Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...