Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...