Homeಚಳವಳಿಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ನಟಿ ಕಂಗನಾ ಇವರನ್ನು 100 ರುಪಾಯಿ ಕೊಟ್ಟರೆ ಪ್ರತಿಭಟನೆಗೆ ಬರುವ ಅಜ್ಜಿ ಎಂದು ಹೇಳಿ ವಿವಾದ ಎಬ್ಬಿಸಿದ್ದರು. ನಂತರ ಮುಖಭಂಗಕ್ಕೊಳಗಾಗಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 8 ನೇ ದಿನ ತಲುಪಿದೆ. ಹೋರಾಟದ ಆರಂಭದಲ್ಲಿ 73 ವರ್ಷದ ಅಜ್ಜಿಯೊಬ್ಬರು ರೈತ ಸಂಘಟನೆಯೊಂದರ ಹಳದಿ ಧ್ವಜವನ್ನು ಹಿಡಿದು ರೈತ ಹೋರಾಟಕ್ಕೆ ಹೊರಟು ನಿಂತಿರುವ ಸ್ಪೂರ್ತಿದಾಯಕ ಚಿತ್ರವೊಂದು ವೈರಲ್‌ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದ ಈ ಚಿತ್ರ ಹಲವರ ಮನಸ್ಸು ಗೆದ್ದಿತ್ತು. ಆದರೆ ಬಿಜೆಪಿ ಬೆಂಬಲಿಗರು ಈ ಅಜ್ಜಿ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ’ಶಾಹಿನ್‌ ಬಾಗ್‌ನ ಅಜ್ಜಿ’ ಬಿಲ್ಕೀಸ್ ಬಾನು ಎಂದು ಸುಳ್ಳು ಹರಡಿದ್ದರು. ಸದಾ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಇನ್ನೂ ಒಂದು ಹೆಜ್ಜೆ ಮುಂದು ಹೋಗಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್… ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ನಟಿ ಇದೀಗ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ನಿನ್ನೆ ಪಂಜಾಬ್‌ನ ವಕೀಲರೊಬ್ಬರು ಕಾನೂನು ನೋಟಿಸ್ ಕಳುಹಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಪ್ರತಿಭಟನೆಗೆ ಧುಮುಕಿದ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್

ಯಾರು ಈ ರೈತ ಹೋರಾಟದ ಅಜ್ಜಿ?

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು ಅವರೆಲ್ಲರಿಗೂ ಮದುವೆಯಾಗಿದೆ. ಪ್ರಸ್ತುತ ತಮ್ಮ ಮಗನೊಂದಿಗೆ ಜಂಡಿಯಾನ್ ಗ್ರಾಮದಲ್ಲಿ ವಾಸವಿರುವ ಮಹಿಂದರ್‌ ಅವರು ತಮ್ಮ ಮನೆಗೆ ಬೇಕಾದ ತರಕಾರಿಯನ್ನು ತಮ್ಮದೆ ಭೂಮಿಯಲ್ಲಿ ಬೆಳೆಯುತ್ತಾರೆ.

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಅವರ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಇನ್ನು ಶಾಹೀನ್ ಭಾಗ್‌ನಲ್ಲಿ ಪ್ರಖ್ಯಾತರಾಗಿದ್ದ ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಬಾರದೆ? ಅವರ್ಯಾರು ಹಣ ಪಡೆದು ಹೋರಾಟ ಮಾಡಿದ್ದಕ್ಕೆ ದಾಖಲೆಗಳಿಲ್ಲ. ಅವರು ನಿರಂತರವಾಗಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನೀವು ಸಿಎಎ ಪರ ಇರುವ ಕಾರಣಕ್ಕೆ ಸಿಎಎ ವಿರುದ್ಧ ಹೋರಾಡುವುವರನ್ನು ಹಣಿಯುವುದು ಸರಿಯಲ್ಲ. ಇನ್ನು ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಬಂದಾಗ ಅವರನ್ನು ಪೊಲೀಸರು ಬಂಧಿಸಿದ್ದೇಕೆ? ಒಬ್ಬ ಮಹಿಳೆಗೆ ಎದುರುವಷ್ಟು ಪುಕ್ಕಲು ಸರ್ಕಾರವೇ ಎಂದು ಹಲವರು ಕಂಗನಾ ಮತ್ತು ಬಿಜೆಪಿ ಬೆಂಬಲಿಗರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...