Homeಚಳವಳಿಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ನಟಿ ಕಂಗನಾ ಇವರನ್ನು 100 ರುಪಾಯಿ ಕೊಟ್ಟರೆ ಪ್ರತಿಭಟನೆಗೆ ಬರುವ ಅಜ್ಜಿ ಎಂದು ಹೇಳಿ ವಿವಾದ ಎಬ್ಬಿಸಿದ್ದರು. ನಂತರ ಮುಖಭಂಗಕ್ಕೊಳಗಾಗಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 8 ನೇ ದಿನ ತಲುಪಿದೆ. ಹೋರಾಟದ ಆರಂಭದಲ್ಲಿ 73 ವರ್ಷದ ಅಜ್ಜಿಯೊಬ್ಬರು ರೈತ ಸಂಘಟನೆಯೊಂದರ ಹಳದಿ ಧ್ವಜವನ್ನು ಹಿಡಿದು ರೈತ ಹೋರಾಟಕ್ಕೆ ಹೊರಟು ನಿಂತಿರುವ ಸ್ಪೂರ್ತಿದಾಯಕ ಚಿತ್ರವೊಂದು ವೈರಲ್‌ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದ ಈ ಚಿತ್ರ ಹಲವರ ಮನಸ್ಸು ಗೆದ್ದಿತ್ತು. ಆದರೆ ಬಿಜೆಪಿ ಬೆಂಬಲಿಗರು ಈ ಅಜ್ಜಿ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ’ಶಾಹಿನ್‌ ಬಾಗ್‌ನ ಅಜ್ಜಿ’ ಬಿಲ್ಕೀಸ್ ಬಾನು ಎಂದು ಸುಳ್ಳು ಹರಡಿದ್ದರು. ಸದಾ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಇನ್ನೂ ಒಂದು ಹೆಜ್ಜೆ ಮುಂದು ಹೋಗಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್… ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ನಟಿ ಇದೀಗ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ನಿನ್ನೆ ಪಂಜಾಬ್‌ನ ವಕೀಲರೊಬ್ಬರು ಕಾನೂನು ನೋಟಿಸ್ ಕಳುಹಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಪ್ರತಿಭಟನೆಗೆ ಧುಮುಕಿದ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್

ಯಾರು ಈ ರೈತ ಹೋರಾಟದ ಅಜ್ಜಿ?

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು ಅವರೆಲ್ಲರಿಗೂ ಮದುವೆಯಾಗಿದೆ. ಪ್ರಸ್ತುತ ತಮ್ಮ ಮಗನೊಂದಿಗೆ ಜಂಡಿಯಾನ್ ಗ್ರಾಮದಲ್ಲಿ ವಾಸವಿರುವ ಮಹಿಂದರ್‌ ಅವರು ತಮ್ಮ ಮನೆಗೆ ಬೇಕಾದ ತರಕಾರಿಯನ್ನು ತಮ್ಮದೆ ಭೂಮಿಯಲ್ಲಿ ಬೆಳೆಯುತ್ತಾರೆ.

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಅವರ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಇನ್ನು ಶಾಹೀನ್ ಭಾಗ್‌ನಲ್ಲಿ ಪ್ರಖ್ಯಾತರಾಗಿದ್ದ ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಬಾರದೆ? ಅವರ್ಯಾರು ಹಣ ಪಡೆದು ಹೋರಾಟ ಮಾಡಿದ್ದಕ್ಕೆ ದಾಖಲೆಗಳಿಲ್ಲ. ಅವರು ನಿರಂತರವಾಗಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನೀವು ಸಿಎಎ ಪರ ಇರುವ ಕಾರಣಕ್ಕೆ ಸಿಎಎ ವಿರುದ್ಧ ಹೋರಾಡುವುವರನ್ನು ಹಣಿಯುವುದು ಸರಿಯಲ್ಲ. ಇನ್ನು ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಬಂದಾಗ ಅವರನ್ನು ಪೊಲೀಸರು ಬಂಧಿಸಿದ್ದೇಕೆ? ಒಬ್ಬ ಮಹಿಳೆಗೆ ಎದುರುವಷ್ಟು ಪುಕ್ಕಲು ಸರ್ಕಾರವೇ ಎಂದು ಹಲವರು ಕಂಗನಾ ಮತ್ತು ಬಿಜೆಪಿ ಬೆಂಬಲಿಗರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...