HomeUncategorizedಬಿಹಾರ ಸಿಎಂ ಯಾರು? | ಇಂದು ತೀರ್ಮಾನ ಕೈಗೊಳ್ಳಿರುವ ಎನ್‌ಡಿಎ!

ಬಿಹಾರ ಸಿಎಂ ಯಾರು? | ಇಂದು ತೀರ್ಮಾನ ಕೈಗೊಳ್ಳಿರುವ ಎನ್‌ಡಿಎ!

ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ತೋರಿದ ಕಳಪೆ ಸಾಧನೆಯಿಂದಾಗಿ, ಸರ್ಕಾರದಲ್ಲಿ ನಿತೀಶ್ ಕುಮಾರ್ ಪಾತ್ರದ ಬಗ್ಗೆ ಊಹಾಪೋಹಗಳು ಹಬ್ಬಿದ್ದವು

- Advertisement -
- Advertisement -

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಯಕರು ಭಾನುವಾರ ಮಧ್ಯಾಹ್ನ 12.30 ಕ್ಕೆ ಸಭೆ ನಡೆಸಿ ಬಿಹಾರದಲ್ಲಿ ತನ್ನ ನಾಯಕನನ್ನು ಔಪಚಾರಿಕವಾಗಿ ಆಯ್ಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಅನೌಪಚಾರಿಕ ಸಂವಾದಕ್ಕಾಗಿ ಎನ್‌ಡಿಎ ನಾಯಕರು ಶುಕ್ರವಾರ ನಿತೀಶ್‌ ಕುಮಾರ್ ನಿವಾಸದಲ್ಲಿ ಸೇರಿದ್ದರು. ನವೆಂಬರ್ 10 ರಂದು ಚುನಾವಣಾ ಫಲಿತಾಂಶಗಳನ್ನು ಘೋಷಿಸಿದ ನಂತರ ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲು.

“ನಾವು ಒಟ್ಟಿಗೆ ಕುಳಿತು ಎಲ್ಲಾ ನಾಲ್ಕು ಮೈತ್ರಿ ಒಕ್ಕೂಟದ ಚುನಾಯಿತ ಶಾಸಕರ ಸಭೆಯನ್ನು ನವೆಂಬರ್ 15 ರಂದು ಮಧ್ಯಾಹ್ನ 12.30 ಕ್ಕೆ ಕರೆಯಲು ನಿರ್ಧರಿಸಿದ್ದೇವೆ. ಆ ಸಭೆಯಲ್ಲಿ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಎನ್‌ಡಿಎ ಮುಖಂಡರ ಸಭೆ ಮತ್ತು ಚುನಾವಣೆಯ ನಂತರ, ನಾವು ಸರ್ಕಾರ ರಚಿಸುತ್ತೇವೆ”ಎಂದು ನಿತೀಶ್‌ ಕುಮಾರ್ ಹೇಳಿದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ತಪ್ಪು ಮಾಹಿತಿ ನೀಡುವ 3 ಲಕ್ಷ ಟ್ವೀಟ್‌ಗಳನ್ನು ನಿರ್ಬಂಧಿಸಿದ ಟ್ವಿಟರ್‌!

ಭಾರತೀಯ ಜನತಾ ಪಕ್ಷ (ಬಿಜೆಪಿ), ಜನತಾದಳ (ಯುನೈಟೆಡ್), ಹಿಂದೂಸ್ತಾನಿ ಏವಂ ಮೋರ್ಚಾ-ಸೆಕ್ಯುಲರ್ (ಎಚ್‌ಎಎಂ) ಮತ್ತು ವಿಕಾಸ್‌ಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಒಳಗೊಂಡ ಎನ್‌ಡಿಎ, 243 ಸದಸ್ಯರ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದಿದೆ.

ಬಿಜೆಪಿ ಮಾತ್ರ 74 ಸ್ಥಾನಗಳಲ್ಲಿ ಜಯಗಳಿಸಿದೆ. 2015 ರಲ್ಲಿ 71 ಶಾಸಕರನ್ನು ಹೊಂದಿದ್ದ ಜೆಡಿಯು 43 ಸ್ಥಾನಗಳಿಗೆ ಸಂತೃಪ್ತಿಪಟ್ಟುಕೊಂಡಿದೆ. ಎಚ್‌ಎಎಂ-ಎಸ್ ಮತ್ತು ವಿಐಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ತೋರಿದ ಕಳಪೆ ಸಾಧನೆಯಿಂದಾಗಿ, ಸರ್ಕಾರದಲ್ಲಿ ನಿತೀಶ್ ಕುಮಾರ್ ಪಾತ್ರದ ಬಗ್ಗೆ ಊಹಾಪೋಹಗಳು ಹಬ್ಬಿದ್ದವು. ಆದರೆ, ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಭರವಸೆಯನ್ನು ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಹಲವಾರು ಸಂದರ್ಭಗಳಲ್ಲಿ ಖಚಿತಪಡಿಸಿದ್ದಾರೆ.

ಭಾನುವಾರದ ಸಭೆ ನಿತೀಶ್ ಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಮತ್ತೊಮ್ಮೆ ಆಯ್ಕೆ ಮಾಡಲು ಮತ್ತು ಪ್ರಮಾಣವಚನ ಸಮಾರಂಭದ ದಿನಾಂಕವನ್ನು ನಿರ್ಧರಿಸಲು ಒಂದು ಘಟನೆಯಾಗಿರಬಹುದು. ಸಭೆಯಲ್ಲಿ ಮೈತ್ರಿಕೂಟಕ್ಕೆ ಸಂಬಂಧಿಸಿದ ನಿರ್ಣಾಯಕ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ನೆರೆ ಪರಿಹಾರ ಕೊಡದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ – ಕರವೇ ಟಿ.ಎ.ನಾರಾಯಣಗೌಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...