Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....