Homeಮುಖಪುಟಎಂಎಸ್ಎಂಇಗಳಿಗೆ ಸಾಲ ನೀಡುವವರು ಮತ್ತು ಸಾಲಗಾರರು ಯಾರು: ಪಿ. ಚಿದಂಬರಂ ವ್ಯಂಗ್ಯ

ಎಂಎಸ್ಎಂಇಗಳಿಗೆ ಸಾಲ ನೀಡುವವರು ಮತ್ತು ಸಾಲಗಾರರು ಯಾರು: ಪಿ. ಚಿದಂಬರಂ ವ್ಯಂಗ್ಯ

- Advertisement -
- Advertisement -

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಯ (ಎಂಎಸ್ಎಂಇಗಳಿಗೆ) ಕುರಿತು ಇಬ್ಬರು ಕೇಂದ್ರ ಸಚಿವರ ವಿರೋಧಾಭಾಸದ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಪೋಸ್ಟ್ ಮಾಡಿದ ಎರಡು ಟ್ವೀಟ್‌ಗಳಲ್ಲಿ ಮೊದಲನೆಯದಾಗಿ, ಎಂಎಸ್‌ಎಂಇ ಸಚಿವ ನಿತಿನ್ ಗಡ್ಕರಿ ಸುದ್ದಿ ಚಾನೆಲ್ ಸಿಎನ್‌ಬಿಸಿ-ಟಿವಿ 18 ಗೆ ನೀಡಿದ ಸಂದರ್ಶನದಲ್ಲಿ ಎಂಎಸ್‌ಎಂಇಗಳಿಗೆ 5 ಲಕ್ಷ ಕೋಟಿ ರೂಗಳನ್ನು ಸರ್ಕಾರ ನೀಡುತ್ತಿರುವುದಾಗಿ ಹೇಳಿದ್ದಾರೆ. ನಂತರ, 45 ಲಕ್ಷ ಎಂಎಸ್‌ಎಂಇಗಳಿಗೆ ಮೇಲಾಧಾರ ರಹಿತ ಸಾಲದಲ್ಲಿ 3 ಲಕ್ಷ ಕೋಟಿ ರೂ ನೀಡುತ್ತಿರುವದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇವರಿಬ್ಬರಲ್ಲಿ ಯಾರನ್ನು ನಂಬೋಣ ಎಂಬುದು ಚಿದಂಬರಂರವರ ಪ್ರಶ್ನೆಯಾಗಿದೆ.

“ಸರ್ಕಾರಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳು ಎಂಎಸ್ಎಂಇಗಳಿಗೆ ಪಾವತಿಸದ ಬಾಕಿ 5 ಲಕ್ಷ ಕೋಟಿ ರೂ. ಬಾಕಿ ಇದೆ ಎಂದು ಸಚಿವ ಗಡ್ಕರಿ ಹೇಳುತ್ತಾರೆ. 45 ಲಕ್ಷ ಎಂಎಸ್ಎಂಇಗಳಿಗೆ ಮೇಲಾಧಾರ ಉಚಿತ ಸಾಲವನ್ನು 3 ಲಕ್ಷ ಕೋಟಿ ರೂ. ನೀಡುವುದಾಗಿ ಸಚಿವ ಸೀತಾರಾಮನ್ ಹೇಳುತ್ತಾರೆ. ಆದ್ದರಿಂದ, ಸಾಲ ನೀಡುವವರು ಯಾರು ಮತ್ತು ಸಾಲಗಾರ ಯಾರು?!” ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

“ಇಬ್ಬರು ಮಂತ್ರಿಗಳು ಮೊದಲು ತಮ್ಮ ಲೆಕ್ಕಗಳನ್ನು ಇತ್ಯರ್ಥಪಡಿಸಿಕೊಳ್ಳಲಿ ನಂತರ ಸರ್ಕಾರದ ‘ಸಹಾಯ’ ಇಲ್ಲದೆ ಎಂಎಸ್‌ಎಂಇಗಳು ತಮ್ಮನ್ನು ಉಳಿಸಿಕೊಳ್ಳುತ್ತಾರೆ” ಎಂದು ಮಾಜಿ ಹಣಕಾಸು ಸಚಿವರು ವ್ಯಂಗ್ಯವಾಡಿದ್ದಾರೆ.

ಕಳೆದ ವಾರ ಸಚಿವ ಗಡ್ಕರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ಇತರ ಕೈಗಾರಿಕೆಗಳಿಂದ ಎಂಎಸ್‌ಎಂಇಗಳಿಗೆ ನೀಡಬೇಕಿದ್ದ ಬಾಕಿ “ತುಂಬಾ ಹೆಚ್ಚಾಗಿದೆ” ಎಂದಿದ್ದರಲ್ಲದೆ, ಇಂತಹ ಬಾಕಿ ಮೊತ್ತದ ಪರಿಣಾಮವಾಗಿ ಎಂಎಸ್‌ಎಂಇಗಳು ತನ್ನನ್ನು ಉಳಿಸುಕೊಳ್ಳುವುದಕ್ಕೆ ಹೆಣಗಾಡುತ್ತಿವೆ ಎಂದು ಹೇಳಿದ್ದರು.

ಚಿದಂಬರಂ ಅವರ ಟ್ವೀಟ್‌ಗಳು ಎರಡು ಸಚಿವರ ಹೇಳಿಕೆಗಳಲ್ಲಿನ ವಿರೋಧಾಭಾಸವನ್ನು ಸೂಚಿಸುತ್ತಿದೆ.

ಕಳೆದ ಎರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್‌ನ ವಿತರಣೆಯನ್ನು ವಿವರಿಸುತ್ತಾ ನಿರ್ಮಲಾ ಸೀತಾರಾಮನ್ ಹಲವಾರು ಪ್ರಕಟಣೆಗಳನ್ನು ಮಾಡಿದ್ದಾರೆ.


ಓದಿ: ಮೋದಿಯವರ 20 ಲಕ್ಷ ಕೋಟಿ ರೂ ಪ್ಯಾಕೇಜ್‌ನಲ್ಲಿ 65% ಈ ಮೊದಲೇ ಘೋಷಿಸಿದ್ದು ಸೇರಿದೆ!


ವಿಡಿಯೋ ನೋಡಿ: ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...