Homeನೂರರ ನೋಟಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? - ಎಚ್‌.ಎಸ್ ದೊರೆಸ್ವಾಮಿ

ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

- Advertisement -
- Advertisement -

ನಮ್ಮ ಸಂಸ್ಕೃತಿಗೆ ಪೂರಕವಾಗಿ ಪರಿಸರಕ್ಕೆ ಎರವಾಗದಂತೆ ನಮ್ಮ ಪೂರ್ವಿಕರು ಬದುಕಿದರು. ನೆಲ, ಜಲ, ವಾಯು ಎಲ್ಲ ಮಾನವರ ಉಪಯೋಗಕ್ಕೆ ಇದೆ ಎಂಬುದು ನಮ್ಮ ತಲೆಮಾರಿಗೆ ಗೊತ್ತೇ ಇಲ್ಲ. ಹಾಲಿಗೂ, ನೀರಿಗೂ ಒಂದೇ ಬೆಲೆ ಆಗುತ್ತಿದ್ದರೂ ಇದೇಕೆ ಹೀಗಾಯಿತು ಎಂದು ಯಾರು ಚಿಂತಿಸುತ್ತಿಲ್ಲ. ಶಬ್ದವಿಲ್ಲದ ನಿಶ್ಯಬ್ದ ಯುದ್ಧವನ್ನು ನಮ್ಮ ಬಂಡವಾಳಶಾಹಿಗಳು, ಕಾರ್ಪೊರೇಟರ್‌ಗಳು, ಬಹುರಾಷ್ಟ್ರೀಯ ಕಂಪನಿಗಳು ಜನಸಾಮಾನ್ಯರ ಮೇಲೆ ಪ್ರಾರಂಭಿಸಿದ್ದಾರೆ. ಇಂದು ನಾವು ಕೇಳುವ ಸಂಗೀತ, ನೋಡುವ ಸಿನಿಮಾ, ನಮ್ಮ ಉಡುಪು, ಚಿಂತನೆಯ ಮಾದರಿಗಳನ್ನು ಗಮನಿಸಿದರೆ ನಮ್ಮ ಅಭಿವೃದ್ಧಿ ಯಾವ ಜಾಡನ್ನು ಹಿಡಿಯುತ್ತಿದೆ ಎಂಬುದು ನಮಗೆ ಮನವರಿಕೆಯಾಗಬಹುದು.

ಡಿವಿಜಿಯವರು ಹೇಳುತ್ತಾರೆ ಈಗ ಧನಸಂಪತ್ತು ಹೆಚ್ಚಿದೆ. ಧಾನ್ಯಸಂಪತ್ತು ಕುಸಿದಿದೆ. ಸೋಪು, ಪೌಡರ್ ಹೆಚ್ಚಿದೆ. ಮನಸ್ಸಿನ ನಿರ್ಮಲತೆ ಕುಗ್ಗಿದೆ. ಭೋಗ ಹೆಚ್ಚಿದೆ ನೆಮ್ಮದಿ ಕುಗ್ಗಿದೆ ಎಂದು.

ಅನ್ನ ತಿನ್ನುವ ಬಾಯಿಗೆ ನೂಡಲ್ಸ್, ಪಿಜ್ಜಾಗಳನ್ನು ತುರುಕಲಾಗುತ್ತಿದೆ. ಎಳೆನೀರು, ಮಜ್ಜಿಗೆ ಕುಡಿಯುತ್ತಿದ್ದ ಬಾಯಿಗೆ ಕೋಕಕೋಲಾ ಸುರಿಯಲಾಗುತ್ತಿದೆ. ಚಕ್ಕುಲಿ, ಕೋಡ್‌ಬಳೆಯ ಬದಲು ಲೇಸ್, ಕುರ್ಕುರೆ, ಚಿಪ್ಸ್  ಪ್ಯಾಕೇಟ್, ಕೆಂಟಕಿ ಚಿಕನ್ ನೀಡಲಾಗುತ್ತಿದೆ. ಅರಿಶಿನ, ಶ್ರೀಗಂಧ ಬಳಿದುಕೊಳ್ಳುತ್ತಿದ್ದ ಮುಖಕ್ಕೆ ಹತ್ತಾರು ಕ್ರೀಮ್‌ಗಳನ್ನು ಬಳಿದುಕೊಳ್ಳಲಾಗುತ್ತಿದೆ. ಕರಿಯರನ್ನು 15 ದಿನಗಳಲ್ಲಿ ಬಿಳಿಯರನ್ನಾಗಿ ಮಾಡಲು, ಬೊಜ್ಜು ಬೆಳೆದವರನ್ನು 10 ದಿನಗಳಲ್ಲಿ ಸಪೂರರನ್ನಾಗಿ ಮಾಡಲು, ಬೋಳು ತಲೆಯವರಿಗೆ ಕೂದಲು ಚಿಗುರುವಂತೆ ಮಾಡುವ ಜಾಹಿರಾತುಗಳು ಹೊರಬೀಳುತ್ತಿವೆ. ಇಡೀ ರಾತ್ರಿ ಭೋಗಸುಖ ಅನುಭವಿಸುವಂತೆ ಮಾಡಲು ಮಾತ್ರೆಗಳನ್ನು ತಯಾರಿಸಲಾಗಿದೆ ಎಂಬ ಜಾಹಿರಾತು ಹೊರಬೀಳುತ್ತಿದೆ. ಮಧ್ಯಮ ವರ್ಗದ ಜನ ಇದಕ್ಕೆಲ್ಲ ಬಲಿಪಶುಗಳಾಗುತ್ತಿದ್ದಾರೆ.

ನಮ್ಮ ಮಾಧ್ಯಮಗಳು ಈ ಜಾಹಿರಾತುದಾರರ ಏಜೆಂಟರುಗಳಂತೆ ಕೆಲಸ ಮಾಡುತ್ತಿವೆ. ಉಳ್ಳವರ ಹಿಡಿ ಜನರ ನೆಮ್ಮದಿಯ ಬದುಕಿಗಾಗಿ ಲಕ್ಷಾಂತರ ಜನ ಬಡವರ ಬದುಕನ್ನು ಕಿತ್ತುಕೊಳ್ಳುವ ಸಾಧನೆ ಈ ಅಭಿವೃದ್ಧಿಯಂತ್ರವಾಗಿದೆ.

ಕೋಟ್ಯಂತರ ಜನಕ್ಕೆ ಬದುಕು ದುರ್ಭರವಾಗಿದೆ ಆದರೆ 120 ಕೋಟಿ ಜನರ ಕೈಗೆ ಮೊಬೈಲ್ ನೀಡಲಾಗಿದೆ. ಭಾರತದ ಅಭಿವೃದ್ಧಿಯನ್ನು ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಅಳೆಯೋಣವೇ? ಬಡತನ ಯಾರಿಂದ ಸೃಷ್ಟಿಯಾಗಿದೆ? ಜನ ಬಡವರಾಗಲು ಬಯಸಿ ಬಡತನ ಅನುಭವಿಸುತ್ತಿದ್ದಾರೆಯೆ? ಬಡತನ ಸರ್ಕಾರದಿಂದ ಸೃಷ್ಟಿಯಾಗುತ್ತದೆ. ಶ್ರೀಮಂತರನ್ನ ಓಲೈಸುವ ಸರ್ಕಾರದ ಧೋರಣೆಯಿಂದ ಬಡತನ ಸೃಷ್ಟಿಯಾಗುತ್ತದೆ. ಮಲತಾಯಿ ಧೋರಣೆಯಿಂದ ಬಡವರನ್ನು ಸರ್ಕಾರ ನೋಡುವುದರಿಂದ ಬಡತನ ಸೃಷ್ಟಿಯಾಗುತ್ತದೆ ಎಂಬ ಕಟುಸತ್ಯವನ್ನು ಮೋದಿ ಮಹಾಶಯ ಒಪ್ಪುವುದೇ ಇಲ್ಲ. ನಮ್ಮ ರಾಜ್ಯಾಂಗ ಸಮಾಜವಾದವನ್ನು ಪ್ರತಿಪಾದಿಸುತ್ತದೆ. ಆದರೆ ನಮ್ಮ ಸರ್ಕಾರಗಳು ಸಮಾಜವಾದದಿಂದ ದೂರ ಸರಿಯುತ್ತಿವೆ. ಬಂಡವಾಳಶಾಹಿ ಪದ್ಧತಿಗೆ ಜಾರುತ್ತಿವೆ.

ಕೆಲವರು ಹೇಳುತ್ತಾರೆ ಸರ್ಕಾರ ನಡೆಸುವವರು ರಿಲಾಯನ್ಸ್ ಕಂಪೆನಿಯವರು ಮತ್ತು ಅದಾನಿ ಎಂದು. ಅದೂ ನಿಜ ಇರಬಹುದು. ಈ ಕಳೆದ 25ವರ್ಷಗಳಲ್ಲಿ ಖಾಸಗಿ ಸೆಕ್ಟರಿನ ಪ್ರಭಾವ ತುಂಬ ಬೆಳೆದಿದೆ. ಸರ್ಕಾರ ಅವರು ಹೇಳಿದಂತೆ ಶಿರಸಾವಹಿಸಿ ಕೆಲಸ ಮಾಡುತ್ತದೆ.

ಸರ್ಕಾರ ಧರ್ಮಛತ್ರವಲ್ಲ. ಕಲ್ಲಿದ್ದಲು ಗಣಿ ಹರಾಜು ಹಾಕುವುದು, ಹಲವು ರೈಲ್ವೆ ಮಾರ್ಗಗಳನ್ನು ದೀರ್ಘಕಾಲದ ಗುತ್ತಿಗೆ ಆಧಾರದ ಮೇಲೆ ಖಾಸಗಿಗೆ ಬಿಟ್ಟುಕೊಡುವುದು, ಆ ಮೂಲಕ ತನ್ನ ಜವಾಬ್ದಾರಿಯಿಂದ ಕಳಚಿಕೊಳ್ಳುವುದು ಆಡಳಿತ ನಡೆಸುವವರ ಹೊಣೆಗೇಡಿತನವನ್ನು ಸೂಚಿಸುತ್ತದೆ. ಸಾರ್ವಜನಿಕ ಜೀವನದಲ್ಲಿ
hypocrisy ಬೆಳೆಸುವ ಹುನ್ನಾರ ಕಾಲಕ್ರಮದಲ್ಲಿ ತಿರುಗುಬಾಣವಾಗಿಬಿಡುವ ಸಾಧ್ಯತೆಗಳಿವೆ.


ಇದನ್ನೂ ಓದಿ: ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...