Homeಚಳವಳಿಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ನಟಿ ಕಂಗನಾ ಇವರನ್ನು 100 ರುಪಾಯಿ ಕೊಟ್ಟರೆ ಪ್ರತಿಭಟನೆಗೆ ಬರುವ ಅಜ್ಜಿ ಎಂದು ಹೇಳಿ ವಿವಾದ ಎಬ್ಬಿಸಿದ್ದರು. ನಂತರ ಮುಖಭಂಗಕ್ಕೊಳಗಾಗಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 8 ನೇ ದಿನ ತಲುಪಿದೆ. ಹೋರಾಟದ ಆರಂಭದಲ್ಲಿ 73 ವರ್ಷದ ಅಜ್ಜಿಯೊಬ್ಬರು ರೈತ ಸಂಘಟನೆಯೊಂದರ ಹಳದಿ ಧ್ವಜವನ್ನು ಹಿಡಿದು ರೈತ ಹೋರಾಟಕ್ಕೆ ಹೊರಟು ನಿಂತಿರುವ ಸ್ಪೂರ್ತಿದಾಯಕ ಚಿತ್ರವೊಂದು ವೈರಲ್‌ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದ ಈ ಚಿತ್ರ ಹಲವರ ಮನಸ್ಸು ಗೆದ್ದಿತ್ತು. ಆದರೆ ಬಿಜೆಪಿ ಬೆಂಬಲಿಗರು ಈ ಅಜ್ಜಿ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ’ಶಾಹಿನ್‌ ಬಾಗ್‌ನ ಅಜ್ಜಿ’ ಬಿಲ್ಕೀಸ್ ಬಾನು ಎಂದು ಸುಳ್ಳು ಹರಡಿದ್ದರು. ಸದಾ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಇನ್ನೂ ಒಂದು ಹೆಜ್ಜೆ ಮುಂದು ಹೋಗಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್… ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ನಟಿ ಇದೀಗ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ನಿನ್ನೆ ಪಂಜಾಬ್‌ನ ವಕೀಲರೊಬ್ಬರು ಕಾನೂನು ನೋಟಿಸ್ ಕಳುಹಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಪ್ರತಿಭಟನೆಗೆ ಧುಮುಕಿದ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್

ಯಾರು ಈ ರೈತ ಹೋರಾಟದ ಅಜ್ಜಿ?

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು ಅವರೆಲ್ಲರಿಗೂ ಮದುವೆಯಾಗಿದೆ. ಪ್ರಸ್ತುತ ತಮ್ಮ ಮಗನೊಂದಿಗೆ ಜಂಡಿಯಾನ್ ಗ್ರಾಮದಲ್ಲಿ ವಾಸವಿರುವ ಮಹಿಂದರ್‌ ಅವರು ತಮ್ಮ ಮನೆಗೆ ಬೇಕಾದ ತರಕಾರಿಯನ್ನು ತಮ್ಮದೆ ಭೂಮಿಯಲ್ಲಿ ಬೆಳೆಯುತ್ತಾರೆ.

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಅವರ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಇನ್ನು ಶಾಹೀನ್ ಭಾಗ್‌ನಲ್ಲಿ ಪ್ರಖ್ಯಾತರಾಗಿದ್ದ ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಬಾರದೆ? ಅವರ್ಯಾರು ಹಣ ಪಡೆದು ಹೋರಾಟ ಮಾಡಿದ್ದಕ್ಕೆ ದಾಖಲೆಗಳಿಲ್ಲ. ಅವರು ನಿರಂತರವಾಗಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನೀವು ಸಿಎಎ ಪರ ಇರುವ ಕಾರಣಕ್ಕೆ ಸಿಎಎ ವಿರುದ್ಧ ಹೋರಾಡುವುವರನ್ನು ಹಣಿಯುವುದು ಸರಿಯಲ್ಲ. ಇನ್ನು ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಬಂದಾಗ ಅವರನ್ನು ಪೊಲೀಸರು ಬಂಧಿಸಿದ್ದೇಕೆ? ಒಬ್ಬ ಮಹಿಳೆಗೆ ಎದುರುವಷ್ಟು ಪುಕ್ಕಲು ಸರ್ಕಾರವೇ ಎಂದು ಹಲವರು ಕಂಗನಾ ಮತ್ತು ಬಿಜೆಪಿ ಬೆಂಬಲಿಗರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...