Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...