HomeUncategorizedಬಿಹಾರ ಸಿಎಂ ಯಾರು? | ಇಂದು ತೀರ್ಮಾನ ಕೈಗೊಳ್ಳಿರುವ ಎನ್‌ಡಿಎ!

ಬಿಹಾರ ಸಿಎಂ ಯಾರು? | ಇಂದು ತೀರ್ಮಾನ ಕೈಗೊಳ್ಳಿರುವ ಎನ್‌ಡಿಎ!

ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ತೋರಿದ ಕಳಪೆ ಸಾಧನೆಯಿಂದಾಗಿ, ಸರ್ಕಾರದಲ್ಲಿ ನಿತೀಶ್ ಕುಮಾರ್ ಪಾತ್ರದ ಬಗ್ಗೆ ಊಹಾಪೋಹಗಳು ಹಬ್ಬಿದ್ದವು

- Advertisement -
- Advertisement -

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಯಕರು ಭಾನುವಾರ ಮಧ್ಯಾಹ್ನ 12.30 ಕ್ಕೆ ಸಭೆ ನಡೆಸಿ ಬಿಹಾರದಲ್ಲಿ ತನ್ನ ನಾಯಕನನ್ನು ಔಪಚಾರಿಕವಾಗಿ ಆಯ್ಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಅನೌಪಚಾರಿಕ ಸಂವಾದಕ್ಕಾಗಿ ಎನ್‌ಡಿಎ ನಾಯಕರು ಶುಕ್ರವಾರ ನಿತೀಶ್‌ ಕುಮಾರ್ ನಿವಾಸದಲ್ಲಿ ಸೇರಿದ್ದರು. ನವೆಂಬರ್ 10 ರಂದು ಚುನಾವಣಾ ಫಲಿತಾಂಶಗಳನ್ನು ಘೋಷಿಸಿದ ನಂತರ ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲು.

“ನಾವು ಒಟ್ಟಿಗೆ ಕುಳಿತು ಎಲ್ಲಾ ನಾಲ್ಕು ಮೈತ್ರಿ ಒಕ್ಕೂಟದ ಚುನಾಯಿತ ಶಾಸಕರ ಸಭೆಯನ್ನು ನವೆಂಬರ್ 15 ರಂದು ಮಧ್ಯಾಹ್ನ 12.30 ಕ್ಕೆ ಕರೆಯಲು ನಿರ್ಧರಿಸಿದ್ದೇವೆ. ಆ ಸಭೆಯಲ್ಲಿ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಎನ್‌ಡಿಎ ಮುಖಂಡರ ಸಭೆ ಮತ್ತು ಚುನಾವಣೆಯ ನಂತರ, ನಾವು ಸರ್ಕಾರ ರಚಿಸುತ್ತೇವೆ”ಎಂದು ನಿತೀಶ್‌ ಕುಮಾರ್ ಹೇಳಿದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ತಪ್ಪು ಮಾಹಿತಿ ನೀಡುವ 3 ಲಕ್ಷ ಟ್ವೀಟ್‌ಗಳನ್ನು ನಿರ್ಬಂಧಿಸಿದ ಟ್ವಿಟರ್‌!

ಭಾರತೀಯ ಜನತಾ ಪಕ್ಷ (ಬಿಜೆಪಿ), ಜನತಾದಳ (ಯುನೈಟೆಡ್), ಹಿಂದೂಸ್ತಾನಿ ಏವಂ ಮೋರ್ಚಾ-ಸೆಕ್ಯುಲರ್ (ಎಚ್‌ಎಎಂ) ಮತ್ತು ವಿಕಾಸ್‌ಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಒಳಗೊಂಡ ಎನ್‌ಡಿಎ, 243 ಸದಸ್ಯರ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದಿದೆ.

ಬಿಜೆಪಿ ಮಾತ್ರ 74 ಸ್ಥಾನಗಳಲ್ಲಿ ಜಯಗಳಿಸಿದೆ. 2015 ರಲ್ಲಿ 71 ಶಾಸಕರನ್ನು ಹೊಂದಿದ್ದ ಜೆಡಿಯು 43 ಸ್ಥಾನಗಳಿಗೆ ಸಂತೃಪ್ತಿಪಟ್ಟುಕೊಂಡಿದೆ. ಎಚ್‌ಎಎಂ-ಎಸ್ ಮತ್ತು ವಿಐಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ತೋರಿದ ಕಳಪೆ ಸಾಧನೆಯಿಂದಾಗಿ, ಸರ್ಕಾರದಲ್ಲಿ ನಿತೀಶ್ ಕುಮಾರ್ ಪಾತ್ರದ ಬಗ್ಗೆ ಊಹಾಪೋಹಗಳು ಹಬ್ಬಿದ್ದವು. ಆದರೆ, ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಭರವಸೆಯನ್ನು ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಹಲವಾರು ಸಂದರ್ಭಗಳಲ್ಲಿ ಖಚಿತಪಡಿಸಿದ್ದಾರೆ.

ಭಾನುವಾರದ ಸಭೆ ನಿತೀಶ್ ಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಮತ್ತೊಮ್ಮೆ ಆಯ್ಕೆ ಮಾಡಲು ಮತ್ತು ಪ್ರಮಾಣವಚನ ಸಮಾರಂಭದ ದಿನಾಂಕವನ್ನು ನಿರ್ಧರಿಸಲು ಒಂದು ಘಟನೆಯಾಗಿರಬಹುದು. ಸಭೆಯಲ್ಲಿ ಮೈತ್ರಿಕೂಟಕ್ಕೆ ಸಂಬಂಧಿಸಿದ ನಿರ್ಣಾಯಕ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ನೆರೆ ಪರಿಹಾರ ಕೊಡದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ – ಕರವೇ ಟಿ.ಎ.ನಾರಾಯಣಗೌಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...