Homeಅಂಕಣಗಳುಕಳೆದುಹೋದ ದಿನಗಳುಕಾಫಿ ನಾಡಿನ ಪರಿಸರ ನಾಶಕ್ಕೆ ಮೂಲ ಕಾರಣರ್ಯಾರು?: ಪ್ರಸಾದ್ ರಕ್ಷಿದಿ

ಕಾಫಿ ನಾಡಿನ ಪರಿಸರ ನಾಶಕ್ಕೆ ಮೂಲ ಕಾರಣರ್ಯಾರು?: ಪ್ರಸಾದ್ ರಕ್ಷಿದಿ

- Advertisement -
- Advertisement -

ಕಳೆದು ಹೋದ ದಿನಗಳು….. ಭಾಗ -2, ಅಧ್ಯಾಯ -16

ಮನುಷ್ಯನಿಗೆ ಏನು ಬೇಕು, ಎಷ್ಟು ಬೇಕು ಎಂಬಂತಹ ಹಲವಾರು ಪ್ರಶ್ನೆಗಳಿಗೆ ಉತ್ತರವನ್ನು ನಾವೇ ಕಂಡುಕೊಳ್ಳಬೇಕು ಅಷ್ಟೆ. ಕೊನೆಗೂ ನಮಗೆ ಬೇಕಾದ್ದು “ಭೂಮಿ ನಮ್ಮ ಅವಶ್ಯಕತೆಗಳನ್ನು ಪೂರೈಸಬಲ್ಲದು ದುರಾಸೆಯನ್ನಲ್ಲ” ಎಂಬ ಅರಿವು.

ಆದರೆ ಆ ಅರಿವಿದ್ದವರೂ ಕೂಡಾ ಏನೂ ಮಾಡಲಾರದ ಸ್ಥಿತಿಯನ್ನು ಸರ್ಕಾರಗಳು ನಿರಂತರ ನಿರ್ಮಾಣ ಮಾಡುತ್ತಲೇ ಬಂದವು. ಕಾಫಿ ಬೆಳೆಗೆ ನಿರಂತರವಾಗಿ ಧಕ್ಕೆ ತರುವಂತಹ ಕೆಲಸ ನಡೆಯಲಾರಂಭಿಸಿದ್ದು, ಸರ್ಕಾರದ ಅಭಿವೃದ್ಧಿ ಯೋಜನೆಗಳಿಂದಲೇ, ಎಪ್ಪತ್ತರ ದಶಕದಲ್ಲೇ ಕೊಡಗಿನಲ್ಲಿ ಲಕ್ಷ್ಮಣ ತೀರ್ಥ ನದಿಗೆ ಕಂಬದ ಕಡ ಎಂಬಲ್ಲಿ ಅಣೆಕಟ್ಟು ಕಟ್ಟುವ ಯೋಜನೆಯನ್ನು ದೇವರಾಜ ಅರಸರು ಪ್ರಕಟಿಸಿದಾಗ ಇಡೀ ಕೊಡಗು ಜಿಲ್ಲೆಯೇ ಒಂದಾಗಿ ನಿಂತು ಅದನ್ನು ತಡೆಯಲು ಸಮರ್ಥವಾಗಿತ್ತು. ಆದರೆ ವರ್ಷಗಳು ಕಳೆದಂತೆ ಅಧಿಕಾರ, ಹಣ, ಮತ್ತು ಲಾಲಸೆಗಳು ಆ ರೀತಿಯ ಹೋರಾಟಗಳನ್ನು ಯಶಸ್ವಿಯಾಗಿ ದಿಕ್ಕು ತಪ್ಪಿಸಲು ಸಾಧ್ಯವಾಗತೊಡಗಿತು.

ನದೀ ತಿರುವು ಯೋಜನೆಗಳು

ಒಂದಾದ ಮೇಲೆ ಒಂದರಂತೆ ರಸ್ತೆ, ರೈಲ್ವೇ, ಜಲವಿದ್ಯುತ್ ಯೋಜನೆಗಳು, ನದಿ ತಿರುವು, ಆಯಿಲ್ ಪೈಪ್ ಲೈನ್ ಹೀಗೇ ನಾನಾ ಯೋಜನೆಗಳು ಮಲೆನಾಡಿಗೆ ಬಂದವು.

ಇದರ ವಿರುದ್ಧ ಜನ ಹೋರಾಡಲಿಲ್ಲವೇ ?

ಖಂಡಿತ ಹೋರಾಡಿದರು. ಆದರೆ ಪ್ರತಿಸಲವೂ ಅಂತಿಮ ಗೆಲುವು ಸರ್ಕಾರಗಳದ್ದೇ ಆಗಿತ್ತು. ಆದರೆ ಇಲ್ಲಿ ಹಲವು ರೀತಿಯ ಪರ ವಿರೋಧ ವಿಚಾರಗಳನ್ನು, ವ್ಯಾಪಕವಾಗಿ ವ್ಯವಸ್ಥಿತವಾಗಿ ಬಿತ್ತಲಾಯಿತು. ಎಪ್ಪತ್ತು ಮತ್ತು ಎಂಬತ್ತರ ದಶಕಗಳ ಹೋರಾಟಗಳಿಗೂ ನಂತರ ನಡೆಯುತ್ತಿರುವ ಹೋರಾಟಗಳಿಗೂ ಬಹಳ ದೊಡ್ಡ ರೀತಿಯ ವ್ಯತ್ಯಾಸಗಳಿವೆ. ಇದು ಬರಿಯ ಸೈದ್ಧಾಂತಿಕ ವಿಚಾರಗಳ ಹಾಗೂ ಬದ್ಧತೆಯ ಕೊರತೆಯ ಕಾರಣಗಳಿಂದ ಮಾತ್ರ ಹೀಗಾಗಿದೆ ಎನ್ನುವಂತಿಲ್ಲ ಇದಕ್ಕೆ ಹಲವು ಕಾರಣಗಳಿವೆ.

ಮೊದಲನೆಯದಾಗಿ ಪರಿಸರವನ್ನು ಉಳಿಸಬೇಕೆನ್ನುವವರಲ್ಲೂ ಹಲವು ಅಭಿಪ್ರಾಯಗಳಿವೆ. ಇವರೆಲ್ಲರೂ ಪರಿಸರದ ಬಗ್ಗೆ ನಿಜವಾದ ಕಾಳಜಿಯನ್ನು ಇಟ್ಟುಕೊಂಡಿರುವವರೇ ಎಂದುಕೊಂಡರೂ, ಇವರಲ್ಲಿ ಆಧುನಿಕ ಜೀವನ ಕ್ರಮವನ್ನು ಒಪ್ಪಿಕೊಂಡ ಮೇಲೆ ಸ್ವಲ್ಪ ಮಟ್ಟಿನ ರಾಜಿ ಅನಿವಾರ್ಯ ಎನ್ನುವವರಿದ್ದಾರೆ. ನಮಗೆ ರಸ್ತೆ, ವಿದ್ಯುತ್ ಮುಂತಾದವು ಬೇಕೇಬೇಕು ಎಂದಮೇಲೆ ಅರಣ್ಯನಾಶವೂ ಅನಿವಾರ್ಯವಾದ್ದರಿಂದ ಮರಗಿಡಗಳನ್ನು ಬೆಳೆದರಾಯ್ತು ಎಂದುಕೊಂಡವರಿದ್ದಾರೆ. ನೀರಿಲ್ಲದವರಿಗೆ ನೀರು ನೀಡುವುದು, ಪುಣ್ಯಕಾರ್ಯ ಎನ್ನುವವರಿದ್ದಾರೆ. ಹಾಗೇ ಪರಿಸರದ ವಿಚಾರದಲ್ಲಿ ಯಾವುದೇ ರಾಜಿಗೂ ಸಿದ್ಧವಿಲ್ಲದವರೂ ಇದ್ದಾರೆ.

ಈ, ಎಲ್ಲ ವಿಚಾರಗಳನ್ನು ಬಿಟ್ಟು ಯೋಚನೆ ಮಾಡಿದರೂ ಕೂಡಾ ಈ ಜಲವಿದ್ಯುತ್ ಯೋಜನೆಗಳಿಗಾಗಲೀ, ನದೀತಿರುವು ಯೋಜನೆಗಳಿಗಾಗಲೀ, ಪಶ್ಚಿಮ ಘಟ್ಟಗಳ ಜೀವ ವೈವಿದ್ಯವನ್ನು ನಾಶ ಮಾಡುವ ಯಾವುದೇ ಯೋಜನೆಗೆ ಸ್ಥಳೀಯ ಕೃಷಿಕರಿಂದ ಅಥವಾ ಕೃಷಿಕಾರ್ಮಿಕರಿಂದ ಯಾಕೆ ವ್ಯಾಪಕವಾದ ವಿರೋಧ ಬರುತ್ತಿಲ್ಲ? ಇದಕ್ಕೆ ಹಲವು ಕಾರಣಗಳಿವೆ. ಪರಿಸರವಾದಿಗಳ ಸಂಘಟನಾತ್ಮಕ ಸಮಸ್ಯೆಗಳು ಸ್ವಲ್ಪಮಟ್ಟಿಗೆ ಕಾರಣವಿದ್ದರೆ. ಇನ್ನಿತರ ಕಾರಣಗಳು ಹಲವಿವೆ.

ಜಲ ವಿದ್ಯುತ್ ಯೋಜನೆಗಳು

ಮುಖ್ಯವಾಗಿ ಇಲ್ಲಿನ ಕೃಷಿಕರು ಹಲವು ರೀತಿಗಳಿಂದ ಬಳಲಿಹೋಗಿದ್ದಾರೆ. ಯಾವ ಕೃಷಿಯೂ ನಿರಂತರ ಲಾಭದಾಯಕವಲ್ಲದೆ ಕೃಷಿಕ ಸಾಲದಲ್ಲಿ ಮುಳುಗಿ ಹೋಗಿದ್ದಾನೆ. ಎಲ್ಲ ಸರ್ಕಾರಗಳು ಮೂಗಿಗೆ ತುಪ್ಪ ಸವರಿದಂತೆ ನೀಡಿದ ಯಾವುದೇ ‘ಪ್ಯಾಕೇಜ್’ ಅವನಿಗೆ ಭರವಸೆಯನ್ನು ತುಂಬಿಲ್ಲ. ಈಗಾಗಲೇ ಹಣದ ಅವಶ್ಯಕತೆಗಳಿಗಾಗಿಯೋ ಇನ್ನಾವುದೇ ಕಾರಣಕ್ಕೋ ತನ್ನ ಜಮೀನಿನಲ್ಲಿದ್ದ ಅಲ್ಪಸ್ವಲ್ಪ ಮರಗಳನ್ನು ಮಾರಾಟಮಾಡಿ, ಆ ಜಮೀನು ಕೂಡಾ ಭೂಸವಕಳಿಯಿಂದ ಬರಡಾಗಿದೆ. ಆ ಕಾರಣದಿಂದ ವರ್ಷಕ್ಕೆ ನೂರೈವತ್ತರಿಂದ ಇನ್ನೂರು ಇಂಚುಗಳಷ್ಟು ಮಳೆಯಾಗುವ ಆ ಪ್ರದೇಶದ ಪಾರಂಪರಿಕ ಬೆಳೆಗಳನ್ನು ಬೆಳೆಯಲಾರದ ಸ್ಥಿತಿ ತಲಪಿದ್ದಾನೆ. ಇದರೊಂದಿಗೆ ಈಗಾಗಲೇ ಅನುಷ್ಠಾನಕ್ಕೆ ಬಂದಿರುವ ಹಲವು ಯೋಜನೆಗಳಿಂದಾಗಿ ನಡೆದ ಅರಣ್ಯಪ್ರದೇಶದ ಅತಿಕ್ರಮಣದಿಂದಾಗಿ ಆನೆಯೊಂದೇ ಅಲ್ಲ ಇತರ ಕಾಡು ಪ್ರಾಣಿಗಳೂ ಊರೊಳಗೆ ಬರಲಾರಂಭಿಸಿವೆ. ಇವೆಲ್ಲದರ ಜೊತೆ ಕೃಷಿಗೆ ಕೆಲಸಗಾರರು ಸಿಗದಿರುವುದರಿಂದ ಕೃಷಿಕ ಇನ್ನಷ್ಟು ಸೋತು ಹೋಗಿದ್ದಾನೆ.

ಘಟ್ಟಪ್ರದೇಶದ ದುರ್ಗಮ ನೆಲೆಯಲ್ಲಿರುವ ತನ್ನ ಜಮೀನನ್ನು ಮಾರಾಟ ಮಾಡಿ ಹೋಗೋಣವೆಂದರೆ, ಜಮೀನನ್ನು ಕೊಳ್ಳುವವರಿಲ್ಲದೆ ಕೃಷಿಕ ನಿರಾಶನಾಗಿ ಕುಳಿತಿದ್ದಾನೆ. (ಈ ಭಾಗದ ಜಮೀನನ್ನು ಕಾರ್ಪೊರೇಟ್ ವಲಯದವರೂ ಸಹ ಖರೀದಿಸುತ್ತಿಲ್ಲ). ಇಂತಹ ಸಂದರ್ಭದಲ್ಲಿ ಅಲ್ಲಿಗೆ ಬರುವ ಯಾವುದೇ ಯೋಜನೆ ಅವನಿಗೆ ಹೊಸ ಆಸೆಗಳನ್ನು ತರುತ್ತದೆ. ಹೇಗೂ ಮಾರಲು ಅಸಾಧ್ಯವಾಗಿರುವ ತನ್ನ ಜಮೀನಿಗೆ ಒಳ್ಳೆಯ ಪರಿಹಾರಧನ ದೊರಕಿ ತಾನು ಇಲ್ಲಿಂದ ಮುಕ್ತಿಪಡೆಯಬಹುದು, ಇಲ್ಲವೇ ಯೋಜನೆಗಳಿಂದಾಗಿ ಇಲ್ಲಿಗೆ ಬರುವ ಜನರ ಸಂಖ್ಯೆ ಹೆಚ್ಚಾಗುವುದರಿಂದ ಬೇರೇನಾದರೂ ಕೆಲಸವೋ ವ್ಯಾಪಾರವೋ ಮಾಡಬಹುದೆಂಬ ಹವಣಿಕೆಯಲ್ಲಿದ್ದಾನೆ. ಇವರಲ್ಲಿ ಕೆಲವರ ಮಕ್ಕಳು ವಿದ್ಯಾಬ್ಯಾಸ ಮುಗಿಸಿ ಈಗಾಗಲೇ ಇಲ್ಲಿಂದ ದೂರವಾಗಿದ್ದಾರೆ. ಪ್ರತೀ ಬಾರಿಯೂ ಈ ಯೋಜನೆಗಳ ವಿಚಾರ ಜನಾಭಿಪ್ರಾಯ ಸಂಗ್ರಹ ಸಭೆಗಳಲ್ಲಿ ಮತ್ತು ಇನ್ನಿತರ ಮಾಧ್ಯಮಗಳಲ್ಲಿ ಇವರು ತಮ್ಮ ಅಸಹಾಯಕತೆ ಮತ್ತು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಸಾಧ್ಯವಿದ್ದವರು ಈಗಾಗಲೇ ತಮ್ಮ ಕಾಫಿ ತೋಟಗಳನ್ನು ಉದ್ಯಮಿಗಳಿಗೆ ಮಾರಿದ್ದಾರೆ. ಅಲ್ಲೆಲ್ಲ ರೆಸಾರ್ಟುಗಳು ಪ್ರಾರಂಭವಾಗಿವೆ. ಹೇಗಾದರೂ ಇಲ್ಲಿಂದ ಬಿಡುಗಡೆ ದೊರೆಯಲಿ ಎಂಬ ಹತಾಶ ಸ್ಥಿತಿಯಲ್ಲಿ, ಈ ಎಲ್ಲ ಪರಿಸರ ನಾಶದ ಯೋಜನೆಗಳನ್ನು ಪ್ರಬಲವಾಗಿ ಸಮರ್ಥಿಸುತ್ತಿರುವ ಇವರ ದೌರ್ಭಾಗ್ಯವನ್ನು ಅರ್ಥಮಾಡಿಕೊಂಡು, ಅವರಿಗೆ ಅತ್ಯಂತ ಹೆಚ್ಚಿನ ಪರಿಹಾರವನ್ನು ಕೊಟ್ಟು ಅವರು ಬೇರೆಡೆಗೆ ಹೋಗಲು ಅನುವು ಮಾಡಿಕೊಡಬೇಕು.

ಪಶ್ಚಿಮ ಘಟ್ಟದಲ್ಲಿ ರೈಲ್ವೇ

ದೊಡ್ಡ ಕೈಗಾರಿಕೆಗಳಿಗೆ ಕೊಡುತ್ತಿರುವ ರಿಯಾಯಿತಿಗಳ ಮುಂದೆ ಈ ಮೊತ್ತ ನಗಣ್ಯವಾದುದು. ಯಾವುದೇ ಯೋಜನೆಯಲ್ಲಿ ಸ್ಥಳಾಂತರಿಸ ಬೇಕಾಗಿರುವ ಎಲ್ಲ ಜನರಿಗೆ ಕೊಡಬೇಕಾದ ಪರಿಹಾರದ ಮೊತ್ತ ಕೆಲವು ಕೋಟಿ ರೂಪಾಯಿಗಳು ಮಾತ್ರವಾಗಿರುತ್ತದೆ.

ಇನ್ನು ಇಲ್ಲಿರುವ ಹಳೆಯ ತಲೆಮಾರಿನ ಸ್ಥಳೀಯ ಕೂಲಿ ಕಾರ್ಮಿಕರಾದರೂ ಅಷ್ಟೆ ಹೆಚ್ಚಿನವರು ಅಧಿಕ ಕೂಲಿ ದೊರೆಯುವ ಇತರ ಪ್ರದೇಶಗಳಿಗೋ ನಗರಗಳಿಗೋ ಹೋಗಿದ್ದಾರೆ. ಹೊಸ ಯೋಜನೆಗಳೇನಾದರೂ ಬಂದರೆ ಇನ್ನೂ ಉತ್ತಮ ಕೂಲಿ ದೊರೆಯುವ ನಿರೀಕ್ಷೆಯಲ್ಲಿ ಇವರಿದ್ದರೆ, ಸಣ್ಣ ಪುಟ್ಟ ವ್ಯಾಪಾರಿಗಳು ಟೀ ಅಂಗಡಿಗಳವರು ಇದೇ ಮನಸ್ಥಿತಿಯಲ್ಲಿದ್ದಾರೆ. ಇವರೆಲ್ಲ ಯಾವುದೇ ದೂರಗಾಮೀ ಪರಿಣಾಮಗಳ ಬಗ್ಗೆ ಯೋಚಿಸದೆ ತಮ್ಮ ಬದುಕು ಉತ್ತಮಗೊಂಡೀತೆಂಬ ಮನುಷ್ಯ ಸಹಜ ಆಸೆಯಿಂದ ಈ ಯೋಜನೆಗಳನ್ನು ಸ್ವಾಗತಿಸುತ್ತ ಕುಳಿತಿದ್ದಾರೆ.

ಇದಕ್ಕಿಂತ ಶಕ್ತಿಶಾಲಿ, ಪ್ರಭಾವಶಾಲಿ ಗುಂಪೊಂದಿದೆ. ಇವರಲ್ಲಿ ಕೆಲವರು ನೇರವಾಗಿ ಅಭಿವೃದ್ಧಿಯ ಹರಿಕಾರರಂತೆ ಮಾತನಾಡುತ್ತ ಈ ಎಲ್ಲ ಯೋಜನೆಗಳನ್ನು ನೇರವಾಗಿ ಸಮರ್ಥಿಸುತ್ತ ಈ ಮೊದಲು ತಿಳಿಸಿದ, ಸ್ವಲ್ಪ ಮಟ್ಟಿಗೆ ರಾಜಿ ಅನಿವಾರ್ಯ ಎನ್ನುವ, ಪ್ರಗತಿಪರರ ಹಾಗೂ ಬುದ್ಧಿಜೀವಿಗಳ ಮಾತನ್ನು ತಮ್ಮ ಸಮರ್ಥನೆಗಾಗಿ ಬಳಸಿಕೊಳ್ಳುತ್ತಾರೆ. ಇನ್ನು ಕೆಲವರು ಇವರಿಗಿಂತಲೂ ಹೆಚ್ಚು ಅಪಾಯಕಾರಿಗಳು. ಇವರು ಈ ಯೋಜನೆಗಳನ್ನು ವಿರೋಧಿಸುವವರ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಾ, ಈ ಎಲ್ಲ ಯೋಜನೆಗಳ ಅನುಷ್ಠಾನವಾದರೆ ತಮಗೆ ದೊರೆಯಬಹುದಾದ ಲಾಭದ ಲೆಕ್ಕಾಚಾರದಲ್ಲಿರುತ್ತಾರೆ.

ಕಾಫಿ ತೋಟದಲ್ಲಿ ಕಾಡಾನೆಗಳು

ಇವರುಗಳು ಮಾತ್ರವಲ್ಲ, ಈ ಎಲ್ಲ ಯೋಜನೆಗಳಿಂದ ಲಾಭಪಡೆಯುವವರು, ಇನ್ನೂ ಅನೇಕರಿದ್ದಾರೆ. ಇವರಲ್ಲಿ ಗುತ್ತಿಗೆದಾರರದು, ಮರದ ವ್ಯಾಪಾರಿಗಳು, ಮರಳು ದಂಧೆಯವರು, ಗ್ರಾನೈಟ್ ಗಣಿಗಾರಿಕೆಯವರು, ರಿಯಲ್ ಎಸ್ಟೇಟ್ ದಳ್ಳಾಳಿಗಳು ಮತ್ತು ಇವರಿಂದ ಲಾಭ ಪಡೆಯುತ್ತಿರುವ ಅನೇಕ ಸ್ಥಳೀಯರು ಮತ್ತು ಕೆಲವರು ಪರ್ತಕರ್ತರೂ ಇದ್ದಾರೆ. ಇವರಿಗೆ ಜಲವಿದ್ಯುತ್ ಯೋಜನೆಯಾಗಲೀ ನದೀ ತಿರುವು ಯೋಜನೆಯಾಗಲೀ, ರಸ್ತೆ ನಿರ್ಮಾಣವಾಗಲೀ ಯಾವ ವೆತ್ಯಾಸವೂ ಇಲ್ಲ. ಯಾವುದೇ ಯೋಜನೆ ಇವರ ಪಾಲಿಗೆ ಹಿಂಡುವ ಹಸುವಾಗಬಲ್ಲದು. ಇವರುಗಳು ಬಹಳ ಸಮರ್ಥವಾಗಿ ಸ್ಥಳೀಯ ಜನರಲ್ಲಿ ಹೊಸ ಆಸೆ-ಆಕಾಂಕ್ಷೆಗಳನ್ನು ತುಂಬಬಲ್ಲರು. ಈ ಕಾರಣಗಳಿಂದಾಗಿ ಈ ಎಲ್ಲ ಯೋಜನೆಗಳ ವಿರೋಧವಾಗಿ ಸಭೆ, ಜಾತಾ, ಸತ್ಯಾಗ್ರಹ, ಜನಾಭಿಪ್ರಾಯ ಸಂಗ್ರಹ ಸಭೆ ಏನೇ ನಡೆಯಲಿ, ಸ್ಥಳೀಯ ಕೃಷಿಕ-ಕಾರ್ಮಿಕರಿಂದ ದೊಡ್ಡ ಪ್ರಮಾಣದ ಬೆಂಬಲ ಸಿಗುತ್ತಿಲ್ಲ, ಆದ್ದರಿಂದ ಈ ಕಾರ್ಯಕ್ರಮಗಳಲ್ಲಿ ಹೊರಗಿನವರ ಸಂಖ್ಯೆಯೇ ಹೆಚ್ಚಾಗಿ ಕಾಣಸಿಗುತ್ತದೆ ಇದರಿಂದಾಗಿ ಈ ಯೋಜನೆಗಳಿಗೆ ಸ್ಥಳೀಯರ ವಿರೋಧವಿಲ್ಲ, ಈ ಪರಿಸರವಾದಿಗಳು ಹೊರಗಿನವರು, ಹೊಟ್ಟೆ ತುಂಬಿದ ಸುಶಿಕ್ಷಿತರು, ಮೇಲ್ವರ್ಗದ ಜನ ಇತ್ಯಾದಿ ವಾದಗಳು ಹುಟ್ಟಿಕೊಳ್ಳುತ್ತಿವೆ.

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)

ಕಳೆದು ಹೋದ ದಿನಗಳು ಹಿಂದಿನ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಕಾಫಿ ವಲಯದ ಜನರು ತಮ್ಮ ಉಳಿವಿಗಾಗಿ ಏನೂ ಪ್ರಯತ್ನವೇ ಮಾಡಲಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...