Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ ಎಂದು ಸಿಜೆಐ ಎನ್.ವಿ ರಮಣ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದವರು. ರಾಷ್ಟ್ರದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅನೇಕ ಯುದ್ಧಗಳಲ್ಲಿ ಭಾಗವಹಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ”. ಇವು ಮೈಸೂರಿನಲ್ಲಿ ನೆಲೆಸಿರುವ ನಿವೃತ್ತ ಮೇಜರ್ ಜನರಲ್ ಎಸ್.ಜಿ ಒಂಬತ್ಕೆರೆಯವರ ಕುರಿತು ಭಾರತದ ಮುಖ್ಯ ನ್ಯಾಯಾಧೀಶರಾದ ಎನ್‌.ವಿ ರಮಣರವರು ಆಡಿದ ಮಾತುಗಳು..

ದೇಶದ್ರೋಹ ಕಾನೂನಿನ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಭಾರತದ ಸುಪ್ರೀಂ ಕೋರ್ಟ್ ಸಹ “ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಪಳಯುಳಿಕೆ ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ನಾವು ಇದರ ಸಿಂಧುತ್ವವನ್ನು ಪರಿಶೀಲಿಸುತ್ತೇವೆ” ಎಂದು ನುಡಿದಿದೆ. ಇಂತಹ ಮಹತ್ವದ ಚರ್ಚೆಗೆ ಕಾರಣರಾದವರು ಛಲಬಿಡದ ಹೋರಾಟಗಾರರಾದ ಎಸ್.ಜಿ ಒಂಬತ್ಕೆರೆ… ಏಕೆಂದರೆ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅವರು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಜೊತೆಗೂಡಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸುಪ್ರೀಂ ಪುರಸ್ಕರಿಸಿದ್ದು ಅದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಎಸ್. ಸುಧೀರ್ ಜಿ ಒಂಬತ್ಕೆರೆಯವರು (79) ಬಹಳ ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದವರು. ಮದ್ರಾಸ್‌ ಐಐಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿರುವ ಅವರು ಭಾರತದ ಅತ್ಯಂತ ಎತ್ತರದ ಪ್ರದೇಶದಲ್ಲಿ ಸೇತುವೆ ನಿರ್ಮಿಸುವ ಮೂಲಕ ಪ್ರಶಸ್ತಿ ಸಹ ಪಡೆದಿದ್ದಾರೆ. ದೆಹಲಿಯ ಸೈನ್ಯದ ಶಿಸ್ತು ಮತ್ತು ಜಾಗರೂಕತೆ ವಿಭಾಗದ ಹೆಚ್ಚುವರಿ ಡಿಜಿಯಾಗಿ ನಿವೃತ್ತನಾದ ನಂತರ 30 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿರುವ ಅವರು ಪ್ರಖರ ಚಿಂತಕರು ಮತ್ತು ದಿಟ್ಟ ಹೋರಾಟಗಾರರು ಎನ್ನುತ್ತಾರೆ ಅವರ ಸ್ನೇಹಿತರು ಮತ್ತು ಒಡನಾಡಿಯಾದ ಡಾ.ವಿ ಲಕ್ಷ್ಮೀನಾರಾಯಣ್.

ಸರ್ಕಾರಿ ಸೌಲಭ್ಯ ಪಡೆಯಲು, ಇತರ ಸೇವೆಗಳಿಗೆ ಆಧಾರ್ ಕಡ್ಡಾಯಗೊಳಿಸಲು ಸರ್ಕಾರ ಹೊರಟಾಗ ಅದನ್ನು ಒಂಬತ್ಕೆರೆಯವರು ತೀವ್ರವಾಗಿ ವಿರೋಧಿಸಿದ್ದರು. ಇದು ದೇಶದ ಪ್ರಜೆಗಳ ಖಾಸಗಿತನದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಎನ್‌ಪಿಆರ್‌ಗೆ ಕಾರಣವಾಗುತ್ತದೆ ಎಂದು ಪ್ರತಿಪಾದಿಸಿದ್ದರು. ಆಗ ಸುಪ್ರೀಂ ಕೋರ್ಟ್ ಆಧಾರ್ ಕಡ್ಡಾಯ ತೆಗೆಯಬೇಕೆಂದು ಸೂಚಿಸಿತ್ತು. ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ ವೇಳೆ ಸೈನ್ಯವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದನ್ನು ವಿರೋಧಿಸಿ, ಸೈನ್ಯದ ಹೆಸರಲ್ಲಿ ಮತ ಕೇಳುವುದನ್ನು ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 150ಕ್ಕೂ ಹೆಚ್ಚು ಗಣ್ಯರಲ್ಲಿ ಎಸ್.ಜಿ ಒಂಬತ್ಕೆರೆಯವರು ಒಬ್ಬರಾಗಿದ್ದರು.

ರಟ್ಟಹಳ್ಳಿಯಲ್ಲಿ ಗಿಡಮರ ಬೆಳೆಸುವ ಪ್ರಚಾರಾಂದೋನ ಆರಂಭಿಸಿದ ಇವರು, ಚಾಮುಂಡಿ ಬೆಟ್ಟದಲ್ಲಿ ಮರಗಳನ್ನು ಉಳಿಸಲು ಹೋರಾಡಿದ್ದಾರೆ. ಚಾಮಲಪುರ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯ ವಿರುದ್ಧ ನಿರಂತರ ಪ್ರತಿಭಟನೆಗಳನ್ನು ನಡೆಸಿದರು. ಪರಿಸರ ಸಂಬಂಧದ ಹಲವು ವೇದಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಮೈಸೂರು ಹೆರಿಟೇಜ್ ಕಮಿಟಿ ಮತ್ತು ಮೈಸೂರಿನ ಗ್ರಾಹಕ ವೇದಿಕೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಮಾನವ ಹಕ್ಕುಗಳ ಪರವಾಗಿ ಹೋರಾಡುತ್ತಿರುವ ಅವರು ದೇಶದ್ರೋಹದ ಕಾನೂನಿನ ದುರ್ಬಳಕೆ ವಿರೋಧಿಸಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಸೈನ್ಯದ ಹಿನ್ನೆಲೆಯಿರುವವರು ಆರಾಮಾಗಿರಲು ಬಯಸುತ್ತಾರೆಯೇ ಹೊರತು ಸಾಮಾಜಿಕ ಕಳಕಳಿ ಹೊಂದಿರುವುದಿಲ್ಲ. ಆದರೆ ಇವರು ಮಾತ್ರ ಭಿನ್ನವಾಗಿ ನಿಲ್ಲುತ್ತಾರೆ ಮತ್ತು ಸದಾ ಸಮಾಜದ ಪರ ಚಿಂತಿಸುತ್ತಾರೆ ಎಂದು ಪಿಯುಸಿಲ್‌ನ ಹಿರಿಯ ಹೋರಾಟಗಾರರಾದ ಡಾ.ವಿ ಲಕ್ಷ್ಮೀನಾರಾಯಣ್ ಹೇಳುತ್ತಾರೆ.

ಅವರು ಪಿಯುಸಿಎಲ್‌ನ ಅಜೀವ ಸದಸ್ಯರಾಗಿದ್ದಾರೆ. ಎಲ್ಲಾ ಜೀವಪರ-ಜನಪರ ಮತ್ತು ಪರಿಸರ ಉಳಿವಿನ ಹೋರಾಟದಲ್ಲಿ ಅವರು ಮುಂದಿರುತ್ತಾರೆ. ದೇಶಾದ್ಯಂತ ಎಡಪಕ್ಷಗಳು ಒಗ್ಗಟ್ಟಾಗಬೇಕು ಎಂಬ ಪ್ರಯತ್ನ ನಡೆಸಿದ್ದ ಅವರು ದೆಹಲಿಯಲ್ಲಿ ಸಮಾವೇಶವನ್ನು ನಡೆಸಿದ್ದರು. ಆಧಾರ್ ಕಾರ್ಡ್ ಕಡ್ಡಾಯ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಧಾ ಪಾಟ್ಕರ್‌ರವರ ಜೊತೆಗೂಡಿ ನರ್ಮದಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿದ್ದ ಅವರು ಮೇಧಾ ಪಾಟ್ಕರ್‌ರವರನ್ನು ಮೈಸೂರಿಗೂ ಕರೆಸಿ ಜಾಗೃತಿ ಕಾರ್ಯಕ್ರಮ ನಡೆಸಿದ್ದರು.

ಸದ್ಯ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದೆ. “ದೇಶದ್ರೋಹ ಕಾಯ್ದೆ ತೀವ್ರ ದುರ್ಬಳಕೆಯಾಗುತ್ತಿದೆ. ಬಹಳ ಹಿಂದೆಯೇ ನಾವು ರದ್ದುಪಡಿಸಿದ ಐಟಿ ಕಾಯ್ದೆ ಸೆಕ್ಷನ್ 66ಎ ಅಡಿಯಲ್ಲಿ ಈಗಲೂ ಪೊಲೀಸರು ಕೇಸು ದಾಖಲಿಸುತ್ತಿದ್ದಾರೆ. ಇದು ಒಬ್ಬ ಅತ್ಯುತ್ಸಾಹಿ ಬಡಗಿಗೆ ಮರದ ತುಂಡು ಕಡಿಯಲು ಹೇಳಿದರೆ ಇಡೀ ಕಾಡು ಕಡಿದಂತೆ. ತಮಗಾಗದವರನ್ನು ಹತ್ತಿಕ್ಕಲು, ತಮ್ಮ ವಿರುದ್ಧದ ದನಿಯನ್ನು ಅಡಗಿಸಲು ಇಂತಹ ಕಾಯ್ದೆಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಯಾವುದೋ ಹಳ್ಳಿಯ ಮೂಲೆಯಲ್ಲಿ ತನಗಾಗದ ವ್ಯಕ್ತಿಯೊಬ್ಬನನ್ನು ಮಟ್ಟಹಾಕಲು ಪೊಲೀಸ್ ಅಧಿಕಾರಿಯೊಬ್ಬ ಈ ಕೇಸು ಹಾಕಿ ಒಳಗೆ ತಳ್ಳಬಹುದಲ್ಲವೇ? ಎಲ್ಲಕ್ಕಿಂತ ಹೆಚ್ಚಾಗಿ ದೇಶದ್ರೋಹದ ಆರೋಪಗಳು ಸಾಬೀತಾಗುವುದು ಬಹಳ ಕಡಿಮೆ. ಈ ಎಲ್ಲ ಅಂಶಗಳನ್ನು ಸರ್ಕಾರ ಪರಿಗಣಿಸಿ ತನ್ನ ಅಭಿಪ್ರಾಯ ತಿಳಿಸಬೇಕು” ಎಂದು ಕೋರ್ಟ್ ಸೂಚಿಸಿದೆ.

ಹೀಗೆ ಮರ ಉಳಿಸುವುದರಿಂದ ಆರಂಭಿಸಿ, ದೇಶದ್ರೋಹ ಕಾನೂನು ರದ್ದಾಗಬೇಕು ಎನ್ನುವರೆಗೂ ಹತ್ತ ಹಲವು ವಿಷಯಗಳಲ್ಲಿ ವೊಂಬತ್ಕೆರೆಯವರು ಹೋರಾಟನಿರತರಾಗಿದ್ದಾರೆ. ಮೈಸೂರಿನಲ್ಲೇ ನೆಲೆಸಿರುವ ಅವರು ಎಲೆಮರೆಕಾಯಿಯಂತೆ ಬಹಳ ಜನಕ್ಕೆ ಅಪರಿಚಿತರೆಂದೇ ಹೇಳಬಹುದು. ಆದರೆ ಅವರ ವಯಕ್ತಿಯ ಬದುಕಿನ ಬಗ್ಗೆಯಾಗಲಿ, ಹೋರಾಟದ ಬಗ್ಗೆಯಾಗಲಿ ಕೇಳಿದರೆ ನನಗಿಂತ ಜನರ ನೆಮ್ಮದಿಯ ಜೀವನ ಮುಖ್ಯ. ಆ ಕುರಿತು ಹೆಚ್ಚು ಗಮನ ನೀಡೋಣ ಎನ್ನುತ್ತಾರೆ…


ಇದನ್ನೂ ಓದಿ: ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...