Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...