Homeಮುಖಪುಟಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

ಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹೆಸರು ಸ್ಯಾಂಟ್ರೊ ರವಿ. ‘ಸ್ವತಃ ಮುಖ್ಯಮಂತ್ರಿಯೇ ನನ್ನನ್ನು ಸರ್ ಅಂತ ಕರೀತಾರೆ, ನೀವು ಸರ್ ಅಂತಿಲ್ಲ, ಖಾಲಿ ಡಿವೈಎಸ್‌ಪಿ ನೀವು, ಯಾವ ಕೆಲಸವಾದರೂ ಮಾಡಿಕೊಡುತ್ತೇನೆ, ಕುಮಾರಕೃಪ ಗೆಸ್ಟ್ ಹೌಸ್‌ಗೆ ಬನ್ನಿ’ ಎಂದು ಆತ ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ. ಸಿಎಂ ಬೊಮ್ಮಾಯಿವರ ಮಗನ ಜೊತೆ, ಬಿಜೆಪಿ ಸಚಿವರುಗಳ ಜೊತೆ ಆತ ಇರುವ ಫೋಟೊಗಳು ಎಲ್ಲೆಡೆ ಹರಿದಾಡುತ್ತಿವೆ.

ಜನವರಿ 1 ರಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ಆಲಿಯಾಸ್ ಕೆ.ಎಸ್ ಮಂಜುನಾಥ್ ವಿರುದ್ಧ ವಂಚನೆ, ಅತ್ಯಾಚಾರ, ದೌರ್ಜನ್ಯ, ಕ್ರಿಮಿನಲ್ ಪಿತೂರಿಯ ದೂರು ದಾಖಲಾಗುತ್ತದೆ. ದೂರು ನೀಡಿದ್ದು ಆತನನ್ನು ಮದುವೆಯಾಗಿ ವಂಚನೆಗೊಳಗಾಗಿದ್ದ ದಲಿತ ಯುವತಿ. ಆನಂತರ ಆತ ಡಿವೈಎಸ್‌ಪಿ ಜೊತೆ ಮಾತನಾಡಿದ್ದ ಆಡಿಯೋ ಲೀಕ್ ಆಗುತ್ತದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೈಸೂರು “ಪೊಲೀಸರು ಎಫ್‌ಐಆರ್ ದಾಖಲು ಮಾಡಿರುವ ಅತ್ಯಾಚಾರ ಆರೋಪಿ ಸ್ಯಾಂಟ್ರೊ ರವಿಯೊಂದಿಗೆ ಬಿಜೆಪಿ ಸರ್ಕಾರದ ಕೆಲ ಪ್ರಭಾವಿ ಸಚಿವರು ಸಂಪರ್ಕ ಹೊಂದಿದ್ದಾರೆ. ಆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ಒತ್ತಾಯಿಸುತ್ತಾರೆ.

ಅಷ್ಟಕ್ಕೆ ಸುಮ್ಮನಾಗದೆ ಸ್ಯಾಂಟ್ರೊ ರವಿಯ ಜೊತೆ ಸಚಿವರುಗಳಾದ ಆರಗ ಜ್ಞಾನೇಂದ್ರ, ಎಸ್‌.ಟಿ ಸೋಮಶೇಖರ್, ಡಾ.ಕೆ ಸುಧಾಕರ್, ಬಿ.ಸಿ ನಾಗೇಶ್ ಇರುವ ಫೋಟೊಗಳನ್ನು, ವಿಡಿಯೋಗಳನ್ನು ಬಿಡುಗಡೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ಸಾಲು ಸಾಲು ಟ್ವೀಟ್‌ಗಳನ್ನು ಮಾಡುತ್ತದೆ. ಹಾಗಿದ್ದರೆ ಏಕಾಏಕಿ ಸುದ್ದಿಯಲ್ಲಿರುವ ಈ ಸ್ಯಾಂಟ್ರೊ ರವಿ ಯಾರು? ಆತನಿಗೂ ಸರ್ಕಾರದ ನಡುವಿನ ಸಂಬಂಧವೇನು ಎಂಬುದರ ವಿವರ ಇಲ್ಲಿದೆ.

ಮಂಜುನಾಥ್ ಕೆ.ಎಸ್ ಅಲಿಯಾಸ್ ಕಿರಣ್ ಆಲಿಯಾಸ್ ಸ್ಯಾಂಟ್ರೋ ರವಿ (53) ಮಂಡ್ಯದ ನಗರದಿಂದ ಕೂಗಳತೆ ದೂರದಲ್ಲಿರುವ ಹೊಳಲು ಗ್ರಾಮದವನು. ಅವರ ತಂದೆ ಅಬಕಾರಿ ಇಲಾಖೆಯಲ್ಲಿ ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಯಾಗಿದ್ದರು. ಈತನ ಪ್ರಧಾನ ಕಸುಬು ಹೆಣ್ಣು ಮಕ್ಕಳ ಕಳ್ಳಸಾಗಣೆ, ವೇಶ್ಯಾವಾಟಿಕೆ ಜಾಲವಾಗಿತ್ತು. ಹೆಣ್ಣು ಮಕ್ಕಳನ್ನು ಪ್ರೀತಿಸುವುದಾಗಿ ನಂಬಿಸಿ, ಮದುವೆಯ ನಾಟಕವಾಡಿ ಆನಂತರ ಅವರನ್ನು ಪ್ರಭಾವಿಗಳ ಬಳಿ ವೇಶ್ಯಾವಾಟಿಕೆಗೆ ತಳ್ಳುವುದು ಈತನ ಕೆಲಸವಾಗಿತ್ತು. ಇದೇ ಕೆಲಸದಲ್ಲಿ 1987ರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಧರ್ಮಸ್ಥಳಕ್ಕೆ ಓಡಿ ಹೋಗಿ ಮದುವೆಯಾದಾಗ ಸಿಕ್ಕಿಬಿದ್ದು ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದ.

ಆದರೆ ಚಾಲಾಕಿ ಬುದ್ದಿಯ ಆತ ಅನಾರೋಗ್ಯದ ನೆಪವೊಡ್ಡಿ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಲ್ಲಿಂದ ಪರಾರಿಯಾಗಿದ್ದ. ಆಗ ಆತನ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಪ್ರಧಾನವಾಗಿ ಮೈಸೂರನ್ನು ತನ್ನ ಕಾರ್ಯಕ್ಷೇತ್ರ ಮಾಡಿಕೊಂಡಿದ್ದ ಆತ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಅನೈತಿಕ ದಂಧೆಗಿಳಿದಿದ್ದ. ಆ ಸಂದರ್ಭದಲ್ಲಿ ಆತ ಹೊಸದಾಗಿ ಸ್ಯಾಂಟ್ರೊ ಕಾರೊಂದನ್ನು ಖರೀದಿಸಿ ಊರು ಊರು ಸುತ್ತುತ್ತಿದ್ದ. ಬಡವರಾದ, ದಲಿತ-ಬುಡಕಟ್ಟು ಸಮುದಾಯದ ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಮರಳು ಮಾಡಿ ಅವರನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ದಾಳಿ ಮಾಡುತ್ತಿದ್ದ ವೇಳೆಯಲ್ಲೆಲ್ಲ ತನ್ನ ಸ್ಯಾಂಟ್ರೊ ಕಾರಿನಲ್ಲಿ ತಪ್ಪಿಸಿಕೊಳ್ಳುತ್ತಿದ್ದ. ಹಾಗಾಗಿ ಆತನಿಗೆ ಸ್ಯಾಂಟ್ರೊ ರವಿ ಎಂಬ ಹೆಸರು ಬಂದಿದೆ ಎನ್ನಲಾಗುತ್ತಿದೆ.

2000 ಇಸವಿಯಿಂದ 2014ರವರೆಗೆ ಆತನ ವಿರುದ್ಧ ಹೆಣ್ಣು ಮಕ್ಕಳ ಕಳ್ಳ ಸಾಗಣಿಕೆ, ಅತ್ಯಾಚಾರ, ವಂಚನೆ, ಕ್ರಿಮಿನಲ್ ಆರೋಪದ ಮೇಲೆ ಹತ್ತಾರು ಪ್ರಕರಣಗಳನ್ನು ಒಡನಾಡಿ ಸಂಸ್ಥೆ ದಾಖಲಿಸಿತ್ತು. ಆದರೆ ಪ್ರಭಾವಿಗಳ  ಕೃಪಾಕಟಾಕ್ಷದಲ್ಲಿದ್ದ ಆತ ಪೊಲೀಸರನ್ನು ಸಹ ಬುಟ್ಟಿಗೆ ಹಾಕಿಕೊಂಡು ತಪ್ಪಿಸಿಕೊಳ್ಳುತ್ತಿದ್ದ ಎನ್ನುವುದು ಅವನ ಮೇಲಿರುವ ಆರೋಪ.

2004ರಲ್ಲಿ ಸ್ಯಾಂಟ್ರೊ ರವಿ ತನ್ನ ಅನೈತಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರಿಂದ ಆತನ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿಡಲಾಗಿತ್ತು. ಅಲ್ಲಿದ್ದ ಒಂದೂವರೆ ವರ್ಷದಲ್ಲಿ ಮತ್ತಷ್ಟು ರೌಡಿಗಳ, ರಾಜಕಾರಣಿಗಳ ನಂಟು ಬೆಳೆಸಿಕೊಂಡಿದ್ದ. ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಂತೆ ವರ್ಗಾವಣೆ ದಂಧೆಗಿಳಿದಿದ್ದ ಎನ್ನಲಾಗಿದೆ. ಈ ಎಲ್ಲಾ ದಂಧೆಗಳಲ್ಲಿನ ಅಕ್ರಮ ಹಣವನ್ನು ತನ್ನ ಹೆಂಡತಿ ಚಂದ್ರಿಕಾ ಎಂಬುವವರ ಬ್ಯಾಂಕ್ ಖಾತೆಯಿಂದ ನಿರ್ವಹಿಸುತ್ತಿದ್ದ.

ಹೆಂಡತಿಯನ್ನೇ ಕೊಂದ ಆರೋಪ

2004ರಲ್ಲಿ ಸ್ಯಾಂಟ್ರೋ ರವಿ ಜೈಲು ಸೇರುವ ವೇಳೆಗೆ ಆತನ ಹೆಂಡತಿ ಚಂದ್ರಿಕಾರವರ ಖಾತೆಯಲ್ಲಿ 22 ಲಕ್ಷ ರೂ ಇತ್ತು ಎನ್ನಲಾಗಿದೆ. ಆದರೆ ಆತ 2006ರಲ್ಲಿ ಜೈಲಿನಿಂದ ಹೊರಬಂದಾಗ ಹಣ ಕೊಡಲು ಚಂದ್ರಿಕಾ ಮೀನಾಮೇಷ ಎಣಿಸಿದ್ದಾರೆ. ಆಗ ಹಣಕ್ಕಾಗಿ ತನ್ನ ಮಗಳನ್ನೇ ಅಪಹರಿಸಿ ಬ್ಲಾಕ್‌ಮೇಲ್ ಮಾಡಿದ್ದಾನೆ. ಆದರೆ ಚಂದ್ರಿಕಾ ಬಗ್ಗಿಲ್ಲ. ಬದಲಿಗೆ ಆತನ ವಿರುದ್ಧ ಪೊಲೀಸ್ ದೂರು ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ಹೆಂಡತಿಗೆ ಆಸಿಡ್ ಹಾಕಿ ಸುಟ್ಟು ಪಾಂಡವಪುರದ ವಿ.ಸಿ ನಾಲೆಗೆ ಎಸೆದುಕೊಂದಿದ್ದ ಎಂಬ ಆರೋಪ ಎದುರಿಸುತ್ತಿದ್ದನು.

ಕೊಲೆಯಾದ ಪತ್ನಿ ಚಂದ್ರಿಕಾಳೊಂದಿಗೆ ಸ್ಯಾಂಟ್ರೊ ರವಿ

ಆದರೆ ಈ ಸಂದರ್ಭದಲ್ಲಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆ ಎಂದು ದೂರು ಕೊಟ್ಟಿದ್ದಲ್ಲದೆ, ಪತ್ರಿಕೆಗಳಲ್ಲಿ ಕಾಣೆಯಾಗಿದ್ದಾರೆ ಎಂಬ ಜಾಹೀರಾತು ಸಹ ಕೊಟ್ಟಿದ್ದ. ಆನಂತರ ಪೊಲೀಸರೊಂದಿಗೆ ಅಡ್ಜೆಸ್ಟ್ ಮಾಡಿಕೊಂಡು ಕೇಸು ಖುಲಾಸೆಗೊಳಿಸಿದ ಎಂಬ ಆರೋಪ ಆತನ ಮೇಲಿದೆ.

ವರ್ಗಾವಣೆ ದಂಧೆ

ರಾಜಕಾರಣಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಮೂಲಕ ಸ್ನೇಹ ಸಂಪಾದಿಸಿದ್ದ ಈತ ವರ್ಗಾವಣೆ ದಂಧೆಗೆ ಕೈಹಾಕಿದ್ದ. ಅದರಿಂದ ಬಂದ ಹಣದಲ್ಲಿ ಐಷರಾಮಿ ಜೀವನ ಸಾಗಿಸುತ್ತಿದ್ದ ಎಂಬುದನ್ನು ದುಡ್ಡಿನ ಕಂತೆಗಳೊಂದಿಗೆ ಆತ ಇರುವ ಫೋಟೊಗಳೆ ಸಾರಿ ಹೇಳುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಬರುವುದರಲ್ಲಿ ಈತನ ಪಾತ್ರವಿದೆ ಎನ್ನಲಾಗುತ್ತಿದೆ. ಬಾಂಬೆಗೆ ತೆರಳಿದ ಕೆಲ ಶಾಸಕರಿಗೆ ಹೆಣ್ಣು ಮಕ್ಕಳನ್ನು ಪೂರೈಸಿದ್ದು ಈತನೇ ಎಂಬ ಆರೋಪ ಕೇಳಿಬರುತ್ತಿದೆ.

ಬಿಜೆಪಿ ಸರ್ಕಾರ ಬಂದ ಮೇಲಂತೂ ತನ್ನ ಕಾರ್ಯಚಟುವಟಿಕೆಗಳನ್ನು ಕುಮಾರ ಕೃಪಾ ಅತಿಥಿ ಗೃಹದಿಂದಲೇ ನಡೆಸುತ್ತಿದ್ದ ಸ್ಯಾಂಟ್ರೊ ರವಿ ಕೊನೆಗೂ ಬೆತ್ತಲಾಗಿದ್ದಾನೆ. ಇತ್ತೀಚಿಗೆ ಮದುವೆಯಾಗಿದ್ದ ಮಹಿಳೆಯನ್ನು ನಿವೃತ್ತ ಐಎಎಸ್ ಅಧಿಕಾರಿಯೊಂದಿಗೆ ಹಾಸಿಗೆ ಹಂಚಿಕೊಳ್ಳಲು ಒತ್ತಾಯಿಸಿದ್ದ. ಒಪ್ಪದಿದ್ದಾಗ ಸುಳ್ಳು ಕೇಸು ಹಾಕಿ ಜೈಲಿಗೆ ಕಳಿಸಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಹಣಕ್ಕಾಗಿ ಯಾವ ಮಟ್ಟಕ್ಕೆ ಇಳಿಯಲೂ ಹೇಸದ ವ್ಯಕ್ತಿಯೇ ಸ್ಯಾಂಟ್ರೊ ರವಿ.

ಇಂತಹ ಒಬ್ಬ ವ್ಯಕ್ತಿಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸರ್ ಎಂದು ಕರೆಯುತ್ತಾರಂತೆ. ಸಚಿವರು ಆತನ ಪರವಾಗಿ ವರ್ಗಾವಣೆ ಮಾಡಿಕೊಡುತ್ತಾರೆ. ಅನೈತಿಕತೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದು. ದೂರು ನೀಡದ ವಾರವಾಗುತ್ತ ಬಂದರೂ ಸಹ ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

40% ಕಮಿಷನ್ ಹಗರಣ, ಗುತ್ತಿಗೆದಾರನ ಆತ್ಮಹತ್ಯೆ, ಪಿಎಸ್‌ಐ ಹಗರಣ, ಕರಾವಳಿಯಲ್ಲಿ ಮತೀಯ ಗೂಂಡಾಗಿರಿಗಳ ಹೆಚ್ಚಳ, ಪೆಸಿಎಂ, ಪಕ್ಷಕ್ಕೆ ರೌಡಿಗಳ ಸೇರ್ಪಡೆಯಿಂದ ಟೀಕೆಗೆ ಒಳಗಾಗಿದ್ದ ರಾಜ್ಯ ಬಿಜೆಪಿ ಸರ್ಕಾರವು ಸದ್ಯ ಸ್ಯಾಂಟ್ರೊ ರವಿ ಸಹವಾಸದಿಂದ ಮುಜುಗರಕ್ಕೆ ಸಿಲುಕಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶಿಸಿದ ದಲಿತ ಮಹಿಳೆಗೆ ಥಳಿತ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ ಧರ್ಮದರ್ಶಿ – ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿಗೆ ಯಾವುದೆ ವಿಷಯ ತಿಳಿಸಬೇಕಾದರೆ ನಿಮ್ಮ ಒಂದು ಫೊನ್ ನಂಬರ ಕಳಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...