Homeಮುಖಪುಟವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

ವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

- Advertisement -
- Advertisement -

ಹಿಂದಿಯಲ್ಲೊಂದು ಗಾದೆಯಿದೆ; ’ಛಾಜ್ ಬೊಲೆ ತೊ ಬೋಲೆ, ಛಲನಿ ಭಿ ಬೋಲಿ ಜಿಸ್‌ಮೆ ಸತ್ತರ್ ಛೇದ್’ ಎಂದು. ಅದಕ್ಕೆ ಕನ್ನಡದಲ್ಲಿ ’ತನ್ನ ತಟ್ಟೆಯಲ್ಲಿ ಸತ್ತ ಹೆಗ್ಗಣ ಇಟ್ಟುಕೊಂಡು, ಪಕ್ಕದವನ ತಟ್ಟೆಯಲ್ಲಿನ ನೊಣ ಓಡಿಸಿದನಂತೆ’ ಎಂಬ ಗಾದೆ ಸೂಕ್ತವಾಗಿದೆ. ರಾಹುಲ್ ಗಾಂಧಿ ಇಂಗ್ಲೆಂಡಿನ ಪ್ರವಾಸದಲ್ಲಿ ನೀಡಿದ ಹೇಳಿಕೆಗಳ ಮೇಲೆ ಸೃಷ್ಟಿಸುತ್ತಿರುವ ಗಲಾಟೆ ನೋಡಿದರೆ ಈ ಗಾದೆಯೇ ನೆನಪಾಗುವುದು.

ನಿಸ್ಸಂಶಯವಾಗಿ ದೇಶದ ಆಂತರಿಕ ವಿಷಯಗಳ ಬಗ್ಗೆ ವಿದೇಶದಲ್ಲಿ ಮಾಡುವ ಹೇಳಿಕೆಗಳಲ್ಲಿ ಒಂದು ಮಟ್ಟದ ಘನತೆ ಇರಲೇಬೇಕು. ವಿರೋಧಪಕ್ಷದ ನಾಯಕರಾಗಿ ಅಟಲ್ ಬಿಹಾರಿ ವಾಜಪೇಯಿ ಈ ಘನತೆಯ ಪಾತ್ರವನ್ನು ಉತ್ತಮವಾಗಿ ನಿಭಾಯಿಸಿದ್ದರು; ಆದರೆ ಯಾವುದೇ ಪಕ್ಷದ ಯಾವ ನಾಯಕರೂ ಇಂದು ಆ ಹಂತಕ್ಕೆ ತಲುಪುವುದಿಲ್ಲ. ಅಂದಹಾಗೆ ಈಗ ಮನೆಯ ಮಾತು ಮನೆಯಲ್ಲಿಯೇ ಮುಚ್ಚಿಡಬಹುದಾದ ಆ ದಿನಗಳೂ ಇಲ್ಲ. ಇಂಟರ್‌ನೆಟ್ ಮತ್ತು ಜಾಗತಿಕ ಮಾಧ್ಯಮಗಳ ಕಾಲದಲ್ಲಿ ಅಂತರಿಕ ಗೌಪ್ಯ ವಿಷಯಗಳನ್ನು ಹೊರಗೆ ಹೇಳಬೇಕಾದ-ಹೇಳಬಾರದ ಸಂಗತಿಗಳೆಂದೂ ಉಳಿದಿಲ್ಲ. ಆದರೂ, ಕನಿಷ್ಠ ಮೂರು ಘನತೆಯ ಸೂತ್ರಗಳನ್ನು ವ್ಯಾಖ್ಯಾನಿಸಬಹುದಾಗಿದೆ. ಮೊದಲನೆಯದಾಗಿ. ಯಾವುದೇ ಪಕ್ಷ ಇತರ ಪಕ್ಷಗಳನ್ನು ಟೀಕೆ ಮಾಡಲಿ, ಆದರೆ ಯಾವುದೇ ಕೆಳಮಟ್ಟ ಅಗ್ಗದ ಗಾಸಿಪ್‌ಅನ್ನು ಹೊರಗೆ ಹೋಗಿ ಹರಡಬಾರದು. ಎರಡನೆಯದಾಗಿ, ಇತರ ಪಕ್ಷಗಳ ಆಡಳಿತದ ಬಗ್ಗೆ ಟೀಕೆ ಮಾಡಬಹುದು, ಆದರೆ ಇಡೀ ದೇಶದ ಗೌರವವನ್ನು ತಗ್ಗಿಸುವ ಮಾತುಗಳನ್ನು ಆಡಬಾರದು. ಮೂರನೆಯದಾಗಿ, ನಮ್ಮ ಸಮಸ್ಯೆಗಳು ಏನೇ ಇರಲಿ, ವಿದೇಶಿಯರ ಹಸ್ತಕ್ಷೇಪದ ಬೇಡಿಕೆ ಇಡಬಾರದು ಹಾಗೂ ಅವರ ವಿಷಯಗಳಲ್ಲಿ ನಾವು ತಲೆತೂರಿಸಬಾರದು.

ಅಟಲ್ ಬಿಹಾರಿ ವಾಜಪೇಯಿ

ಮೊದಲ ಮಾನದಂಡವನ್ನು ತೆಗೆದುಕೊಂಡರೆ, ರಾಹುಲ್ ಗಾಂಧಿಯ ಹೇಳಿಕೆಯಲ್ಲಿ ಅಗ್ಗದ ಅಥವಾ ತೀರಾ ಕೆಳಮಟ್ಟದ ಅಂತಹ ಯಾವ ಮಾತೂ ಕಾಣಿಸಲಿಲ್ಲ. ಅವರು ಸಂಸತ್ತಿನಲ್ಲಿ ವಿರೋಧಪಕ್ಷಗಳ ನಾಯಕರ ಮೈಕ್ ಬಂದ್ ಮಾಡುವುದರ ಬಗ್ಗೆ ಹೇಳಿದರು, ವಿರೋಧಪಕ್ಷದವರ ಮೇಲೆ ತನಿಖಾ ಸಂಸ್ಥೆಗಳು ಮಾಡುತ್ತಿರುವ ರೇಡ್‌ಗಳ ಬಗ್ಗೆ ಹೇಳಿದರು ಹಾಗೂ ವಿರೋಧಪಕ್ಷಗಳ ನಾಯಕರ ಮೇಲೆ ಪೆಗಸಸ್ ಮೂಲಕ ಕಣ್ಗಾವಲು ಇಟ್ಟಿದ್ದರ ಬಗ್ಗೆ ಹೇಳಿದರು. ಈ ವಾಸ್ತವಗಳು ಜಗಜ್ಜಾಹೀರಾಗಿರುವ ವಾಸ್ತವಗಳು. ರಾಹುಲ್ ಗಾಂಧಿ ಗೌಪ್ಯವಾಗಿದ್ದ ಏನನ್ನೂ ಹೇಳಿಲ್ಲ. ಭಾರತವಷ್ಟೇ ಅಲ್ಲ, ಜಗತ್ತಿನ ಹಲವಾರು ದೇಶಗಳಲ್ಲಿ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ಇಂತಹದ್ದೇ ರೀತಿಯಲ್ಲಿ ದಾಳಿಗಳು ಆಗುತ್ತಿವೆ. ಒಂದು ವೇಳೆ ಒಂದು ದೇಶದ ಒಬ್ಬ ಸಂಸದ, ಇನ್ನೊಂದು ದೇಶದ ಸಂಸದರೊಂದಿಗೆ ಮುಚ್ಚಿದ ಕೋಣೆಯಲ್ಲಿ ಮಾತನಾಡಿದರೆ, ಅವರು ಈ ಪ್ರಶ್ನೆಗಳ ಮೇಲೆ ಚರ್ಚೆ ಮಾಡದೇ ಇದ್ದರೆ ಮತ್ಯಾವುದರ ಬಗ್ಗೆ ಚರ್ಚೆ ಮಾಡಿಯಾರು?

ಈ ಹೇಳಿಕೆಯನ್ನು ನೀವು 2022ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬರ್ಲಿನ್‌ನ ಬಹಿರಂಗ ಸಭೆಯಲ್ಲಿ ಮಾಡಿದ ಭಾಷಣದೊಂದಿಗೆ ಹೋಲಿಸಿ. ಅಲ್ಲಿ ಮೋದಿಯವರು ರಾಜೀವ್ ಗಾಂಧೀಯನ್ನು ಟೀಕಿಸುತ್ತ ಹೇಳಿದ್ದೇನೆಂದರೆ, ಒಂದು ರೂಪಾಯಿಯಲ್ಲಿ ಕೇವಲ 15 ಪೈಸೆ ಮಾತ್ರ ಕೆಳಗೆ ತಲುಪುವ ಆ ದಿನಗಳು ಈಗಿಲ್ಲ ಎಂದರು. ಅಷ್ಟೇ ಅಲ್ಲ, ಅಲ್ಲಿ ಸೇರಿದ ಜನರಿಗೆ ಅತ್ಯಂತ ಅಸಭ್ಯ ರೀತಿಯಲ್ಲಿ ’ಆ 85 ಪೈಸೆಗಳನ್ನು ಸವೆಸುತ್ತಿದ್ದ ’ಕೈ’ ಯಾವುದಿತ್ತು’ ಎಂದು ಕೇಳಿದರು. ವಿದೇಶದಲ್ಲಿ ಮಾಡಿದ ಈ ಅಗ್ಗದ ಚುನಾವಣಾ ಭಾಷಣದ ಬಗ್ಗೆ ಪ್ರಧಾನಮಂತ್ರಿಯವರು ಕ್ಷಮೆಯನ್ನೂ ಕೇಳಲಿಲ್ಲ, ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಯಾವ ಉತ್ತರವನ್ನೂ ನೀಡಲಿಲ್ಲ.

ಇದನ್ನೂ ಓದಿ: ರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

ಬಹುಶಃ ಬಿಜೆಪಿಯ ನಾಯಕರ ದೂರು ಎರಡನೆಯ ಮಾನದಂಡದ ಬಗ್ಗೆ ಇದೆ; ಅದು ರಾಹುಲ್ ಗಾಂಧಿ ಮಾತುಗಳಲ್ಲಿ, ಭಾರತದಲ್ಲಿ ಪ್ರಜಾಸತ್ತಾತ್ಮಕ ಸಂಸ್ಥೆಗಳು ಮತ್ತು ಘನತೆಯ ಪತನದ ಬಗ್ಗೆ ವ್ಯಕ್ತಪಡಿಸಿದ ಕಾಳಜಿಯಿಂದ ದೇಶದ ಇಮೇಜ್ ಕುಸಿದಿದೆ ಎಂದು. ಒಂದು ವೇಳೆ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡುವ ಶಕ್ತಿಗಳು ಇಲ್ಲವಾಗಿವೆ ಅಥವಾ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ನಡೆಸುವುದು ಭಾರತೀಯರಿಗೆ ಆಗುವುದಿಲ್ಲ ಎಂದು ಹೇಳಿದ್ದರೆ, ಆ ಮಾನದಂಡ ಉಲ್ಲಂಘಿಸಿದ್ದಾರೆ ಎನ್ನಬಹುದಾಗಿತ್ತು. ಆದರೆ ಅವರು ಇಂಥದ್ದೇನೂ ಹೇಳಲಿಲ್ಲ, ಅದರ ಬದಲಿಗೆ ಭಾರತದ ಜನರಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯು ಆಳವಾಗಿ ಬೇರುಬಿಟ್ಟಿದ್ದನ್ನು ಎತ್ತಿತೋರಿಸಿದರು. ಅವರ ಈ ಹೇಳಿಕೆಯನ್ನು, ನೀವು ಪ್ರಧಾನಮಂತ್ರಿ ನರೇಂದ್ರ ಮೋದಿ 2015ರಲ್ಲಿ ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ನೀಡಿದ ಭಾಷಣದೊಂದಿಗೆ ಹೋಲಿಕೆ ಮಾಡಿನೋಡಿ. ಅಲ್ಲಿ ಹಿಂದಿನ ಸರಕಾರಗಳ ಮೇಲೆ ದಾಳಿ ಮಾಡುತ್ತ ಮೋದಿಯವರು ’ಹೀಗೂ ಒಂದು ಸಮಯವಿತ್ತು, ಆಗ ಜನರು ತಮ್ಮ ಕಳೆದ ಜನ್ಮದಲ್ಲಿ ಯಾವ ಪಾಪ ಮಾಡಿದ್ದೆವೋ ಏನೋ, ಅದಕ್ಕಾಗಿ ಹಿಂದುಸ್ತಾನದಲ್ಲಿ ಹುಟ್ಟಿದ್ದೀವಿ ಎಂದು ಯೋಚಿಸುತ್ತಿದ್ದರು’ ಎಂದು ಹೇಳಿದರು. ದೇಶದ ಪ್ರತಿಷ್ಠೆಯನ್ನು ತಗ್ಗಿಸುವ ಮಾನದಂಡದಲ್ಲಿ ದೇಶವನ್ನು ಅವಮಾನಿಸುವ ದೊಡ್ಡ ದೋಷಿ ಮೋದಿಜಿಯ ಈ ಹೇಳಿಕೆ ಎಂದು ನಿಸ್ಸಂಶಯವಾಗಿ ಹೇಳಬೇಕಿದೆ.

ಮೂರನೆಯ ಮಾನದಂಡ ವಿದೇಶಿಯರ ಹಸ್ತಕ್ಷೇಪವನ್ನು ಆಹ್ವಾನಿಸುವುದರ ಬಗ್ಗೆ. ತುರ್ತುಪರಿಸ್ಥಿತಿಯ ಸಮಯದಲ್ಲಿ ಅಂದಿನ ಜನಸಂಘದ ಸಂಸದ ಸುಬ್ರಮಣ್ಯಂ ಸ್ವಾಮಿಯೊಂದಿಗೆ ಅನೇಕ ವಿರೋಧಪಕ್ಷದ ನಾಯಕರು ಅಮೆರಿಕ ಮತ್ತು ಇತರ ದೇಶಗಳಿಗೆ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಹಸ್ತಕ್ಷೇಪ ಮಾಡುವ ಬೇಡಿಕೆ ಇಟ್ಟಿದ್ದರು. ಅಂತಹ ವಿಪತ್ತಿನ ಕಾಲದಲ್ಲಿ ಹೀಗೆ ಮಾಡಬೇಕೇ ಇಲ್ಲವೇ ಎಂಬುದು ಚರ್ಚೆಯ ವಿಷಯವಾಗಿದೆ, ಆದರೆ ಸದ್ಯಕ್ಕೆ ಇಂತಹದ್ದೇನೂ ಆಗಿಲ್ಲ. ಬಿಜೆಪಿಯ ನಾಯಕರು ಆರೋಪವನ್ನಂತೂ ಮಾಡುತ್ತಿದ್ದಾರೆ, ಆದರೆ ಇಂಗ್ಲೆಂಡಿನ ಸಂಸದರು ಭಾರತೀಯ ಪ್ರಜಾಪ್ರಭುತ್ವದ ರಕ್ಷಣೆ ಮಾಡಬೇಕು ಎಂಬ ಮನವಿ ಮಾಡಿರುವಂತಹ ಯಾವ ಹೇಳಿಕೆಗಳೂ ರಾಹುಲ್ ಗಾಂಧಿಯ ಮಾತುಗಳಲ್ಲಿ ಕಾಣಸಿಗುತ್ತಿಲ್ಲ. ಸ್ವಾಭಾವಿಕವಾಗಿಯೇ, ಇಂತಹ ಆರೋಪ ಮೋದಿಯವರ ಮೇಲೆಯೂ ಇಲ್ಲ. ಆದರೆ, ಇನ್ನೊಂದು ದಿಕ್ಕಿನಿಂದ ಅವರು ಖಂಡಿತವಾಗಿಯೂ ಈ ಘನತೆಯ ಉಲ್ಲಂಘನೆ ಮಾಡಿದ್ದಾರೆ; ಅದು ಅವರು ಅಮೆರಿಕದ ಹೂಸ್ಟನ್ ನಗರದಲ್ಲಿ 2019ರಲ್ಲಿ ಆದ ರ್‍ಯಾಲಿಯಲ್ಲಿ ’ಅಬ್ ಕಿ ಬಾರ್ ಟ್ರಂಪ್ ಸರಕಾರ್’ (ಈ ಬಾರಿ ಟ್ರಂಪ್ ಸರಕಾರ) ಎಂಬ ಘೋಷಣೆಯನ್ನು ಕೂಗಿ, ಸುಮ್‌ಸುಮ್ನೆ ಅಮೇರಿಕದ ಚುನಾವಣೆಗಳಲ್ಲಿ ಹಸ್ತಕ್ಷೇಪ ಮಾಡುವಂತಹ ಕೆಲಸ ಮಾಡಿದರು. ಈ ಅಸಫಲ ಮತ್ತು ಹಾಸ್ಯಾಸ್ಪದ ಪ್ರಯತ್ನದ ಪರಿಣಾಮಗಳನ್ನು ದೇಶ ಅನುಭವಿಸಬೇಕಾಯಿತು.

ಪ್ರಶ್ನೆ ಏನೆಂದರೆ, ಒಂದು ವೇಳೆ ಈ ಮೂರು ಮಾನದಂಡಗಳು ರಾಹುಲ್ ಗಾಂಧಿಯ ಮೇಲೆ ಅನ್ವಯ ಆಗುವುದಿಲ್ಲ ಎಂದಮೇಲೆ ಬಿಜೆಪಿ ಇಷ್ಟು ವಿಚಲಿತವಾಗಿದ್ದು ಏಕೆ? ಒಂದೋ, ಅದಾನಿ ಪ್ರಕರಣದಿಂದ ಗಮನವನ್ನು ಬೇರೆಡೆ ಸೆಳೆಯಲು ಈ ಗಲಾಟೆ ಸೃಷ್ಟಿಸುತ್ತಿದ್ದಾರೆ, ಅಥವಾ ರಾಹುಲ್ ಗಾಂಧಿಯು ಮೋದಿ ಸರಕಾರದ ಮರ್ಮಸ್ಥಾನದ ಮೇಲೆಯೇ ಪೆಟ್ಟುಕೊಟ್ಟಿದ್ದಾರೆಯೇ? ನಿಜ ಏನೆಂದರೆ, ಭಾರತದ ಪ್ರಜಾಸತ್ತಾತ್ಮಕ ಪ್ರತಿಷ್ಠೆ ಕುಸಿಯುವುದು ಯಾವಾಗ ಅಂದರೆ, ಭಾರತ ಸರಕಾರವು ಬಿಬಿಸಿಯ ಸಾಕ್ಷ್ಯಚಿತ್ರವನ್ನು ಬ್ಯಾನ್ ಮಾಡಿದಾಗ ಹಾಗೂ ಬಿಬಿಸಿ ಕಚೇರಿಗಳ ಮೇಲೆ ರೇಡ್ ಮಾಡಿದ್ದಾರೆ ಎಂದು ಇಡೀ ಜಗತ್ತಿಗೆ ಗೊತ್ತಾದಾಗ. ಭಾರತೀಯ ಅರ್ಥವ್ಯವಸ್ಥೆಯ ಪ್ರತಿಷ್ಠೆ ಕುಸಿಯುವುದು ಯಾವಾಗ ಅಂದರೆ, ಹಿಂಡನ್‌ಬರ್ಗ್ ವರದಿಯಿಂದ ಷೇರು ಮಾರುಕಟ್ಟೆಯಲ್ಲಿ ಆದ ಹಗರಣ ತಡೆಯಲು ಭಾರತ ಸರಕಾರ ಮತ್ತು ಅದರ ಸಂಸ್ಥೆಗಳು ಏನನ್ನೂ ಮಾಡಿಲ್ಲ ಎಂಬುದು ಇಡೀ ಜಗತ್ತಿಗೆ ಗೊತ್ತಾದಾಗ. ಒಂದು ಸಶಕ್ತ ದೇಶದ ರೂಪದಲ್ಲಿ ಭಾರತದ ಪ್ರತಿಷ್ಠೆ ಯಾವಾಗ ಕುಸಿಯುತ್ತೆ ಎಂದರೆ, ಚೀನಾ ದೇಶವು ಭಾರತದ 2000 ಚದರ ಕಿಲೊಮೀಟರ್ ಆಕ್ರಮಿಸಿದೆ ಎಂದು ಸೆಟಲೈಟ್ ಮೂಲಕ ಜಗತ್ತಿಗೆ ತಿಳಿದಾಗ ಹಾಗೂ ಸರಕಾರ ಅದರ ಬಗ್ಗೆ ಮೌನವಹಿಸಿದ್ದನ್ನು ನೋಡಿದಾಗ. ಯಾರೂ ನಮ್ಮ ಗಡಿಯಲ್ಲಿ ಪ್ರವೇಶಿಸಿಲ್ಲ ಎಂದು ಪ್ರಧಾನಮಂತ್ರಿ ಹೇಳ್ತಾರೆ ಹಾಗೂ ಚೀನಾದ ಬಳಿ ಎಷ್ಟು ಆರ್ಥಿಕ ಶಕ್ತಿ ಇದೆಯೆಂದರೆ, ನಾವು ಅವರೊಂದಿಗೆ ಕಾಲ್ಕೆರೆದು ಜಗಳವಾಡಲು ಸಾಧ್ಯವಿಲ್ಲ ಎಂದು ವಿದೇಶ ಮಂತ್ರಿ ಹೇಳುತ್ತಾರೆ. ಒಂದು ವೇಳೆ ಸಂಸತ್ತಿನಲ್ಲಿ ರಾಹುಲ್ ಗಾಂಧಿಯ ಮೇಲೆ ದೇಶದ ಪ್ರತಿಷ್ಠೆ ಕಡಿಮೆ ಮಾಡಿದ ಆರೋಪ ಹೊರಿಸುವ ಬದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ಆಕ್ರಮಣದ ಬಗ್ಗೆ ಬಾಯ್ಬಿಟ್ಟಿದ್ದರೆ ದೇಶದ ಘನತೆ ಖಂಡಿತವಾಗಿಯೂ ಹೆಚ್ಚುತ್ತಿತ್ತು.

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು. ಸ್ವರಾಜ್ ಇಂಡಿಯಾದ ಸಂಸ್ಥಾಪಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...