Homeಮುಖಪುಟತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

- Advertisement -
- Advertisement -

ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ನಿನ್ನೆ (3. ಡಿ) ಪ್ರಕಟಗೊಂಡಿದ್ದು, 119 ವಿಧಾನಸಭಾ ಸ್ಥಾನಗಳ ಪೈಕಿ ಅಖಿಲ ಭಾರತೀಯ ಕಾಂಗ್ರೆಸ್‌ ಪಕ್ಷ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ಅಣಿಯಾಗಿದೆ. ಕಳೆದ 10 ವರ್ಷಗಳ ಕಾಲ ತೆಲುಗು ರಾಜ್ಯವನ್ನು ಆಳಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷ 39 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರ ಕಳೆದುಕೊಂಡಿದೆ. 8 ಸ್ಥಾನಗಳನ್ನು ಪಡೆದ ಬಿಜೆಪಿ ಮೂರನೇ ಪಕ್ಷವಾಗಿ ಹೊರ ಹೊಮ್ಮಿದ್ದು, ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ 7 ಸ್ಥಾನಗಳನ್ನು ಗೆಲ್ಲುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಇತರರು 1 ಸ್ಥಾನ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಬಹುಮತ ಪಡೆದು ಸರ್ಕಾರ ರಚಿಸುವುದು ಖಾತ್ರಿಯಾಗುತ್ತಿದ್ದಂತೆ ಪಕ್ಷದ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಹೆಸರು ಮುನ್ನಲೆಗೆ ಬಂದಿದೆ. ಚುನಾವಣಾ ಪೂರ್ವದಲ್ಲಿ ಬಿಂಬಿತವಾದಂತೆ ರೇವಂತ್ ರೆಡ್ಡಿ ತೆಲಂಗಾಣದ ನೂತನ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ. ಇಂದು (ಡಿ.4) ಹೈದರಾದ್‌ನ ಗಾಂಧಿ ಭವನದ ತೆಲಂಗಾಣ ರಾಜ್ಯ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕರ ಮೊದಲ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಇಂದು ರಾತ್ರಿಯೇ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

ಯಾರಿದು ರೇವಂತ್ ರೆಡ್ಡಿ?

ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಕಾಲಿಟ್ಟ ರೇವಂತ್ ರೆಡ್ಡಿ, ಆರಂಭದಲ್ಲಿ ಬಿಜೆಪಿ-ಸಂಘ ಪರಿವಾರದ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನ ಯುವ ನಾಯಕರಾಗಿದ್ದರು. ಪ್ರಸ್ತುತ ಸುಮಾರು 20 ವರ್ಷಗಳ ರಾಜಕೀಯ ಜೀವನ ಪೂರೈಸಿರುವ ರೇವಂತ್ ರೆಡ್ಡಿ ತೆಲಂಗಾಣದ ಬಹುತೇಖ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡವರು.

ರೇವಂತ್ ರೆಡ್ಡಿ 2001 ರಿಂದ ಬಿಆರ್‌ಎಸ್‌ (ಈ ಹಿಂದಿನ ಟಿಆರ್‌ಎಸ್‌) ಪಕ್ಷದ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡರು. 2006ರಲ್ಲಿ ನಡೆದ ಜಿಲ್ಲಾ ಪರಿಷತ್ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಪಕ್ಷ ತೊರೆದಿದ್ದರು. ಬಳಿಕ 2007ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದರು. ನಂತರ 2009-2014ರ ನಡುವೆ ಎರಡು ಬಾರಿ ಕೊಂಡಗಲ್‌ ಕ್ಷೇತ್ರದಿಂದ ತೆಲುಗು ದೇಶಂ ಪಕ್ಷ (ಟಿಡಿಪಿ) ಶಾಸಕರಾಗಿದ್ದರು.

2015ರಲ್ಲಿ ವಿಧಾನಪರಿಷತ್‌ ಚುನಾವಣೆಯಲ್ಲಿ ತನ್ನ ಪರ ಮತ ಚಲಾಯಿಸುವಂತೆ ಶಾಸಕರಿಗೆ 50 ಲಕ್ಷ ರೂಪಾಯಿ ಲಂಚ ನೀಡಿದ ಆರೋಪ ರೇವಂತ್ ರೆಡ್ಡಿ ಮೇಲೆ ಕೇಳಿ ಬಂದಿತ್ತು. ಈ ಕುರಿತ ವಿಡಿಯೋವೊಂದು ವೈರಲ್ ಆಗಿ ದೊಡ್ಡ ವಿವಾದವಾಗಿತ್ತು. ಇದೇ ಪ್ರಕರಣದಲ್ಲಿ ಬಂಧಿತರಾದ ರೇವಂತ್ ರೆಡ್ಡಿ ಕೆಲ ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ಈಗಲೂ ಈ ಪ್ರಕರಣ ನಡೆಯುತ್ತಿದೆ.

2017ರಲ್ಲಿ ಕಾಂಗ್ರೆಸ್‌ ಸೇರಿದ ರೇವಂತ್ ರೆಡ್ಡಿ, ಪಕ್ಷಕ್ಕಾಗಿ ದುಡಿಯುವ ಮೂಲಕ ಹೈಕಮಾಂಡ್ ನಾಯಕರ ಗಮನ ಸೆಳೆದರು. 2021ರಲ್ಲಿ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತ್ತು. ಆ ಬಳಿಕ ಪಕ್ಷ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ರೇವಂತ್ ರೆಡ್ಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸುವಂತೆ ಮಾಡಿದ್ದಾರೆ. ಅಲ್ಲದೆ, ತೆಲಂಗಾಣದ ರಾಜ್ಯದ ಮೊದಲ ಕಾಂಗ್ರೆಸ್ ಮುಖ್ಯಮಂತ್ರಿ ಎನಿಸಿಕೊಳ್ಳುವ ಹಂತದಲ್ಲಿದ್ದಾರೆ.

ರೇವಂತ್ ರೆಡ್ಡಿಗೆ ಪಕ್ಷದ ಅಧ್ಯಕ್ಷ ಸ್ಥಾನ ಕೊಟ್ಟಾಗ ಮೂಲ ಕಾಂಗ್ರೆಸಿಗ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಅವರು ಹೊರಗಿನಿಂದ ಬಂದವರು ಎಂಬ ಅಪಸ್ವರ ಕೇಳಿ ಬಂದಿತ್ತು. ಆದರೆ , ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ರೆಡ್ಡಿ ಮೇಲೆ ಭಾರೀ ನಂಬಿಕೆ ಇಟ್ಟಿದ್ದರು.

2018ರಲ್ಲಿ ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ತೆಲಂಗಾಣ ವಿಧಾನಸಭೆಗೆ ಸ್ಪರ್ಧಿಸಿದ್ದ ರೇವಂತ್ ರೆಡ್ಡಿ, ಟಿಆರ್‌ಎಸ್ ಅಭ್ಯರ್ಥಿ ಪಟ್ನಂ ನರೇಂದ್ರ ರೆಡ್ಡಿ ವಿರುದ್ಧ ಸೋಲನುಭವಿಸಿದ್ದರು. ಇದು ಅವರ ಮೊದಲ ಚುನಾವಣಾ ಸೋಲಾಗಿತ್ತು. ಬಳಿಕ 2019ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಲ್ಕಾಜ್ಗಿರಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ರೇವಂತ್ ರೆಡ್ಡಿ 10 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

ಪಕ್ಷದ ಆತಂರಿಕ ವಿರೋಧಗಳ ನಡುವೆ ಈ ಬಾರಿಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದ 19 ಶಾಸಕರ ಪೈಕಿ 13 ಜನರು ಆಢಳಿತರೂಡ ಬಿಆರ್‌ಎಸ್‌ ಸೇರ್ಪಡೆಯಾಗಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ ಎಂಐಎಂ ಪಕ್ಷಕ್ಕಿಂತ ಕಡಿಮೆಯಾಗಿತ್ತು. ಈ ಸವಾಲಿನ ನಡುವೆ ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸಿದ್ದು ರೇವಂತ್ ರೆಡ್ಡಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಉತ್ಸಾಹವನ್ನು ತಂದು ಕೊಟ್ಟಿತ್ತು. ಬಳಿಕ ಶುರುವಾದ ಕಾಂಗ್ರೆಸ್ ಅಲೆ ಮತ್ತು ಚುನಾವಣಾ ತಂತ್ರಜ್ಞ ಸುನಿಲ್ ಕುಣುಗೋಲು ಅವರ ತಂತ್ರಗಾರಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವಂತೆ ಮಾಡಿದೆ.

ಹಳೆಯ ಮೆಹಬೂಬ್ ನಗರ ಜಿಲ್ಲೆಯ ಕೊಂಗರೆಡ್ಡಿಪಲ್ಲಿ ಎಂಬ ಸಣ್ಣ ಗ್ರಾಮದಲ್ಲಿ 8 ನವೆಂಬರ್ 1969 ಜನಿಸಿದ ರೇವಂತ್ ರೆಡ್ಡಿ, ಉಸ್ಮಾನಿಯಾ ವಿಶ್ವ ವಿದ್ಯಾನಿಲಯ ಅಧೀನದ ಎವಿ ಕಾಲೇಜಿನಲ್ಲಿ ತನ್ನ ಬಿಎ ಪದವಿ ವ್ಯಾಸಂಗ ಮುಗಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿಯವರ ಸಂಬಂಧಿಯನ್ನು ರೇವಂತ್ ರೆಡ್ಡಿ ವಿವಾಹವಾಗಿದ್ದು, ದಂಪತಿಗೆ ಒಬ್ಬಳು ಮಗಳಿದ್ದಾಳೆ.

ಇದನ್ನೂ ಓದಿ : ELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...