Homeಅಂಕಣಗಳುಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

- Advertisement -
- Advertisement -

ಹತ್ತಿರದ ಭವಿಷ್ಯದಲ್ಲಿ ಉಂಟಾಗಬಹುದಾದ ಆರ್ಥಿಕ ಹಿಂಜರಿತದ ಹಿನ್ನೆಲೆಯಲ್ಲಿ ಐಟಿ ಉದ್ಯಮದಲ್ಲಿ ಆಗುತ್ತಿರುವ ಉದ್ಯೋಗ ನಷ್ಟವನ್ನು ವರದಿ ಮಾಡುವುದರಲ್ಲಿ ಕಳೆದ ವಾರ ಮಾಧ್ಯಮಗಳು ನಿರತವಾಗಿದ್ದವು. ಇಕನಾಮಿಕ್ ರಿಸೆಷನ್ ಸಮಯದಲ್ಲಿ ಪ್ರತಿಷ್ಠಿತ ಸಂಸ್ಥೆಗಳು ಸಾವಿರಾರು ಉದ್ಯೋಗಿಗಳನ್ನು ನಿರ್ದಾಕ್ಷಿಣ್ಯವಾಗಿ ವಜಾ ಮಾಡುವ ಸುದ್ದಿಗಳನ್ನು ಮರೆಮಾಚುವಂತೆ ಜನವರಿ 24 ಮಂಗಳವಾರ ಹಿಂಡೆನ್‌ಬರ್ಗ್ ಹೆಸರು ಎಲ್ಲೆಡೆ ಕೇಳತೊಡಗಿತು. ’ಹಿಂಡೆನ್‌ಬರ್ಗ್’ ಮತ್ತು ’ಶಾರ್ಟ್ ಸೆಲ್ಲಿಂಗ್’ ಎಂಬ ಪದಗುಚ್ಛಗಳನ್ನು ತಾವು ಬಳಸುವ ಸರ್ಚ್ ಎಂಜಿನ್‌ಗಳ ಮೂಲಕ ಹುಡುಕುವುದರಲ್ಲಿ ಜನ ನಿರತರಾದರು. ಎರಡು ದಿನಗಳ ಹಿಂದಷ್ಟೇ 12,000 ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದ ವಿಷಯವನ್ನು ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದರು. ಆದರೆ ಅವರು ಮಾತ್ರ ತಮ್ಮ ವೇತನವನ್ನು ಎಷ್ಟೋ ಪಟ್ಟು ಹೆಚ್ಚಿಸಿಕೊಂಡಿದ್ದರು! ಅದು ಬೇರೆಯದೇ ಕಥೆ. ಆದರೆ ಭಾರತದ ಮಟ್ಟಿಗಾದರೂ ಬಹುಶಃ ಗೂಗಲ್ ಸರ್ಚ್ ಎಂಜಿನ್ ತನ್ನ ಉದ್ಯೋಗಿಗಳ ವಜಾದ ಬಗ್ಗೆ ಹುಡುಕುವ ರಿಕ್ವೆಸ್ಟ್‌ಗಳಿಗಿಂತಲೂ ಹೆಚ್ಚಿನ ಬೇಡಿಕೆ ’ಹಿಂಡೆನ್‌ಬರ್ಗ್’ ಬಗ್ಗೆ ಹುಡುಕುವುದಕ್ಕೆ ಪಡೆದಿರುತ್ತದೆ ಎಂದು ಸುಲಭವಾಗಿ ಊಹಿಸಬಹುದು!

ನಾಥನ್ ಆಂಡೆರ್ಸನ್ ಅವರು ಹುಟ್ಟುಹಾಕಿದ ಈ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಕಾರ್ಪೊರೆಟ್ ಸಂಸ್ಥೆಗಳಲ್ಲಿನ ’ಮನುಷ್ಯ ನಿರ್ಮಿತ ದುರಂತ’ಗಳನ್ನು ಪತ್ತೆ ಹಚ್ಚುವುದಕ್ಕಾಗಿ ಸಂಶೋಧನೆ ನಡೆಸುತ್ತೇವೆ ಎಂದು ಬಿಂಬಿಸಿಕೊಳ್ಳುತ್ತದೆ. ಕಾರ್ಪೊರೆಟ್ ಸಂಸ್ಥೆಗಳು ಲಾಭ ಗಳಿಸಲು, ಮಾರುಕಟ್ಟೆಯಲ್ಲಿ ತಮ್ಮ ಅಧಿಪತ್ಯ ಸಾಧಿಸಲು ನಡೆಸುವ ಧಗಾಕೋರತನವನ್ನು ತಮ್ಮ ಸಂಶೋಧನೆಯ ಮೂಲಕ ಪತ್ತೆಹಚ್ಚಿ, ’ಶಾರ್ಟ್ ಸೆಲ್ಲಿಂಗ್’ ಎಂಬ ಸ್ಟಾಕ್ ಮಾರ್ಕೆಟ್ ವಿಧಾನದ ಮೂಲಕ ಅದನ್ನು ಪಣಕ್ಕಿಟ್ಟು ಅಪಾರ ಲಾಭ ಗಳಿಸುವ ಸಂಸ್ಥೆಯಿದು. ಸ್ಟಾಕ್ ಮಾರ್ಕೆಟ್‌ನಲ್ಲಿ ನಡೆಯುವ ಫ್ರಾಡ್‌ಗಳನ್ನು ಪತ್ತೆಹಚ್ಚುವ ಆ ಮೂಲಕ ಹೂಡಿಕೆದಾರರಿಗೆ ಎಚ್ಚರಿಕೆಯನ್ನು ನೀಡಿ, ತಾನೂ ಲಾಭ ಗಳಿಸುವ ಸಂಸ್ಥೆ. ಯಾವುದಾದರೂ ದೈತ್ಯ ಸಂಸ್ಥೆ ತಪ್ಪು ಮಾರ್ಗಗಳ ಮೂಲಕ ಬೆಳೆದಿದ್ದರೆ ಹಿಂಡೆನ್‌ಬರ್ಗ್ ಅದರ ಬಗ್ಗೆ ಸಂಶೋಧನೆ ಮಾಡಿ ವರದಿ ಬಿಡುಗಡೆ ಮಾಡುತ್ತದೆ. ಆ ಸಮಯದಲ್ಲಿ ಸ್ಟಾಕ್ ಬ್ರೋಕರ್‌ಗಳ ಮೂಲಕ ಆ ಸಂಸ್ಥೆಯ ಅಪಾರ ಶೇರುಗಳನ್ನು ಕಡ ತೆಗೆದುಕೊಂಡು ಮಾರುತ್ತದೆ. ಆದರೆ ಕಡದ ಒಪ್ಪಂದ ಇಂತಿಷ್ಟು ದಿನಗಳಲ್ಲಿ ಆ ಸ್ಟಾಕು/ಶೇರ್‌ಗಳನ್ನು ಬ್ರೋಕರೇಜ್ ಸಂಸ್ಥೆಗೆ ಹಿಂದಿರುಗಿಸುವುದಾಗಿರುತ್ತದೆ. ಹಿಂತಿರುಗಿಸುವಷ್ಟು ದಿನ ಬಡ್ಡಿಯನ್ನು ಕಟ್ಟುತ್ತಾ ಹೋಗಬೇಕು. ತಾನು ಯಾವ ಸಂಸ್ಥೆಯ ವಿರುದ್ಧ ವರದಿ ಬಿಡುಗಡೆ ಮಾಡುತ್ತದೋ ಅಂತಹ ಸಂಸ್ಥೆಯ ಶೇರುಗಳ ಮೌಲ್ಯ ಮಾರ್ಕೆಟ್‌ನಲ್ಲಿ ಕುಸಿದರೆ ಅವನ್ನು ಕೊಂಡು ಬ್ರೋಕರೇಜ್ ಸಂಸ್ಥೆಗೆ ಹಿಂದಿರುಗಿಸುತ್ತದೆ. ಕುಸಿದ ಮೌಲ್ಯದ ಅಪಾರ ಲಾಭವನ್ನು ’ಶಾರ್ಟ್ ಸೆಲ್ಲಿಂಗ್’ ಮೂಲಕ ತನ್ನದಾಗಿಸಿಕೊಳ್ಳುತ್ತದೆ. ಅಕಸ್ಮಾತ್ ತಮ್ಮ ವರದಿಯ ಹೊರತಾಗಿಯೂ ಸ್ಟಾಕ್ ಮೌಲ್ಯ ಹೆಚ್ಚಾದರೆ ನಷ್ಟ ಅನುಭವಿಸುವ ರಿಸ್ಕ್‌ಅನ್ನು ಇಂತಹ ಸಂಸ್ಥೆಗಳು ಅನುಭವಿಸುತ್ತವೆ.

ಹಲವು ಕಾರ್ಪೊರೆಟ್ ಸಂಸ್ಥೆಗಳ ವಿರುದ್ಧ ಇಂತಹ ರಿಪೋರ್ಟ್‌ಗಳನ್ನು ಸಲ್ಲಿಸಿ ಯಶಸ್ವಿಯಾಗಿರುವ ಹಿಂಡನ್‌ಬರ್ಗ್ ಈ ಬಾರಿ ಆಯ್ದುಕೊಂಡಿದ್ದು ಕಳೆದ ನಾಲ್ಕೈದು ವರ್ಷಗಳಿಂದ ಭಾರತೀಯ ಮಾಧ್ಯಮಗಳಲ್ಲಿ ಮಿಂಚುತ್ತಿರುವ ಭಾರತದ/ಏಶಿಯಾದ ಅತಿ ದೊಡ್ಡ ಶ್ರೀಮಂತ ಎಂದು ಕರೆಸಿಕೊಂಡ ಗೌತಮ್ ಅದಾನಿ ಸಮೂಹ ಸಂಸ್ಥೆಯನ್ನು. ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿ, 106 ಪುಟಗಳ ತನ್ನ ವರದಿಯಲ್ಲಿ ಅದಾನಿ ಸಮೂಹದ ಸಂಸ್ಥೆಗಳಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಅದಕ್ಕೆ ಸಾಕ್ಷ್ಯಗಳನ್ನು ನೀಡಿ 88 ಪ್ರಶ್ನೆಗಳನ್ನು ಕೇಳಿತ್ತು. ಅಷ್ಟೇ ಅಲ್ಲದೆ ಕಾರ್ಪೊರೆಟ್ ಇತಿಹಾಸದಲ್ಲಿ ನಡೆದ ಮಹಾ ಮೋಸವಿದು ಎಂದೂ ಬಣ್ಣಿಸಿತ್ತು! ಮೊದಲಿಗೆ ಈ ಸಂಸ್ಥೆಯ ಕ್ರೆಡಿಬಿಲಿಟಿಯನ್ನೇ ಪ್ರಶ್ನಿಸಿದ್ದ ಅದಾನಿ ಸಮೂಹ, ಅನಂತರ ಇದಕ್ಕೆ 400 ಪುಟಗಳಿಗೂ ಮೀರಿದ ಉತ್ತರವನ್ನೇನೋ ನೀಡಿತು. ಆದರೆ ಈ ಸಮಯದಲ್ಲಿ ಅದಾನಿ ಸಮೂಹದ ಹಲವು ಸಂಸ್ಥೆಗಳ ಶೇರು ಮೌಲ್ಯ ಸುಮಾರು 20%ಗೂ ಹೆಚ್ಚು ಕುಸಿದಾಗಿತ್ತು. ಆ ಮೂಲಕ ಅದಾನಿಯವರ ಸಂಪತ್ತಿನಲ್ಲಿ ಕೂಡ ಕುಸಿತ ಕಂಡು ಅವರು ಶ್ರೀಮಂತಿಕೆಯ ಪಟ್ಟಿಯಲ್ಲಿ ಕೂಡ ಕೆಳಗಿಳಿದಿದ್ದರು. ಅದಾನಿ ಟೋಟಲ್ ಗ್ಯಾಸ್ ಸಂಸ್ಥೆಯಂತೂ ಭಾರಿ ಕುಸಿತ ಕಂಡು ಆರು ದಿನಗಳಲ್ಲಿ ಅದರ ಶೇರುಗಳ ಮೌಲ್ಯ 40%ಗೂ ಹೆಚ್ಚು ಕುಸಿದಿತ್ತು. ಅದಾನಿ ಸಮೂಹ ಕೊಟ್ಟ ಉತ್ತರವನ್ನು ಹಲವು ಅಂಶಗಳಲ್ಲಿ ಹಿಂಡೆನ್‌ಬರ್ಗ್ ತಿರಸ್ಕರಿಸಿದೆ. ಉದಾಹರಣೆಗೆ: ಅದಾನಿ ಸಮೂಹಕ್ಕೆ ವಿನೋದ್ ಅದಾನಿಗೆ (ಗೌತಮ್ ಅದಾನಿ ಸಹೋದರ) ಸಂಬಂಧಿಸಿದ ಮಾರಿಶಸ್‌ನಲ್ಲಿರುವ ಶೆಲ್ ಕಂಪನಿಯಿಂದ ಬಿಲಿಯನ್‌ಗಟ್ಟಲೆ ಯುಎಸ್ ಡಾಲರ್ ಹರಿದುಬಂದಿರುವ ಬಗ್ಗೆ ಎತ್ತಿದ್ದ ಪ್ರಶ್ನೆಗೆ, ಅದಾನಿ ಸಮೂಹ “ನಮ್ಮ ಹೂಡಿಕೆಯ ಮೂಲ”ದ ಬಗ್ಗೆ ನಮಗೆ ಅರಿವಿರುವ ಅವಶ್ಯಕತೆಯಿಲ್ಲ ಎಂಬ ಜಾರಿಕೆಯ ಉತ್ತರ ನೀಡಿದೆ. ಶೆಲ್ ಸಂಸ್ಥೆಗಳಿಂದ ಹಿಡಿದು, ಕ್ರೆಡಿಬಲ್ ಅಲ್ಲದ ಕೌಟುಂಬಿಕ ವ್ಯಕ್ತಿಗಳನ್ನು ಸಂಸ್ಥೆಯಲ್ಲಿ ಅತ್ಯುನ್ನತ ಹುದ್ದೆ ನೀಡಿರುವ ಬಗ್ಗೆ, ಶೇರ್ ಒಡೆತನವನ್ನು ನಿಯಂತ್ರಿಸಿ ಅವುಗಳ ಮೌಲ್ಯವನ್ನು ಮ್ಯಾನಿಪುಲೇಟ್ ಮಾಡಿರುವ ಬಗ್ಗೆ, ಆಡಿಟರ್‌ಗಳ ವಯೋಮಾನಕ್ಕೆ ಸಂಬಂಧಿಸಿದಂತೆ ಇಂತಹ ದೊಡ್ಡ ಸಂಸ್ಥೆಯನ್ನು ಆಡಿಟ್ ಮಾಡಲು ಇರುವ ಅವರ ಅನುಭವದ ಬಗ್ಗೆ- ಹೀಗೇ ಹತ್ತಾರು ಪ್ರಶ್ನೆಗಳಿಗೆ ಅದಾನಿ ಸಮೂಹ ಕೊಟ್ಟಿರುವ ಉತ್ತರ ಸಮರ್ಪಕವಾಗಿಲ್ಲ ಎನ್ನುತ್ತದೆ ಹಿಂಡೆನ್‌ಬರ್ಗ್. (ಇದರ ಬಗೆಗಿನ ವಿವರವಾದ ಸುದ್ದಿಗಳನ್ನು ನಾನುಗೌರಿ.ಕಾಮ್‌ನಲ್ಲಿ ಓದಬಹುದು).

ಇದನ್ನೂ ಓದಿ: ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಯಾವುದೋ ಒಂದು ಖಾಸಗಿ ಸಂಸ್ಥೆಯ ಕರ್ಮಕಾಂಡಗಳ ಬಗ್ಗೆ ದೇಶದ ನಾಗರಿಕರು ಯಾಕೆ ತಲೆಕೆಡಿಸಿಕೊಳ್ಳಬೇಕು? ಅದೂ ಶೇರು ಮಾರುಕಟ್ಟೆ ಉಳ್ಳವರ ಸ್ವತ್ತಾಗಿ ಇರುವಾಗ ಸಾಮಾನ್ಯ ಜನರಿಗೆ ಇದರಿಂದಾಗುವುದೇನು? ಅದಾನಿ ತಮ್ಮ ವಿರುದ್ಧದ ಆರೋಪಗಳಿಗೆ “ರಾಷ್ಟ್ರೀಯತೆ”ಯನ್ನು ಗುರಾಣಿ ಮಾಡಿ, ಭಾರತದ ವಿರುದ್ಧ ಹಿಂಡನ್‌ಬರ್ಗ್ ನಡೆಸಿರುವ ಹಿಕಮತ್ತು ಇದು ಎಂಬ ರೀತಿಯಲ್ಲಿ ಉತ್ತರಿಸಿದ್ದಾರೆ! ಹಿಂಡನ್‌ಬರ್ಗ್ ಹಿಕಮತ್ತು ಏನಾದರೂ ಇರಲಿ, ಅವರು ಎತ್ತಿರುವ ಪ್ರಶ್ನೆಗಳಿಗೆ ಅದಾನಿ, ಶೇರು ಮಾರುಕಟ್ಟೆ ನಿಯಂತ್ರಣ ಸಂಸ್ಥೆ SEBI ಮತ್ತು ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಲು ಎಸ್‌ಬಿಐ ಹಾಗೂ ಎಲ್‌ಐಸಿಯಂತಹ ಸಾರ್ವಜನಿಕ ಸಂಸ್ಥೆಗಳಿಗೆ ಅವಕಾಶ ಕೊಟ್ಟ್ಟಿರುವ ಒಕ್ಕೂಟ ಸರ್ಕಾರ ಉತ್ತರಿಸಿ ಉತ್ತರದಾಯಿತ್ವ ತೋರಬೇಕಿದೆ.

ಹಿಂಡನ್‌ಬರ್ಗ್ ಸಂಶೋಧನಾ ಸಂಸ್ಥೆಯ ವರದಿ ಬಹಿರಂಗಗೊಳ್ಳುತ್ತಿದ್ದಂತೆಯೇ ಪಶ್ಚಿಮ ಬಂಗಾಳದ ಸಂಸದೆ ಮೊಹುವಾ ಮೊಯಿತ್ರಾ ಹಲವು ತಿಂಗಳುಗಳ ಹಿಂದೆಯೇ ಅದಾನಿ ಸಮೂಹ ಸಂಸ್ಥೆಗಳು ನಡೆಸುತ್ತಿರಬಹುದಾದ ಅಕ್ರಮಗಳ ಬಗ್ಗೆ ಆರೋಪಿಸಿ ತನಿಖೆ ನಡೆಸಲು ಸರ್ಕಾರಕ್ಕೆ ಬರೆದಿದ್ದ ಪತ್ರವನ್ನು ಹಂಚಿಕೊಂಡಿದ್ದರು. ಈಗ ಈ ಜಟಾಪಟಿ ಆದ ನಂತರ ಕೂಡ ಪತ್ರ ಬರೆದು, SEBI ತನಿಖೆ ನಡೆಸಿತೇ? ತನಿಖೆ ನಡೆಸಿದ್ದರೆ ಅದರ ಪ್ರಗತಿಯೇನು ಎಂದು ಪ್ರಶ್ನಿಸಿದ್ದಾರೆ. ಇದೇ ಸಮಯದಲ್ಲಿ ಹಿಂಡೆನ್‌ಬರ್ಗ್ ಆರೋಪದ ನಂತರವೂ ತಮ್ಮ ಕಂಪನಿಗಳ ಎಫ್‌ಪಿಒ (ಫಾಲೋ ಆನ್ ಪಬ್ಲಿಕ್ ಆಫರ್) ಸಬ್‌ಸ್ಕ್ರಿಪ್ಷನ್ ನಿರೀಕ್ಷೆಗೂ ಮೀರಿ ಪೂರ್ಣಗೊಂಡಿದೆ ಎಂದು ಅದಾನಿ ಸಮೂಹ ಬೀಗಿದೆ. ಇಲ್ಲಿ ಕೂಡ ದುಬೈ ಮೂಲದ ’ನಿಗೂಢ’ ಕಂಪನಿ ಹೆಚ್ಚಿನ ಹೂಡಿಕೆ ಮಾಡಿರುವುದು, ಅದಾನಿಯವರ ಶೆಲ್ ಕಂಪನಿಗಳ ತಂತ್ರಗಾರಿಕೆಯಂತೆಯೇ ಇದೆಯೆಂದು ಆರೋಪಿಸಿ ಮೊಹುವಾ ಅವರು ಟ್ವೀಟ್ ಮಾಡಿದ್ದಾರೆ. (ಎರಡು ದಿನಗಳ ನಂತರ ಎಫ್‌ಪಿಒ ಹಿಂದಕ್ಕೆ ಪಡೆದು ಹೂಡಿಕೆದಾರರ ಹಣವನ್ನು ಹಿಂದಿರುಗಿಸುವುದಾಗಿ ಅದಾನಿ ಘೋಷಿಸಿದರು). ಇಷ್ಟೆಲ್ಲಾ ಆರೋಪಗಳ ನಡುವೆ, ಮಾರುಕಟ್ಟೆಯಲ್ಲಿ ಅದಾನಿ ಸಮೂಹದ ಶೇರುಗಳ ಮೌಲ್ಯ ಕುಸಿದು ಅಸ್ಥಿರತೆಯ ಕಡೆಗೆ ವಾಲಿದ ನಂತರವೂ SEBIಯಾಗಲೀ ಸರ್ಕಾರವಾಗಲೀ ಪ್ರಶ್ನಾರ್ಥ ಸಂಸ್ಥೆಯ ಮೇಲೆ ತನಿಖೆ ನಡೆಸುವ ಯಾವ ಇರಾದೆಯನ್ನೂ ವ್ಯಕ್ತಪಡಿಸಿಲ್ಲ. ಪ್ರಧಾನಿ ಮೋದಿ ಮತ್ತು ಅದಾನಿ ಅತ್ಯುತ್ತಮ ಸಂಬಂಧ ಹೊಂದಿರುವುದು ಇದಕ್ಕೆ ಕಾರಣವೇ ಎಂಬ ದಟ್ಟ ಸಂಶಯ ಎದ್ದಿದೆ.

ಇಂದು ಸಾಮಾಜಿಕ ಜಾಲತಾಣಗಳಲ್ಲಿ ಎಕೆ-47 ಕನ್ನಡ ಚಲನಚಿತ್ರದ ತುಣುಕೊಂಡು ವೈರಲ್ ಆಗಿದೆ. ಈ ಸಿನಿಮಾದ ಒಂದು ದೃಶ್ಯದಲ್ಲಿ ಶಿವರಾಜ್‌ಕುಮಾರ್ ನಟಿಸಿರುವ ಪಾತ್ರವನ್ನು ನೂರಾರು ಪೊಲೀಸರು ಸುತ್ತುವರಿದು ಬಂದೂಕನ್ನು ಅವರತ್ತ ತಿರುಗಿಸಿ ನಿಂತಿದ್ದಾರೆ. ಆ ಪಾತ್ರ ತನ್ನ ಪಕ್ಕದಲ್ಲಿರುವ ರಾಷ್ಟ್ರಧ್ವಜವನ್ನು ಕಸಿದು ಮೈಗೆ ಸುತ್ತಿಕೊಂಡು, ಪೊಲೀಸರು ಶೂಟ್ ಮಾಡದಂತೆ ಅದನ್ನು ಗುರಾಣಿಯಾಗಿ ಬಳಸಿ ಓಡಿಹೋಗುತ್ತದೆ. ಅದಾನಿ ಕೂಡ ತಮ್ಮ ವಿರುದ್ಧ ಎದ್ದಿರುವ ಪ್ರಶ್ನೆಗಳಿಗೆ ಇಂತಹದೇ ಮಾರ್ಗವನ್ನು ಬಳಸುತ್ತಿದ್ದಾರೆ. ಅಕ್ರಮ ಆರೋಪವನ್ನು ಭಾರತದ ವಿರುದ್ಧ ನಡೆಸಿದ ದಾಳಿ ಎಂದು ತಿರುಚಲು ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕರ ಹಣವನ್ನು ಎಸ್‌ಬಿಐ ಮತ್ತು ಎಲ್‌ಐಸಿಗಳ ಮೂಲಕ ತನ್ನ ಸಂಸ್ಥೆಗೆ ಸಾಲವಾಗಿ ಮತ್ತು ಹೂಡಿಕೆಯಾಗಿ ತೆಗೆದುಕೊಂಡಿರುವ ವ್ಯಕ್ತಿಗೆ ಹೆಚ್ಚಿನ ಜವಾಬ್ದಾರಿಯಿರಬೇಕಾಗುತ್ತದೆ. ಎಲ್‌ಐಸಿ ವಿಮಾ ಸಂಸ್ಥೆಯಾಗಿದ್ದು ಇಷ್ಟು ರಿಸ್ಕ್ ಉಳ್ಳ ಶೇರುಗಳ ಮೇಲೆ ಹೂಡಿಕೆ ಮಾಡಿದ್ದರ ಬಗ್ಗೆ ಪ್ರಶ್ನೆಗಳು ಏಳುತ್ತಿವೆ. ಶೇರುಗಳ ಮೌಲ್ಯಗಳು ಕುಸಿಯುತ್ತಿದ್ದರೂ ಹೆಚ್ಚಿನ ಶೇರುಗಳನ್ನು ಕೊಂಡು ಅದಾನಿ ಸಂಸ್ಥೆಯನ್ನು ಉಳಿಸಲು ಪ್ರಯತ್ನಿಸಿರುವ ಆರೋಪಗಳಿವೆ. ಯಾರನ್ನು ಪಣಕ್ಕಿಟ್ಟು? ತಾವು ದುಡಿದ ಸಣ್ಣಪುಟ್ಟ ಹಣವನ್ನು ಇಂತಹ ಸಾರ್ವಜನಿಕ ಸಂಸ್ಥೆಗಳಲ್ಲಿ ಇರಿಸಿರುವ ಕೋಟ್ಯಂತರ ಜನರನ್ನು!

ಮೊಹುವಾ ಮೊಯಿತ್ರಾ

ಶೇರು ಮೌಲ್ಯವನ್ನು ಅಕ್ರಮವಾಗಿ ಉಬ್ಬಿಸಿ ಅದನ್ನು ಎಸ್‌ಬಿಐನಂತಹ ಬ್ಯಾಂಕಿನಲ್ಲಿ ಅಡವಿಟ್ಟು ಅದಾನಿ ಸಮೂಹ ಸಾಲ ಪಡೆದಿರುವ ಬಗ್ಗೆ ಆರೋಪಗಳಿವೆ. ಈಗ ಶೇರು ಮೌಲ್ಯ ಕುಸಿದರೆ ಆ ಸಾಲಕ್ಕೆ ಯಾರು ಜವಾಬ್ದಾರಿ? ಹೆಚ್ಚಿನ ಶೇರುಗಳನ್ನು ಕೊಲಾಟರಲ್ ಕೇಳಿ ಅದಾನಿ ಸಮೂಹಕ್ಕೆ ನೋಟಿಸ್ ನೀಡಿರುವ ಯಾವುದೇ ವರದಿಗಳಿಲ್ಲ! ಬಡಬಗ್ಗರಿಗೆ ಹಲವು ರೀತಿಯ ಶುಲ್ಕಗಳನ್ನು ವಿಧಿಸುವ ಈ ಬ್ಯಾಂಕುಗಳು ಶ್ರೀಮಂತರ ಹಗರಣಗಳಿಗೆ ಕಣ್ಣುಮುಚ್ಚಿ ಕೂರುವುದೇಕೆ? ಇವೆಲ್ಲಾ ಪ್ರಶ್ನೆಗಳಿಗೆ ಅಧಿಕಾರಿಗಳು ಮತ್ತು ಸರ್ಕಾರ ಕೂಡಲೇ ಉತ್ತರಿಸಬೇಕಿದೆ. ಅದಾನಿ ಸಮೂಹದ ವಿರುದ್ಧ ಎದ್ದಿರುವ ಆರೋಪಗಳನ್ನು ಕೂಡಲೇ ತನಿಖೆ ಮಾಡಿ 140 ಕೋಟಿ ನಾಗರಿಕರ ಮುಂದೆ ಸತ್ಯ ಹೇಳುವ ಜವಾಬ್ದಾರಿ ಸರ್ಕಾರಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...