Homeರಾಜಕೀಯಪಿಎಸ್‌ಐ ಪರೀಕ್ಷಾ ಅಕ್ರಮದ ಹಿಂದಿರುವ ಸಚಿವರ್ಯಾರು? ಕಾಂಗ್ರೆಸ್ ಪ್ರಶ್ನೆಗೆ ನಾನಲ್ಲ ಎಂದು ಸಚಿವ ಅಶ್ವಥ್ ನಾರಾಯಣ್

ಪಿಎಸ್‌ಐ ಪರೀಕ್ಷಾ ಅಕ್ರಮದ ಹಿಂದಿರುವ ಸಚಿವರ್ಯಾರು? ಕಾಂಗ್ರೆಸ್ ಪ್ರಶ್ನೆಗೆ ನಾನಲ್ಲ ಎಂದು ಸಚಿವ ಅಶ್ವಥ್ ನಾರಾಯಣ್

ನಾನು ಸಿಎಂ ಆಗಿಬಿಡುತ್ತೇನೆ ಎನ್ನವ ಭಯ ಡಿ.ಕೆ ಶಿವಕುಮಾರ್‌ರವರನ್ನು ಕಾಡುತ್ತಿದೆ. ಒಬ್ಬ ನಾಯಕನ ಬೆಳವಣಿಗೆ ಸಹಿಸದೆ ಹೀಗೆಲ್ಲಾ ಪಿತೂರಿ ಮಾಡುತ್ತಿದ್ದಾರೆ. - ಅಶ್ವಥ್ ನಾರಾಯಣ್

- Advertisement -
- Advertisement -

ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ನಂತರ ಈ ಹಗರಣದಲ್ಲಿ ಸಚಿವರೊಬ್ಬರು ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಉನ್ನತ ಶಿಕ್ಷಣ ಮತ್ತು ಐಟಿಬಿಟಿ ಸಚಿವ ಅಶ್ವಥ್ ನಾರಾಯಣ್‌ರವರ ತಮ್ಮ ಸತೀಶ್‌ರವರು ಮಾಗಡಿಯ ದರ್ಶನ್ ಎಂಬುವವರಿಂದ ಹಣ ಪಡೆದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.

ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, “ನನಗೆ ಬಂದಿರುವ ಮಾಹಿತಿ ಪ್ರಕಾರ ಪಿಎಸ್ಐ ನೇಮಕ ಅಕ್ರಮದಲ್ಲಿ ಮಂತ್ರಿಗಳ ಸಂಬಂಧಿ ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ಆ ಆರೋಪಿಯನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ವೇಳೆ ಆ ಮಂತ್ರಿ ಫೋನ್ ಮಾಡಿ ಅವರನ್ನು ಕಳಿಸುವಂತೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಬದ್ಧತೆ ಇದ್ದರೆ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದು ಬಿಜೆಪಿ ಶಾಸಕರು, ನಾಯಕರು, ಮಂತ್ರಿಗಳಾಗಿರಲಿ, ಕಾಂಗ್ರೆಸ್, ಜೆಡಿಎಸ್ ನವರಾಗಿರಲಿ, ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಂಡ್ಯದ ಬಿಜೆಪಿ ನಾಯಕರೊಬ್ಬರು ನನಗೆ ಕರೆ ಮಾಡಿ ಈ ವಿಚಾರದ ಬಗ್ಗೆ ಮಾತನಾಡಬೇಡಿ, ಅವರು ಮುಂದೆ ಮುಖ್ಯಮಂತ್ರಿ ಆಗುವವರು, ಅವರ ಹೆಸರು ಎಳೆದು ತರಬೇಡಿ, ಮುಚ್ಚಿಹಾಕಿ ಎನ್ನುತ್ತಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

ನನ್ನ ಹೆಸರಿಗೆ ಮಸಿ ಬಳಿಯುವ ಷಡ್ಯಂತ್ರ: ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ

ಈ ಕುರಿತು ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, “ಸೂಕ್ತ ಸಾಕ್ಷಿ ಆಧಾರಗಳಿಲ್ಲದೆ ಈ ರೀತಿ ಆರೋಪ ಮಾಡಿ ನನ್ನ ಹೆಸರಿಗೆ ಮಸಿ ಬಳಿಯುವುದು ಸರಿಯಲ್ಲ” ಎನ್ನುವ ಮೂಲಕ ಆರೋಪಗಳನ್ನು ನಿರಾಕರಿಸಿದ್ದಾರೆ.

ನಾನು ಸಿಎಂ ಆಗಿಬಿಡುತ್ತೇನೆ ಎನ್ನವ ಭಯ ಡಿ.ಕೆ ಶಿವಕುಮಾರ್‌ರವರನ್ನು ಕಾಡುತ್ತಿದೆ. ಒಬ್ಬ ನಾಯಕನ ಬೆಳವಣಿಗೆ ಸಹಿಸದೆ ಹೀಗೆಲ್ಲಾ ಪಿತೂರಿ ಮಾಡುತ್ತಿದ್ದಾರೆ. ಹೀಗಾಗಿ ವಿನಾಕಾರಣ ನನ್ನ ಮೇಲೆ ಆರೋಪ ಹೊರಿಸಿ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಒಬ್ಬ ವ್ಯಕ್ತಿಗಾಗಿ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆಸುವುದು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್ ಮುಖಂಡರು ನನ್ನನ್ನು ಸಿಕ್ಕಿಸಲು ನನ್ನ ಹೆಸರು ಎಳೆದು ತರುತ್ತಿದ್ದಾರೆ. ಡಿ.ಕೆ ಶಿವಕುಮಾರ್‌ರವರಿಗೆ ಕರೆ ಮಾಡಿದ ಮಂಡ್ಯದ ಬಿಜೆಪಿ ಮುಖಂಡನ ಹೆಸರು ಹೇಳಲು ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಿರುಕನ ಕನಸು ಕಾಣುತ್ತಿರುವ ನಮ್ಮ ಮಂತ್ರಿಗೆ ಅವರ ತಮ್ಮ ಮಾಡಿದ ತಪ್ಪು ಕೆಲಸ ಅವರ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...