Homeಮುಖಪುಟಎಂಎಸ್ಎಂಇಗಳಿಗೆ ಸಾಲ ನೀಡುವವರು ಮತ್ತು ಸಾಲಗಾರರು ಯಾರು: ಪಿ. ಚಿದಂಬರಂ ವ್ಯಂಗ್ಯ

ಎಂಎಸ್ಎಂಇಗಳಿಗೆ ಸಾಲ ನೀಡುವವರು ಮತ್ತು ಸಾಲಗಾರರು ಯಾರು: ಪಿ. ಚಿದಂಬರಂ ವ್ಯಂಗ್ಯ

- Advertisement -
- Advertisement -

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಯ (ಎಂಎಸ್ಎಂಇಗಳಿಗೆ) ಕುರಿತು ಇಬ್ಬರು ಕೇಂದ್ರ ಸಚಿವರ ವಿರೋಧಾಭಾಸದ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಪೋಸ್ಟ್ ಮಾಡಿದ ಎರಡು ಟ್ವೀಟ್‌ಗಳಲ್ಲಿ ಮೊದಲನೆಯದಾಗಿ, ಎಂಎಸ್‌ಎಂಇ ಸಚಿವ ನಿತಿನ್ ಗಡ್ಕರಿ ಸುದ್ದಿ ಚಾನೆಲ್ ಸಿಎನ್‌ಬಿಸಿ-ಟಿವಿ 18 ಗೆ ನೀಡಿದ ಸಂದರ್ಶನದಲ್ಲಿ ಎಂಎಸ್‌ಎಂಇಗಳಿಗೆ 5 ಲಕ್ಷ ಕೋಟಿ ರೂಗಳನ್ನು ಸರ್ಕಾರ ನೀಡುತ್ತಿರುವುದಾಗಿ ಹೇಳಿದ್ದಾರೆ. ನಂತರ, 45 ಲಕ್ಷ ಎಂಎಸ್‌ಎಂಇಗಳಿಗೆ ಮೇಲಾಧಾರ ರಹಿತ ಸಾಲದಲ್ಲಿ 3 ಲಕ್ಷ ಕೋಟಿ ರೂ ನೀಡುತ್ತಿರುವದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇವರಿಬ್ಬರಲ್ಲಿ ಯಾರನ್ನು ನಂಬೋಣ ಎಂಬುದು ಚಿದಂಬರಂರವರ ಪ್ರಶ್ನೆಯಾಗಿದೆ.

“ಸರ್ಕಾರಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳು ಎಂಎಸ್ಎಂಇಗಳಿಗೆ ಪಾವತಿಸದ ಬಾಕಿ 5 ಲಕ್ಷ ಕೋಟಿ ರೂ. ಬಾಕಿ ಇದೆ ಎಂದು ಸಚಿವ ಗಡ್ಕರಿ ಹೇಳುತ್ತಾರೆ. 45 ಲಕ್ಷ ಎಂಎಸ್ಎಂಇಗಳಿಗೆ ಮೇಲಾಧಾರ ಉಚಿತ ಸಾಲವನ್ನು 3 ಲಕ್ಷ ಕೋಟಿ ರೂ. ನೀಡುವುದಾಗಿ ಸಚಿವ ಸೀತಾರಾಮನ್ ಹೇಳುತ್ತಾರೆ. ಆದ್ದರಿಂದ, ಸಾಲ ನೀಡುವವರು ಯಾರು ಮತ್ತು ಸಾಲಗಾರ ಯಾರು?!” ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

“ಇಬ್ಬರು ಮಂತ್ರಿಗಳು ಮೊದಲು ತಮ್ಮ ಲೆಕ್ಕಗಳನ್ನು ಇತ್ಯರ್ಥಪಡಿಸಿಕೊಳ್ಳಲಿ ನಂತರ ಸರ್ಕಾರದ ‘ಸಹಾಯ’ ಇಲ್ಲದೆ ಎಂಎಸ್‌ಎಂಇಗಳು ತಮ್ಮನ್ನು ಉಳಿಸಿಕೊಳ್ಳುತ್ತಾರೆ” ಎಂದು ಮಾಜಿ ಹಣಕಾಸು ಸಚಿವರು ವ್ಯಂಗ್ಯವಾಡಿದ್ದಾರೆ.

ಕಳೆದ ವಾರ ಸಚಿವ ಗಡ್ಕರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ಇತರ ಕೈಗಾರಿಕೆಗಳಿಂದ ಎಂಎಸ್‌ಎಂಇಗಳಿಗೆ ನೀಡಬೇಕಿದ್ದ ಬಾಕಿ “ತುಂಬಾ ಹೆಚ್ಚಾಗಿದೆ” ಎಂದಿದ್ದರಲ್ಲದೆ, ಇಂತಹ ಬಾಕಿ ಮೊತ್ತದ ಪರಿಣಾಮವಾಗಿ ಎಂಎಸ್‌ಎಂಇಗಳು ತನ್ನನ್ನು ಉಳಿಸುಕೊಳ್ಳುವುದಕ್ಕೆ ಹೆಣಗಾಡುತ್ತಿವೆ ಎಂದು ಹೇಳಿದ್ದರು.

ಚಿದಂಬರಂ ಅವರ ಟ್ವೀಟ್‌ಗಳು ಎರಡು ಸಚಿವರ ಹೇಳಿಕೆಗಳಲ್ಲಿನ ವಿರೋಧಾಭಾಸವನ್ನು ಸೂಚಿಸುತ್ತಿದೆ.

ಕಳೆದ ಎರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್‌ನ ವಿತರಣೆಯನ್ನು ವಿವರಿಸುತ್ತಾ ನಿರ್ಮಲಾ ಸೀತಾರಾಮನ್ ಹಲವಾರು ಪ್ರಕಟಣೆಗಳನ್ನು ಮಾಡಿದ್ದಾರೆ.


ಓದಿ: ಮೋದಿಯವರ 20 ಲಕ್ಷ ಕೋಟಿ ರೂ ಪ್ಯಾಕೇಜ್‌ನಲ್ಲಿ 65% ಈ ಮೊದಲೇ ಘೋಷಿಸಿದ್ದು ಸೇರಿದೆ!


ವಿಡಿಯೋ ನೋಡಿ: ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...