Homeನೂರರ ನೋಟಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? - ಎಚ್‌.ಎಸ್ ದೊರೆಸ್ವಾಮಿ

ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

- Advertisement -
- Advertisement -

ನಮ್ಮ ಸಂಸ್ಕೃತಿಗೆ ಪೂರಕವಾಗಿ ಪರಿಸರಕ್ಕೆ ಎರವಾಗದಂತೆ ನಮ್ಮ ಪೂರ್ವಿಕರು ಬದುಕಿದರು. ನೆಲ, ಜಲ, ವಾಯು ಎಲ್ಲ ಮಾನವರ ಉಪಯೋಗಕ್ಕೆ ಇದೆ ಎಂಬುದು ನಮ್ಮ ತಲೆಮಾರಿಗೆ ಗೊತ್ತೇ ಇಲ್ಲ. ಹಾಲಿಗೂ, ನೀರಿಗೂ ಒಂದೇ ಬೆಲೆ ಆಗುತ್ತಿದ್ದರೂ ಇದೇಕೆ ಹೀಗಾಯಿತು ಎಂದು ಯಾರು ಚಿಂತಿಸುತ್ತಿಲ್ಲ. ಶಬ್ದವಿಲ್ಲದ ನಿಶ್ಯಬ್ದ ಯುದ್ಧವನ್ನು ನಮ್ಮ ಬಂಡವಾಳಶಾಹಿಗಳು, ಕಾರ್ಪೊರೇಟರ್‌ಗಳು, ಬಹುರಾಷ್ಟ್ರೀಯ ಕಂಪನಿಗಳು ಜನಸಾಮಾನ್ಯರ ಮೇಲೆ ಪ್ರಾರಂಭಿಸಿದ್ದಾರೆ. ಇಂದು ನಾವು ಕೇಳುವ ಸಂಗೀತ, ನೋಡುವ ಸಿನಿಮಾ, ನಮ್ಮ ಉಡುಪು, ಚಿಂತನೆಯ ಮಾದರಿಗಳನ್ನು ಗಮನಿಸಿದರೆ ನಮ್ಮ ಅಭಿವೃದ್ಧಿ ಯಾವ ಜಾಡನ್ನು ಹಿಡಿಯುತ್ತಿದೆ ಎಂಬುದು ನಮಗೆ ಮನವರಿಕೆಯಾಗಬಹುದು.

ಡಿವಿಜಿಯವರು ಹೇಳುತ್ತಾರೆ ಈಗ ಧನಸಂಪತ್ತು ಹೆಚ್ಚಿದೆ. ಧಾನ್ಯಸಂಪತ್ತು ಕುಸಿದಿದೆ. ಸೋಪು, ಪೌಡರ್ ಹೆಚ್ಚಿದೆ. ಮನಸ್ಸಿನ ನಿರ್ಮಲತೆ ಕುಗ್ಗಿದೆ. ಭೋಗ ಹೆಚ್ಚಿದೆ ನೆಮ್ಮದಿ ಕುಗ್ಗಿದೆ ಎಂದು.

ಅನ್ನ ತಿನ್ನುವ ಬಾಯಿಗೆ ನೂಡಲ್ಸ್, ಪಿಜ್ಜಾಗಳನ್ನು ತುರುಕಲಾಗುತ್ತಿದೆ. ಎಳೆನೀರು, ಮಜ್ಜಿಗೆ ಕುಡಿಯುತ್ತಿದ್ದ ಬಾಯಿಗೆ ಕೋಕಕೋಲಾ ಸುರಿಯಲಾಗುತ್ತಿದೆ. ಚಕ್ಕುಲಿ, ಕೋಡ್‌ಬಳೆಯ ಬದಲು ಲೇಸ್, ಕುರ್ಕುರೆ, ಚಿಪ್ಸ್  ಪ್ಯಾಕೇಟ್, ಕೆಂಟಕಿ ಚಿಕನ್ ನೀಡಲಾಗುತ್ತಿದೆ. ಅರಿಶಿನ, ಶ್ರೀಗಂಧ ಬಳಿದುಕೊಳ್ಳುತ್ತಿದ್ದ ಮುಖಕ್ಕೆ ಹತ್ತಾರು ಕ್ರೀಮ್‌ಗಳನ್ನು ಬಳಿದುಕೊಳ್ಳಲಾಗುತ್ತಿದೆ. ಕರಿಯರನ್ನು 15 ದಿನಗಳಲ್ಲಿ ಬಿಳಿಯರನ್ನಾಗಿ ಮಾಡಲು, ಬೊಜ್ಜು ಬೆಳೆದವರನ್ನು 10 ದಿನಗಳಲ್ಲಿ ಸಪೂರರನ್ನಾಗಿ ಮಾಡಲು, ಬೋಳು ತಲೆಯವರಿಗೆ ಕೂದಲು ಚಿಗುರುವಂತೆ ಮಾಡುವ ಜಾಹಿರಾತುಗಳು ಹೊರಬೀಳುತ್ತಿವೆ. ಇಡೀ ರಾತ್ರಿ ಭೋಗಸುಖ ಅನುಭವಿಸುವಂತೆ ಮಾಡಲು ಮಾತ್ರೆಗಳನ್ನು ತಯಾರಿಸಲಾಗಿದೆ ಎಂಬ ಜಾಹಿರಾತು ಹೊರಬೀಳುತ್ತಿದೆ. ಮಧ್ಯಮ ವರ್ಗದ ಜನ ಇದಕ್ಕೆಲ್ಲ ಬಲಿಪಶುಗಳಾಗುತ್ತಿದ್ದಾರೆ.

ನಮ್ಮ ಮಾಧ್ಯಮಗಳು ಈ ಜಾಹಿರಾತುದಾರರ ಏಜೆಂಟರುಗಳಂತೆ ಕೆಲಸ ಮಾಡುತ್ತಿವೆ. ಉಳ್ಳವರ ಹಿಡಿ ಜನರ ನೆಮ್ಮದಿಯ ಬದುಕಿಗಾಗಿ ಲಕ್ಷಾಂತರ ಜನ ಬಡವರ ಬದುಕನ್ನು ಕಿತ್ತುಕೊಳ್ಳುವ ಸಾಧನೆ ಈ ಅಭಿವೃದ್ಧಿಯಂತ್ರವಾಗಿದೆ.

ಕೋಟ್ಯಂತರ ಜನಕ್ಕೆ ಬದುಕು ದುರ್ಭರವಾಗಿದೆ ಆದರೆ 120 ಕೋಟಿ ಜನರ ಕೈಗೆ ಮೊಬೈಲ್ ನೀಡಲಾಗಿದೆ. ಭಾರತದ ಅಭಿವೃದ್ಧಿಯನ್ನು ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಅಳೆಯೋಣವೇ? ಬಡತನ ಯಾರಿಂದ ಸೃಷ್ಟಿಯಾಗಿದೆ? ಜನ ಬಡವರಾಗಲು ಬಯಸಿ ಬಡತನ ಅನುಭವಿಸುತ್ತಿದ್ದಾರೆಯೆ? ಬಡತನ ಸರ್ಕಾರದಿಂದ ಸೃಷ್ಟಿಯಾಗುತ್ತದೆ. ಶ್ರೀಮಂತರನ್ನ ಓಲೈಸುವ ಸರ್ಕಾರದ ಧೋರಣೆಯಿಂದ ಬಡತನ ಸೃಷ್ಟಿಯಾಗುತ್ತದೆ. ಮಲತಾಯಿ ಧೋರಣೆಯಿಂದ ಬಡವರನ್ನು ಸರ್ಕಾರ ನೋಡುವುದರಿಂದ ಬಡತನ ಸೃಷ್ಟಿಯಾಗುತ್ತದೆ ಎಂಬ ಕಟುಸತ್ಯವನ್ನು ಮೋದಿ ಮಹಾಶಯ ಒಪ್ಪುವುದೇ ಇಲ್ಲ. ನಮ್ಮ ರಾಜ್ಯಾಂಗ ಸಮಾಜವಾದವನ್ನು ಪ್ರತಿಪಾದಿಸುತ್ತದೆ. ಆದರೆ ನಮ್ಮ ಸರ್ಕಾರಗಳು ಸಮಾಜವಾದದಿಂದ ದೂರ ಸರಿಯುತ್ತಿವೆ. ಬಂಡವಾಳಶಾಹಿ ಪದ್ಧತಿಗೆ ಜಾರುತ್ತಿವೆ.

ಕೆಲವರು ಹೇಳುತ್ತಾರೆ ಸರ್ಕಾರ ನಡೆಸುವವರು ರಿಲಾಯನ್ಸ್ ಕಂಪೆನಿಯವರು ಮತ್ತು ಅದಾನಿ ಎಂದು. ಅದೂ ನಿಜ ಇರಬಹುದು. ಈ ಕಳೆದ 25ವರ್ಷಗಳಲ್ಲಿ ಖಾಸಗಿ ಸೆಕ್ಟರಿನ ಪ್ರಭಾವ ತುಂಬ ಬೆಳೆದಿದೆ. ಸರ್ಕಾರ ಅವರು ಹೇಳಿದಂತೆ ಶಿರಸಾವಹಿಸಿ ಕೆಲಸ ಮಾಡುತ್ತದೆ.

ಸರ್ಕಾರ ಧರ್ಮಛತ್ರವಲ್ಲ. ಕಲ್ಲಿದ್ದಲು ಗಣಿ ಹರಾಜು ಹಾಕುವುದು, ಹಲವು ರೈಲ್ವೆ ಮಾರ್ಗಗಳನ್ನು ದೀರ್ಘಕಾಲದ ಗುತ್ತಿಗೆ ಆಧಾರದ ಮೇಲೆ ಖಾಸಗಿಗೆ ಬಿಟ್ಟುಕೊಡುವುದು, ಆ ಮೂಲಕ ತನ್ನ ಜವಾಬ್ದಾರಿಯಿಂದ ಕಳಚಿಕೊಳ್ಳುವುದು ಆಡಳಿತ ನಡೆಸುವವರ ಹೊಣೆಗೇಡಿತನವನ್ನು ಸೂಚಿಸುತ್ತದೆ. ಸಾರ್ವಜನಿಕ ಜೀವನದಲ್ಲಿ
hypocrisy ಬೆಳೆಸುವ ಹುನ್ನಾರ ಕಾಲಕ್ರಮದಲ್ಲಿ ತಿರುಗುಬಾಣವಾಗಿಬಿಡುವ ಸಾಧ್ಯತೆಗಳಿವೆ.


ಇದನ್ನೂ ಓದಿ: ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...