Homeನೂರರ ನೋಟಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? - ಎಚ್‌.ಎಸ್ ದೊರೆಸ್ವಾಮಿ

ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

- Advertisement -
- Advertisement -

ನಮ್ಮ ಸಂಸ್ಕೃತಿಗೆ ಪೂರಕವಾಗಿ ಪರಿಸರಕ್ಕೆ ಎರವಾಗದಂತೆ ನಮ್ಮ ಪೂರ್ವಿಕರು ಬದುಕಿದರು. ನೆಲ, ಜಲ, ವಾಯು ಎಲ್ಲ ಮಾನವರ ಉಪಯೋಗಕ್ಕೆ ಇದೆ ಎಂಬುದು ನಮ್ಮ ತಲೆಮಾರಿಗೆ ಗೊತ್ತೇ ಇಲ್ಲ. ಹಾಲಿಗೂ, ನೀರಿಗೂ ಒಂದೇ ಬೆಲೆ ಆಗುತ್ತಿದ್ದರೂ ಇದೇಕೆ ಹೀಗಾಯಿತು ಎಂದು ಯಾರು ಚಿಂತಿಸುತ್ತಿಲ್ಲ. ಶಬ್ದವಿಲ್ಲದ ನಿಶ್ಯಬ್ದ ಯುದ್ಧವನ್ನು ನಮ್ಮ ಬಂಡವಾಳಶಾಹಿಗಳು, ಕಾರ್ಪೊರೇಟರ್‌ಗಳು, ಬಹುರಾಷ್ಟ್ರೀಯ ಕಂಪನಿಗಳು ಜನಸಾಮಾನ್ಯರ ಮೇಲೆ ಪ್ರಾರಂಭಿಸಿದ್ದಾರೆ. ಇಂದು ನಾವು ಕೇಳುವ ಸಂಗೀತ, ನೋಡುವ ಸಿನಿಮಾ, ನಮ್ಮ ಉಡುಪು, ಚಿಂತನೆಯ ಮಾದರಿಗಳನ್ನು ಗಮನಿಸಿದರೆ ನಮ್ಮ ಅಭಿವೃದ್ಧಿ ಯಾವ ಜಾಡನ್ನು ಹಿಡಿಯುತ್ತಿದೆ ಎಂಬುದು ನಮಗೆ ಮನವರಿಕೆಯಾಗಬಹುದು.

ಡಿವಿಜಿಯವರು ಹೇಳುತ್ತಾರೆ ಈಗ ಧನಸಂಪತ್ತು ಹೆಚ್ಚಿದೆ. ಧಾನ್ಯಸಂಪತ್ತು ಕುಸಿದಿದೆ. ಸೋಪು, ಪೌಡರ್ ಹೆಚ್ಚಿದೆ. ಮನಸ್ಸಿನ ನಿರ್ಮಲತೆ ಕುಗ್ಗಿದೆ. ಭೋಗ ಹೆಚ್ಚಿದೆ ನೆಮ್ಮದಿ ಕುಗ್ಗಿದೆ ಎಂದು.

ಅನ್ನ ತಿನ್ನುವ ಬಾಯಿಗೆ ನೂಡಲ್ಸ್, ಪಿಜ್ಜಾಗಳನ್ನು ತುರುಕಲಾಗುತ್ತಿದೆ. ಎಳೆನೀರು, ಮಜ್ಜಿಗೆ ಕುಡಿಯುತ್ತಿದ್ದ ಬಾಯಿಗೆ ಕೋಕಕೋಲಾ ಸುರಿಯಲಾಗುತ್ತಿದೆ. ಚಕ್ಕುಲಿ, ಕೋಡ್‌ಬಳೆಯ ಬದಲು ಲೇಸ್, ಕುರ್ಕುರೆ, ಚಿಪ್ಸ್  ಪ್ಯಾಕೇಟ್, ಕೆಂಟಕಿ ಚಿಕನ್ ನೀಡಲಾಗುತ್ತಿದೆ. ಅರಿಶಿನ, ಶ್ರೀಗಂಧ ಬಳಿದುಕೊಳ್ಳುತ್ತಿದ್ದ ಮುಖಕ್ಕೆ ಹತ್ತಾರು ಕ್ರೀಮ್‌ಗಳನ್ನು ಬಳಿದುಕೊಳ್ಳಲಾಗುತ್ತಿದೆ. ಕರಿಯರನ್ನು 15 ದಿನಗಳಲ್ಲಿ ಬಿಳಿಯರನ್ನಾಗಿ ಮಾಡಲು, ಬೊಜ್ಜು ಬೆಳೆದವರನ್ನು 10 ದಿನಗಳಲ್ಲಿ ಸಪೂರರನ್ನಾಗಿ ಮಾಡಲು, ಬೋಳು ತಲೆಯವರಿಗೆ ಕೂದಲು ಚಿಗುರುವಂತೆ ಮಾಡುವ ಜಾಹಿರಾತುಗಳು ಹೊರಬೀಳುತ್ತಿವೆ. ಇಡೀ ರಾತ್ರಿ ಭೋಗಸುಖ ಅನುಭವಿಸುವಂತೆ ಮಾಡಲು ಮಾತ್ರೆಗಳನ್ನು ತಯಾರಿಸಲಾಗಿದೆ ಎಂಬ ಜಾಹಿರಾತು ಹೊರಬೀಳುತ್ತಿದೆ. ಮಧ್ಯಮ ವರ್ಗದ ಜನ ಇದಕ್ಕೆಲ್ಲ ಬಲಿಪಶುಗಳಾಗುತ್ತಿದ್ದಾರೆ.

ನಮ್ಮ ಮಾಧ್ಯಮಗಳು ಈ ಜಾಹಿರಾತುದಾರರ ಏಜೆಂಟರುಗಳಂತೆ ಕೆಲಸ ಮಾಡುತ್ತಿವೆ. ಉಳ್ಳವರ ಹಿಡಿ ಜನರ ನೆಮ್ಮದಿಯ ಬದುಕಿಗಾಗಿ ಲಕ್ಷಾಂತರ ಜನ ಬಡವರ ಬದುಕನ್ನು ಕಿತ್ತುಕೊಳ್ಳುವ ಸಾಧನೆ ಈ ಅಭಿವೃದ್ಧಿಯಂತ್ರವಾಗಿದೆ.

ಕೋಟ್ಯಂತರ ಜನಕ್ಕೆ ಬದುಕು ದುರ್ಭರವಾಗಿದೆ ಆದರೆ 120 ಕೋಟಿ ಜನರ ಕೈಗೆ ಮೊಬೈಲ್ ನೀಡಲಾಗಿದೆ. ಭಾರತದ ಅಭಿವೃದ್ಧಿಯನ್ನು ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಅಳೆಯೋಣವೇ? ಬಡತನ ಯಾರಿಂದ ಸೃಷ್ಟಿಯಾಗಿದೆ? ಜನ ಬಡವರಾಗಲು ಬಯಸಿ ಬಡತನ ಅನುಭವಿಸುತ್ತಿದ್ದಾರೆಯೆ? ಬಡತನ ಸರ್ಕಾರದಿಂದ ಸೃಷ್ಟಿಯಾಗುತ್ತದೆ. ಶ್ರೀಮಂತರನ್ನ ಓಲೈಸುವ ಸರ್ಕಾರದ ಧೋರಣೆಯಿಂದ ಬಡತನ ಸೃಷ್ಟಿಯಾಗುತ್ತದೆ. ಮಲತಾಯಿ ಧೋರಣೆಯಿಂದ ಬಡವರನ್ನು ಸರ್ಕಾರ ನೋಡುವುದರಿಂದ ಬಡತನ ಸೃಷ್ಟಿಯಾಗುತ್ತದೆ ಎಂಬ ಕಟುಸತ್ಯವನ್ನು ಮೋದಿ ಮಹಾಶಯ ಒಪ್ಪುವುದೇ ಇಲ್ಲ. ನಮ್ಮ ರಾಜ್ಯಾಂಗ ಸಮಾಜವಾದವನ್ನು ಪ್ರತಿಪಾದಿಸುತ್ತದೆ. ಆದರೆ ನಮ್ಮ ಸರ್ಕಾರಗಳು ಸಮಾಜವಾದದಿಂದ ದೂರ ಸರಿಯುತ್ತಿವೆ. ಬಂಡವಾಳಶಾಹಿ ಪದ್ಧತಿಗೆ ಜಾರುತ್ತಿವೆ.

ಕೆಲವರು ಹೇಳುತ್ತಾರೆ ಸರ್ಕಾರ ನಡೆಸುವವರು ರಿಲಾಯನ್ಸ್ ಕಂಪೆನಿಯವರು ಮತ್ತು ಅದಾನಿ ಎಂದು. ಅದೂ ನಿಜ ಇರಬಹುದು. ಈ ಕಳೆದ 25ವರ್ಷಗಳಲ್ಲಿ ಖಾಸಗಿ ಸೆಕ್ಟರಿನ ಪ್ರಭಾವ ತುಂಬ ಬೆಳೆದಿದೆ. ಸರ್ಕಾರ ಅವರು ಹೇಳಿದಂತೆ ಶಿರಸಾವಹಿಸಿ ಕೆಲಸ ಮಾಡುತ್ತದೆ.

ಸರ್ಕಾರ ಧರ್ಮಛತ್ರವಲ್ಲ. ಕಲ್ಲಿದ್ದಲು ಗಣಿ ಹರಾಜು ಹಾಕುವುದು, ಹಲವು ರೈಲ್ವೆ ಮಾರ್ಗಗಳನ್ನು ದೀರ್ಘಕಾಲದ ಗುತ್ತಿಗೆ ಆಧಾರದ ಮೇಲೆ ಖಾಸಗಿಗೆ ಬಿಟ್ಟುಕೊಡುವುದು, ಆ ಮೂಲಕ ತನ್ನ ಜವಾಬ್ದಾರಿಯಿಂದ ಕಳಚಿಕೊಳ್ಳುವುದು ಆಡಳಿತ ನಡೆಸುವವರ ಹೊಣೆಗೇಡಿತನವನ್ನು ಸೂಚಿಸುತ್ತದೆ. ಸಾರ್ವಜನಿಕ ಜೀವನದಲ್ಲಿ
hypocrisy ಬೆಳೆಸುವ ಹುನ್ನಾರ ಕಾಲಕ್ರಮದಲ್ಲಿ ತಿರುಗುಬಾಣವಾಗಿಬಿಡುವ ಸಾಧ್ಯತೆಗಳಿವೆ.


ಇದನ್ನೂ ಓದಿ: ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...