Homeಮುಖಪುಟಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

ಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹೆಸರು ಸ್ಯಾಂಟ್ರೊ ರವಿ. ‘ಸ್ವತಃ ಮುಖ್ಯಮಂತ್ರಿಯೇ ನನ್ನನ್ನು ಸರ್ ಅಂತ ಕರೀತಾರೆ, ನೀವು ಸರ್ ಅಂತಿಲ್ಲ, ಖಾಲಿ ಡಿವೈಎಸ್‌ಪಿ ನೀವು, ಯಾವ ಕೆಲಸವಾದರೂ ಮಾಡಿಕೊಡುತ್ತೇನೆ, ಕುಮಾರಕೃಪ ಗೆಸ್ಟ್ ಹೌಸ್‌ಗೆ ಬನ್ನಿ’ ಎಂದು ಆತ ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ. ಸಿಎಂ ಬೊಮ್ಮಾಯಿವರ ಮಗನ ಜೊತೆ, ಬಿಜೆಪಿ ಸಚಿವರುಗಳ ಜೊತೆ ಆತ ಇರುವ ಫೋಟೊಗಳು ಎಲ್ಲೆಡೆ ಹರಿದಾಡುತ್ತಿವೆ.

ಜನವರಿ 1 ರಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ಆಲಿಯಾಸ್ ಕೆ.ಎಸ್ ಮಂಜುನಾಥ್ ವಿರುದ್ಧ ವಂಚನೆ, ಅತ್ಯಾಚಾರ, ದೌರ್ಜನ್ಯ, ಕ್ರಿಮಿನಲ್ ಪಿತೂರಿಯ ದೂರು ದಾಖಲಾಗುತ್ತದೆ. ದೂರು ನೀಡಿದ್ದು ಆತನನ್ನು ಮದುವೆಯಾಗಿ ವಂಚನೆಗೊಳಗಾಗಿದ್ದ ದಲಿತ ಯುವತಿ. ಆನಂತರ ಆತ ಡಿವೈಎಸ್‌ಪಿ ಜೊತೆ ಮಾತನಾಡಿದ್ದ ಆಡಿಯೋ ಲೀಕ್ ಆಗುತ್ತದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೈಸೂರು “ಪೊಲೀಸರು ಎಫ್‌ಐಆರ್ ದಾಖಲು ಮಾಡಿರುವ ಅತ್ಯಾಚಾರ ಆರೋಪಿ ಸ್ಯಾಂಟ್ರೊ ರವಿಯೊಂದಿಗೆ ಬಿಜೆಪಿ ಸರ್ಕಾರದ ಕೆಲ ಪ್ರಭಾವಿ ಸಚಿವರು ಸಂಪರ್ಕ ಹೊಂದಿದ್ದಾರೆ. ಆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ಒತ್ತಾಯಿಸುತ್ತಾರೆ.

ಅಷ್ಟಕ್ಕೆ ಸುಮ್ಮನಾಗದೆ ಸ್ಯಾಂಟ್ರೊ ರವಿಯ ಜೊತೆ ಸಚಿವರುಗಳಾದ ಆರಗ ಜ್ಞಾನೇಂದ್ರ, ಎಸ್‌.ಟಿ ಸೋಮಶೇಖರ್, ಡಾ.ಕೆ ಸುಧಾಕರ್, ಬಿ.ಸಿ ನಾಗೇಶ್ ಇರುವ ಫೋಟೊಗಳನ್ನು, ವಿಡಿಯೋಗಳನ್ನು ಬಿಡುಗಡೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ಸಾಲು ಸಾಲು ಟ್ವೀಟ್‌ಗಳನ್ನು ಮಾಡುತ್ತದೆ. ಹಾಗಿದ್ದರೆ ಏಕಾಏಕಿ ಸುದ್ದಿಯಲ್ಲಿರುವ ಈ ಸ್ಯಾಂಟ್ರೊ ರವಿ ಯಾರು? ಆತನಿಗೂ ಸರ್ಕಾರದ ನಡುವಿನ ಸಂಬಂಧವೇನು ಎಂಬುದರ ವಿವರ ಇಲ್ಲಿದೆ.

ಮಂಜುನಾಥ್ ಕೆ.ಎಸ್ ಅಲಿಯಾಸ್ ಕಿರಣ್ ಆಲಿಯಾಸ್ ಸ್ಯಾಂಟ್ರೋ ರವಿ (53) ಮಂಡ್ಯದ ನಗರದಿಂದ ಕೂಗಳತೆ ದೂರದಲ್ಲಿರುವ ಹೊಳಲು ಗ್ರಾಮದವನು. ಅವರ ತಂದೆ ಅಬಕಾರಿ ಇಲಾಖೆಯಲ್ಲಿ ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಯಾಗಿದ್ದರು. ಈತನ ಪ್ರಧಾನ ಕಸುಬು ಹೆಣ್ಣು ಮಕ್ಕಳ ಕಳ್ಳಸಾಗಣೆ, ವೇಶ್ಯಾವಾಟಿಕೆ ಜಾಲವಾಗಿತ್ತು. ಹೆಣ್ಣು ಮಕ್ಕಳನ್ನು ಪ್ರೀತಿಸುವುದಾಗಿ ನಂಬಿಸಿ, ಮದುವೆಯ ನಾಟಕವಾಡಿ ಆನಂತರ ಅವರನ್ನು ಪ್ರಭಾವಿಗಳ ಬಳಿ ವೇಶ್ಯಾವಾಟಿಕೆಗೆ ತಳ್ಳುವುದು ಈತನ ಕೆಲಸವಾಗಿತ್ತು. ಇದೇ ಕೆಲಸದಲ್ಲಿ 1987ರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಧರ್ಮಸ್ಥಳಕ್ಕೆ ಓಡಿ ಹೋಗಿ ಮದುವೆಯಾದಾಗ ಸಿಕ್ಕಿಬಿದ್ದು ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದ.

ಆದರೆ ಚಾಲಾಕಿ ಬುದ್ದಿಯ ಆತ ಅನಾರೋಗ್ಯದ ನೆಪವೊಡ್ಡಿ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಲ್ಲಿಂದ ಪರಾರಿಯಾಗಿದ್ದ. ಆಗ ಆತನ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಪ್ರಧಾನವಾಗಿ ಮೈಸೂರನ್ನು ತನ್ನ ಕಾರ್ಯಕ್ಷೇತ್ರ ಮಾಡಿಕೊಂಡಿದ್ದ ಆತ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಅನೈತಿಕ ದಂಧೆಗಿಳಿದಿದ್ದ. ಆ ಸಂದರ್ಭದಲ್ಲಿ ಆತ ಹೊಸದಾಗಿ ಸ್ಯಾಂಟ್ರೊ ಕಾರೊಂದನ್ನು ಖರೀದಿಸಿ ಊರು ಊರು ಸುತ್ತುತ್ತಿದ್ದ. ಬಡವರಾದ, ದಲಿತ-ಬುಡಕಟ್ಟು ಸಮುದಾಯದ ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಮರಳು ಮಾಡಿ ಅವರನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ದಾಳಿ ಮಾಡುತ್ತಿದ್ದ ವೇಳೆಯಲ್ಲೆಲ್ಲ ತನ್ನ ಸ್ಯಾಂಟ್ರೊ ಕಾರಿನಲ್ಲಿ ತಪ್ಪಿಸಿಕೊಳ್ಳುತ್ತಿದ್ದ. ಹಾಗಾಗಿ ಆತನಿಗೆ ಸ್ಯಾಂಟ್ರೊ ರವಿ ಎಂಬ ಹೆಸರು ಬಂದಿದೆ ಎನ್ನಲಾಗುತ್ತಿದೆ.

2000 ಇಸವಿಯಿಂದ 2014ರವರೆಗೆ ಆತನ ವಿರುದ್ಧ ಹೆಣ್ಣು ಮಕ್ಕಳ ಕಳ್ಳ ಸಾಗಣಿಕೆ, ಅತ್ಯಾಚಾರ, ವಂಚನೆ, ಕ್ರಿಮಿನಲ್ ಆರೋಪದ ಮೇಲೆ ಹತ್ತಾರು ಪ್ರಕರಣಗಳನ್ನು ಒಡನಾಡಿ ಸಂಸ್ಥೆ ದಾಖಲಿಸಿತ್ತು. ಆದರೆ ಪ್ರಭಾವಿಗಳ  ಕೃಪಾಕಟಾಕ್ಷದಲ್ಲಿದ್ದ ಆತ ಪೊಲೀಸರನ್ನು ಸಹ ಬುಟ್ಟಿಗೆ ಹಾಕಿಕೊಂಡು ತಪ್ಪಿಸಿಕೊಳ್ಳುತ್ತಿದ್ದ ಎನ್ನುವುದು ಅವನ ಮೇಲಿರುವ ಆರೋಪ.

2004ರಲ್ಲಿ ಸ್ಯಾಂಟ್ರೊ ರವಿ ತನ್ನ ಅನೈತಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರಿಂದ ಆತನ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿಡಲಾಗಿತ್ತು. ಅಲ್ಲಿದ್ದ ಒಂದೂವರೆ ವರ್ಷದಲ್ಲಿ ಮತ್ತಷ್ಟು ರೌಡಿಗಳ, ರಾಜಕಾರಣಿಗಳ ನಂಟು ಬೆಳೆಸಿಕೊಂಡಿದ್ದ. ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಂತೆ ವರ್ಗಾವಣೆ ದಂಧೆಗಿಳಿದಿದ್ದ ಎನ್ನಲಾಗಿದೆ. ಈ ಎಲ್ಲಾ ದಂಧೆಗಳಲ್ಲಿನ ಅಕ್ರಮ ಹಣವನ್ನು ತನ್ನ ಹೆಂಡತಿ ಚಂದ್ರಿಕಾ ಎಂಬುವವರ ಬ್ಯಾಂಕ್ ಖಾತೆಯಿಂದ ನಿರ್ವಹಿಸುತ್ತಿದ್ದ.

ಹೆಂಡತಿಯನ್ನೇ ಕೊಂದ ಆರೋಪ

2004ರಲ್ಲಿ ಸ್ಯಾಂಟ್ರೋ ರವಿ ಜೈಲು ಸೇರುವ ವೇಳೆಗೆ ಆತನ ಹೆಂಡತಿ ಚಂದ್ರಿಕಾರವರ ಖಾತೆಯಲ್ಲಿ 22 ಲಕ್ಷ ರೂ ಇತ್ತು ಎನ್ನಲಾಗಿದೆ. ಆದರೆ ಆತ 2006ರಲ್ಲಿ ಜೈಲಿನಿಂದ ಹೊರಬಂದಾಗ ಹಣ ಕೊಡಲು ಚಂದ್ರಿಕಾ ಮೀನಾಮೇಷ ಎಣಿಸಿದ್ದಾರೆ. ಆಗ ಹಣಕ್ಕಾಗಿ ತನ್ನ ಮಗಳನ್ನೇ ಅಪಹರಿಸಿ ಬ್ಲಾಕ್‌ಮೇಲ್ ಮಾಡಿದ್ದಾನೆ. ಆದರೆ ಚಂದ್ರಿಕಾ ಬಗ್ಗಿಲ್ಲ. ಬದಲಿಗೆ ಆತನ ವಿರುದ್ಧ ಪೊಲೀಸ್ ದೂರು ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ಹೆಂಡತಿಗೆ ಆಸಿಡ್ ಹಾಕಿ ಸುಟ್ಟು ಪಾಂಡವಪುರದ ವಿ.ಸಿ ನಾಲೆಗೆ ಎಸೆದುಕೊಂದಿದ್ದ ಎಂಬ ಆರೋಪ ಎದುರಿಸುತ್ತಿದ್ದನು.

ಕೊಲೆಯಾದ ಪತ್ನಿ ಚಂದ್ರಿಕಾಳೊಂದಿಗೆ ಸ್ಯಾಂಟ್ರೊ ರವಿ

ಆದರೆ ಈ ಸಂದರ್ಭದಲ್ಲಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆ ಎಂದು ದೂರು ಕೊಟ್ಟಿದ್ದಲ್ಲದೆ, ಪತ್ರಿಕೆಗಳಲ್ಲಿ ಕಾಣೆಯಾಗಿದ್ದಾರೆ ಎಂಬ ಜಾಹೀರಾತು ಸಹ ಕೊಟ್ಟಿದ್ದ. ಆನಂತರ ಪೊಲೀಸರೊಂದಿಗೆ ಅಡ್ಜೆಸ್ಟ್ ಮಾಡಿಕೊಂಡು ಕೇಸು ಖುಲಾಸೆಗೊಳಿಸಿದ ಎಂಬ ಆರೋಪ ಆತನ ಮೇಲಿದೆ.

ವರ್ಗಾವಣೆ ದಂಧೆ

ರಾಜಕಾರಣಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಮೂಲಕ ಸ್ನೇಹ ಸಂಪಾದಿಸಿದ್ದ ಈತ ವರ್ಗಾವಣೆ ದಂಧೆಗೆ ಕೈಹಾಕಿದ್ದ. ಅದರಿಂದ ಬಂದ ಹಣದಲ್ಲಿ ಐಷರಾಮಿ ಜೀವನ ಸಾಗಿಸುತ್ತಿದ್ದ ಎಂಬುದನ್ನು ದುಡ್ಡಿನ ಕಂತೆಗಳೊಂದಿಗೆ ಆತ ಇರುವ ಫೋಟೊಗಳೆ ಸಾರಿ ಹೇಳುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಬರುವುದರಲ್ಲಿ ಈತನ ಪಾತ್ರವಿದೆ ಎನ್ನಲಾಗುತ್ತಿದೆ. ಬಾಂಬೆಗೆ ತೆರಳಿದ ಕೆಲ ಶಾಸಕರಿಗೆ ಹೆಣ್ಣು ಮಕ್ಕಳನ್ನು ಪೂರೈಸಿದ್ದು ಈತನೇ ಎಂಬ ಆರೋಪ ಕೇಳಿಬರುತ್ತಿದೆ.

ಬಿಜೆಪಿ ಸರ್ಕಾರ ಬಂದ ಮೇಲಂತೂ ತನ್ನ ಕಾರ್ಯಚಟುವಟಿಕೆಗಳನ್ನು ಕುಮಾರ ಕೃಪಾ ಅತಿಥಿ ಗೃಹದಿಂದಲೇ ನಡೆಸುತ್ತಿದ್ದ ಸ್ಯಾಂಟ್ರೊ ರವಿ ಕೊನೆಗೂ ಬೆತ್ತಲಾಗಿದ್ದಾನೆ. ಇತ್ತೀಚಿಗೆ ಮದುವೆಯಾಗಿದ್ದ ಮಹಿಳೆಯನ್ನು ನಿವೃತ್ತ ಐಎಎಸ್ ಅಧಿಕಾರಿಯೊಂದಿಗೆ ಹಾಸಿಗೆ ಹಂಚಿಕೊಳ್ಳಲು ಒತ್ತಾಯಿಸಿದ್ದ. ಒಪ್ಪದಿದ್ದಾಗ ಸುಳ್ಳು ಕೇಸು ಹಾಕಿ ಜೈಲಿಗೆ ಕಳಿಸಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಹಣಕ್ಕಾಗಿ ಯಾವ ಮಟ್ಟಕ್ಕೆ ಇಳಿಯಲೂ ಹೇಸದ ವ್ಯಕ್ತಿಯೇ ಸ್ಯಾಂಟ್ರೊ ರವಿ.

ಇಂತಹ ಒಬ್ಬ ವ್ಯಕ್ತಿಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸರ್ ಎಂದು ಕರೆಯುತ್ತಾರಂತೆ. ಸಚಿವರು ಆತನ ಪರವಾಗಿ ವರ್ಗಾವಣೆ ಮಾಡಿಕೊಡುತ್ತಾರೆ. ಅನೈತಿಕತೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದು. ದೂರು ನೀಡದ ವಾರವಾಗುತ್ತ ಬಂದರೂ ಸಹ ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

40% ಕಮಿಷನ್ ಹಗರಣ, ಗುತ್ತಿಗೆದಾರನ ಆತ್ಮಹತ್ಯೆ, ಪಿಎಸ್‌ಐ ಹಗರಣ, ಕರಾವಳಿಯಲ್ಲಿ ಮತೀಯ ಗೂಂಡಾಗಿರಿಗಳ ಹೆಚ್ಚಳ, ಪೆಸಿಎಂ, ಪಕ್ಷಕ್ಕೆ ರೌಡಿಗಳ ಸೇರ್ಪಡೆಯಿಂದ ಟೀಕೆಗೆ ಒಳಗಾಗಿದ್ದ ರಾಜ್ಯ ಬಿಜೆಪಿ ಸರ್ಕಾರವು ಸದ್ಯ ಸ್ಯಾಂಟ್ರೊ ರವಿ ಸಹವಾಸದಿಂದ ಮುಜುಗರಕ್ಕೆ ಸಿಲುಕಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶಿಸಿದ ದಲಿತ ಮಹಿಳೆಗೆ ಥಳಿತ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ ಧರ್ಮದರ್ಶಿ – ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿಗೆ ಯಾವುದೆ ವಿಷಯ ತಿಳಿಸಬೇಕಾದರೆ ನಿಮ್ಮ ಒಂದು ಫೊನ್ ನಂಬರ ಕಳಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...