Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ ಎಂದು ಸಿಜೆಐ ಎನ್.ವಿ ರಮಣ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದವರು. ರಾಷ್ಟ್ರದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅನೇಕ ಯುದ್ಧಗಳಲ್ಲಿ ಭಾಗವಹಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ”. ಇವು ಮೈಸೂರಿನಲ್ಲಿ ನೆಲೆಸಿರುವ ನಿವೃತ್ತ ಮೇಜರ್ ಜನರಲ್ ಎಸ್.ಜಿ ಒಂಬತ್ಕೆರೆಯವರ ಕುರಿತು ಭಾರತದ ಮುಖ್ಯ ನ್ಯಾಯಾಧೀಶರಾದ ಎನ್‌.ವಿ ರಮಣರವರು ಆಡಿದ ಮಾತುಗಳು..

ದೇಶದ್ರೋಹ ಕಾನೂನಿನ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಭಾರತದ ಸುಪ್ರೀಂ ಕೋರ್ಟ್ ಸಹ “ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಪಳಯುಳಿಕೆ ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ನಾವು ಇದರ ಸಿಂಧುತ್ವವನ್ನು ಪರಿಶೀಲಿಸುತ್ತೇವೆ” ಎಂದು ನುಡಿದಿದೆ. ಇಂತಹ ಮಹತ್ವದ ಚರ್ಚೆಗೆ ಕಾರಣರಾದವರು ಛಲಬಿಡದ ಹೋರಾಟಗಾರರಾದ ಎಸ್.ಜಿ ಒಂಬತ್ಕೆರೆ… ಏಕೆಂದರೆ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅವರು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಜೊತೆಗೂಡಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸುಪ್ರೀಂ ಪುರಸ್ಕರಿಸಿದ್ದು ಅದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಎಸ್. ಸುಧೀರ್ ಜಿ ಒಂಬತ್ಕೆರೆಯವರು (79) ಬಹಳ ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದವರು. ಮದ್ರಾಸ್‌ ಐಐಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿರುವ ಅವರು ಭಾರತದ ಅತ್ಯಂತ ಎತ್ತರದ ಪ್ರದೇಶದಲ್ಲಿ ಸೇತುವೆ ನಿರ್ಮಿಸುವ ಮೂಲಕ ಪ್ರಶಸ್ತಿ ಸಹ ಪಡೆದಿದ್ದಾರೆ. ದೆಹಲಿಯ ಸೈನ್ಯದ ಶಿಸ್ತು ಮತ್ತು ಜಾಗರೂಕತೆ ವಿಭಾಗದ ಹೆಚ್ಚುವರಿ ಡಿಜಿಯಾಗಿ ನಿವೃತ್ತನಾದ ನಂತರ 30 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿರುವ ಅವರು ಪ್ರಖರ ಚಿಂತಕರು ಮತ್ತು ದಿಟ್ಟ ಹೋರಾಟಗಾರರು ಎನ್ನುತ್ತಾರೆ ಅವರ ಸ್ನೇಹಿತರು ಮತ್ತು ಒಡನಾಡಿಯಾದ ಡಾ.ವಿ ಲಕ್ಷ್ಮೀನಾರಾಯಣ್.

ಸರ್ಕಾರಿ ಸೌಲಭ್ಯ ಪಡೆಯಲು, ಇತರ ಸೇವೆಗಳಿಗೆ ಆಧಾರ್ ಕಡ್ಡಾಯಗೊಳಿಸಲು ಸರ್ಕಾರ ಹೊರಟಾಗ ಅದನ್ನು ಒಂಬತ್ಕೆರೆಯವರು ತೀವ್ರವಾಗಿ ವಿರೋಧಿಸಿದ್ದರು. ಇದು ದೇಶದ ಪ್ರಜೆಗಳ ಖಾಸಗಿತನದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಎನ್‌ಪಿಆರ್‌ಗೆ ಕಾರಣವಾಗುತ್ತದೆ ಎಂದು ಪ್ರತಿಪಾದಿಸಿದ್ದರು. ಆಗ ಸುಪ್ರೀಂ ಕೋರ್ಟ್ ಆಧಾರ್ ಕಡ್ಡಾಯ ತೆಗೆಯಬೇಕೆಂದು ಸೂಚಿಸಿತ್ತು. ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ ವೇಳೆ ಸೈನ್ಯವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದನ್ನು ವಿರೋಧಿಸಿ, ಸೈನ್ಯದ ಹೆಸರಲ್ಲಿ ಮತ ಕೇಳುವುದನ್ನು ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 150ಕ್ಕೂ ಹೆಚ್ಚು ಗಣ್ಯರಲ್ಲಿ ಎಸ್.ಜಿ ಒಂಬತ್ಕೆರೆಯವರು ಒಬ್ಬರಾಗಿದ್ದರು.

ರಟ್ಟಹಳ್ಳಿಯಲ್ಲಿ ಗಿಡಮರ ಬೆಳೆಸುವ ಪ್ರಚಾರಾಂದೋನ ಆರಂಭಿಸಿದ ಇವರು, ಚಾಮುಂಡಿ ಬೆಟ್ಟದಲ್ಲಿ ಮರಗಳನ್ನು ಉಳಿಸಲು ಹೋರಾಡಿದ್ದಾರೆ. ಚಾಮಲಪುರ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯ ವಿರುದ್ಧ ನಿರಂತರ ಪ್ರತಿಭಟನೆಗಳನ್ನು ನಡೆಸಿದರು. ಪರಿಸರ ಸಂಬಂಧದ ಹಲವು ವೇದಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಮೈಸೂರು ಹೆರಿಟೇಜ್ ಕಮಿಟಿ ಮತ್ತು ಮೈಸೂರಿನ ಗ್ರಾಹಕ ವೇದಿಕೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಮಾನವ ಹಕ್ಕುಗಳ ಪರವಾಗಿ ಹೋರಾಡುತ್ತಿರುವ ಅವರು ದೇಶದ್ರೋಹದ ಕಾನೂನಿನ ದುರ್ಬಳಕೆ ವಿರೋಧಿಸಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಸೈನ್ಯದ ಹಿನ್ನೆಲೆಯಿರುವವರು ಆರಾಮಾಗಿರಲು ಬಯಸುತ್ತಾರೆಯೇ ಹೊರತು ಸಾಮಾಜಿಕ ಕಳಕಳಿ ಹೊಂದಿರುವುದಿಲ್ಲ. ಆದರೆ ಇವರು ಮಾತ್ರ ಭಿನ್ನವಾಗಿ ನಿಲ್ಲುತ್ತಾರೆ ಮತ್ತು ಸದಾ ಸಮಾಜದ ಪರ ಚಿಂತಿಸುತ್ತಾರೆ ಎಂದು ಪಿಯುಸಿಲ್‌ನ ಹಿರಿಯ ಹೋರಾಟಗಾರರಾದ ಡಾ.ವಿ ಲಕ್ಷ್ಮೀನಾರಾಯಣ್ ಹೇಳುತ್ತಾರೆ.

ಅವರು ಪಿಯುಸಿಎಲ್‌ನ ಅಜೀವ ಸದಸ್ಯರಾಗಿದ್ದಾರೆ. ಎಲ್ಲಾ ಜೀವಪರ-ಜನಪರ ಮತ್ತು ಪರಿಸರ ಉಳಿವಿನ ಹೋರಾಟದಲ್ಲಿ ಅವರು ಮುಂದಿರುತ್ತಾರೆ. ದೇಶಾದ್ಯಂತ ಎಡಪಕ್ಷಗಳು ಒಗ್ಗಟ್ಟಾಗಬೇಕು ಎಂಬ ಪ್ರಯತ್ನ ನಡೆಸಿದ್ದ ಅವರು ದೆಹಲಿಯಲ್ಲಿ ಸಮಾವೇಶವನ್ನು ನಡೆಸಿದ್ದರು. ಆಧಾರ್ ಕಾರ್ಡ್ ಕಡ್ಡಾಯ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಧಾ ಪಾಟ್ಕರ್‌ರವರ ಜೊತೆಗೂಡಿ ನರ್ಮದಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿದ್ದ ಅವರು ಮೇಧಾ ಪಾಟ್ಕರ್‌ರವರನ್ನು ಮೈಸೂರಿಗೂ ಕರೆಸಿ ಜಾಗೃತಿ ಕಾರ್ಯಕ್ರಮ ನಡೆಸಿದ್ದರು.

ಸದ್ಯ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದೆ. “ದೇಶದ್ರೋಹ ಕಾಯ್ದೆ ತೀವ್ರ ದುರ್ಬಳಕೆಯಾಗುತ್ತಿದೆ. ಬಹಳ ಹಿಂದೆಯೇ ನಾವು ರದ್ದುಪಡಿಸಿದ ಐಟಿ ಕಾಯ್ದೆ ಸೆಕ್ಷನ್ 66ಎ ಅಡಿಯಲ್ಲಿ ಈಗಲೂ ಪೊಲೀಸರು ಕೇಸು ದಾಖಲಿಸುತ್ತಿದ್ದಾರೆ. ಇದು ಒಬ್ಬ ಅತ್ಯುತ್ಸಾಹಿ ಬಡಗಿಗೆ ಮರದ ತುಂಡು ಕಡಿಯಲು ಹೇಳಿದರೆ ಇಡೀ ಕಾಡು ಕಡಿದಂತೆ. ತಮಗಾಗದವರನ್ನು ಹತ್ತಿಕ್ಕಲು, ತಮ್ಮ ವಿರುದ್ಧದ ದನಿಯನ್ನು ಅಡಗಿಸಲು ಇಂತಹ ಕಾಯ್ದೆಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಯಾವುದೋ ಹಳ್ಳಿಯ ಮೂಲೆಯಲ್ಲಿ ತನಗಾಗದ ವ್ಯಕ್ತಿಯೊಬ್ಬನನ್ನು ಮಟ್ಟಹಾಕಲು ಪೊಲೀಸ್ ಅಧಿಕಾರಿಯೊಬ್ಬ ಈ ಕೇಸು ಹಾಕಿ ಒಳಗೆ ತಳ್ಳಬಹುದಲ್ಲವೇ? ಎಲ್ಲಕ್ಕಿಂತ ಹೆಚ್ಚಾಗಿ ದೇಶದ್ರೋಹದ ಆರೋಪಗಳು ಸಾಬೀತಾಗುವುದು ಬಹಳ ಕಡಿಮೆ. ಈ ಎಲ್ಲ ಅಂಶಗಳನ್ನು ಸರ್ಕಾರ ಪರಿಗಣಿಸಿ ತನ್ನ ಅಭಿಪ್ರಾಯ ತಿಳಿಸಬೇಕು” ಎಂದು ಕೋರ್ಟ್ ಸೂಚಿಸಿದೆ.

ಹೀಗೆ ಮರ ಉಳಿಸುವುದರಿಂದ ಆರಂಭಿಸಿ, ದೇಶದ್ರೋಹ ಕಾನೂನು ರದ್ದಾಗಬೇಕು ಎನ್ನುವರೆಗೂ ಹತ್ತ ಹಲವು ವಿಷಯಗಳಲ್ಲಿ ವೊಂಬತ್ಕೆರೆಯವರು ಹೋರಾಟನಿರತರಾಗಿದ್ದಾರೆ. ಮೈಸೂರಿನಲ್ಲೇ ನೆಲೆಸಿರುವ ಅವರು ಎಲೆಮರೆಕಾಯಿಯಂತೆ ಬಹಳ ಜನಕ್ಕೆ ಅಪರಿಚಿತರೆಂದೇ ಹೇಳಬಹುದು. ಆದರೆ ಅವರ ವಯಕ್ತಿಯ ಬದುಕಿನ ಬಗ್ಗೆಯಾಗಲಿ, ಹೋರಾಟದ ಬಗ್ಗೆಯಾಗಲಿ ಕೇಳಿದರೆ ನನಗಿಂತ ಜನರ ನೆಮ್ಮದಿಯ ಜೀವನ ಮುಖ್ಯ. ಆ ಕುರಿತು ಹೆಚ್ಚು ಗಮನ ನೀಡೋಣ ಎನ್ನುತ್ತಾರೆ…


ಇದನ್ನೂ ಓದಿ: ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...