Homeಮುಖಪುಟಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು?

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಶಾಲಾ ಪಠ್ಯದಲ್ಲಿ ಭಗತ್‌ ಸಿಂಗ್, ನಾರಾಯಣ ಗುರುಗಳ ಪಠ್ಯ ಕೈಬಿಟ್ಟು ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಬಿಜೆಪಿ ಸರ್ಕಾರದ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ ಎಂದು ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಇವತ್ತು ನಾವು ಶಿಕ್ಷಣವನ್ನು ಹಾಳು ಮಾಡಿದರೆ ದೇಶವನ್ನು ಹಾಳು ಮಾಡಿದ ಹಾಗೆ ಅರ್ಥ. ಈ ರೋಹಿತ್ ಚಕ್ರತೀರ್ಥ ಎಂಬುವವರು ಯಾರು? ನೀನೇನು ಪ್ರೊಫೆಸರ? ಯಾವ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಿದ್ದೀಯ? ನೀವು ಸಂಘಪರಿವಾರದ ಕಾರ್ಯಕರ್ತರು ಅಷ್ಟೇ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು.

ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಿಪ್ಪು ಸುಲ್ತಾನ್‌ಗೂ ಹೆಡಗೇವಾರ್‌ಗೂ ಹೋಲಿಕೆ ಸಾಧ್ಯವಿಲ್ಲ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು? ಆತ ಆರ್‌ಎಸ್‌ಎಸ್‌ ಸ್ಥಾಪಕ ಅಷ್ಟೆ ಎಂದರು.

ನಾರಾಯಣ ಗುರುರವರು ಹೋರಾಟ, ಚಳವಳಿ ಮಾಡದಿದ್ದರೆ ಕೇರಳ ಹೀಗೆ ಇರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿನ ಮಹಿಳೆಯರು ಹಿಂದೆ ಬಟ್ಟೆ ಹಾಕದಂತಹ ಪರಿಸ್ಥಿತಿಯಲ್ಲಿದ್ದಾಗ ಹೋರಾಟ ಮಾಡಿದ ನಾರಾಯಣ ಗುರುಗಳ ಪಠ್ಯ ತೆಗೆದಿರುವುದು ಅಕ್ಷಮ್ಯ ಎಂದರು.

ಭಗತ್ ಸಿಂಗ್ ದೊಡ್ಡ ಸ್ವಾತಂತ್ರ್ಯ ಹೋರಾಟಗಾರರು. ಅವರನ್ನು ಏಕೆ ತೆಗೆದು ಹಾಕಿದ್ದೀರಿ.ಇದಕ್ಕೆ ಮಂತ್ರಿಗಳು ಮತ್ತು ಸರ್ಕಾರ ಉತ್ತರ ಕೊಡಬೇಕು. ಡಿಎಸ್‌ಆರ್‌ಟಿಇ, ಎನ್‌ಸಿಆರ್‌ಟಿಇ ಗಳನ್ನು ಒಳಗೊಂಡು ಪಠ್ಯಪುಸ್ತಕ ರಚಿಸಬೇಕು. ರಾಷ್ಟ್ರೀಯ ಪಠ್ಯ ಚೌಕಟ್ಟಿನಲ್ಲಿ ಅದು ಇರಬೇಕು ಹೊರತು ಮನಸ್ಸಿಗೆ ಬಂದಾಗೆ ಸೇರಿಸಬಾರದು. ಹಿಂದಿನ ಯಾವ ಸರ್ಕಾರಗಳು ಇಂತಹ ಕೆಲಸ ಮಾಡಿಲ್ಲ ಎಂದರು.

ಈ ಸಮಿತಿಯಲ್ಲಿ ಯಾರು ಯಾರು ಇದ್ದಾರೆ? ಯಾವ ಯಾವ ಪಠ್ಯ ಕೈಬಿಟ್ಟೀದ್ದೀರಿ, ಯಾವುದನ್ನು ಸೇರಿಸಿದ್ದೀರಿ ಎಂಬುದನ್ನು ಹಾಗೂ ರೋಹಿತ್ ಚಕ್ರತೀರ್ಥರ ಹಿನ್ನೆಲೆ ಏನು ಎಂಬುದನ್ನು ಸರ್ಕಾರ ಇಡೀ ರಾಜ್ಯದ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪಠ್ಯಪುಸ್ತಕಗಳ ಕರಡು ಸಾರ್ವಜನಿಕವಾಗಿ ಚರ್ಚೆಯಾಗಬೇಕು. ವೈಜ್ಞಾನಿಕವಾಗಿ, ವೈಚಾರಿಕತೆಯಿಂದ ಕೂಡಿರುವ ಪಠ್ಯಗಳು ನಮಗೆ ಬೇಕೆ ಹೊರತು ಧರ್ಮದ ಆಧಾರದ ಮೇಲೆ ರಚನೆಯಾದವು ಇರಬಾರದು ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...