Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...