Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ ಎಂದು ಸಿಜೆಐ ಎನ್.ವಿ ರಮಣ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದವರು. ರಾಷ್ಟ್ರದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅನೇಕ ಯುದ್ಧಗಳಲ್ಲಿ ಭಾಗವಹಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ”. ಇವು ಮೈಸೂರಿನಲ್ಲಿ ನೆಲೆಸಿರುವ ನಿವೃತ್ತ ಮೇಜರ್ ಜನರಲ್ ಎಸ್.ಜಿ ಒಂಬತ್ಕೆರೆಯವರ ಕುರಿತು ಭಾರತದ ಮುಖ್ಯ ನ್ಯಾಯಾಧೀಶರಾದ ಎನ್‌.ವಿ ರಮಣರವರು ಆಡಿದ ಮಾತುಗಳು..

ದೇಶದ್ರೋಹ ಕಾನೂನಿನ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಭಾರತದ ಸುಪ್ರೀಂ ಕೋರ್ಟ್ ಸಹ “ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಪಳಯುಳಿಕೆ ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ನಾವು ಇದರ ಸಿಂಧುತ್ವವನ್ನು ಪರಿಶೀಲಿಸುತ್ತೇವೆ” ಎಂದು ನುಡಿದಿದೆ. ಇಂತಹ ಮಹತ್ವದ ಚರ್ಚೆಗೆ ಕಾರಣರಾದವರು ಛಲಬಿಡದ ಹೋರಾಟಗಾರರಾದ ಎಸ್.ಜಿ ಒಂಬತ್ಕೆರೆ… ಏಕೆಂದರೆ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅವರು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಜೊತೆಗೂಡಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸುಪ್ರೀಂ ಪುರಸ್ಕರಿಸಿದ್ದು ಅದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಎಸ್. ಸುಧೀರ್ ಜಿ ಒಂಬತ್ಕೆರೆಯವರು (79) ಬಹಳ ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದವರು. ಮದ್ರಾಸ್‌ ಐಐಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿರುವ ಅವರು ಭಾರತದ ಅತ್ಯಂತ ಎತ್ತರದ ಪ್ರದೇಶದಲ್ಲಿ ಸೇತುವೆ ನಿರ್ಮಿಸುವ ಮೂಲಕ ಪ್ರಶಸ್ತಿ ಸಹ ಪಡೆದಿದ್ದಾರೆ. ದೆಹಲಿಯ ಸೈನ್ಯದ ಶಿಸ್ತು ಮತ್ತು ಜಾಗರೂಕತೆ ವಿಭಾಗದ ಹೆಚ್ಚುವರಿ ಡಿಜಿಯಾಗಿ ನಿವೃತ್ತನಾದ ನಂತರ 30 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿರುವ ಅವರು ಪ್ರಖರ ಚಿಂತಕರು ಮತ್ತು ದಿಟ್ಟ ಹೋರಾಟಗಾರರು ಎನ್ನುತ್ತಾರೆ ಅವರ ಸ್ನೇಹಿತರು ಮತ್ತು ಒಡನಾಡಿಯಾದ ಡಾ.ವಿ ಲಕ್ಷ್ಮೀನಾರಾಯಣ್.

ಸರ್ಕಾರಿ ಸೌಲಭ್ಯ ಪಡೆಯಲು, ಇತರ ಸೇವೆಗಳಿಗೆ ಆಧಾರ್ ಕಡ್ಡಾಯಗೊಳಿಸಲು ಸರ್ಕಾರ ಹೊರಟಾಗ ಅದನ್ನು ಒಂಬತ್ಕೆರೆಯವರು ತೀವ್ರವಾಗಿ ವಿರೋಧಿಸಿದ್ದರು. ಇದು ದೇಶದ ಪ್ರಜೆಗಳ ಖಾಸಗಿತನದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಎನ್‌ಪಿಆರ್‌ಗೆ ಕಾರಣವಾಗುತ್ತದೆ ಎಂದು ಪ್ರತಿಪಾದಿಸಿದ್ದರು. ಆಗ ಸುಪ್ರೀಂ ಕೋರ್ಟ್ ಆಧಾರ್ ಕಡ್ಡಾಯ ತೆಗೆಯಬೇಕೆಂದು ಸೂಚಿಸಿತ್ತು. ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ ವೇಳೆ ಸೈನ್ಯವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದನ್ನು ವಿರೋಧಿಸಿ, ಸೈನ್ಯದ ಹೆಸರಲ್ಲಿ ಮತ ಕೇಳುವುದನ್ನು ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 150ಕ್ಕೂ ಹೆಚ್ಚು ಗಣ್ಯರಲ್ಲಿ ಎಸ್.ಜಿ ಒಂಬತ್ಕೆರೆಯವರು ಒಬ್ಬರಾಗಿದ್ದರು.

ರಟ್ಟಹಳ್ಳಿಯಲ್ಲಿ ಗಿಡಮರ ಬೆಳೆಸುವ ಪ್ರಚಾರಾಂದೋನ ಆರಂಭಿಸಿದ ಇವರು, ಚಾಮುಂಡಿ ಬೆಟ್ಟದಲ್ಲಿ ಮರಗಳನ್ನು ಉಳಿಸಲು ಹೋರಾಡಿದ್ದಾರೆ. ಚಾಮಲಪುರ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯ ವಿರುದ್ಧ ನಿರಂತರ ಪ್ರತಿಭಟನೆಗಳನ್ನು ನಡೆಸಿದರು. ಪರಿಸರ ಸಂಬಂಧದ ಹಲವು ವೇದಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಮೈಸೂರು ಹೆರಿಟೇಜ್ ಕಮಿಟಿ ಮತ್ತು ಮೈಸೂರಿನ ಗ್ರಾಹಕ ವೇದಿಕೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಮಾನವ ಹಕ್ಕುಗಳ ಪರವಾಗಿ ಹೋರಾಡುತ್ತಿರುವ ಅವರು ದೇಶದ್ರೋಹದ ಕಾನೂನಿನ ದುರ್ಬಳಕೆ ವಿರೋಧಿಸಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಸೈನ್ಯದ ಹಿನ್ನೆಲೆಯಿರುವವರು ಆರಾಮಾಗಿರಲು ಬಯಸುತ್ತಾರೆಯೇ ಹೊರತು ಸಾಮಾಜಿಕ ಕಳಕಳಿ ಹೊಂದಿರುವುದಿಲ್ಲ. ಆದರೆ ಇವರು ಮಾತ್ರ ಭಿನ್ನವಾಗಿ ನಿಲ್ಲುತ್ತಾರೆ ಮತ್ತು ಸದಾ ಸಮಾಜದ ಪರ ಚಿಂತಿಸುತ್ತಾರೆ ಎಂದು ಪಿಯುಸಿಲ್‌ನ ಹಿರಿಯ ಹೋರಾಟಗಾರರಾದ ಡಾ.ವಿ ಲಕ್ಷ್ಮೀನಾರಾಯಣ್ ಹೇಳುತ್ತಾರೆ.

ಅವರು ಪಿಯುಸಿಎಲ್‌ನ ಅಜೀವ ಸದಸ್ಯರಾಗಿದ್ದಾರೆ. ಎಲ್ಲಾ ಜೀವಪರ-ಜನಪರ ಮತ್ತು ಪರಿಸರ ಉಳಿವಿನ ಹೋರಾಟದಲ್ಲಿ ಅವರು ಮುಂದಿರುತ್ತಾರೆ. ದೇಶಾದ್ಯಂತ ಎಡಪಕ್ಷಗಳು ಒಗ್ಗಟ್ಟಾಗಬೇಕು ಎಂಬ ಪ್ರಯತ್ನ ನಡೆಸಿದ್ದ ಅವರು ದೆಹಲಿಯಲ್ಲಿ ಸಮಾವೇಶವನ್ನು ನಡೆಸಿದ್ದರು. ಆಧಾರ್ ಕಾರ್ಡ್ ಕಡ್ಡಾಯ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಧಾ ಪಾಟ್ಕರ್‌ರವರ ಜೊತೆಗೂಡಿ ನರ್ಮದಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿದ್ದ ಅವರು ಮೇಧಾ ಪಾಟ್ಕರ್‌ರವರನ್ನು ಮೈಸೂರಿಗೂ ಕರೆಸಿ ಜಾಗೃತಿ ಕಾರ್ಯಕ್ರಮ ನಡೆಸಿದ್ದರು.

ಸದ್ಯ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದೆ. “ದೇಶದ್ರೋಹ ಕಾಯ್ದೆ ತೀವ್ರ ದುರ್ಬಳಕೆಯಾಗುತ್ತಿದೆ. ಬಹಳ ಹಿಂದೆಯೇ ನಾವು ರದ್ದುಪಡಿಸಿದ ಐಟಿ ಕಾಯ್ದೆ ಸೆಕ್ಷನ್ 66ಎ ಅಡಿಯಲ್ಲಿ ಈಗಲೂ ಪೊಲೀಸರು ಕೇಸು ದಾಖಲಿಸುತ್ತಿದ್ದಾರೆ. ಇದು ಒಬ್ಬ ಅತ್ಯುತ್ಸಾಹಿ ಬಡಗಿಗೆ ಮರದ ತುಂಡು ಕಡಿಯಲು ಹೇಳಿದರೆ ಇಡೀ ಕಾಡು ಕಡಿದಂತೆ. ತಮಗಾಗದವರನ್ನು ಹತ್ತಿಕ್ಕಲು, ತಮ್ಮ ವಿರುದ್ಧದ ದನಿಯನ್ನು ಅಡಗಿಸಲು ಇಂತಹ ಕಾಯ್ದೆಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಯಾವುದೋ ಹಳ್ಳಿಯ ಮೂಲೆಯಲ್ಲಿ ತನಗಾಗದ ವ್ಯಕ್ತಿಯೊಬ್ಬನನ್ನು ಮಟ್ಟಹಾಕಲು ಪೊಲೀಸ್ ಅಧಿಕಾರಿಯೊಬ್ಬ ಈ ಕೇಸು ಹಾಕಿ ಒಳಗೆ ತಳ್ಳಬಹುದಲ್ಲವೇ? ಎಲ್ಲಕ್ಕಿಂತ ಹೆಚ್ಚಾಗಿ ದೇಶದ್ರೋಹದ ಆರೋಪಗಳು ಸಾಬೀತಾಗುವುದು ಬಹಳ ಕಡಿಮೆ. ಈ ಎಲ್ಲ ಅಂಶಗಳನ್ನು ಸರ್ಕಾರ ಪರಿಗಣಿಸಿ ತನ್ನ ಅಭಿಪ್ರಾಯ ತಿಳಿಸಬೇಕು” ಎಂದು ಕೋರ್ಟ್ ಸೂಚಿಸಿದೆ.

ಹೀಗೆ ಮರ ಉಳಿಸುವುದರಿಂದ ಆರಂಭಿಸಿ, ದೇಶದ್ರೋಹ ಕಾನೂನು ರದ್ದಾಗಬೇಕು ಎನ್ನುವರೆಗೂ ಹತ್ತ ಹಲವು ವಿಷಯಗಳಲ್ಲಿ ವೊಂಬತ್ಕೆರೆಯವರು ಹೋರಾಟನಿರತರಾಗಿದ್ದಾರೆ. ಮೈಸೂರಿನಲ್ಲೇ ನೆಲೆಸಿರುವ ಅವರು ಎಲೆಮರೆಕಾಯಿಯಂತೆ ಬಹಳ ಜನಕ್ಕೆ ಅಪರಿಚಿತರೆಂದೇ ಹೇಳಬಹುದು. ಆದರೆ ಅವರ ವಯಕ್ತಿಯ ಬದುಕಿನ ಬಗ್ಗೆಯಾಗಲಿ, ಹೋರಾಟದ ಬಗ್ಗೆಯಾಗಲಿ ಕೇಳಿದರೆ ನನಗಿಂತ ಜನರ ನೆಮ್ಮದಿಯ ಜೀವನ ಮುಖ್ಯ. ಆ ಕುರಿತು ಹೆಚ್ಚು ಗಮನ ನೀಡೋಣ ಎನ್ನುತ್ತಾರೆ…


ಇದನ್ನೂ ಓದಿ: ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...