Homeನೂರರ ನೋಟಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? - ಎಚ್‌.ಎಸ್ ದೊರೆಸ್ವಾಮಿ

ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

- Advertisement -
- Advertisement -

ನಮ್ಮ ಸಂಸ್ಕೃತಿಗೆ ಪೂರಕವಾಗಿ ಪರಿಸರಕ್ಕೆ ಎರವಾಗದಂತೆ ನಮ್ಮ ಪೂರ್ವಿಕರು ಬದುಕಿದರು. ನೆಲ, ಜಲ, ವಾಯು ಎಲ್ಲ ಮಾನವರ ಉಪಯೋಗಕ್ಕೆ ಇದೆ ಎಂಬುದು ನಮ್ಮ ತಲೆಮಾರಿಗೆ ಗೊತ್ತೇ ಇಲ್ಲ. ಹಾಲಿಗೂ, ನೀರಿಗೂ ಒಂದೇ ಬೆಲೆ ಆಗುತ್ತಿದ್ದರೂ ಇದೇಕೆ ಹೀಗಾಯಿತು ಎಂದು ಯಾರು ಚಿಂತಿಸುತ್ತಿಲ್ಲ. ಶಬ್ದವಿಲ್ಲದ ನಿಶ್ಯಬ್ದ ಯುದ್ಧವನ್ನು ನಮ್ಮ ಬಂಡವಾಳಶಾಹಿಗಳು, ಕಾರ್ಪೊರೇಟರ್‌ಗಳು, ಬಹುರಾಷ್ಟ್ರೀಯ ಕಂಪನಿಗಳು ಜನಸಾಮಾನ್ಯರ ಮೇಲೆ ಪ್ರಾರಂಭಿಸಿದ್ದಾರೆ. ಇಂದು ನಾವು ಕೇಳುವ ಸಂಗೀತ, ನೋಡುವ ಸಿನಿಮಾ, ನಮ್ಮ ಉಡುಪು, ಚಿಂತನೆಯ ಮಾದರಿಗಳನ್ನು ಗಮನಿಸಿದರೆ ನಮ್ಮ ಅಭಿವೃದ್ಧಿ ಯಾವ ಜಾಡನ್ನು ಹಿಡಿಯುತ್ತಿದೆ ಎಂಬುದು ನಮಗೆ ಮನವರಿಕೆಯಾಗಬಹುದು.

ಡಿವಿಜಿಯವರು ಹೇಳುತ್ತಾರೆ ಈಗ ಧನಸಂಪತ್ತು ಹೆಚ್ಚಿದೆ. ಧಾನ್ಯಸಂಪತ್ತು ಕುಸಿದಿದೆ. ಸೋಪು, ಪೌಡರ್ ಹೆಚ್ಚಿದೆ. ಮನಸ್ಸಿನ ನಿರ್ಮಲತೆ ಕುಗ್ಗಿದೆ. ಭೋಗ ಹೆಚ್ಚಿದೆ ನೆಮ್ಮದಿ ಕುಗ್ಗಿದೆ ಎಂದು.

ಅನ್ನ ತಿನ್ನುವ ಬಾಯಿಗೆ ನೂಡಲ್ಸ್, ಪಿಜ್ಜಾಗಳನ್ನು ತುರುಕಲಾಗುತ್ತಿದೆ. ಎಳೆನೀರು, ಮಜ್ಜಿಗೆ ಕುಡಿಯುತ್ತಿದ್ದ ಬಾಯಿಗೆ ಕೋಕಕೋಲಾ ಸುರಿಯಲಾಗುತ್ತಿದೆ. ಚಕ್ಕುಲಿ, ಕೋಡ್‌ಬಳೆಯ ಬದಲು ಲೇಸ್, ಕುರ್ಕುರೆ, ಚಿಪ್ಸ್  ಪ್ಯಾಕೇಟ್, ಕೆಂಟಕಿ ಚಿಕನ್ ನೀಡಲಾಗುತ್ತಿದೆ. ಅರಿಶಿನ, ಶ್ರೀಗಂಧ ಬಳಿದುಕೊಳ್ಳುತ್ತಿದ್ದ ಮುಖಕ್ಕೆ ಹತ್ತಾರು ಕ್ರೀಮ್‌ಗಳನ್ನು ಬಳಿದುಕೊಳ್ಳಲಾಗುತ್ತಿದೆ. ಕರಿಯರನ್ನು 15 ದಿನಗಳಲ್ಲಿ ಬಿಳಿಯರನ್ನಾಗಿ ಮಾಡಲು, ಬೊಜ್ಜು ಬೆಳೆದವರನ್ನು 10 ದಿನಗಳಲ್ಲಿ ಸಪೂರರನ್ನಾಗಿ ಮಾಡಲು, ಬೋಳು ತಲೆಯವರಿಗೆ ಕೂದಲು ಚಿಗುರುವಂತೆ ಮಾಡುವ ಜಾಹಿರಾತುಗಳು ಹೊರಬೀಳುತ್ತಿವೆ. ಇಡೀ ರಾತ್ರಿ ಭೋಗಸುಖ ಅನುಭವಿಸುವಂತೆ ಮಾಡಲು ಮಾತ್ರೆಗಳನ್ನು ತಯಾರಿಸಲಾಗಿದೆ ಎಂಬ ಜಾಹಿರಾತು ಹೊರಬೀಳುತ್ತಿದೆ. ಮಧ್ಯಮ ವರ್ಗದ ಜನ ಇದಕ್ಕೆಲ್ಲ ಬಲಿಪಶುಗಳಾಗುತ್ತಿದ್ದಾರೆ.

ನಮ್ಮ ಮಾಧ್ಯಮಗಳು ಈ ಜಾಹಿರಾತುದಾರರ ಏಜೆಂಟರುಗಳಂತೆ ಕೆಲಸ ಮಾಡುತ್ತಿವೆ. ಉಳ್ಳವರ ಹಿಡಿ ಜನರ ನೆಮ್ಮದಿಯ ಬದುಕಿಗಾಗಿ ಲಕ್ಷಾಂತರ ಜನ ಬಡವರ ಬದುಕನ್ನು ಕಿತ್ತುಕೊಳ್ಳುವ ಸಾಧನೆ ಈ ಅಭಿವೃದ್ಧಿಯಂತ್ರವಾಗಿದೆ.

ಕೋಟ್ಯಂತರ ಜನಕ್ಕೆ ಬದುಕು ದುರ್ಭರವಾಗಿದೆ ಆದರೆ 120 ಕೋಟಿ ಜನರ ಕೈಗೆ ಮೊಬೈಲ್ ನೀಡಲಾಗಿದೆ. ಭಾರತದ ಅಭಿವೃದ್ಧಿಯನ್ನು ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಅಳೆಯೋಣವೇ? ಬಡತನ ಯಾರಿಂದ ಸೃಷ್ಟಿಯಾಗಿದೆ? ಜನ ಬಡವರಾಗಲು ಬಯಸಿ ಬಡತನ ಅನುಭವಿಸುತ್ತಿದ್ದಾರೆಯೆ? ಬಡತನ ಸರ್ಕಾರದಿಂದ ಸೃಷ್ಟಿಯಾಗುತ್ತದೆ. ಶ್ರೀಮಂತರನ್ನ ಓಲೈಸುವ ಸರ್ಕಾರದ ಧೋರಣೆಯಿಂದ ಬಡತನ ಸೃಷ್ಟಿಯಾಗುತ್ತದೆ. ಮಲತಾಯಿ ಧೋರಣೆಯಿಂದ ಬಡವರನ್ನು ಸರ್ಕಾರ ನೋಡುವುದರಿಂದ ಬಡತನ ಸೃಷ್ಟಿಯಾಗುತ್ತದೆ ಎಂಬ ಕಟುಸತ್ಯವನ್ನು ಮೋದಿ ಮಹಾಶಯ ಒಪ್ಪುವುದೇ ಇಲ್ಲ. ನಮ್ಮ ರಾಜ್ಯಾಂಗ ಸಮಾಜವಾದವನ್ನು ಪ್ರತಿಪಾದಿಸುತ್ತದೆ. ಆದರೆ ನಮ್ಮ ಸರ್ಕಾರಗಳು ಸಮಾಜವಾದದಿಂದ ದೂರ ಸರಿಯುತ್ತಿವೆ. ಬಂಡವಾಳಶಾಹಿ ಪದ್ಧತಿಗೆ ಜಾರುತ್ತಿವೆ.

ಕೆಲವರು ಹೇಳುತ್ತಾರೆ ಸರ್ಕಾರ ನಡೆಸುವವರು ರಿಲಾಯನ್ಸ್ ಕಂಪೆನಿಯವರು ಮತ್ತು ಅದಾನಿ ಎಂದು. ಅದೂ ನಿಜ ಇರಬಹುದು. ಈ ಕಳೆದ 25ವರ್ಷಗಳಲ್ಲಿ ಖಾಸಗಿ ಸೆಕ್ಟರಿನ ಪ್ರಭಾವ ತುಂಬ ಬೆಳೆದಿದೆ. ಸರ್ಕಾರ ಅವರು ಹೇಳಿದಂತೆ ಶಿರಸಾವಹಿಸಿ ಕೆಲಸ ಮಾಡುತ್ತದೆ.

ಸರ್ಕಾರ ಧರ್ಮಛತ್ರವಲ್ಲ. ಕಲ್ಲಿದ್ದಲು ಗಣಿ ಹರಾಜು ಹಾಕುವುದು, ಹಲವು ರೈಲ್ವೆ ಮಾರ್ಗಗಳನ್ನು ದೀರ್ಘಕಾಲದ ಗುತ್ತಿಗೆ ಆಧಾರದ ಮೇಲೆ ಖಾಸಗಿಗೆ ಬಿಟ್ಟುಕೊಡುವುದು, ಆ ಮೂಲಕ ತನ್ನ ಜವಾಬ್ದಾರಿಯಿಂದ ಕಳಚಿಕೊಳ್ಳುವುದು ಆಡಳಿತ ನಡೆಸುವವರ ಹೊಣೆಗೇಡಿತನವನ್ನು ಸೂಚಿಸುತ್ತದೆ. ಸಾರ್ವಜನಿಕ ಜೀವನದಲ್ಲಿ
hypocrisy ಬೆಳೆಸುವ ಹುನ್ನಾರ ಕಾಲಕ್ರಮದಲ್ಲಿ ತಿರುಗುಬಾಣವಾಗಿಬಿಡುವ ಸಾಧ್ಯತೆಗಳಿವೆ.


ಇದನ್ನೂ ಓದಿ: ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...