Homeಮುಖಪುಟಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು?

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಶಾಲಾ ಪಠ್ಯದಲ್ಲಿ ಭಗತ್‌ ಸಿಂಗ್, ನಾರಾಯಣ ಗುರುಗಳ ಪಠ್ಯ ಕೈಬಿಟ್ಟು ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಬಿಜೆಪಿ ಸರ್ಕಾರದ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ ಎಂದು ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಇವತ್ತು ನಾವು ಶಿಕ್ಷಣವನ್ನು ಹಾಳು ಮಾಡಿದರೆ ದೇಶವನ್ನು ಹಾಳು ಮಾಡಿದ ಹಾಗೆ ಅರ್ಥ. ಈ ರೋಹಿತ್ ಚಕ್ರತೀರ್ಥ ಎಂಬುವವರು ಯಾರು? ನೀನೇನು ಪ್ರೊಫೆಸರ? ಯಾವ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಿದ್ದೀಯ? ನೀವು ಸಂಘಪರಿವಾರದ ಕಾರ್ಯಕರ್ತರು ಅಷ್ಟೇ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು.

ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಿಪ್ಪು ಸುಲ್ತಾನ್‌ಗೂ ಹೆಡಗೇವಾರ್‌ಗೂ ಹೋಲಿಕೆ ಸಾಧ್ಯವಿಲ್ಲ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು? ಆತ ಆರ್‌ಎಸ್‌ಎಸ್‌ ಸ್ಥಾಪಕ ಅಷ್ಟೆ ಎಂದರು.

ನಾರಾಯಣ ಗುರುರವರು ಹೋರಾಟ, ಚಳವಳಿ ಮಾಡದಿದ್ದರೆ ಕೇರಳ ಹೀಗೆ ಇರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿನ ಮಹಿಳೆಯರು ಹಿಂದೆ ಬಟ್ಟೆ ಹಾಕದಂತಹ ಪರಿಸ್ಥಿತಿಯಲ್ಲಿದ್ದಾಗ ಹೋರಾಟ ಮಾಡಿದ ನಾರಾಯಣ ಗುರುಗಳ ಪಠ್ಯ ತೆಗೆದಿರುವುದು ಅಕ್ಷಮ್ಯ ಎಂದರು.

ಭಗತ್ ಸಿಂಗ್ ದೊಡ್ಡ ಸ್ವಾತಂತ್ರ್ಯ ಹೋರಾಟಗಾರರು. ಅವರನ್ನು ಏಕೆ ತೆಗೆದು ಹಾಕಿದ್ದೀರಿ.ಇದಕ್ಕೆ ಮಂತ್ರಿಗಳು ಮತ್ತು ಸರ್ಕಾರ ಉತ್ತರ ಕೊಡಬೇಕು. ಡಿಎಸ್‌ಆರ್‌ಟಿಇ, ಎನ್‌ಸಿಆರ್‌ಟಿಇ ಗಳನ್ನು ಒಳಗೊಂಡು ಪಠ್ಯಪುಸ್ತಕ ರಚಿಸಬೇಕು. ರಾಷ್ಟ್ರೀಯ ಪಠ್ಯ ಚೌಕಟ್ಟಿನಲ್ಲಿ ಅದು ಇರಬೇಕು ಹೊರತು ಮನಸ್ಸಿಗೆ ಬಂದಾಗೆ ಸೇರಿಸಬಾರದು. ಹಿಂದಿನ ಯಾವ ಸರ್ಕಾರಗಳು ಇಂತಹ ಕೆಲಸ ಮಾಡಿಲ್ಲ ಎಂದರು.

ಈ ಸಮಿತಿಯಲ್ಲಿ ಯಾರು ಯಾರು ಇದ್ದಾರೆ? ಯಾವ ಯಾವ ಪಠ್ಯ ಕೈಬಿಟ್ಟೀದ್ದೀರಿ, ಯಾವುದನ್ನು ಸೇರಿಸಿದ್ದೀರಿ ಎಂಬುದನ್ನು ಹಾಗೂ ರೋಹಿತ್ ಚಕ್ರತೀರ್ಥರ ಹಿನ್ನೆಲೆ ಏನು ಎಂಬುದನ್ನು ಸರ್ಕಾರ ಇಡೀ ರಾಜ್ಯದ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪಠ್ಯಪುಸ್ತಕಗಳ ಕರಡು ಸಾರ್ವಜನಿಕವಾಗಿ ಚರ್ಚೆಯಾಗಬೇಕು. ವೈಜ್ಞಾನಿಕವಾಗಿ, ವೈಚಾರಿಕತೆಯಿಂದ ಕೂಡಿರುವ ಪಠ್ಯಗಳು ನಮಗೆ ಬೇಕೆ ಹೊರತು ಧರ್ಮದ ಆಧಾರದ ಮೇಲೆ ರಚನೆಯಾದವು ಇರಬಾರದು ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...