ್ಜಿ ಸಲ್ಲಿಸಿದ್ದೇವೆ. ಒಂದು ವೇಳೆ ಆ 40 ಶಾಸಕರು ಅನರ್ಹಗೊಂಡರೆ ಅವರ ವಾದಕ್ಕೆ ಯಾವ ಆಧಾರ ಉಳಿಯುತ್ತದೆ?” ಎಂದು ಪ್ರಶ್ನಿಸಿದ್ದಾರೆ.

40 ಶಾಸಕರು ಅಥವಾ ಯಾವುದೇ ಶಾಸಕಾಂಗ ಪಕ್ಷ ತಾವು ರಾಜಕೀಯ ಪಕ್ಷ ಎಂದು ಹೇಳಬಹುದೇ? ಅವರು ಶಾಸಕಾಂಗ ಪಕ್ಷವನ್ನು ರಾಜಕೀಯ ಪಕ್ಷದೊಂದಿಗೆ ಸಮೀಕರಿಸಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಸಿಬಲ್ ವಾದಿಸಿದ್ದಾರೆ.

ಆಗಸ್ಟ್ 8ರ ಒಳಗೆ ಎರಡೂ ಬಣಗಳು ಸಾಕ್ಷ್ಯಗಳನ್ನು ಒದಗಿಸಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ. ಅಲ್ಲಿಯವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳಬಾರದೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಬಹುಶಃ ಈ ಪ್ರಕರಣವನ್ನು ಸಂವಿಧಾನ ಪೀಠಕ್ಕೆ ವರ್ಗಾಹಿಸುವ ಸಂಭವವಿದೆ.

ಇದನ್ನೂ ಓದಿ : ನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...