Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ ಎಂದು ಸಿಜೆಐ ಎನ್.ವಿ ರಮಣ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದವರು. ರಾಷ್ಟ್ರದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅನೇಕ ಯುದ್ಧಗಳಲ್ಲಿ ಭಾಗವಹಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ”. ಇವು ಮೈಸೂರಿನಲ್ಲಿ ನೆಲೆಸಿರುವ ನಿವೃತ್ತ ಮೇಜರ್ ಜನರಲ್ ಎಸ್.ಜಿ ಒಂಬತ್ಕೆರೆಯವರ ಕುರಿತು ಭಾರತದ ಮುಖ್ಯ ನ್ಯಾಯಾಧೀಶರಾದ ಎನ್‌.ವಿ ರಮಣರವರು ಆಡಿದ ಮಾತುಗಳು..

ದೇಶದ್ರೋಹ ಕಾನೂನಿನ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಭಾರತದ ಸುಪ್ರೀಂ ಕೋರ್ಟ್ ಸಹ “ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಪಳಯುಳಿಕೆ ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ನಾವು ಇದರ ಸಿಂಧುತ್ವವನ್ನು ಪರಿಶೀಲಿಸುತ್ತೇವೆ” ಎಂದು ನುಡಿದಿದೆ. ಇಂತಹ ಮಹತ್ವದ ಚರ್ಚೆಗೆ ಕಾರಣರಾದವರು ಛಲಬಿಡದ ಹೋರಾಟಗಾರರಾದ ಎಸ್.ಜಿ ಒಂಬತ್ಕೆರೆ… ಏಕೆಂದರೆ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅವರು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಜೊತೆಗೂಡಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸುಪ್ರೀಂ ಪುರಸ್ಕರಿಸಿದ್ದು ಅದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಎಸ್. ಸುಧೀರ್ ಜಿ ಒಂಬತ್ಕೆರೆಯವರು (79) ಬಹಳ ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದವರು. ಮದ್ರಾಸ್‌ ಐಐಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿರುವ ಅವರು ಭಾರತದ ಅತ್ಯಂತ ಎತ್ತರದ ಪ್ರದೇಶದಲ್ಲಿ ಸೇತುವೆ ನಿರ್ಮಿಸುವ ಮೂಲಕ ಪ್ರಶಸ್ತಿ ಸಹ ಪಡೆದಿದ್ದಾರೆ. ದೆಹಲಿಯ ಸೈನ್ಯದ ಶಿಸ್ತು ಮತ್ತು ಜಾಗರೂಕತೆ ವಿಭಾಗದ ಹೆಚ್ಚುವರಿ ಡಿಜಿಯಾಗಿ ನಿವೃತ್ತನಾದ ನಂತರ 30 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿರುವ ಅವರು ಪ್ರಖರ ಚಿಂತಕರು ಮತ್ತು ದಿಟ್ಟ ಹೋರಾಟಗಾರರು ಎನ್ನುತ್ತಾರೆ ಅವರ ಸ್ನೇಹಿತರು ಮತ್ತು ಒಡನಾಡಿಯಾದ ಡಾ.ವಿ ಲಕ್ಷ್ಮೀನಾರಾಯಣ್.

ಸರ್ಕಾರಿ ಸೌಲಭ್ಯ ಪಡೆಯಲು, ಇತರ ಸೇವೆಗಳಿಗೆ ಆಧಾರ್ ಕಡ್ಡಾಯಗೊಳಿಸಲು ಸರ್ಕಾರ ಹೊರಟಾಗ ಅದನ್ನು ಒಂಬತ್ಕೆರೆಯವರು ತೀವ್ರವಾಗಿ ವಿರೋಧಿಸಿದ್ದರು. ಇದು ದೇಶದ ಪ್ರಜೆಗಳ ಖಾಸಗಿತನದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಎನ್‌ಪಿಆರ್‌ಗೆ ಕಾರಣವಾಗುತ್ತದೆ ಎಂದು ಪ್ರತಿಪಾದಿಸಿದ್ದರು. ಆಗ ಸುಪ್ರೀಂ ಕೋರ್ಟ್ ಆಧಾರ್ ಕಡ್ಡಾಯ ತೆಗೆಯಬೇಕೆಂದು ಸೂಚಿಸಿತ್ತು. ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ ವೇಳೆ ಸೈನ್ಯವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದನ್ನು ವಿರೋಧಿಸಿ, ಸೈನ್ಯದ ಹೆಸರಲ್ಲಿ ಮತ ಕೇಳುವುದನ್ನು ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 150ಕ್ಕೂ ಹೆಚ್ಚು ಗಣ್ಯರಲ್ಲಿ ಎಸ್.ಜಿ ಒಂಬತ್ಕೆರೆಯವರು ಒಬ್ಬರಾಗಿದ್ದರು.

ರಟ್ಟಹಳ್ಳಿಯಲ್ಲಿ ಗಿಡಮರ ಬೆಳೆಸುವ ಪ್ರಚಾರಾಂದೋನ ಆರಂಭಿಸಿದ ಇವರು, ಚಾಮುಂಡಿ ಬೆಟ್ಟದಲ್ಲಿ ಮರಗಳನ್ನು ಉಳಿಸಲು ಹೋರಾಡಿದ್ದಾರೆ. ಚಾಮಲಪುರ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯ ವಿರುದ್ಧ ನಿರಂತರ ಪ್ರತಿಭಟನೆಗಳನ್ನು ನಡೆಸಿದರು. ಪರಿಸರ ಸಂಬಂಧದ ಹಲವು ವೇದಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಮೈಸೂರು ಹೆರಿಟೇಜ್ ಕಮಿಟಿ ಮತ್ತು ಮೈಸೂರಿನ ಗ್ರಾಹಕ ವೇದಿಕೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಮಾನವ ಹಕ್ಕುಗಳ ಪರವಾಗಿ ಹೋರಾಡುತ್ತಿರುವ ಅವರು ದೇಶದ್ರೋಹದ ಕಾನೂನಿನ ದುರ್ಬಳಕೆ ವಿರೋಧಿಸಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಸೈನ್ಯದ ಹಿನ್ನೆಲೆಯಿರುವವರು ಆರಾಮಾಗಿರಲು ಬಯಸುತ್ತಾರೆಯೇ ಹೊರತು ಸಾಮಾಜಿಕ ಕಳಕಳಿ ಹೊಂದಿರುವುದಿಲ್ಲ. ಆದರೆ ಇವರು ಮಾತ್ರ ಭಿನ್ನವಾಗಿ ನಿಲ್ಲುತ್ತಾರೆ ಮತ್ತು ಸದಾ ಸಮಾಜದ ಪರ ಚಿಂತಿಸುತ್ತಾರೆ ಎಂದು ಪಿಯುಸಿಲ್‌ನ ಹಿರಿಯ ಹೋರಾಟಗಾರರಾದ ಡಾ.ವಿ ಲಕ್ಷ್ಮೀನಾರಾಯಣ್ ಹೇಳುತ್ತಾರೆ.

ಅವರು ಪಿಯುಸಿಎಲ್‌ನ ಅಜೀವ ಸದಸ್ಯರಾಗಿದ್ದಾರೆ. ಎಲ್ಲಾ ಜೀವಪರ-ಜನಪರ ಮತ್ತು ಪರಿಸರ ಉಳಿವಿನ ಹೋರಾಟದಲ್ಲಿ ಅವರು ಮುಂದಿರುತ್ತಾರೆ. ದೇಶಾದ್ಯಂತ ಎಡಪಕ್ಷಗಳು ಒಗ್ಗಟ್ಟಾಗಬೇಕು ಎಂಬ ಪ್ರಯತ್ನ ನಡೆಸಿದ್ದ ಅವರು ದೆಹಲಿಯಲ್ಲಿ ಸಮಾವೇಶವನ್ನು ನಡೆಸಿದ್ದರು. ಆಧಾರ್ ಕಾರ್ಡ್ ಕಡ್ಡಾಯ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಧಾ ಪಾಟ್ಕರ್‌ರವರ ಜೊತೆಗೂಡಿ ನರ್ಮದಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿದ್ದ ಅವರು ಮೇಧಾ ಪಾಟ್ಕರ್‌ರವರನ್ನು ಮೈಸೂರಿಗೂ ಕರೆಸಿ ಜಾಗೃತಿ ಕಾರ್ಯಕ್ರಮ ನಡೆಸಿದ್ದರು.

ಸದ್ಯ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದೆ. “ದೇಶದ್ರೋಹ ಕಾಯ್ದೆ ತೀವ್ರ ದುರ್ಬಳಕೆಯಾಗುತ್ತಿದೆ. ಬಹಳ ಹಿಂದೆಯೇ ನಾವು ರದ್ದುಪಡಿಸಿದ ಐಟಿ ಕಾಯ್ದೆ ಸೆಕ್ಷನ್ 66ಎ ಅಡಿಯಲ್ಲಿ ಈಗಲೂ ಪೊಲೀಸರು ಕೇಸು ದಾಖಲಿಸುತ್ತಿದ್ದಾರೆ. ಇದು ಒಬ್ಬ ಅತ್ಯುತ್ಸಾಹಿ ಬಡಗಿಗೆ ಮರದ ತುಂಡು ಕಡಿಯಲು ಹೇಳಿದರೆ ಇಡೀ ಕಾಡು ಕಡಿದಂತೆ. ತಮಗಾಗದವರನ್ನು ಹತ್ತಿಕ್ಕಲು, ತಮ್ಮ ವಿರುದ್ಧದ ದನಿಯನ್ನು ಅಡಗಿಸಲು ಇಂತಹ ಕಾಯ್ದೆಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಯಾವುದೋ ಹಳ್ಳಿಯ ಮೂಲೆಯಲ್ಲಿ ತನಗಾಗದ ವ್ಯಕ್ತಿಯೊಬ್ಬನನ್ನು ಮಟ್ಟಹಾಕಲು ಪೊಲೀಸ್ ಅಧಿಕಾರಿಯೊಬ್ಬ ಈ ಕೇಸು ಹಾಕಿ ಒಳಗೆ ತಳ್ಳಬಹುದಲ್ಲವೇ? ಎಲ್ಲಕ್ಕಿಂತ ಹೆಚ್ಚಾಗಿ ದೇಶದ್ರೋಹದ ಆರೋಪಗಳು ಸಾಬೀತಾಗುವುದು ಬಹಳ ಕಡಿಮೆ. ಈ ಎಲ್ಲ ಅಂಶಗಳನ್ನು ಸರ್ಕಾರ ಪರಿಗಣಿಸಿ ತನ್ನ ಅಭಿಪ್ರಾಯ ತಿಳಿಸಬೇಕು” ಎಂದು ಕೋರ್ಟ್ ಸೂಚಿಸಿದೆ.

ಹೀಗೆ ಮರ ಉಳಿಸುವುದರಿಂದ ಆರಂಭಿಸಿ, ದೇಶದ್ರೋಹ ಕಾನೂನು ರದ್ದಾಗಬೇಕು ಎನ್ನುವರೆಗೂ ಹತ್ತ ಹಲವು ವಿಷಯಗಳಲ್ಲಿ ವೊಂಬತ್ಕೆರೆಯವರು ಹೋರಾಟನಿರತರಾಗಿದ್ದಾರೆ. ಮೈಸೂರಿನಲ್ಲೇ ನೆಲೆಸಿರುವ ಅವರು ಎಲೆಮರೆಕಾಯಿಯಂತೆ ಬಹಳ ಜನಕ್ಕೆ ಅಪರಿಚಿತರೆಂದೇ ಹೇಳಬಹುದು. ಆದರೆ ಅವರ ವಯಕ್ತಿಯ ಬದುಕಿನ ಬಗ್ಗೆಯಾಗಲಿ, ಹೋರಾಟದ ಬಗ್ಗೆಯಾಗಲಿ ಕೇಳಿದರೆ ನನಗಿಂತ ಜನರ ನೆಮ್ಮದಿಯ ಜೀವನ ಮುಖ್ಯ. ಆ ಕುರಿತು ಹೆಚ್ಚು ಗಮನ ನೀಡೋಣ ಎನ್ನುತ್ತಾರೆ…


ಇದನ್ನೂ ಓದಿ: ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...